Homeಮುಖಪುಟಬಾಲ್ಯವಿವಾಹದಿಂದ ಜಾಗತಿಕವಾಗಿ ದಿನಕ್ಕೆ 60 ಕ್ಕೂ ಹೆಚ್ಚು ಬಾಲಕಿಯರ ಸಾವು: ವರದಿ

ಬಾಲ್ಯವಿವಾಹದಿಂದ ಜಾಗತಿಕವಾಗಿ ದಿನಕ್ಕೆ 60 ಕ್ಕೂ ಹೆಚ್ಚು ಬಾಲಕಿಯರ ಸಾವು: ವರದಿ

- Advertisement -
- Advertisement -

ಬಾಲ್ಯವಿವಾಹದಿಂದಾಗಿ ಜಾಗತಿಕವಾಗಿ ದಿನಕ್ಕೆ 60 ಕ್ಕೂ ಹೆಚ್ಚು ಬಾಲಕಿಯರು ಸಾವನ್ನಪ್ಪುತ್ತಿದ್ದಾರೆ. ಈ ಪೈಕಿ ದಕ್ಷಿಣ ಏಷ್ಯಾದಲ್ಲಿಯೇ ದಿನಕ್ಕೆ ಆರು ಹೆಣ್ಣು ಮಕ್ಕಳು ಬಲಿಯಾಗುತ್ತಿದ್ದಾರೆ ಎಂದು ಸೇವ್‌ ದಿ ಚಿಲ್ದ್ರನ್‌ ವರದಿ ಹೇಳಿದೆ. ಅಂತರಾಷ್ಟ್ರೀಯ ಹೆಣ್ಣು ಮಗುವಿನ ದಿನದಂದು ಬಿಡುಗಡೆ ಮಾಡಲಾದ ಸೇವ್‌ ದಿ ಚಿಲ್ದ್ರನ್‌ ವರದಿಯ ವಿಶ್ಲೇಷಣೆಯ ಪ್ರಕಾರ, ಬಾಲ್ಯ ವಿವಾಹಕ್ಕೆ ಒಳಗಾದ ಹೆಣ್ಣು ಮಕ್ಕಳಲ್ಲಿ ಅಂದಾಜು 22,000 ಬಾಲಕಿಯರು ಪ್ರತಿ ವರ್ಷ ಗರ್ಭಧಾರಣೆ ಮತ್ತು ಹೆರಿಗೆಯ ಸಂದರ್ಭದಲ್ಲಿ ಸಾವನ್ನಪ್ಪುತ್ತಿದ್ದಾರೆ.

ದಕ್ಷಿಣ ಏಷ್ಯಾದಲ್ಲಿ ಪ್ರತಿ ವರ್ಷ 2,000 (ಪ್ರತಿ ದಿನ ಆರು)ಬಾಲ್ಯ ವಿವಾಹ ಸಂಬಂಧಿ ಸಾವುಗಳು ಸಂಭವಿಸುತ್ತಿವೆ. ಪೂರ್ವ ಏಷ್ಯಾ ಮತ್ತು ಪೆಸಿಫಿಕ್ ಭಾಗದಲ್ಲಿ ವಾರ್ಷಿಕ 650 ಸಾವುಗಳು (ಪ್ರತಿ ದಿನ ಎರಡು), ಮತ್ತು ಲ್ಯಾಟಿನ್ ಅಮೇರಿಕನ್ ಮತ್ತು ಕೆರಿಬಿಯನ್‌ ಭಾಗದಲ್ಲಿ ವಾರ್ಷಿಕ 560 (ದಿನಕ್ಕೆ ಎರಡು) ಸಾವುಗಳಾಗಿವೆ ಎಂದು ವರದಿ ಹೇಳಿದೆ.

“ಬಾಲ್ಯ ವಿವಾಹವಾದವರಲ್ಲಿ ಅಂದಾಜು 22,000ಕ್ಕೂ ಹೆಚ್ಚು ಹೆಣ್ಣು ಮಕ್ಕಳು ಗರ್ಭಧಾರಣೆ ಮತ್ತು ಹೆರಿಗೆಯಿಂದ ಸಾಯುತ್ತಿದ್ದಾರೆ. ಬಾಲ್ಯವಿವಾಹವು ಒಂದು ದಿನಕ್ಕೆ 60 ಕ್ಕೂ ಹೆಚ್ಚು ಬಾಲಕಿಯರನ್ನು ಬಲಿಪಡೆಯುತ್ತಿದೆ. ಜಾಗತಿಕವಾಗಿ ಮತ್ತು ದಕ್ಷಿಣ ಏಷ್ಯಾದಲ್ಲಿ ದಿನಕ್ಕೆ 6 ಹೆಣ್ಣುಮಕ್ಕಳು ಸಾವನ್ನಪ್ಪುತ್ತಿದ್ದಾರೆ” ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಆದರೂ, ವಿಶ್ವದಲ್ಲೇ ಪಶ್ಚಿಮ ಮತ್ತು ಮಧ್ಯ ಆಫ್ರಿಕಾದಲ್ಲಿ ಅತಿಹೆಚ್ಚು ಬಾಲ್ಯವಿವಾಹಗಳು ನಡೆಯುತ್ತಿವೆ. ಜಾಗತಿಕವಾಗಿ ಅಂದಾಜು ಮಾಡಿದ ಬಾಲ್ಯವಿವಾಹ ಸಂಬಂಧಿತ ಸಾವುಗಳಲ್ಲಿ ಅರ್ಧದಷ್ಟು (9,600) ಅಥವಾ ದಿನಕ್ಕೆ 26 ಸಾವುಗಳು ಇಲ್ಲಿ ಸಂಭವಿಸುತ್ತಿವೆ. ಈ ಭಾಗದಲ್ಲಿ ಅಪ್ರಾಪ್ತ ತಾಯಂದಿರ ಮರಣ ಪ್ರಮಾಣವು ಜಗತ್ತಿನ ಎಲ್ಲೆಡೆಯಿಗಿಂತ ನಾಲ್ಕು ಪಟ್ಟು ಹೆಚ್ಚಾಗಿದೆ.

