Homeಮುಖಪುಟಬಾಬಾಬುಡನ್ ಗಿರಿಯಲ್ಲಿ ಗೋರಿ ಧ್ವಂಸ ಪ್ರಕರಣದ ಮರುತನಿಖೆ ಸುದ್ದಿ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬಾಬಾಬುಡನ್ ಗಿರಿಯಲ್ಲಿ ಗೋರಿ ಧ್ವಂಸ ಪ್ರಕರಣದ ಮರುತನಿಖೆ ಸುದ್ದಿ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

- Advertisement -
- Advertisement -

ಬಾಬಾಬುಡನ್ ಗಿರಿಯಲ್ಲಿ ನಡೆದ ಗೋರಿ ಧ್ವಂಸ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ ಎಂದು ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾದ ಸುದ್ದಿ ಸುಳ್ಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಪ್ರಕರಣದ ವಿವರ ಹಂಚಿಕೊಂಡಿರುವ ಸಿಎಂ, “2017ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ 2020ರ ಮಾರ್ಚ್ 19 ರಂದು ವಿಚಾರಣೆಗೆ ಅನುಮತಿಗಾಗಿ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಅದರ ಆಧಾರದಲ್ಲಿ 2023ರ ಸೆಪ್ಟೆಂಬರ್ 7ರಂದು ಸರ್ಕಾರ ಅನುಮತಿ ನೀಡಿತ್ತು. 2023ರ ಅಕ್ಟೋಬರ್ 24 ರಂದು ಆರೋಪಿಗಳ ವಿರುದ್ಧ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಬಳಿಕ ಕಾನೂನು ಪ್ರಕ್ರಿಯೆಯ ಮುಂದುವರೆದ ಭಾಗವಾಗಿ ಜನವರಿ 8ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯದಿಂದಲೇ ಆರೋಪಿಗಳಿಗೆ ಸಮನ್ಸ್ ಜಾರಿಯಾಗಿದೆ” ಎಂದು ತಿಳಿಸಿದ್ದಾರೆ.

“ಇದು ಸಹಜ ಕಾನೂನು ಪ್ರಕ್ರಿಯೆ, ಇದರಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ. ರಾಜ್ಯ ಸರ್ಕಾರ ಪ್ರಕರಣದ ಮರು ತನಿಖೆಗೆ ಮುಂದಾಗಿದೆ ಎಂದು ಮಾಧ್ಯಮಗಳು ಸುಳ್ಳು ಸುದ್ದಿ ಬಿತ್ತರಿಸಿ, ಪ್ರಚೋದನೆ ನೀಡುವ ಕೆಲಸ ಮಾಡಬಾರದು. ಇಂತಹ ಸುಳ್ಳು ಸುದ್ದಿ ಪ್ರಸಾರದಿಂದ ಮಾಧ್ಯಮಗಳು ವಿಶ್ವಾಸಾರ್ಹತೆ ಕಳೆದುಕೊಳ್ಳುತ್ತವೆ ಜೊತೆಗೆ ಕಾನೂನು ಸುವ್ಯವಸ್ಥೆ ಕೂಡ ಹದಗೆಡುವ ಸಾಧ್ಯತೆ ಅಲ್ಲಗಳೆಯಲಾಗದು. ಹೀಗಾಗಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು” ಎಂದು ಸಿಎಂ ಮನವಿ ಮಾಡಿದ್ದಾರೆ.

ಡಿಸೆಂಬರ್ 4ರಂದು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, 7 ವರ್ಷ ಹಳೆಯ ದತ್ತಪೀಠ ಪ್ರಕರಣವನ್ನು ಮರು ತನಿಖೆ ಮಾಡಿಸಿ ಕಾಂಗ್ರೆಸ್ ಸರ್ಕಾರ ದತ್ತಾತ್ರೇಯನ ಭಕ್ತರ ವಿರುದ್ಧವೂ ಷಡ್ಯಂತ್ರ ರೂಪಿಸಲು ಹೊರಟಿದೆ ಎಂದು ಆರೋಪಿಸಿದ್ದರು.

