Homeಮುಖಪುಟಬಾಲ್ಯವಿವಾಹದಿಂದ ಜಾಗತಿಕವಾಗಿ ದಿನಕ್ಕೆ 60 ಕ್ಕೂ ಹೆಚ್ಚು ಬಾಲಕಿಯರ ಸಾವು: ವರದಿ

ಬಾಲ್ಯವಿವಾಹದಿಂದ ಜಾಗತಿಕವಾಗಿ ದಿನಕ್ಕೆ 60 ಕ್ಕೂ ಹೆಚ್ಚು ಬಾಲಕಿಯರ ಸಾವು: ವರದಿ

- Advertisement -
- Advertisement -

ಬಾಲ್ಯವಿವಾಹದಿಂದಾಗಿ ಜಾಗತಿಕವಾಗಿ ದಿನಕ್ಕೆ 60 ಕ್ಕೂ ಹೆಚ್ಚು ಬಾಲಕಿಯರು ಸಾವನ್ನಪ್ಪುತ್ತಿದ್ದಾರೆ. ಈ ಪೈಕಿ ದಕ್ಷಿಣ ಏಷ್ಯಾದಲ್ಲಿಯೇ ದಿನಕ್ಕೆ ಆರು ಹೆಣ್ಣು ಮಕ್ಕಳು ಬಲಿಯಾಗುತ್ತಿದ್ದಾರೆ ಎಂದು ಸೇವ್‌ ದಿ ಚಿಲ್ದ್ರನ್‌ ವರದಿ ಹೇಳಿದೆ. ಅಂತರಾಷ್ಟ್ರೀಯ ಹೆಣ್ಣು ಮಗುವಿನ ದಿನದಂದು ಬಿಡುಗಡೆ ಮಾಡಲಾದ ಸೇವ್‌ ದಿ ಚಿಲ್ದ್ರನ್‌ ವರದಿಯ ವಿಶ್ಲೇಷಣೆಯ ಪ್ರಕಾರ, ಬಾಲ್ಯ ವಿವಾಹಕ್ಕೆ ಒಳಗಾದ ಹೆಣ್ಣು ಮಕ್ಕಳಲ್ಲಿ ಅಂದಾಜು 22,000 ಬಾಲಕಿಯರು ಪ್ರತಿ ವರ್ಷ ಗರ್ಭಧಾರಣೆ ಮತ್ತು ಹೆರಿಗೆಯ ಸಂದರ್ಭದಲ್ಲಿ ಸಾವನ್ನಪ್ಪುತ್ತಿದ್ದಾರೆ.

ದಕ್ಷಿಣ ಏಷ್ಯಾದಲ್ಲಿ ಪ್ರತಿ ವರ್ಷ 2,000 (ಪ್ರತಿ ದಿನ ಆರು)ಬಾಲ್ಯ ವಿವಾಹ ಸಂಬಂಧಿ ಸಾವುಗಳು ಸಂಭವಿಸುತ್ತಿವೆ. ಪೂರ್ವ ಏಷ್ಯಾ ಮತ್ತು ಪೆಸಿಫಿಕ್ ಭಾಗದಲ್ಲಿ ವಾರ್ಷಿಕ 650 ಸಾವುಗಳು (ಪ್ರತಿ ದಿನ ಎರಡು), ಮತ್ತು ಲ್ಯಾಟಿನ್ ಅಮೇರಿಕನ್ ಮತ್ತು ಕೆರಿಬಿಯನ್‌ ಭಾಗದಲ್ಲಿ ವಾರ್ಷಿಕ 560 (ದಿನಕ್ಕೆ ಎರಡು) ಸಾವುಗಳಾಗಿವೆ ಎಂದು ವರದಿ ಹೇಳಿದೆ.

“ಬಾಲ್ಯ ವಿವಾಹವಾದವರಲ್ಲಿ ಅಂದಾಜು 22,000ಕ್ಕೂ ಹೆಚ್ಚು ಹೆಣ್ಣು ಮಕ್ಕಳು ಗರ್ಭಧಾರಣೆ ಮತ್ತು ಹೆರಿಗೆಯಿಂದ ಸಾಯುತ್ತಿದ್ದಾರೆ. ಬಾಲ್ಯವಿವಾಹವು ಒಂದು ದಿನಕ್ಕೆ 60 ಕ್ಕೂ ಹೆಚ್ಚು ಬಾಲಕಿಯರನ್ನು ಬಲಿಪಡೆಯುತ್ತಿದೆ. ಜಾಗತಿಕವಾಗಿ ಮತ್ತು ದಕ್ಷಿಣ ಏಷ್ಯಾದಲ್ಲಿ ದಿನಕ್ಕೆ 6 ಹೆಣ್ಣುಮಕ್ಕಳು ಸಾವನ್ನಪ್ಪುತ್ತಿದ್ದಾರೆ” ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಆದರೂ, ವಿಶ್ವದಲ್ಲೇ ಪಶ್ಚಿಮ ಮತ್ತು ಮಧ್ಯ ಆಫ್ರಿಕಾದಲ್ಲಿ ಅತಿಹೆಚ್ಚು ಬಾಲ್ಯವಿವಾಹಗಳು ನಡೆಯುತ್ತಿವೆ. ಜಾಗತಿಕವಾಗಿ ಅಂದಾಜು ಮಾಡಿದ ಬಾಲ್ಯವಿವಾಹ ಸಂಬಂಧಿತ ಸಾವುಗಳಲ್ಲಿ ಅರ್ಧದಷ್ಟು (9,600) ಅಥವಾ ದಿನಕ್ಕೆ 26 ಸಾವುಗಳು ಇಲ್ಲಿ ಸಂಭವಿಸುತ್ತಿವೆ. ಈ ಭಾಗದಲ್ಲಿ ಅಪ್ರಾಪ್ತ ತಾಯಂದಿರ ಮರಣ ಪ್ರಮಾಣವು ಜಗತ್ತಿನ ಎಲ್ಲೆಡೆಯಿಗಿಂತ ನಾಲ್ಕು ಪಟ್ಟು ಹೆಚ್ಚಾಗಿದೆ.

