Homeಮುಖಪುಟಇಸ್ರೇಲ್‌ನಿಂದ ಪೆಗಾಸಸ್‌ ಖರೀದಿಸಿದ್ದ ವರದಿ ಬಹಿರಂಗ; ಮೋದಿ ಸರ್ಕಾರದ ವಿರುದ್ದ ವಿಪಕ್ಷಗಳ ಕಿಡಿ!

ಇಸ್ರೇಲ್‌ನಿಂದ ಪೆಗಾಸಸ್‌ ಖರೀದಿಸಿದ್ದ ವರದಿ ಬಹಿರಂಗ; ಮೋದಿ ಸರ್ಕಾರದ ವಿರುದ್ದ ವಿಪಕ್ಷಗಳ ಕಿಡಿ!

- Advertisement -
- Advertisement -

ಇಸ್ರೇಲ್‌ನೊಂದಿಗಿನ ರಕ್ಷಣಾ ಒಪ್ಪಂದದ ಭಾಗವಾಗಿ ಭಾರತ ಸರ್ಕಾರವು 2017 ರಲ್ಲಿ ಪೆಗಾಸಸ್ ಸ್ಪೈವೇರ್ ಅನ್ನು ಖರೀದಿಸಿದೆ ಎಂದು ನ್ಯೂಯಾರ್ಕ್ ಟೈಮ್ಸ್ (NYT) ವರದಿ ಮಾಡಿದೆ. ಈ ವರದಿ ಪ್ರಕಟವಾದ ನಂತರ ಮೋದಿ ಸರ್ಕಾರವು ವಿರುದ್ಧ ವಿಪಕ್ಷಗಳ ತ್ರೀವ್ರ ಟೀಕೆಗೆ ಗುರಿಯಾಗಿದೆ. ಆದರೆ, ಕೇಂದ್ರ ಸಚಿವ ವಿಕೆ ಸಿಂಗ್ ವರದಿಯನ್ನು ತಳ್ಳಿಹಾಕಿದ್ದಾರೆ.

NYT ವರದಿಯು, ಕ್ಷಿಪಣಿ ವ್ಯವಸ್ಥೆ ಸೇರಿದಂತೆ ಶಸ್ತ್ರಾಸ್ತ್ರಗಳನ್ನು ಖರೀದಿಸುವ 2 ಬಿಲಿಯನ್ ಡಾಲರ್‌ ಪ್ಯಾಕೇಜ್‌ನ ಒಪ್ಪಂದದ ಭಾಗವಾಗಿ ಸ್ಪೈವೇರ್ ಪೆಗಾಸಸ್‌ಅನ್ನು ಭಾರತವು ಇಸ್ರೇಲ್‌ನಿಂದ ಖರೀದಿಸಿದೆ. ಒಪ್ಪಂದವು 2017ರ ಜುಲೈನಲ್ಲಿ ಮೋದಿ ಅವರು ಇಸ್ರೇಲ್‌ಗೆ ಭೇಟಿ ನೀಡಿದ್ದಾಗ ನಡೆದಿದೆ ಎಂದು ಹೇಳಿದೆ.

ವರದಿ ಪ್ರಕಟವಾದ ಬಳಿಕ ಕೇಂದ್ರದ ವಿರುದ್ದ ಹರಿಹಾಯ್ದಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮೋದಿ ಸರ್ಕಾರವನ್ನು “ದೇಶದ್ರೋಹಿ” ಎಂದು ಕರೆದಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ನಮ್ಮ ಪ್ರಜಾಪ್ರಭುತ್ವದ ಪ್ರಾಥಮಿಕ ಸಂಸ್ಥೆಗಳು, ನಾಯಕರು ಮತ್ತು ಸಾರ್ವಜನಿಕರ ಮೇಲೆ ಕಣ್ಣಿಡಲು ಪೆಗಾಸಸ್ ಅನ್ನು ಮೋದಿ ಸರ್ಕಾರ ಖರೀದಿಸಿದೆ. ಇದು ದೇಶದ್ರೋಹ. ಮೋದಿ ಸರ್ಕಾರ ದೇಶದ್ರೋಹ ಮಾಡಿದೆ” ಎಂದು ಆರೋಪಿಸಿದ್ದಾರೆ.