ಇದನ್ನೂ ಓದಿ: ಬೆಂಗಳೂರು: ಪೌರಕಾರ್ಮಿಕರ ಘನತೆಯ ಬದುಕು, ಗೌರವ, ವಸತಿ, ಶಿಕ್ಷಣಕ್ಕಾಗಿ 15 ದಿನಗಳ ಜಾಥಾ

“ಕಳೆದ 25 ವರ್ಷಗಳಲ್ಲಿ ಜಾಗತಿಕವಾಗಿ ಸುಮಾರು 80 ಮಿಲಿಯನ್ ಬಾಲ್ಯವಿವಾಹಗಳನ್ನು ತಡೆಗಟ್ಟಲಾಗಿತ್ತು. ಆದರೂ, ಕೋವಿಡ್ -19 ಸಾಂಕ್ರಾಮಿಕ ರೋಗಕ್ಕೆ ಮುನ್ನವೇ ಈ ಕ್ರಮಗಳು ಸ್ಥಗಿತಗೊಳ್ಳಲಾರಂಭಿಸಿದ್ದವು. ಕೊರೊನಾ ನಂತರ, ಬಾಲ್ಯವಿವಾಹ ಮತ್ತಷ್ಟು ಹೆಚ್ಚಿತು.

“ಕೊರೊನಾದಿಂದಾಗಿ ಶಾಲೆಗಳ ಮುಚ್ಚುವಿಕೆ, ಆರೋಗ್ಯ ಸೇವೆಗಳ ಕೊರತೆ ಮತ್ತು ಹೆಚ್ಚಿನ ಕುಟುಂಬಗಳು ಬಡತನಕ್ಕೆ ತಳ್ಳಲ್ಪಟ್ಟಿವೆ. ಇದರಿಂದಾಗಿ ದೀರ್ಘಾವಧಿಯ ಲಾಕ್‌ಡೌನ್‌ಗಳಲ್ಲಿ ಮಹಿಳೆಯರು ಮತ್ತು ಬಾಲಕಿಯರು ಹಿಂಸೆಯ ಅಪಾಯವನ್ನು ಎದುರಿಸುತ್ತಾರೆ. 2030ರ ವೇಳೆಗೆ ಜಾಗತಿಕವಾಗಿ ಇನ್ನೂ 10 ಮಿಲಿಯನ್ ಬಾಲಕಿಯರು ಬಾಲ್ಯ ವಿವಾಹವಾಗುವ ನಿರೀಕ್ಷೆಯಿದೆ. ಇದರಿಂದಾಗಿ ಹೆಚ್ಚಿನ ಬಾಲಕಿಯರು ಸಾವನ್ನಪ್ಪುವ ಅಪಾಯದಲ್ಲಿದ್ದಾರೆ” ಎಂದು ವರದಿ ಹೇಳಿದೆ.

ಬಾಲ್ಯ ವಿವಾಹವು ಲೈಂಗಿಕ ಮತ್ತು ಲಿಂಗ ಆಧಾರಿತ ದೌರ್ಜನ್ಯದ ಅತ್ಯಂತ ಕೆಟ್ಟ ಮತ್ತು ಮಾರಕ ರೂಪವಾಗಿದೆ ಎಂದು ಸೇವ್ ದಿ ಚಿಲ್ಡ್ರನ್ ಇಂಟರ್‌ನ್ಯಾಷನಲ್‌ನ ಸಿಇಒ ಇಂಗರ್ ಅಶಿಂಗ್ ಹೇಳಿದ್ದಾರೆ.

ಪ್ರತಿ ವರ್ಷ, ಲಕ್ಷಾಂತರ ಹೆಣ್ಣು ಮಕ್ಕಳು ಹೆಚ್ಚಾಗಿ ವಯಸ್ಸಾದ ಪುರುಷರೊಂದಿಗೆ ವಿವಾಹವಾಗಲು ಒತ್ತಾಯಿಸಲ್ಪಡುತ್ತಾರೆ. ಹೀಗಾಗಿ ಕಲಿಯಲು, ಮಕ್ಕಳಾಗಲು ಮತ್ತು ಅನೇಕ ಸಂದರ್ಭಗಳಲ್ಲಿ ಬದುಕಲು ಅವರು ಅವಕಾಶವನ್ನು ಕಸಿದುಕೊಳ್ಳುತ್ತಾರೆ.

