Homeಮುಖಪುಟಬಾಲ್ಯವಿವಾಹದಿಂದ ಜಾಗತಿಕವಾಗಿ ದಿನಕ್ಕೆ 60 ಕ್ಕೂ ಹೆಚ್ಚು ಬಾಲಕಿಯರ ಸಾವು: ವರದಿ

ಬಾಲ್ಯವಿವಾಹದಿಂದ ಜಾಗತಿಕವಾಗಿ ದಿನಕ್ಕೆ 60 ಕ್ಕೂ ಹೆಚ್ಚು ಬಾಲಕಿಯರ ಸಾವು: ವರದಿ

- Advertisement -
- Advertisement -

ಬಾಲ್ಯವಿವಾಹದಿಂದಾಗಿ ಜಾಗತಿಕವಾಗಿ ದಿನಕ್ಕೆ 60 ಕ್ಕೂ ಹೆಚ್ಚು ಬಾಲಕಿಯರು ಸಾವನ್ನಪ್ಪುತ್ತಿದ್ದಾರೆ. ಈ ಪೈಕಿ ದಕ್ಷಿಣ ಏಷ್ಯಾದಲ್ಲಿಯೇ ದಿನಕ್ಕೆ ಆರು ಹೆಣ್ಣು ಮಕ್ಕಳು ಬಲಿಯಾಗುತ್ತಿದ್ದಾರೆ ಎಂದು ಸೇವ್‌ ದಿ ಚಿಲ್ದ್ರನ್‌ ವರದಿ ಹೇಳಿದೆ. ಅಂತರಾಷ್ಟ್ರೀಯ ಹೆಣ್ಣು ಮಗುವಿನ ದಿನದಂದು ಬಿಡುಗಡೆ ಮಾಡಲಾದ ಸೇವ್‌ ದಿ ಚಿಲ್ದ್ರನ್‌ ವರದಿಯ ವಿಶ್ಲೇಷಣೆಯ ಪ್ರಕಾರ, ಬಾಲ್ಯ ವಿವಾಹಕ್ಕೆ ಒಳಗಾದ ಹೆಣ್ಣು ಮಕ್ಕಳಲ್ಲಿ ಅಂದಾಜು 22,000 ಬಾಲಕಿಯರು ಪ್ರತಿ ವರ್ಷ ಗರ್ಭಧಾರಣೆ ಮತ್ತು ಹೆರಿಗೆಯ ಸಂದರ್ಭದಲ್ಲಿ ಸಾವನ್ನಪ್ಪುತ್ತಿದ್ದಾರೆ.

ದಕ್ಷಿಣ ಏಷ್ಯಾದಲ್ಲಿ ಪ್ರತಿ ವರ್ಷ 2,000 (ಪ್ರತಿ ದಿನ ಆರು)ಬಾಲ್ಯ ವಿವಾಹ ಸಂಬಂಧಿ ಸಾವುಗಳು ಸಂಭವಿಸುತ್ತಿವೆ. ಪೂರ್ವ ಏಷ್ಯಾ ಮತ್ತು ಪೆಸಿಫಿಕ್ ಭಾಗದಲ್ಲಿ ವಾರ್ಷಿಕ 650 ಸಾವುಗಳು (ಪ್ರತಿ ದಿನ ಎರಡು), ಮತ್ತು ಲ್ಯಾಟಿನ್ ಅಮೇರಿಕನ್ ಮತ್ತು ಕೆರಿಬಿಯನ್‌ ಭಾಗದಲ್ಲಿ ವಾರ್ಷಿಕ 560 (ದಿನಕ್ಕೆ ಎರಡು) ಸಾವುಗಳಾಗಿವೆ ಎಂದು ವರದಿ ಹೇಳಿದೆ.

“ಬಾಲ್ಯ ವಿವಾಹವಾದವರಲ್ಲಿ ಅಂದಾಜು 22,000ಕ್ಕೂ ಹೆಚ್ಚು ಹೆಣ್ಣು ಮಕ್ಕಳು ಗರ್ಭಧಾರಣೆ ಮತ್ತು ಹೆರಿಗೆಯಿಂದ ಸಾಯುತ್ತಿದ್ದಾರೆ. ಬಾಲ್ಯವಿವಾಹವು ಒಂದು ದಿನಕ್ಕೆ 60 ಕ್ಕೂ ಹೆಚ್ಚು ಬಾಲಕಿಯರನ್ನು ಬಲಿಪಡೆಯುತ್ತಿದೆ. ಜಾಗತಿಕವಾಗಿ ಮತ್ತು ದಕ್ಷಿಣ ಏಷ್ಯಾದಲ್ಲಿ ದಿನಕ್ಕೆ 6 ಹೆಣ್ಣುಮಕ್ಕಳು ಸಾವನ್ನಪ್ಪುತ್ತಿದ್ದಾರೆ” ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಆದರೂ, ವಿಶ್ವದಲ್ಲೇ ಪಶ್ಚಿಮ ಮತ್ತು ಮಧ್ಯ ಆಫ್ರಿಕಾದಲ್ಲಿ ಅತಿಹೆಚ್ಚು ಬಾಲ್ಯವಿವಾಹಗಳು ನಡೆಯುತ್ತಿವೆ. ಜಾಗತಿಕವಾಗಿ ಅಂದಾಜು ಮಾಡಿದ ಬಾಲ್ಯವಿವಾಹ ಸಂಬಂಧಿತ ಸಾವುಗಳಲ್ಲಿ ಅರ್ಧದಷ್ಟು (9,600) ಅಥವಾ ದಿನಕ್ಕೆ 26 ಸಾವುಗಳು ಇಲ್ಲಿ ಸಂಭವಿಸುತ್ತಿವೆ. ಈ ಭಾಗದಲ್ಲಿ ಅಪ್ರಾಪ್ತ ತಾಯಂದಿರ ಮರಣ ಪ್ರಮಾಣವು ಜಗತ್ತಿನ ಎಲ್ಲೆಡೆಯಿಗಿಂತ ನಾಲ್ಕು ಪಟ್ಟು ಹೆಚ್ಚಾಗಿದೆ.