ಮೋದಿ ಸರ್ಕಾರವು ಇಸ್ರೇಲಿ ಕಣ್ಗಾವಲು ಸ್ಪೈವೇರ್ ಪೆಗಾಸಸ್ ಮೂಲಕ ಅಕ್ರಮ ಮತ್ತು ಅಸಾಂವಿಧಾನಿಕ ಬೇಹುಗಾರಿಕೆ ಮತ್ತು ಸ್ನೂಪಿಂಗ್ ದಂಧೆಯನ್ನು ನಡೆಸಿದೆ. ಈ ದಂಧೆಗೆ ನಿಯೋಜಕ ಮತ್ತು ನಿರ್ವಾಹಕ ಎರಡೂ ಬಿಜೆಪಿ ಸರ್ಕಾರವೇ ಆಗಿದೆ. ಪೆಗಾಸಸ್‌ ಆಘಾತಕಾರಿ ವಿಚಾರದ ಬಗ್ಗೆ ನಾವು ಸುದೀರ್ಘ ಕಾಲದಿಂದ ಪ್ರತಿಪಾದಿಸಿದ್ದನ್ನು ಅಂತಾರಾಷ್ಟ್ರೀಯ ಪ್ರಕಟಣೆಯು ದೃಢಪಡಿಸಿದೆ ಮತ್ತು ಬಹಿರಂಗ ಪಡಿಸಿದೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.

ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಟ್ವಿಟರ್‌ನಲ್ಲಿ, “ಮೋದಿ ಸರ್ಕಾರ ಭಾರತದ ಶತ್ರುವಿನಂತೆ ವರ್ತಿಸಿತ್ತಿದೆ. ಭಾರತೀಯ ನಾಗರಿಕರ ವಿರುದ್ಧ ಕಣ್ಗಾವಲಿನ ಅಸ್ತ್ರವನ್ನು ಏಕೆ ಬಳಸುತ್ತಿದೆ?” ಎಂದು ಪ್ರಶ್ನಿಸಿದ್ದಾರೆ.

ಶಿವಸೇನಾ ಸಂಸದೆ ಪ್ರಿಯಾಂಕಾ ಚತುರ್ವೇದಿ ಅವರು, “ಸ್ಪೈವೇರ್ ಅನ್ನು ರಕ್ಷಣಾ ಉದ್ದೇಶಗಳಿಗಾಗಿ ಬಳಸಲಾಗಿಲ್ಲ. ಆದರೆ ಪ್ರತಿಪಕ್ಷಗಳು ಮತ್ತು ಪತ್ರಕರ್ತರ ಮೇಲೆ ಕಣ್ಣಿಡಲು ಬಳಸಲಾಗಿದೆ. ಬಿಜೆಪಿ ಸರ್ಕಾರದಲ್ಲಿ ಇಂತಹ ದುಷ್‌ಕೃತ್ಯಗಳು ಸಾಧ್ಯ. ಅವರು ದೇಶವನ್ನೇ ಬಿಗ್‌ಬಾಸ್‌ ಶೋ ಆಗಿ ಮಾಡಿದ್ದಾರೆ” ಎಂದು ಕಿಡಿಕಾರಿದ್ದಾರೆ.

