Homeಮುಖಪುಟಬಾಲ್ಯವಿವಾಹದಿಂದ ಜಾಗತಿಕವಾಗಿ ದಿನಕ್ಕೆ 60 ಕ್ಕೂ ಹೆಚ್ಚು ಬಾಲಕಿಯರ ಸಾವು: ವರದಿ

ಬಾಲ್ಯವಿವಾಹದಿಂದ ಜಾಗತಿಕವಾಗಿ ದಿನಕ್ಕೆ 60 ಕ್ಕೂ ಹೆಚ್ಚು ಬಾಲಕಿಯರ ಸಾವು: ವರದಿ

- Advertisement -
- Advertisement -

ಬಾಲ್ಯವಿವಾಹದಿಂದಾಗಿ ಜಾಗತಿಕವಾಗಿ ದಿನಕ್ಕೆ 60 ಕ್ಕೂ ಹೆಚ್ಚು ಬಾಲಕಿಯರು ಸಾವನ್ನಪ್ಪುತ್ತಿದ್ದಾರೆ. ಈ ಪೈಕಿ ದಕ್ಷಿಣ ಏಷ್ಯಾದಲ್ಲಿಯೇ ದಿನಕ್ಕೆ ಆರು ಹೆಣ್ಣು ಮಕ್ಕಳು ಬಲಿಯಾಗುತ್ತಿದ್ದಾರೆ ಎಂದು ಸೇವ್‌ ದಿ ಚಿಲ್ದ್ರನ್‌ ವರದಿ ಹೇಳಿದೆ. ಅಂತರಾಷ್ಟ್ರೀಯ ಹೆಣ್ಣು ಮಗುವಿನ ದಿನದಂದು ಬಿಡುಗಡೆ ಮಾಡಲಾದ ಸೇವ್‌ ದಿ ಚಿಲ್ದ್ರನ್‌ ವರದಿಯ ವಿಶ್ಲೇಷಣೆಯ ಪ್ರಕಾರ, ಬಾಲ್ಯ ವಿವಾಹಕ್ಕೆ ಒಳಗಾದ ಹೆಣ್ಣು ಮಕ್ಕಳಲ್ಲಿ ಅಂದಾಜು 22,000 ಬಾಲಕಿಯರು ಪ್ರತಿ ವರ್ಷ ಗರ್ಭಧಾರಣೆ ಮತ್ತು ಹೆರಿಗೆಯ ಸಂದರ್ಭದಲ್ಲಿ ಸಾವನ್ನಪ್ಪುತ್ತಿದ್ದಾರೆ.

ದಕ್ಷಿಣ ಏಷ್ಯಾದಲ್ಲಿ ಪ್ರತಿ ವರ್ಷ 2,000 (ಪ್ರತಿ ದಿನ ಆರು)ಬಾಲ್ಯ ವಿವಾಹ ಸಂಬಂಧಿ ಸಾವುಗಳು ಸಂಭವಿಸುತ್ತಿವೆ. ಪೂರ್ವ ಏಷ್ಯಾ ಮತ್ತು ಪೆಸಿಫಿಕ್ ಭಾಗದಲ್ಲಿ ವಾರ್ಷಿಕ 650 ಸಾವುಗಳು (ಪ್ರತಿ ದಿನ ಎರಡು), ಮತ್ತು ಲ್ಯಾಟಿನ್ ಅಮೇರಿಕನ್ ಮತ್ತು ಕೆರಿಬಿಯನ್‌ ಭಾಗದಲ್ಲಿ ವಾರ್ಷಿಕ 560 (ದಿನಕ್ಕೆ ಎರಡು) ಸಾವುಗಳಾಗಿವೆ ಎಂದು ವರದಿ ಹೇಳಿದೆ.

“ಬಾಲ್ಯ ವಿವಾಹವಾದವರಲ್ಲಿ ಅಂದಾಜು 22,000ಕ್ಕೂ ಹೆಚ್ಚು ಹೆಣ್ಣು ಮಕ್ಕಳು ಗರ್ಭಧಾರಣೆ ಮತ್ತು ಹೆರಿಗೆಯಿಂದ ಸಾಯುತ್ತಿದ್ದಾರೆ. ಬಾಲ್ಯವಿವಾಹವು ಒಂದು ದಿನಕ್ಕೆ 60 ಕ್ಕೂ ಹೆಚ್ಚು ಬಾಲಕಿಯರನ್ನು ಬಲಿಪಡೆಯುತ್ತಿದೆ. ಜಾಗತಿಕವಾಗಿ ಮತ್ತು ದಕ್ಷಿಣ ಏಷ್ಯಾದಲ್ಲಿ ದಿನಕ್ಕೆ 6 ಹೆಣ್ಣುಮಕ್ಕಳು ಸಾವನ್ನಪ್ಪುತ್ತಿದ್ದಾರೆ” ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಆದರೂ, ವಿಶ್ವದಲ್ಲೇ ಪಶ್ಚಿಮ ಮತ್ತು ಮಧ್ಯ ಆಫ್ರಿಕಾದಲ್ಲಿ ಅತಿಹೆಚ್ಚು ಬಾಲ್ಯವಿವಾಹಗಳು ನಡೆಯುತ್ತಿವೆ. ಜಾಗತಿಕವಾಗಿ ಅಂದಾಜು ಮಾಡಿದ ಬಾಲ್ಯವಿವಾಹ ಸಂಬಂಧಿತ ಸಾವುಗಳಲ್ಲಿ ಅರ್ಧದಷ್ಟು (9,600) ಅಥವಾ ದಿನಕ್ಕೆ 26 ಸಾವುಗಳು ಇಲ್ಲಿ ಸಂಭವಿಸುತ್ತಿವೆ. ಈ ಭಾಗದಲ್ಲಿ ಅಪ್ರಾಪ್ತ ತಾಯಂದಿರ ಮರಣ ಪ್ರಮಾಣವು ಜಗತ್ತಿನ ಎಲ್ಲೆಡೆಯಿಗಿಂತ ನಾಲ್ಕು ಪಟ್ಟು ಹೆಚ್ಚಾಗಿದೆ.