ಇದನ್ನೂ ಓದಿ: ಬೆಂಗಳೂರು: ಪೌರಕಾರ್ಮಿಕರ ಘನತೆಯ ಬದುಕು, ಗೌರವ, ವಸತಿ, ಶಿಕ್ಷಣಕ್ಕಾಗಿ 15 ದಿನಗಳ ಜಾಥಾ

“ಕಳೆದ 25 ವರ್ಷಗಳಲ್ಲಿ ಜಾಗತಿಕವಾಗಿ ಸುಮಾರು 80 ಮಿಲಿಯನ್ ಬಾಲ್ಯವಿವಾಹಗಳನ್ನು ತಡೆಗಟ್ಟಲಾಗಿತ್ತು. ಆದರೂ, ಕೋವಿಡ್ -19 ಸಾಂಕ್ರಾಮಿಕ ರೋಗಕ್ಕೆ ಮುನ್ನವೇ ಈ ಕ್ರಮಗಳು ಸ್ಥಗಿತಗೊಳ್ಳಲಾರಂಭಿಸಿದ್ದವು. ಕೊರೊನಾ ನಂತರ, ಬಾಲ್ಯವಿವಾಹ ಮತ್ತಷ್ಟು ಹೆಚ್ಚಿತು.

“ಕೊರೊನಾದಿಂದಾಗಿ ಶಾಲೆಗಳ ಮುಚ್ಚುವಿಕೆ, ಆರೋಗ್ಯ ಸೇವೆಗಳ ಕೊರತೆ ಮತ್ತು ಹೆಚ್ಚಿನ ಕುಟುಂಬಗಳು ಬಡತನಕ್ಕೆ ತಳ್ಳಲ್ಪಟ್ಟಿವೆ. ಇದರಿಂದಾಗಿ ದೀರ್ಘಾವಧಿಯ ಲಾಕ್‌ಡೌನ್‌ಗಳಲ್ಲಿ ಮಹಿಳೆಯರು ಮತ್ತು ಬಾಲಕಿಯರು ಹಿಂಸೆಯ ಅಪಾಯವನ್ನು ಎದುರಿಸುತ್ತಾರೆ. 2030ರ ವೇಳೆಗೆ ಜಾಗತಿಕವಾಗಿ ಇನ್ನೂ 10 ಮಿಲಿಯನ್ ಬಾಲಕಿಯರು ಬಾಲ್ಯ ವಿವಾಹವಾಗುವ ನಿರೀಕ್ಷೆಯಿದೆ. ಇದರಿಂದಾಗಿ ಹೆಚ್ಚಿನ ಬಾಲಕಿಯರು ಸಾವನ್ನಪ್ಪುವ ಅಪಾಯದಲ್ಲಿದ್ದಾರೆ” ಎಂದು ವರದಿ ಹೇಳಿದೆ.

ಬಾಲ್ಯ ವಿವಾಹವು ಲೈಂಗಿಕ ಮತ್ತು ಲಿಂಗ ಆಧಾರಿತ ದೌರ್ಜನ್ಯದ ಅತ್ಯಂತ ಕೆಟ್ಟ ಮತ್ತು ಮಾರಕ ರೂಪವಾಗಿದೆ ಎಂದು ಸೇವ್ ದಿ ಚಿಲ್ಡ್ರನ್ ಇಂಟರ್‌ನ್ಯಾಷನಲ್‌ನ ಸಿಇಒ ಇಂಗರ್ ಅಶಿಂಗ್ ಹೇಳಿದ್ದಾರೆ.

ಪ್ರತಿ ವರ್ಷ, ಲಕ್ಷಾಂತರ ಹೆಣ್ಣು ಮಕ್ಕಳು ಹೆಚ್ಚಾಗಿ ವಯಸ್ಸಾದ ಪುರುಷರೊಂದಿಗೆ ವಿವಾಹವಾಗಲು ಒತ್ತಾಯಿಸಲ್ಪಡುತ್ತಾರೆ. ಹೀಗಾಗಿ ಕಲಿಯಲು, ಮಕ್ಕಳಾಗಲು ಮತ್ತು ಅನೇಕ ಸಂದರ್ಭಗಳಲ್ಲಿ ಬದುಕಲು ಅವರು ಅವಕಾಶವನ್ನು ಕಸಿದುಕೊಳ್ಳುತ್ತಾರೆ.

