Homeಮುಖಪುಟಇಸ್ರೇಲ್‌ನಿಂದ ಪೆಗಾಸಸ್‌ ಖರೀದಿಸಿದ್ದ ವರದಿ ಬಹಿರಂಗ; ಮೋದಿ ಸರ್ಕಾರದ ವಿರುದ್ದ ವಿಪಕ್ಷಗಳ ಕಿಡಿ!

ಇಸ್ರೇಲ್‌ನಿಂದ ಪೆಗಾಸಸ್‌ ಖರೀದಿಸಿದ್ದ ವರದಿ ಬಹಿರಂಗ; ಮೋದಿ ಸರ್ಕಾರದ ವಿರುದ್ದ ವಿಪಕ್ಷಗಳ ಕಿಡಿ!

- Advertisement -
- Advertisement -

ಇಸ್ರೇಲ್‌ನೊಂದಿಗಿನ ರಕ್ಷಣಾ ಒಪ್ಪಂದದ ಭಾಗವಾಗಿ ಭಾರತ ಸರ್ಕಾರವು 2017 ರಲ್ಲಿ ಪೆಗಾಸಸ್ ಸ್ಪೈವೇರ್ ಅನ್ನು ಖರೀದಿಸಿದೆ ಎಂದು ನ್ಯೂಯಾರ್ಕ್ ಟೈಮ್ಸ್ (NYT) ವರದಿ ಮಾಡಿದೆ. ಈ ವರದಿ ಪ್ರಕಟವಾದ ನಂತರ ಮೋದಿ ಸರ್ಕಾರವು ವಿರುದ್ಧ ವಿಪಕ್ಷಗಳ ತ್ರೀವ್ರ ಟೀಕೆಗೆ ಗುರಿಯಾಗಿದೆ. ಆದರೆ, ಕೇಂದ್ರ ಸಚಿವ ವಿಕೆ ಸಿಂಗ್ ವರದಿಯನ್ನು ತಳ್ಳಿಹಾಕಿದ್ದಾರೆ.

NYT ವರದಿಯು, ಕ್ಷಿಪಣಿ ವ್ಯವಸ್ಥೆ ಸೇರಿದಂತೆ ಶಸ್ತ್ರಾಸ್ತ್ರಗಳನ್ನು ಖರೀದಿಸುವ 2 ಬಿಲಿಯನ್ ಡಾಲರ್‌ ಪ್ಯಾಕೇಜ್‌ನ ಒಪ್ಪಂದದ ಭಾಗವಾಗಿ ಸ್ಪೈವೇರ್ ಪೆಗಾಸಸ್‌ಅನ್ನು ಭಾರತವು ಇಸ್ರೇಲ್‌ನಿಂದ ಖರೀದಿಸಿದೆ. ಒಪ್ಪಂದವು 2017ರ ಜುಲೈನಲ್ಲಿ ಮೋದಿ ಅವರು ಇಸ್ರೇಲ್‌ಗೆ ಭೇಟಿ ನೀಡಿದ್ದಾಗ ನಡೆದಿದೆ ಎಂದು ಹೇಳಿದೆ.

ವರದಿ ಪ್ರಕಟವಾದ ಬಳಿಕ ಕೇಂದ್ರದ ವಿರುದ್ದ ಹರಿಹಾಯ್ದಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮೋದಿ ಸರ್ಕಾರವನ್ನು “ದೇಶದ್ರೋಹಿ” ಎಂದು ಕರೆದಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ನಮ್ಮ ಪ್ರಜಾಪ್ರಭುತ್ವದ ಪ್ರಾಥಮಿಕ ಸಂಸ್ಥೆಗಳು, ನಾಯಕರು ಮತ್ತು ಸಾರ್ವಜನಿಕರ ಮೇಲೆ ಕಣ್ಣಿಡಲು ಪೆಗಾಸಸ್ ಅನ್ನು ಮೋದಿ ಸರ್ಕಾರ ಖರೀದಿಸಿದೆ. ಇದು ದೇಶದ್ರೋಹ. ಮೋದಿ ಸರ್ಕಾರ ದೇಶದ್ರೋಹ ಮಾಡಿದೆ” ಎಂದು ಆರೋಪಿಸಿದ್ದಾರೆ.