ಇದನ್ನೂ ಓದಿ: ಬೆಂಗಳೂರು: ಪೌರಕಾರ್ಮಿಕರ ಘನತೆಯ ಬದುಕು, ಗೌರವ, ವಸತಿ, ಶಿಕ್ಷಣಕ್ಕಾಗಿ 15 ದಿನಗಳ ಜಾಥಾ

“ಕಳೆದ 25 ವರ್ಷಗಳಲ್ಲಿ ಜಾಗತಿಕವಾಗಿ ಸುಮಾರು 80 ಮಿಲಿಯನ್ ಬಾಲ್ಯವಿವಾಹಗಳನ್ನು ತಡೆಗಟ್ಟಲಾಗಿತ್ತು. ಆದರೂ, ಕೋವಿಡ್ -19 ಸಾಂಕ್ರಾಮಿಕ ರೋಗಕ್ಕೆ ಮುನ್ನವೇ ಈ ಕ್ರಮಗಳು ಸ್ಥಗಿತಗೊಳ್ಳಲಾರಂಭಿಸಿದ್ದವು. ಕೊರೊನಾ ನಂತರ, ಬಾಲ್ಯವಿವಾಹ ಮತ್ತಷ್ಟು ಹೆಚ್ಚಿತು.

“ಕೊರೊನಾದಿಂದಾಗಿ ಶಾಲೆಗಳ ಮುಚ್ಚುವಿಕೆ, ಆರೋಗ್ಯ ಸೇವೆಗಳ ಕೊರತೆ ಮತ್ತು ಹೆಚ್ಚಿನ ಕುಟುಂಬಗಳು ಬಡತನಕ್ಕೆ ತಳ್ಳಲ್ಪಟ್ಟಿವೆ. ಇದರಿಂದಾಗಿ ದೀರ್ಘಾವಧಿಯ ಲಾಕ್‌ಡೌನ್‌ಗಳಲ್ಲಿ ಮಹಿಳೆಯರು ಮತ್ತು ಬಾಲಕಿಯರು ಹಿಂಸೆಯ ಅಪಾಯವನ್ನು ಎದುರಿಸುತ್ತಾರೆ. 2030ರ ವೇಳೆಗೆ ಜಾಗತಿಕವಾಗಿ ಇನ್ನೂ 10 ಮಿಲಿಯನ್ ಬಾಲಕಿಯರು ಬಾಲ್ಯ ವಿವಾಹವಾಗುವ ನಿರೀಕ್ಷೆಯಿದೆ. ಇದರಿಂದಾಗಿ ಹೆಚ್ಚಿನ ಬಾಲಕಿಯರು ಸಾವನ್ನಪ್ಪುವ ಅಪಾಯದಲ್ಲಿದ್ದಾರೆ” ಎಂದು ವರದಿ ಹೇಳಿದೆ.

ಬಾಲ್ಯ ವಿವಾಹವು ಲೈಂಗಿಕ ಮತ್ತು ಲಿಂಗ ಆಧಾರಿತ ದೌರ್ಜನ್ಯದ ಅತ್ಯಂತ ಕೆಟ್ಟ ಮತ್ತು ಮಾರಕ ರೂಪವಾಗಿದೆ ಎಂದು ಸೇವ್ ದಿ ಚಿಲ್ಡ್ರನ್ ಇಂಟರ್‌ನ್ಯಾಷನಲ್‌ನ ಸಿಇಒ ಇಂಗರ್ ಅಶಿಂಗ್ ಹೇಳಿದ್ದಾರೆ.

ಪ್ರತಿ ವರ್ಷ, ಲಕ್ಷಾಂತರ ಹೆಣ್ಣು ಮಕ್ಕಳು ಹೆಚ್ಚಾಗಿ ವಯಸ್ಸಾದ ಪುರುಷರೊಂದಿಗೆ ವಿವಾಹವಾಗಲು ಒತ್ತಾಯಿಸಲ್ಪಡುತ್ತಾರೆ. ಹೀಗಾಗಿ ಕಲಿಯಲು, ಮಕ್ಕಳಾಗಲು ಮತ್ತು ಅನೇಕ ಸಂದರ್ಭಗಳಲ್ಲಿ ಬದುಕಲು ಅವರು ಅವಕಾಶವನ್ನು ಕಸಿದುಕೊಳ್ಳುತ್ತಾರೆ.

