Homeಮುಖಪುಟಬಾಲ್ಯವಿವಾಹದಿಂದ ಜಾಗತಿಕವಾಗಿ ದಿನಕ್ಕೆ 60 ಕ್ಕೂ ಹೆಚ್ಚು ಬಾಲಕಿಯರ ಸಾವು: ವರದಿ

ಬಾಲ್ಯವಿವಾಹದಿಂದ ಜಾಗತಿಕವಾಗಿ ದಿನಕ್ಕೆ 60 ಕ್ಕೂ ಹೆಚ್ಚು ಬಾಲಕಿಯರ ಸಾವು: ವರದಿ

- Advertisement -
- Advertisement -

ಬಾಲ್ಯವಿವಾಹದಿಂದಾಗಿ ಜಾಗತಿಕವಾಗಿ ದಿನಕ್ಕೆ 60 ಕ್ಕೂ ಹೆಚ್ಚು ಬಾಲಕಿಯರು ಸಾವನ್ನಪ್ಪುತ್ತಿದ್ದಾರೆ. ಈ ಪೈಕಿ ದಕ್ಷಿಣ ಏಷ್ಯಾದಲ್ಲಿಯೇ ದಿನಕ್ಕೆ ಆರು ಹೆಣ್ಣು ಮಕ್ಕಳು ಬಲಿಯಾಗುತ್ತಿದ್ದಾರೆ ಎಂದು ಸೇವ್‌ ದಿ ಚಿಲ್ದ್ರನ್‌ ವರದಿ ಹೇಳಿದೆ. ಅಂತರಾಷ್ಟ್ರೀಯ ಹೆಣ್ಣು ಮಗುವಿನ ದಿನದಂದು ಬಿಡುಗಡೆ ಮಾಡಲಾದ ಸೇವ್‌ ದಿ ಚಿಲ್ದ್ರನ್‌ ವರದಿಯ ವಿಶ್ಲೇಷಣೆಯ ಪ್ರಕಾರ, ಬಾಲ್ಯ ವಿವಾಹಕ್ಕೆ ಒಳಗಾದ ಹೆಣ್ಣು ಮಕ್ಕಳಲ್ಲಿ ಅಂದಾಜು 22,000 ಬಾಲಕಿಯರು ಪ್ರತಿ ವರ್ಷ ಗರ್ಭಧಾರಣೆ ಮತ್ತು ಹೆರಿಗೆಯ ಸಂದರ್ಭದಲ್ಲಿ ಸಾವನ್ನಪ್ಪುತ್ತಿದ್ದಾರೆ.

ದಕ್ಷಿಣ ಏಷ್ಯಾದಲ್ಲಿ ಪ್ರತಿ ವರ್ಷ 2,000 (ಪ್ರತಿ ದಿನ ಆರು)ಬಾಲ್ಯ ವಿವಾಹ ಸಂಬಂಧಿ ಸಾವುಗಳು ಸಂಭವಿಸುತ್ತಿವೆ. ಪೂರ್ವ ಏಷ್ಯಾ ಮತ್ತು ಪೆಸಿಫಿಕ್ ಭಾಗದಲ್ಲಿ ವಾರ್ಷಿಕ 650 ಸಾವುಗಳು (ಪ್ರತಿ ದಿನ ಎರಡು), ಮತ್ತು ಲ್ಯಾಟಿನ್ ಅಮೇರಿಕನ್ ಮತ್ತು ಕೆರಿಬಿಯನ್‌ ಭಾಗದಲ್ಲಿ ವಾರ್ಷಿಕ 560 (ದಿನಕ್ಕೆ ಎರಡು) ಸಾವುಗಳಾಗಿವೆ ಎಂದು ವರದಿ ಹೇಳಿದೆ.

“ಬಾಲ್ಯ ವಿವಾಹವಾದವರಲ್ಲಿ ಅಂದಾಜು 22,000ಕ್ಕೂ ಹೆಚ್ಚು ಹೆಣ್ಣು ಮಕ್ಕಳು ಗರ್ಭಧಾರಣೆ ಮತ್ತು ಹೆರಿಗೆಯಿಂದ ಸಾಯುತ್ತಿದ್ದಾರೆ. ಬಾಲ್ಯವಿವಾಹವು ಒಂದು ದಿನಕ್ಕೆ 60 ಕ್ಕೂ ಹೆಚ್ಚು ಬಾಲಕಿಯರನ್ನು ಬಲಿಪಡೆಯುತ್ತಿದೆ. ಜಾಗತಿಕವಾಗಿ ಮತ್ತು ದಕ್ಷಿಣ ಏಷ್ಯಾದಲ್ಲಿ ದಿನಕ್ಕೆ 6 ಹೆಣ್ಣುಮಕ್ಕಳು ಸಾವನ್ನಪ್ಪುತ್ತಿದ್ದಾರೆ” ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಆದರೂ, ವಿಶ್ವದಲ್ಲೇ ಪಶ್ಚಿಮ ಮತ್ತು ಮಧ್ಯ ಆಫ್ರಿಕಾದಲ್ಲಿ ಅತಿಹೆಚ್ಚು ಬಾಲ್ಯವಿವಾಹಗಳು ನಡೆಯುತ್ತಿವೆ. ಜಾಗತಿಕವಾಗಿ ಅಂದಾಜು ಮಾಡಿದ ಬಾಲ್ಯವಿವಾಹ ಸಂಬಂಧಿತ ಸಾವುಗಳಲ್ಲಿ ಅರ್ಧದಷ್ಟು (9,600) ಅಥವಾ ದಿನಕ್ಕೆ 26 ಸಾವುಗಳು ಇಲ್ಲಿ ಸಂಭವಿಸುತ್ತಿವೆ. ಈ ಭಾಗದಲ್ಲಿ ಅಪ್ರಾಪ್ತ ತಾಯಂದಿರ ಮರಣ ಪ್ರಮಾಣವು ಜಗತ್ತಿನ ಎಲ್ಲೆಡೆಯಿಗಿಂತ ನಾಲ್ಕು ಪಟ್ಟು ಹೆಚ್ಚಾಗಿದೆ.