ಮೋದಿ ಸರ್ಕಾರವು ಇಸ್ರೇಲಿ ಕಣ್ಗಾವಲು ಸ್ಪೈವೇರ್ ಪೆಗಾಸಸ್ ಮೂಲಕ ಅಕ್ರಮ ಮತ್ತು ಅಸಾಂವಿಧಾನಿಕ ಬೇಹುಗಾರಿಕೆ ಮತ್ತು ಸ್ನೂಪಿಂಗ್ ದಂಧೆಯನ್ನು ನಡೆಸಿದೆ. ಈ ದಂಧೆಗೆ ನಿಯೋಜಕ ಮತ್ತು ನಿರ್ವಾಹಕ ಎರಡೂ ಬಿಜೆಪಿ ಸರ್ಕಾರವೇ ಆಗಿದೆ. ಪೆಗಾಸಸ್‌ ಆಘಾತಕಾರಿ ವಿಚಾರದ ಬಗ್ಗೆ ನಾವು ಸುದೀರ್ಘ ಕಾಲದಿಂದ ಪ್ರತಿಪಾದಿಸಿದ್ದನ್ನು ಅಂತಾರಾಷ್ಟ್ರೀಯ ಪ್ರಕಟಣೆಯು ದೃಢಪಡಿಸಿದೆ ಮತ್ತು ಬಹಿರಂಗ ಪಡಿಸಿದೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.

ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಟ್ವಿಟರ್‌ನಲ್ಲಿ, “ಮೋದಿ ಸರ್ಕಾರ ಭಾರತದ ಶತ್ರುವಿನಂತೆ ವರ್ತಿಸಿತ್ತಿದೆ. ಭಾರತೀಯ ನಾಗರಿಕರ ವಿರುದ್ಧ ಕಣ್ಗಾವಲಿನ ಅಸ್ತ್ರವನ್ನು ಏಕೆ ಬಳಸುತ್ತಿದೆ?” ಎಂದು ಪ್ರಶ್ನಿಸಿದ್ದಾರೆ.

ಶಿವಸೇನಾ ಸಂಸದೆ ಪ್ರಿಯಾಂಕಾ ಚತುರ್ವೇದಿ ಅವರು, “ಸ್ಪೈವೇರ್ ಅನ್ನು ರಕ್ಷಣಾ ಉದ್ದೇಶಗಳಿಗಾಗಿ ಬಳಸಲಾಗಿಲ್ಲ. ಆದರೆ ಪ್ರತಿಪಕ್ಷಗಳು ಮತ್ತು ಪತ್ರಕರ್ತರ ಮೇಲೆ ಕಣ್ಣಿಡಲು ಬಳಸಲಾಗಿದೆ. ಬಿಜೆಪಿ ಸರ್ಕಾರದಲ್ಲಿ ಇಂತಹ ದುಷ್‌ಕೃತ್ಯಗಳು ಸಾಧ್ಯ. ಅವರು ದೇಶವನ್ನೇ ಬಿಗ್‌ಬಾಸ್‌ ಶೋ ಆಗಿ ಮಾಡಿದ್ದಾರೆ” ಎಂದು ಕಿಡಿಕಾರಿದ್ದಾರೆ.