ಇದನ್ನೂ ಓದಿ: ಚರಂಡಿ ಕ್ಲೀನ್ ಮಾಡುವವರ ಪಾತ್ರ ಮಾಡಬೇಕು, ಸಮಾಜದಲ್ಲಿ ಕ್ಲೀನ್ ಮಾಡುವುದು ಬಹಳಷ್ಟಿದೆ: ನಟ ಶಿವರಾಜ್ ಕುಮಾರ್‌

“ಅಪ್ರಾಪ್ತ ಬಾಲಕಿಯರು ಮಕ್ಕಳನ್ನು ಹೆರುವುದೇ ಅವರ ಸಾವಿಗೆ ಕಾರಣವಾಗಿದೆ. ಏಕೆಂದರೆ ಅವರ ಎಳೆಯ ದೇಹಗಳು ಮಕ್ಕಳನ್ನು ಹೊಂದುವುದಕ್ಕೆ ಸಿದ್ಧವಾಗಿರುವುದಿಲ್ಲ. ಮಕ್ಕಳನ್ನು ಹೊಂದುವ ಬಾಲಕಿಯರ ಮೇಲಾಗುವ ಆರೋಗ್ಯದ ಅಪಾಯಗಳನ್ನು ನಿರ್ಲಕ್ಷಿಸಬಾರದು” ಎಂದು ಹೇಳಿದ್ದಾರೆ.

ಸರ್ಕಾರಗಳು ಹೆಣ್ಣು ಮಕ್ಕಳಿಗೆ ಆದ್ಯತೆ ನೀಡಬೇಕು. ಅವರನ್ನು ಬಾಲ್ಯ ವಿವಾಹ ಮತ್ತು ಅಕಾಲಿಕ ಹೆರಿಗೆ ಸಂಬಂಧಿತ ಸಾವುಗಳಿಂದ ರಕ್ಷಿಸಬೇಕು ಎಂದು ಅಶಿಂಗ್ ಹೇಳಿದ್ದಾರೆ.

ಬಾಲ್ಯ ವಿವಾಹದ ಇತಿಹಾಸವನ್ನು ನೋಡಿದರೆ, ಇದು ನಮ್ಮ ಸಾಮೂಹಿಕ ವೈಫಲ್ಯವನ್ನು ತೋರಿಸುತ್ತದೆ. ಇದು ಈ ಶತಮಾನದಲ್ಲಿಯೂ ಮಾನವೀಯತೆಗೆ ವಿರುದ್ದವಾಗಿದೆ. ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುವುದು. ಅವರ ಕಲಿಕೆಯ ಮೂಲಭೂತ ಹಕ್ಕನ್ನು ಮತ್ತು ಸಂತೋಷ ಹಾಗೂ ನಿರಾತಂಕದ ಬಾಲ್ಯವನ್ನು ಆನಂದಿಸುವುದನ್ನು ಕಿತ್ತುಕೊಳ್ಳುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಇದನ್ನು ನಾವು ಖಂಡಿಸಬೇಕಿದೆ ಎಂದು ಸೇವ್ ದಿ ಚಿಲ್ಡ್ರನ್, ಇಂಡಿಯಾದ ಸಿಇಒ ಸುದರ್ಶನ್ ಹೇಳಿದ್ದಾರೆ.

ವಿವಿಧ ರೀತಿಯ ಅಸಮಾನತೆ ಮತ್ತು ತಾರತಮ್ಯ (ಲಿಂಗ, ಜನಾಂಗ, ಅಂಗವೈಕಲ್ಯ, ಆರ್ಥಿಕ ಹಿನ್ನೆಲೆ) ಸೇರಿದಂತೆ ಎಲ್ಲ ಹೆಣ್ಣು ಮಕ್ಕಳಿಗೂ ಅವರ ಹಕ್ಕುಗಳನ್ನು ಸರ್ಕಾರಗಳು ಖಾತರಿಪಡಿಸಬೇಕು ಎಂದು ಸಂಘಟನೆ ಒತ್ತಾಯಿಸಿದೆ.

ಕೃಪೆ: ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌

ಕನ್ನಡಕ್ಕೆ: ಸೋಮಶೇಖರ್‌ ಚಲ್ಯ


ಇದನ್ನೂ ಓದಿ: ಅಸೂಕ್ಷ್ಮ, ಪ್ರೊಪಗಂಡಾ ಮತ್ತು ಕ್ರಿಮಿನಲ್‌ಗಳಿಗೆ ಮಾರ್ಗದರ್ಶಿಯಂತಿರುವ ಕ್ರೈಮ್ ಸ್ಟೋರೀಸ್ ಇಂಡಿಯಾ ಡಿಟೆಕ್ಟಿವ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...