2017 ರಲ್ಲಿ ಇಸ್ರೇಲ್ ಜೊತೆಗಿನ ದೊಡ್ಡ $2 ಬಿಲಿಯನ್ ಒಪ್ಪಂದದ ಭಾಗವಾಗಿ ಭಾರತವು ಪೆಗಾಸಸ್ ಅನ್ನು ಖರೀದಿಸಿದೆ ಎಂದು NYT ಹೇಳುತ್ತದೆ. ಪೆಗಾಸಸ್ (ವಿರೋಧಿಗಳು, ಸಾಮಾಜಿಕ ಕಾರ್ಯಕರ್ತರು ಮತ್ತು ಪತ್ರಕರ್ತರ ಮೇಲೆ ಕಣ್ಣಿಡಲು ಬಳಸಲಾಗುತ್ತದೆ) ಭಾರತ ಮತ್ತು ಇಸ್ರೇಲ್ ನಡುವಿನ ಒಪ್ಪಂದದ ‘ಕೇಂದ್ರಬಿಂದು’ ಎಂದು ಮಾಧ್ಯಮ ವರದಿಯು ಗಮನ ಸೆಳೆದಿದೆ. ಇದರಿಂದ, ಸಂಸತ್ತಿನಲ್ಲಿ ಮೋದಿ ಸರ್ಕಾರ ಸುಳ್ಳು ಹೇಳಿರುವುದು ಸ್ಪಷ್ಟವಾಗಿದೆ ಎಂದು ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ಆರೋಪಿಸಿದ್ದಾರೆ.

ಅದಾಗ್ಯೂ, ಕೇಂದ್ರ ಸಚಿವ ಜನರಲ್ ವಿ ಕೆ ಸಿಂಗ್ ಅವರು ನ್ಯೂಯಾರ್ಕ್ ಟೈನ್ಸ್‌ನ ವರದಿಯನ್ನು ನಿರಾಕರಿಸಿದ್ದಾರೆ ಮತ್ತು ಆ ವರದಿಯನ್ನು “ಸುಪಾರಿ ಮೀಡಿಯಾ” ಎಂದು ಕರೆದಿದ್ದಾರೆ. ನೀವು NYT ಅನ್ನು ನಂಬಬಹುದೇ? ಅವರು ಸುಪಾರಿ ಮೀಡಿಯಾ ಎಂದು ಟ್ವೀಟ್‌ ಮಾಡಿದೆ.

ಕಳೆದ ವರ್ಷ, ಇಸ್ರೇಲಿ ಸ್ಪೈವೇರ್ ಪೆಗಾಸಸ್ ಅನ್ನು ಭಾರತದಲ್ಲಿ ಉದ್ದೇಶಿತ ಕಣ್ಗಾವಲಿಗಾಗಿ ಕೇಂದ್ರ ಸರ್ಕಾರ ಬಳಸಲಾಗುತ್ತಿದೆ ಎಂದು ಆರೋಪಿಸಲಾಗಿತ್ತು. ಬಳಿಕ ಇದು ಭಾರೀ ಸುದ್ದಿಯಾಗಿತ್ತು.

ಎನ್‌ಎಸ್‌ಒ ಗ್ರೂಪ್‌ನ ಫೋನ್ ಹ್ಯಾಕಿಂಗ್ ಸಾಫ್ಟ್‌ವೇರ್‌ನಿಂದ ಭಾರತೀಯ ಮಂತ್ರಿಗಳು, ರಾಜಕಾರಣಿಗಳು, ಸಾಮಾಜಿಕ ಕಾರ್ಯಕರ್ತರು, ಉದ್ಯಮಿಗಳು ಮತ್ತು ಪತ್ರಕರ್ತರು ಸೇರಿದಂತೆ ಅನೇಕ ಜನರನ್ನು ಅನಧಿಕೃತ ಕಣ್ಗಾವಲಿಗೆ ಗುರಿ ಮಾಡಲಾಗಿದೆ ಎಂದು ಅಂತರರಾಷ್ಟ್ರೀಯ ತನಿಖಾ ಒಕ್ಕೂಟವು ಕಳೆದ ವರ್ಷ ಹೇಳಿತ್ತು.