ಇದನ್ನೂ ಓದಿ: ಬೆಂಗಳೂರು: ಪೌರಕಾರ್ಮಿಕರ ಘನತೆಯ ಬದುಕು, ಗೌರವ, ವಸತಿ, ಶಿಕ್ಷಣಕ್ಕಾಗಿ 15 ದಿನಗಳ ಜಾಥಾ

“ಕಳೆದ 25 ವರ್ಷಗಳಲ್ಲಿ ಜಾಗತಿಕವಾಗಿ ಸುಮಾರು 80 ಮಿಲಿಯನ್ ಬಾಲ್ಯವಿವಾಹಗಳನ್ನು ತಡೆಗಟ್ಟಲಾಗಿತ್ತು. ಆದರೂ, ಕೋವಿಡ್ -19 ಸಾಂಕ್ರಾಮಿಕ ರೋಗಕ್ಕೆ ಮುನ್ನವೇ ಈ ಕ್ರಮಗಳು ಸ್ಥಗಿತಗೊಳ್ಳಲಾರಂಭಿಸಿದ್ದವು. ಕೊರೊನಾ ನಂತರ, ಬಾಲ್ಯವಿವಾಹ ಮತ್ತಷ್ಟು ಹೆಚ್ಚಿತು.

“ಕೊರೊನಾದಿಂದಾಗಿ ಶಾಲೆಗಳ ಮುಚ್ಚುವಿಕೆ, ಆರೋಗ್ಯ ಸೇವೆಗಳ ಕೊರತೆ ಮತ್ತು ಹೆಚ್ಚಿನ ಕುಟುಂಬಗಳು ಬಡತನಕ್ಕೆ ತಳ್ಳಲ್ಪಟ್ಟಿವೆ. ಇದರಿಂದಾಗಿ ದೀರ್ಘಾವಧಿಯ ಲಾಕ್‌ಡೌನ್‌ಗಳಲ್ಲಿ ಮಹಿಳೆಯರು ಮತ್ತು ಬಾಲಕಿಯರು ಹಿಂಸೆಯ ಅಪಾಯವನ್ನು ಎದುರಿಸುತ್ತಾರೆ. 2030ರ ವೇಳೆಗೆ ಜಾಗತಿಕವಾಗಿ ಇನ್ನೂ 10 ಮಿಲಿಯನ್ ಬಾಲಕಿಯರು ಬಾಲ್ಯ ವಿವಾಹವಾಗುವ ನಿರೀಕ್ಷೆಯಿದೆ. ಇದರಿಂದಾಗಿ ಹೆಚ್ಚಿನ ಬಾಲಕಿಯರು ಸಾವನ್ನಪ್ಪುವ ಅಪಾಯದಲ್ಲಿದ್ದಾರೆ” ಎಂದು ವರದಿ ಹೇಳಿದೆ.

ಬಾಲ್ಯ ವಿವಾಹವು ಲೈಂಗಿಕ ಮತ್ತು ಲಿಂಗ ಆಧಾರಿತ ದೌರ್ಜನ್ಯದ ಅತ್ಯಂತ ಕೆಟ್ಟ ಮತ್ತು ಮಾರಕ ರೂಪವಾಗಿದೆ ಎಂದು ಸೇವ್ ದಿ ಚಿಲ್ಡ್ರನ್ ಇಂಟರ್‌ನ್ಯಾಷನಲ್‌ನ ಸಿಇಒ ಇಂಗರ್ ಅಶಿಂಗ್ ಹೇಳಿದ್ದಾರೆ.

ಪ್ರತಿ ವರ್ಷ, ಲಕ್ಷಾಂತರ ಹೆಣ್ಣು ಮಕ್ಕಳು ಹೆಚ್ಚಾಗಿ ವಯಸ್ಸಾದ ಪುರುಷರೊಂದಿಗೆ ವಿವಾಹವಾಗಲು ಒತ್ತಾಯಿಸಲ್ಪಡುತ್ತಾರೆ. ಹೀಗಾಗಿ ಕಲಿಯಲು, ಮಕ್ಕಳಾಗಲು ಮತ್ತು ಅನೇಕ ಸಂದರ್ಭಗಳಲ್ಲಿ ಬದುಕಲು ಅವರು ಅವಕಾಶವನ್ನು ಕಸಿದುಕೊಳ್ಳುತ್ತಾರೆ.