ಇದನ್ನೂ ಓದಿ: ಬೆಂಗಳೂರು: ಪೌರಕಾರ್ಮಿಕರ ಘನತೆಯ ಬದುಕು, ಗೌರವ, ವಸತಿ, ಶಿಕ್ಷಣಕ್ಕಾಗಿ 15 ದಿನಗಳ ಜಾಥಾ

“ಕಳೆದ 25 ವರ್ಷಗಳಲ್ಲಿ ಜಾಗತಿಕವಾಗಿ ಸುಮಾರು 80 ಮಿಲಿಯನ್ ಬಾಲ್ಯವಿವಾಹಗಳನ್ನು ತಡೆಗಟ್ಟಲಾಗಿತ್ತು. ಆದರೂ, ಕೋವಿಡ್ -19 ಸಾಂಕ್ರಾಮಿಕ ರೋಗಕ್ಕೆ ಮುನ್ನವೇ ಈ ಕ್ರಮಗಳು ಸ್ಥಗಿತಗೊಳ್ಳಲಾರಂಭಿಸಿದ್ದವು. ಕೊರೊನಾ ನಂತರ, ಬಾಲ್ಯವಿವಾಹ ಮತ್ತಷ್ಟು ಹೆಚ್ಚಿತು.

“ಕೊರೊನಾದಿಂದಾಗಿ ಶಾಲೆಗಳ ಮುಚ್ಚುವಿಕೆ, ಆರೋಗ್ಯ ಸೇವೆಗಳ ಕೊರತೆ ಮತ್ತು ಹೆಚ್ಚಿನ ಕುಟುಂಬಗಳು ಬಡತನಕ್ಕೆ ತಳ್ಳಲ್ಪಟ್ಟಿವೆ. ಇದರಿಂದಾಗಿ ದೀರ್ಘಾವಧಿಯ ಲಾಕ್‌ಡೌನ್‌ಗಳಲ್ಲಿ ಮಹಿಳೆಯರು ಮತ್ತು ಬಾಲಕಿಯರು ಹಿಂಸೆಯ ಅಪಾಯವನ್ನು ಎದುರಿಸುತ್ತಾರೆ. 2030ರ ವೇಳೆಗೆ ಜಾಗತಿಕವಾಗಿ ಇನ್ನೂ 10 ಮಿಲಿಯನ್ ಬಾಲಕಿಯರು ಬಾಲ್ಯ ವಿವಾಹವಾಗುವ ನಿರೀಕ್ಷೆಯಿದೆ. ಇದರಿಂದಾಗಿ ಹೆಚ್ಚಿನ ಬಾಲಕಿಯರು ಸಾವನ್ನಪ್ಪುವ ಅಪಾಯದಲ್ಲಿದ್ದಾರೆ” ಎಂದು ವರದಿ ಹೇಳಿದೆ.

ಬಾಲ್ಯ ವಿವಾಹವು ಲೈಂಗಿಕ ಮತ್ತು ಲಿಂಗ ಆಧಾರಿತ ದೌರ್ಜನ್ಯದ ಅತ್ಯಂತ ಕೆಟ್ಟ ಮತ್ತು ಮಾರಕ ರೂಪವಾಗಿದೆ ಎಂದು ಸೇವ್ ದಿ ಚಿಲ್ಡ್ರನ್ ಇಂಟರ್‌ನ್ಯಾಷನಲ್‌ನ ಸಿಇಒ ಇಂಗರ್ ಅಶಿಂಗ್ ಹೇಳಿದ್ದಾರೆ.

ಪ್ರತಿ ವರ್ಷ, ಲಕ್ಷಾಂತರ ಹೆಣ್ಣು ಮಕ್ಕಳು ಹೆಚ್ಚಾಗಿ ವಯಸ್ಸಾದ ಪುರುಷರೊಂದಿಗೆ ವಿವಾಹವಾಗಲು ಒತ್ತಾಯಿಸಲ್ಪಡುತ್ತಾರೆ. ಹೀಗಾಗಿ ಕಲಿಯಲು, ಮಕ್ಕಳಾಗಲು ಮತ್ತು ಅನೇಕ ಸಂದರ್ಭಗಳಲ್ಲಿ ಬದುಕಲು ಅವರು ಅವಕಾಶವನ್ನು ಕಸಿದುಕೊಳ್ಳುತ್ತಾರೆ.