ಭಾರತದಲ್ಲಿ ಕೇಂದ್ರ ಸರ್ಕಾರವು ಕಣ್ಗಾವಲಿಟ್ಟಿರುವ ಪಟ್ಟಿಯಲ್ಲಿ ಕಾಂಗ್ರೆಸ್‌ನ ನಾಯಕ ರಾಹುಲ್‌ ಗಾಂಧಿ, ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್, ಆಗಿನ ಚುನಾವಣಾ ಆಯುಕ್ತ ಅಶೋಕ್ ಲಾವಾಸಾ, ಇಂದಿನ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಮತ್ತು ಇತರ ಪ್ರಮುಖ ನಾಯಕರು ಹಾಗೂ ಇಂಡಿಯನ್ ಎಕ್ಸ್‌ಪ್ರೆಸ್‌ನ ಮೂವರು ಸಂಪಾದಕರು ಸೇರಿದಂತೆ ಸುಮಾರು 40 ಪತ್ರಕರ್ತರ ಹೆಸರುಗಳಿವೆ ಎಂದು ದಿ ವೈರ್ ನಡೆಸಿದ ತನಿಖೆಯಲ್ಲಿ ಬಹಿರಂಗಪಡಿಸಿತ್ತು.

ಈ ಎಲ್ಲಾ ಅರೋಪಗಳನ್ನು ಅಲ್ಲಗಳೆದಿದ್ದ ಕೇಂದ್ರ ಸರ್ಕಾರ, ನಿರ್ದಿಷ್ಟ ಜನರ ಮೇಲೆ ಯಾವುದೇ ರೀತಿಯ ಕಣ್ಗಾವಲನ್ನು ಇರಿಸಲಾಗಿಲ್ಲ ಎಂದು ಹೇಳಿದ್ದ ಸರ್ಕಾರ, ಆರೋಪಗಳನ್ನು ತಳ್ಳಿಹಾಕಿತ್ತು. “ಈ ಆರೋಪವು ಯಾವುದೇ ನಿರ್ದಿಷ್ಟ ಆಧಾರ ಅಥವಾ ಸತ್ಯವನ್ನು ಹೊಂದಿಲ್ಲ” ಎಂದು ಹೇಳಿತ್ತು.

ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ಸುಪ್ರೀಂ ಕೋರ್ಟ್‌, “ರಾಷ್ಟ್ರೀಯ ಭದ್ರತೆ” ಎಂಬ ಭೀತಿ ಹೆಚ್ಚಿದಾಗ ಸರ್ಕಾರವು ಆರಾಮದಾಯಕವಾಗಿ ನುಣುಚಿಕೊಳ್ಳಲು ಸಾಧ್ಯವಿಲ್ಲ. ನ್ಯಾಯಾಂಗವು ಮೂಕ ವೀಕ್ಷನಾಗಿ ಕುಳಿತಿಲ್ಲ ಎಂದು ಹೇಳಿತ್ತು.

ಪೆಗಾಸಸ್‌ ಮೂಲಕ ಸರ್ಕಾರವು ಹಲವರ ಮೇಲೆ ಅನಧಿಕೃತವಾಗಿ ಕಣ್ಣಿಟ್ಟಿದೆ ಎಂದು ಆರೋಪಿಸಿ ಸಲ್ಲಿಸಲಾದ ಸುಮಾರು ಹನ್ನೆರಡು ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ಸ್ವೀಕರಿಸಿತ್ತು. ನಂತರ, ಇದರ ತನಿಖೆಗಾಗಿ ಅಕ್ಟೋಬರ್ 27 ರಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಆರ್.ವಿ.ರವೀಂದ್ರನ್ ಅವರ ನೇತೃತ್ವದಲ್ಲಿ ಇಬ್ಬರು ತಜ್ಞರೊಂದಿಗೆ ಸ್ವತಂತ್ರ ಸಮಿತಿಯನ್ನು ನೇಮಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...