ಇದನ್ನೂ ಓದಿ: ಚರಂಡಿ ಕ್ಲೀನ್ ಮಾಡುವವರ ಪಾತ್ರ ಮಾಡಬೇಕು, ಸಮಾಜದಲ್ಲಿ ಕ್ಲೀನ್ ಮಾಡುವುದು ಬಹಳಷ್ಟಿದೆ: ನಟ ಶಿವರಾಜ್ ಕುಮಾರ್‌

“ಅಪ್ರಾಪ್ತ ಬಾಲಕಿಯರು ಮಕ್ಕಳನ್ನು ಹೆರುವುದೇ ಅವರ ಸಾವಿಗೆ ಕಾರಣವಾಗಿದೆ. ಏಕೆಂದರೆ ಅವರ ಎಳೆಯ ದೇಹಗಳು ಮಕ್ಕಳನ್ನು ಹೊಂದುವುದಕ್ಕೆ ಸಿದ್ಧವಾಗಿರುವುದಿಲ್ಲ. ಮಕ್ಕಳನ್ನು ಹೊಂದುವ ಬಾಲಕಿಯರ ಮೇಲಾಗುವ ಆರೋಗ್ಯದ ಅಪಾಯಗಳನ್ನು ನಿರ್ಲಕ್ಷಿಸಬಾರದು” ಎಂದು ಹೇಳಿದ್ದಾರೆ.

ಸರ್ಕಾರಗಳು ಹೆಣ್ಣು ಮಕ್ಕಳಿಗೆ ಆದ್ಯತೆ ನೀಡಬೇಕು. ಅವರನ್ನು ಬಾಲ್ಯ ವಿವಾಹ ಮತ್ತು ಅಕಾಲಿಕ ಹೆರಿಗೆ ಸಂಬಂಧಿತ ಸಾವುಗಳಿಂದ ರಕ್ಷಿಸಬೇಕು ಎಂದು ಅಶಿಂಗ್ ಹೇಳಿದ್ದಾರೆ.

ಬಾಲ್ಯ ವಿವಾಹದ ಇತಿಹಾಸವನ್ನು ನೋಡಿದರೆ, ಇದು ನಮ್ಮ ಸಾಮೂಹಿಕ ವೈಫಲ್ಯವನ್ನು ತೋರಿಸುತ್ತದೆ. ಇದು ಈ ಶತಮಾನದಲ್ಲಿಯೂ ಮಾನವೀಯತೆಗೆ ವಿರುದ್ದವಾಗಿದೆ. ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುವುದು. ಅವರ ಕಲಿಕೆಯ ಮೂಲಭೂತ ಹಕ್ಕನ್ನು ಮತ್ತು ಸಂತೋಷ ಹಾಗೂ ನಿರಾತಂಕದ ಬಾಲ್ಯವನ್ನು ಆನಂದಿಸುವುದನ್ನು ಕಿತ್ತುಕೊಳ್ಳುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಇದನ್ನು ನಾವು ಖಂಡಿಸಬೇಕಿದೆ ಎಂದು ಸೇವ್ ದಿ ಚಿಲ್ಡ್ರನ್, ಇಂಡಿಯಾದ ಸಿಇಒ ಸುದರ್ಶನ್ ಹೇಳಿದ್ದಾರೆ.

ವಿವಿಧ ರೀತಿಯ ಅಸಮಾನತೆ ಮತ್ತು ತಾರತಮ್ಯ (ಲಿಂಗ, ಜನಾಂಗ, ಅಂಗವೈಕಲ್ಯ, ಆರ್ಥಿಕ ಹಿನ್ನೆಲೆ) ಸೇರಿದಂತೆ ಎಲ್ಲ ಹೆಣ್ಣು ಮಕ್ಕಳಿಗೂ ಅವರ ಹಕ್ಕುಗಳನ್ನು ಸರ್ಕಾರಗಳು ಖಾತರಿಪಡಿಸಬೇಕು ಎಂದು ಸಂಘಟನೆ ಒತ್ತಾಯಿಸಿದೆ.

ಕೃಪೆ: ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌

ಕನ್ನಡಕ್ಕೆ: ಸೋಮಶೇಖರ್‌ ಚಲ್ಯ


ಇದನ್ನೂ ಓದಿ: ಅಸೂಕ್ಷ್ಮ, ಪ್ರೊಪಗಂಡಾ ಮತ್ತು ಕ್ರಿಮಿನಲ್‌ಗಳಿಗೆ ಮಾರ್ಗದರ್ಶಿಯಂತಿರುವ ಕ್ರೈಮ್ ಸ್ಟೋರೀಸ್ ಇಂಡಿಯಾ ಡಿಟೆಕ್ಟಿವ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...