ಇದನ್ನೂ ಓದಿ: ಚರಂಡಿ ಕ್ಲೀನ್ ಮಾಡುವವರ ಪಾತ್ರ ಮಾಡಬೇಕು, ಸಮಾಜದಲ್ಲಿ ಕ್ಲೀನ್ ಮಾಡುವುದು ಬಹಳಷ್ಟಿದೆ: ನಟ ಶಿವರಾಜ್ ಕುಮಾರ್‌

“ಅಪ್ರಾಪ್ತ ಬಾಲಕಿಯರು ಮಕ್ಕಳನ್ನು ಹೆರುವುದೇ ಅವರ ಸಾವಿಗೆ ಕಾರಣವಾಗಿದೆ. ಏಕೆಂದರೆ ಅವರ ಎಳೆಯ ದೇಹಗಳು ಮಕ್ಕಳನ್ನು ಹೊಂದುವುದಕ್ಕೆ ಸಿದ್ಧವಾಗಿರುವುದಿಲ್ಲ. ಮಕ್ಕಳನ್ನು ಹೊಂದುವ ಬಾಲಕಿಯರ ಮೇಲಾಗುವ ಆರೋಗ್ಯದ ಅಪಾಯಗಳನ್ನು ನಿರ್ಲಕ್ಷಿಸಬಾರದು” ಎಂದು ಹೇಳಿದ್ದಾರೆ.

ಸರ್ಕಾರಗಳು ಹೆಣ್ಣು ಮಕ್ಕಳಿಗೆ ಆದ್ಯತೆ ನೀಡಬೇಕು. ಅವರನ್ನು ಬಾಲ್ಯ ವಿವಾಹ ಮತ್ತು ಅಕಾಲಿಕ ಹೆರಿಗೆ ಸಂಬಂಧಿತ ಸಾವುಗಳಿಂದ ರಕ್ಷಿಸಬೇಕು ಎಂದು ಅಶಿಂಗ್ ಹೇಳಿದ್ದಾರೆ.

ಬಾಲ್ಯ ವಿವಾಹದ ಇತಿಹಾಸವನ್ನು ನೋಡಿದರೆ, ಇದು ನಮ್ಮ ಸಾಮೂಹಿಕ ವೈಫಲ್ಯವನ್ನು ತೋರಿಸುತ್ತದೆ. ಇದು ಈ ಶತಮಾನದಲ್ಲಿಯೂ ಮಾನವೀಯತೆಗೆ ವಿರುದ್ದವಾಗಿದೆ. ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುವುದು. ಅವರ ಕಲಿಕೆಯ ಮೂಲಭೂತ ಹಕ್ಕನ್ನು ಮತ್ತು ಸಂತೋಷ ಹಾಗೂ ನಿರಾತಂಕದ ಬಾಲ್ಯವನ್ನು ಆನಂದಿಸುವುದನ್ನು ಕಿತ್ತುಕೊಳ್ಳುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಇದನ್ನು ನಾವು ಖಂಡಿಸಬೇಕಿದೆ ಎಂದು ಸೇವ್ ದಿ ಚಿಲ್ಡ್ರನ್, ಇಂಡಿಯಾದ ಸಿಇಒ ಸುದರ್ಶನ್ ಹೇಳಿದ್ದಾರೆ.

ವಿವಿಧ ರೀತಿಯ ಅಸಮಾನತೆ ಮತ್ತು ತಾರತಮ್ಯ (ಲಿಂಗ, ಜನಾಂಗ, ಅಂಗವೈಕಲ್ಯ, ಆರ್ಥಿಕ ಹಿನ್ನೆಲೆ) ಸೇರಿದಂತೆ ಎಲ್ಲ ಹೆಣ್ಣು ಮಕ್ಕಳಿಗೂ ಅವರ ಹಕ್ಕುಗಳನ್ನು ಸರ್ಕಾರಗಳು ಖಾತರಿಪಡಿಸಬೇಕು ಎಂದು ಸಂಘಟನೆ ಒತ್ತಾಯಿಸಿದೆ.

ಕೃಪೆ: ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌

ಕನ್ನಡಕ್ಕೆ: ಸೋಮಶೇಖರ್‌ ಚಲ್ಯ


ಇದನ್ನೂ ಓದಿ: ಅಸೂಕ್ಷ್ಮ, ಪ್ರೊಪಗಂಡಾ ಮತ್ತು ಕ್ರಿಮಿನಲ್‌ಗಳಿಗೆ ಮಾರ್ಗದರ್ಶಿಯಂತಿರುವ ಕ್ರೈಮ್ ಸ್ಟೋರೀಸ್ ಇಂಡಿಯಾ ಡಿಟೆಕ್ಟಿವ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...