“ಮೊನ್ನೆ ಕರಸೇವಕರು, ಇಂದು ದತ್ತ ಪೀಠದ ಹೋರಾಟಗಾರರನ್ನು ಬೆನ್ನು ಹತ್ತಲು ಪೋಲಿಸರಿಗೆ ಸೂಚಿಸಿದ್ದೀರಿ. ನಿವೆಷ್ಟೇ ಭಯ ಹುಟ್ಟಿಸಿದರೂ ರಾಮ ಭಕ್ತರ ಅಯೋಧ್ಯೆ ಭೇಟಿಯ ಸಂಖ್ಯೆ ಕ್ಷೀಣಿಸಲು ಸಾಧ್ಯವಾಗದು, ಬದಲಾಗಿ ಅದು ವಿಸ್ತಾರಗೊಳ್ಳತ್ತಲೇ ಇರುತ್ತದೆ. ನಿಮ್ಮ ಹಿಂದೂ ದ್ವೇಷದ ಬೆಟ್ಟ ನಿಮಗೆಷ್ಟು ಬೇಕೋ ಅಗೆಯಿರಿ, ಇನ್ನಷ್ಟು ಆಳಕ್ಕೂ ಇಳಿದು ಬಗೆಯಿರಿ, ನಿಮಗೇನೂ ದಕ್ಕದು, ಹಿಂದೂ ಕಾರ್ಯಕರ್ತರ ಒಂದೇ ಒಂದು ರೋಮವನ್ನೂ ಕೊಂಕಿಸಲೂ‌ ಸಾಧ್ಯವಾಗದು. ರಾಮ ಜನ್ಮಭೂಮಿ ಹೋರಾಟದ 31 ವರ್ಷ ಹಳೆಯ ಪ್ರಕರಣಗಳನ್ನು ಕೆದಕಿ ಕರ ಸೇವಕರನ್ನು ಬಂಧಿಸಿದ್ದರ ಬೆನ್ನಲ್ಲೇ, ಇದೀಗ 7 ವರ್ಷ ಹಳೆಯ ದತ್ತಪೀಠ ಪ್ರಕರಣವನ್ನು ಮರು ತನಿಖೆ ಮಾಡಿಸಿ ಕಾಂಗ್ರೆಸ್ ಸರ್ಕಾರ ದತ್ತಾತ್ರೇಯನ ಭಕ್ತರ ವಿರುದ್ಧವೂ ಷಡ್ಯಂತ್ರ ರೂಪಿಸಲು ಹೊರಟಿದೆ. ಹನುಮನ ಸುಡಲು ಹೋಗಿ ಲಂಕೆಗೆ ಬೆಂಕಿ ಹಚ್ಚಿಸಿಕೊಂಡ ರಾವಣನ ಸ್ಥಿತಿಗೆ ನಿಮ್ಮ ಸರ್ಕಾರ ತಲುಪುತ್ತಿದೆ” ಎಂದು ವಿಜಯೇಂದ್ರ ಎಕ್ಸ್‌ನಲ್ಲಿ ಬರೆದುಕೊಂಡಿದ್ದರು.

ವಿಜಯೇಂದ್ರ ಪೋಸ್ಟ್‌ ಅನುಸರಿಸಿ ಅನೇಕ ದೃಶ್ಯ ಮಾಧ್ಯಮಗಳು ಸುದ್ದಿ ಬಿತ್ತರಿಸಿತ್ತು. ಈ ಬೆನ್ನಲ್ಲೇ ಸಿಎಂ ಸ್ಪಷ್ಟನೆ ನಿಡಿದ್ದಾರೆ.

ಏನಿದು ಪ್ರಕರಣ?

2017ರಲ್ಲಿ ಚಿಕ್ಕಮಗಳೂರು ತಾಲೂಕು ಇನಾಂ ದತ್ತಾತ್ರೇಯ ಬಾಬಾ ಬುಡನ್ ದರ್ಗಾದಲ್ಲಿ ಗೋರಿಯನ್ನು ಧ್ವಂಸಗೊಳಿಸಿದ ಘಟನೆ ನಡೆದಿತ್ತು. ‌ 2017ರ ಡಿಸೆಂಬರ್ 3 ರಂದು ದತ್ತ ಜಯಂತಿ ದಿನ ದರ್ಗಾದ ಆವರಣದಲ್ಲಿದ್ದ ಎರಡು ಗೋರಿಗಳನ್ನು ಧ್ವಂಸಗೊಳಿಸಲಾಗಿತ್ತು. ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಭಜರಂಗದಳದ ತುಡುಕೂರು ಮಂಜು, ಶಿವರಾಜ್, ಸಂದೇಶ್, ಸುಮಂತ್, ನಾಗ, ನಾಗೇಂದ್ರ ಪೂಜಾರಿ, ಮೋಹನ್, ಅಶೋಕ್, ತೇಜು, ಶ್ರೀನಾಥ್, ಲೋಕೇಶ್, ಮಹೇಂದ್ರ, ಸಂದೀಪ್, ರಾಮು ಸೇರಿ ಒಟ್ಟು 14 ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಜನವರಿ 8ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಆರೋಪಿಗಳಿಗೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ : ಬೆಂಗಳೂರು ವಿಮಾನ ನಿಲ್ದಾಣದ ಕ್ಯಾಬ್ ಸಂಸ್ಥೆಯ ಮಹಿಳಾ ಉದ್ಯೋಗಿ ನಾಪತ್ತೆ: ತಿಂಗಳಲ್ಲಿ ಎರಡನೇ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...