ಇದನ್ನೂ ಓದಿ: ಚರಂಡಿ ಕ್ಲೀನ್ ಮಾಡುವವರ ಪಾತ್ರ ಮಾಡಬೇಕು, ಸಮಾಜದಲ್ಲಿ ಕ್ಲೀನ್ ಮಾಡುವುದು ಬಹಳಷ್ಟಿದೆ: ನಟ ಶಿವರಾಜ್ ಕುಮಾರ್‌

“ಅಪ್ರಾಪ್ತ ಬಾಲಕಿಯರು ಮಕ್ಕಳನ್ನು ಹೆರುವುದೇ ಅವರ ಸಾವಿಗೆ ಕಾರಣವಾಗಿದೆ. ಏಕೆಂದರೆ ಅವರ ಎಳೆಯ ದೇಹಗಳು ಮಕ್ಕಳನ್ನು ಹೊಂದುವುದಕ್ಕೆ ಸಿದ್ಧವಾಗಿರುವುದಿಲ್ಲ. ಮಕ್ಕಳನ್ನು ಹೊಂದುವ ಬಾಲಕಿಯರ ಮೇಲಾಗುವ ಆರೋಗ್ಯದ ಅಪಾಯಗಳನ್ನು ನಿರ್ಲಕ್ಷಿಸಬಾರದು” ಎಂದು ಹೇಳಿದ್ದಾರೆ.

ಸರ್ಕಾರಗಳು ಹೆಣ್ಣು ಮಕ್ಕಳಿಗೆ ಆದ್ಯತೆ ನೀಡಬೇಕು. ಅವರನ್ನು ಬಾಲ್ಯ ವಿವಾಹ ಮತ್ತು ಅಕಾಲಿಕ ಹೆರಿಗೆ ಸಂಬಂಧಿತ ಸಾವುಗಳಿಂದ ರಕ್ಷಿಸಬೇಕು ಎಂದು ಅಶಿಂಗ್ ಹೇಳಿದ್ದಾರೆ.

ಬಾಲ್ಯ ವಿವಾಹದ ಇತಿಹಾಸವನ್ನು ನೋಡಿದರೆ, ಇದು ನಮ್ಮ ಸಾಮೂಹಿಕ ವೈಫಲ್ಯವನ್ನು ತೋರಿಸುತ್ತದೆ. ಇದು ಈ ಶತಮಾನದಲ್ಲಿಯೂ ಮಾನವೀಯತೆಗೆ ವಿರುದ್ದವಾಗಿದೆ. ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುವುದು. ಅವರ ಕಲಿಕೆಯ ಮೂಲಭೂತ ಹಕ್ಕನ್ನು ಮತ್ತು ಸಂತೋಷ ಹಾಗೂ ನಿರಾತಂಕದ ಬಾಲ್ಯವನ್ನು ಆನಂದಿಸುವುದನ್ನು ಕಿತ್ತುಕೊಳ್ಳುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಇದನ್ನು ನಾವು ಖಂಡಿಸಬೇಕಿದೆ ಎಂದು ಸೇವ್ ದಿ ಚಿಲ್ಡ್ರನ್, ಇಂಡಿಯಾದ ಸಿಇಒ ಸುದರ್ಶನ್ ಹೇಳಿದ್ದಾರೆ.

ವಿವಿಧ ರೀತಿಯ ಅಸಮಾನತೆ ಮತ್ತು ತಾರತಮ್ಯ (ಲಿಂಗ, ಜನಾಂಗ, ಅಂಗವೈಕಲ್ಯ, ಆರ್ಥಿಕ ಹಿನ್ನೆಲೆ) ಸೇರಿದಂತೆ ಎಲ್ಲ ಹೆಣ್ಣು ಮಕ್ಕಳಿಗೂ ಅವರ ಹಕ್ಕುಗಳನ್ನು ಸರ್ಕಾರಗಳು ಖಾತರಿಪಡಿಸಬೇಕು ಎಂದು ಸಂಘಟನೆ ಒತ್ತಾಯಿಸಿದೆ.

ಕೃಪೆ: ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌

ಕನ್ನಡಕ್ಕೆ: ಸೋಮಶೇಖರ್‌ ಚಲ್ಯ


ಇದನ್ನೂ ಓದಿ: ಅಸೂಕ್ಷ್ಮ, ಪ್ರೊಪಗಂಡಾ ಮತ್ತು ಕ್ರಿಮಿನಲ್‌ಗಳಿಗೆ ಮಾರ್ಗದರ್ಶಿಯಂತಿರುವ ಕ್ರೈಮ್ ಸ್ಟೋರೀಸ್ ಇಂಡಿಯಾ ಡಿಟೆಕ್ಟಿವ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...