Homeಅಂತರಾಷ್ಟ್ರೀಯಎಲಾನ್ ಮಸ್ಕ್ ವಿರುದ್ಧ ವರದಿ ಪ್ರಕಟ: ಪತ್ರಕರ್ತರ ಟ್ವಿಟರ್ ಖಾತೆ ಅಮಾನತು

ಎಲಾನ್ ಮಸ್ಕ್ ವಿರುದ್ಧ ವರದಿ ಪ್ರಕಟ: ಪತ್ರಕರ್ತರ ಟ್ವಿಟರ್ ಖಾತೆ ಅಮಾನತು

- Advertisement -
- Advertisement -

ಟ್ವಿಟರ್‌ನ ನೂತನ ಮಾಲೀಕ ಎಲಾನ್ ಮಸ್ಕ್ ವಿರುದ್ಧ ವರದಿ ಪ್ರಕಟ ಮಾಡಿದ್ದಕ್ಕಾಗಿ ನ್ಯೂಯಾರ್ಕ್ ಟೈಮ್ಸ್, ವಾಷಿಂಗ್ಟನ್ ಪೋಸ್ಟ್‌ ಪತ್ರಿಕೆಯ ಪತ್ರಕರ್ತರು ಸೇರಿದಂತೆ ಹಲವರ ಖಾತೆಗಳನ್ನು ಟ್ವಿಟರ್ ಅಮಾನತು ಮಾಡಿರುವುದು ಬೆಳಕಿಗೆ ಬಂದಿದೆ.

ಆ ಖಾತೆಗಳನ್ನು ಏಕೆ ಅಮಾನತುಗೊಳಿಸಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ. ಆದರೆ ಎಲ್ಲಾ ಅಮಾನತುಗೊಂಡ ವರದಿಗಾರರು ಇತ್ತೀಚಿನ ತಿಂಗಳುಗಳಲ್ಲಿ ಟ್ವಿಟರ್‌ನ ಮಾಲೀಕ ಎಲಾನ್ ಮಸ್ಕ್ ಮತ್ತು ಟ್ವಿಟರ್‌ನ ಇತ್ತೀಚಿನ ಕಾರ್ಯನಿರ್ವಹಣೆಯ ಬಗ್ಗೆ ಬರೆದಿದ್ದರು ಎಂಬುದು ಖಚಿತವಾಗಿದೆ.

ನ್ಯೂಯಾರ್ಕ್ ಟೈಮ್ಸ್ ವರದಿಗಾರ ರಯಾನ್ ಮ್ಯಾಕ್, ವಾಷಿಂಗ್ಟನ್ ಪೋಸ್ಟ್ ವರದಿಗಾರ ಡ್ರೂ ಹಾರ್ವೆಲ್, ಸಿಎನ್‌ಎನ್ ವರದಿಗಾರ ಡೋನಿ ಒ’ಸುಲ್ಲಿವಾನ್ (@ಡೋನಿ), ಮತ್ತು ಮಾಶಬಲ್ ವರದಿಗಾರ ಮ್ಯಾಟ್ ಬೈಂಡರ್ ಅವರ ಖಾತೆಗಳನ್ನು ಅಮಾನತುಗೊಳಿಸಲಾಗಿದೆ. ಸ್ವತಂತ್ರ ಪತ್ರಕರ್ತ ಆರನ್ ರೂಪರ್ ರವರ ಖಾತೆಯನ್ನು ಸಹ ಅಮಾನತುಗೊಳಿಸಲಾಗಿದೆ.

“ದಿ ನ್ಯೂಯಾರ್ಕ್ ಟೈಮ್ಸ್‌ನ ರಿಯಾನ್ ಮ್ಯಾಕ್ ಸೇರಿದಂತೆ ಹಲವಾರು ಪ್ರಮುಖ ಪತ್ರಕರ್ತರ ಟ್ವಿಟರ್ ಖಾತೆಗಳನ್ನು ಇಂದು ರಾತ್ರಿ ಅಮಾನತುಗೊಳಿಸಿರುವುದು ಪ್ರಶ್ನಾರ್ಹ ಮತ್ತು ದುರದೃಷ್ಟಕರವಾಗಿದೆ. ಏಕೆ ಹೀಗೆ ಮಾಡಲಾಗಿದೆ ಎಂಬುದನ್ನು ಟ್ವಿಟರ್ ನಮಗೆ ತಿಳಿಸಿಲ್ಲ. ಟ್ವಿಟರ್ ಈ ಕೂಡಲೇ ಎಲ್ಲಾ ಪತ್ರಕರ್ತರ ಖಾತೆಗಳನ್ನು ಮರುಸ್ಥಾಪಿಸಿ ಏಕೆ ಹೀಗೆ ಮಾಡಲಾಗಿತ್ತು ಎಂಬುದಕ್ಕೆ ಸೂಕ್ತ ವಿವರಣೆ ನೀಡುತ್ತದೆ ನಾವು ಭಾವಿಸುತ್ತೇವೆ” ಎದು ನ್ಯೂಯಾರ್ಕ್ ಟೈಮ್ಸ್ ವಕ್ತಾರರು ತಿಳಿಸಿದ್ದಾರೆ.

ಟ್ವಿಟರ್ ಅನ್ನು ಮಸ್ಕ್ ಕೊಂಡ ನಂತರ ಅದಕ್ಕೆ ಪರ್ಯಾಯವಾಗಿ ಹುಟ್ಟಿಕೊಂಡಿದ್ದ ಮಾಸ್ಟೋಡಾನ್ ಎಂಬ ಸಾಮಾಜಿಕ ಜಾಲತಾಣದ ಖಾತೆಯನ್ನು ಸಹ ಟ್ವಿಟರ್ ರದ್ದುಗೊಳಿಸಿದೆ ಎಂದು ವರದಿಯಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಎಲಾನ್ ಮಸ್ಕ್, “ವೈಯಕ್ತಿಕ ಮಾಹಿತಿಯನ್ನು ಹಂಚುವುದನ್ನು ನಿಬಂಧಿಸುವ ಡಾಕ್ಸಿಂಗ್‌ ನಿಯಮಗಳು ಪತ್ರಕರ್ತರಿಗೂ ಸಹ ಅನ್ವಯಿಸುತ್ತವೆ. ದಿನವೀಡಿ ನನ್ನ ವಿರುದ್ಧ ಬರೆದರೆ ತೊಂದರೆಯಿಲ್ಲ, ಆದರೆ ನಾನಿರುವ ಸ್ಥಳದ ಬಗ್ಗೆ ಮಾಹಿತಿ ಹಂಚಿಕೊಳ್ಳುವುದು ಮತ್ತು ನನ್ನ ಕುಟುಂಬವನ್ನು ಅಪಾಯಕ್ಕಿ ಸಿಲುಕಿಸುವುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ’ಟ್ವಿಟರ್ ಬ್ರಾಂಡ್ ಖರೀದಿಸಿದ ಮಸ್ಕ್’ ವಿದ್ಯಮಾನ ಮತ್ತು ಆತಂಕಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...