2017 ರಲ್ಲಿ ಇಸ್ರೇಲ್ ಜೊತೆಗಿನ ದೊಡ್ಡ $2 ಬಿಲಿಯನ್ ಒಪ್ಪಂದದ ಭಾಗವಾಗಿ ಭಾರತವು ಪೆಗಾಸಸ್ ಅನ್ನು ಖರೀದಿಸಿದೆ ಎಂದು NYT ಹೇಳುತ್ತದೆ. ಪೆಗಾಸಸ್ (ವಿರೋಧಿಗಳು, ಸಾಮಾಜಿಕ ಕಾರ್ಯಕರ್ತರು ಮತ್ತು ಪತ್ರಕರ್ತರ ಮೇಲೆ ಕಣ್ಣಿಡಲು ಬಳಸಲಾಗುತ್ತದೆ) ಭಾರತ ಮತ್ತು ಇಸ್ರೇಲ್ ನಡುವಿನ ಒಪ್ಪಂದದ ‘ಕೇಂದ್ರಬಿಂದು’ ಎಂದು ಮಾಧ್ಯಮ ವರದಿಯು ಗಮನ ಸೆಳೆದಿದೆ. ಇದರಿಂದ, ಸಂಸತ್ತಿನಲ್ಲಿ ಮೋದಿ ಸರ್ಕಾರ ಸುಳ್ಳು ಹೇಳಿರುವುದು ಸ್ಪಷ್ಟವಾಗಿದೆ ಎಂದು ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ಆರೋಪಿಸಿದ್ದಾರೆ.

ಅದಾಗ್ಯೂ, ಕೇಂದ್ರ ಸಚಿವ ಜನರಲ್ ವಿ ಕೆ ಸಿಂಗ್ ಅವರು ನ್ಯೂಯಾರ್ಕ್ ಟೈನ್ಸ್‌ನ ವರದಿಯನ್ನು ನಿರಾಕರಿಸಿದ್ದಾರೆ ಮತ್ತು ಆ ವರದಿಯನ್ನು “ಸುಪಾರಿ ಮೀಡಿಯಾ” ಎಂದು ಕರೆದಿದ್ದಾರೆ. ನೀವು NYT ಅನ್ನು ನಂಬಬಹುದೇ? ಅವರು ಸುಪಾರಿ ಮೀಡಿಯಾ ಎಂದು ಟ್ವೀಟ್‌ ಮಾಡಿದೆ.

ಕಳೆದ ವರ್ಷ, ಇಸ್ರೇಲಿ ಸ್ಪೈವೇರ್ ಪೆಗಾಸಸ್ ಅನ್ನು ಭಾರತದಲ್ಲಿ ಉದ್ದೇಶಿತ ಕಣ್ಗಾವಲಿಗಾಗಿ ಕೇಂದ್ರ ಸರ್ಕಾರ ಬಳಸಲಾಗುತ್ತಿದೆ ಎಂದು ಆರೋಪಿಸಲಾಗಿತ್ತು. ಬಳಿಕ ಇದು ಭಾರೀ ಸುದ್ದಿಯಾಗಿತ್ತು.

ಎನ್‌ಎಸ್‌ಒ ಗ್ರೂಪ್‌ನ ಫೋನ್ ಹ್ಯಾಕಿಂಗ್ ಸಾಫ್ಟ್‌ವೇರ್‌ನಿಂದ ಭಾರತೀಯ ಮಂತ್ರಿಗಳು, ರಾಜಕಾರಣಿಗಳು, ಸಾಮಾಜಿಕ ಕಾರ್ಯಕರ್ತರು, ಉದ್ಯಮಿಗಳು ಮತ್ತು ಪತ್ರಕರ್ತರು ಸೇರಿದಂತೆ ಅನೇಕ ಜನರನ್ನು ಅನಧಿಕೃತ ಕಣ್ಗಾವಲಿಗೆ ಗುರಿ ಮಾಡಲಾಗಿದೆ ಎಂದು ಅಂತರರಾಷ್ಟ್ರೀಯ ತನಿಖಾ ಒಕ್ಕೂಟವು ಕಳೆದ ವರ್ಷ ಹೇಳಿತ್ತು.