ಇದನ್ನೂ ಓದಿ: ಚರಂಡಿ ಕ್ಲೀನ್ ಮಾಡುವವರ ಪಾತ್ರ ಮಾಡಬೇಕು, ಸಮಾಜದಲ್ಲಿ ಕ್ಲೀನ್ ಮಾಡುವುದು ಬಹಳಷ್ಟಿದೆ: ನಟ ಶಿವರಾಜ್ ಕುಮಾರ್‌

“ಅಪ್ರಾಪ್ತ ಬಾಲಕಿಯರು ಮಕ್ಕಳನ್ನು ಹೆರುವುದೇ ಅವರ ಸಾವಿಗೆ ಕಾರಣವಾಗಿದೆ. ಏಕೆಂದರೆ ಅವರ ಎಳೆಯ ದೇಹಗಳು ಮಕ್ಕಳನ್ನು ಹೊಂದುವುದಕ್ಕೆ ಸಿದ್ಧವಾಗಿರುವುದಿಲ್ಲ. ಮಕ್ಕಳನ್ನು ಹೊಂದುವ ಬಾಲಕಿಯರ ಮೇಲಾಗುವ ಆರೋಗ್ಯದ ಅಪಾಯಗಳನ್ನು ನಿರ್ಲಕ್ಷಿಸಬಾರದು” ಎಂದು ಹೇಳಿದ್ದಾರೆ.

ಸರ್ಕಾರಗಳು ಹೆಣ್ಣು ಮಕ್ಕಳಿಗೆ ಆದ್ಯತೆ ನೀಡಬೇಕು. ಅವರನ್ನು ಬಾಲ್ಯ ವಿವಾಹ ಮತ್ತು ಅಕಾಲಿಕ ಹೆರಿಗೆ ಸಂಬಂಧಿತ ಸಾವುಗಳಿಂದ ರಕ್ಷಿಸಬೇಕು ಎಂದು ಅಶಿಂಗ್ ಹೇಳಿದ್ದಾರೆ.

ಬಾಲ್ಯ ವಿವಾಹದ ಇತಿಹಾಸವನ್ನು ನೋಡಿದರೆ, ಇದು ನಮ್ಮ ಸಾಮೂಹಿಕ ವೈಫಲ್ಯವನ್ನು ತೋರಿಸುತ್ತದೆ. ಇದು ಈ ಶತಮಾನದಲ್ಲಿಯೂ ಮಾನವೀಯತೆಗೆ ವಿರುದ್ದವಾಗಿದೆ. ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುವುದು. ಅವರ ಕಲಿಕೆಯ ಮೂಲಭೂತ ಹಕ್ಕನ್ನು ಮತ್ತು ಸಂತೋಷ ಹಾಗೂ ನಿರಾತಂಕದ ಬಾಲ್ಯವನ್ನು ಆನಂದಿಸುವುದನ್ನು ಕಿತ್ತುಕೊಳ್ಳುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಇದನ್ನು ನಾವು ಖಂಡಿಸಬೇಕಿದೆ ಎಂದು ಸೇವ್ ದಿ ಚಿಲ್ಡ್ರನ್, ಇಂಡಿಯಾದ ಸಿಇಒ ಸುದರ್ಶನ್ ಹೇಳಿದ್ದಾರೆ.

ವಿವಿಧ ರೀತಿಯ ಅಸಮಾನತೆ ಮತ್ತು ತಾರತಮ್ಯ (ಲಿಂಗ, ಜನಾಂಗ, ಅಂಗವೈಕಲ್ಯ, ಆರ್ಥಿಕ ಹಿನ್ನೆಲೆ) ಸೇರಿದಂತೆ ಎಲ್ಲ ಹೆಣ್ಣು ಮಕ್ಕಳಿಗೂ ಅವರ ಹಕ್ಕುಗಳನ್ನು ಸರ್ಕಾರಗಳು ಖಾತರಿಪಡಿಸಬೇಕು ಎಂದು ಸಂಘಟನೆ ಒತ್ತಾಯಿಸಿದೆ.

ಕೃಪೆ: ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌

ಕನ್ನಡಕ್ಕೆ: ಸೋಮಶೇಖರ್‌ ಚಲ್ಯ


ಇದನ್ನೂ ಓದಿ: ಅಸೂಕ್ಷ್ಮ, ಪ್ರೊಪಗಂಡಾ ಮತ್ತು ಕ್ರಿಮಿನಲ್‌ಗಳಿಗೆ ಮಾರ್ಗದರ್ಶಿಯಂತಿರುವ ಕ್ರೈಮ್ ಸ್ಟೋರೀಸ್ ಇಂಡಿಯಾ ಡಿಟೆಕ್ಟಿವ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...