ಭಾರತದಲ್ಲಿ ಕೇಂದ್ರ ಸರ್ಕಾರವು ಕಣ್ಗಾವಲಿಟ್ಟಿರುವ ಪಟ್ಟಿಯಲ್ಲಿ ಕಾಂಗ್ರೆಸ್‌ನ ನಾಯಕ ರಾಹುಲ್‌ ಗಾಂಧಿ, ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್, ಆಗಿನ ಚುನಾವಣಾ ಆಯುಕ್ತ ಅಶೋಕ್ ಲಾವಾಸಾ, ಇಂದಿನ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಮತ್ತು ಇತರ ಪ್ರಮುಖ ನಾಯಕರು ಹಾಗೂ ಇಂಡಿಯನ್ ಎಕ್ಸ್‌ಪ್ರೆಸ್‌ನ ಮೂವರು ಸಂಪಾದಕರು ಸೇರಿದಂತೆ ಸುಮಾರು 40 ಪತ್ರಕರ್ತರ ಹೆಸರುಗಳಿವೆ ಎಂದು ದಿ ವೈರ್ ನಡೆಸಿದ ತನಿಖೆಯಲ್ಲಿ ಬಹಿರಂಗಪಡಿಸಿತ್ತು.

ಈ ಎಲ್ಲಾ ಅರೋಪಗಳನ್ನು ಅಲ್ಲಗಳೆದಿದ್ದ ಕೇಂದ್ರ ಸರ್ಕಾರ, ನಿರ್ದಿಷ್ಟ ಜನರ ಮೇಲೆ ಯಾವುದೇ ರೀತಿಯ ಕಣ್ಗಾವಲನ್ನು ಇರಿಸಲಾಗಿಲ್ಲ ಎಂದು ಹೇಳಿದ್ದ ಸರ್ಕಾರ, ಆರೋಪಗಳನ್ನು ತಳ್ಳಿಹಾಕಿತ್ತು. “ಈ ಆರೋಪವು ಯಾವುದೇ ನಿರ್ದಿಷ್ಟ ಆಧಾರ ಅಥವಾ ಸತ್ಯವನ್ನು ಹೊಂದಿಲ್ಲ” ಎಂದು ಹೇಳಿತ್ತು.

ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ಸುಪ್ರೀಂ ಕೋರ್ಟ್‌, “ರಾಷ್ಟ್ರೀಯ ಭದ್ರತೆ” ಎಂಬ ಭೀತಿ ಹೆಚ್ಚಿದಾಗ ಸರ್ಕಾರವು ಆರಾಮದಾಯಕವಾಗಿ ನುಣುಚಿಕೊಳ್ಳಲು ಸಾಧ್ಯವಿಲ್ಲ. ನ್ಯಾಯಾಂಗವು ಮೂಕ ವೀಕ್ಷನಾಗಿ ಕುಳಿತಿಲ್ಲ ಎಂದು ಹೇಳಿತ್ತು.

ಪೆಗಾಸಸ್‌ ಮೂಲಕ ಸರ್ಕಾರವು ಹಲವರ ಮೇಲೆ ಅನಧಿಕೃತವಾಗಿ ಕಣ್ಣಿಟ್ಟಿದೆ ಎಂದು ಆರೋಪಿಸಿ ಸಲ್ಲಿಸಲಾದ ಸುಮಾರು ಹನ್ನೆರಡು ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ಸ್ವೀಕರಿಸಿತ್ತು. ನಂತರ, ಇದರ ತನಿಖೆಗಾಗಿ ಅಕ್ಟೋಬರ್ 27 ರಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಆರ್.ವಿ.ರವೀಂದ್ರನ್ ಅವರ ನೇತೃತ್ವದಲ್ಲಿ ಇಬ್ಬರು ತಜ್ಞರೊಂದಿಗೆ ಸ್ವತಂತ್ರ ಸಮಿತಿಯನ್ನು ನೇಮಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...