Homeಚಳವಳಿಸಂಯುಕ್ತ ಕಿಸಾನ್ ಮೋರ್ಚಾದ ರಾಷ್ಟ್ರೀಯ ಸಭೆಯಲ್ಲಿ ಕರ್ನಾಟಕದ ಪ್ರತಿನಿಧಿಗಳು

ಸಂಯುಕ್ತ ಕಿಸಾನ್ ಮೋರ್ಚಾದ ರಾಷ್ಟ್ರೀಯ ಸಭೆಯಲ್ಲಿ ಕರ್ನಾಟಕದ ಪ್ರತಿನಿಧಿಗಳು

ದಕ್ಷಿಣದಲ್ಲಿ ರೈತ ಹೋರಾಟ ನಡೆಯುತ್ತಿಲ್ಲ ಎಂಬ ಸುಳ್ಳು ಪ್ರಚಾರ ನಿಲ್ಲಿಸಿ, ಕಾಯ್ದೆಗಳನ್ನು ಹಿಂತೆಗೆದುಕೊಳ್ಳದಿದ್ದರೆ ದಕ್ಷಿಣದ ಎಲ್ಲಾ ರಾಜ್ಯಗಳಿಂದ ನೂರಾರು ಸಂಖ್ಯೆಗಳಲ್ಲಿ ದೆಹಲಿಗೆ ಟ್ರಾಕ್ಟರ್ ಜಾಥ ಪ್ರಾರಂಭಿಸಲಾಗುವುದು- ಚಾಮರಸ ಮಾಲಿ ಪಾಟೀಲ

- Advertisement -
- Advertisement -

ದೆಹಲಿಯ ರೈತ ಹೋರಾಟದ ಕೇಂದ್ರವಾದ ಶಿಂಘು ಬಾರ್ಡರಿನಲ್ಲಿ ಇಡೀ ಆಂದೋಲನಕ್ಕೆ ಮುಂದಾಳತ್ವ ನೀಡುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾದ ರಾಷ್ಟ್ರೀಯ ಸಮಿತಿಯ ಸಭೆ ನಡೆದಿದ್ದು, ಇದರಲ್ಲಿ ವಿವಿಧ ರಾಜ್ಯಗಳ ಮುಖಂಡರು ಇದರಲ್ಲಿ ಭಾಗವಹಿಸಿದ್ದರು. ಕರ್ನಾಟಕವನ್ನು ಪ್ರತಿನಿಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ, ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ್ ಮತ್ತು ಕರ್ನಾಟಕ ಜನಶಕ್ತಿಯ ರಾಜ್ಯಾಧ್ಯಕ್ಷರಾದ ನೂರ್ ಶ್ರೀಧರ್ ಪಾಲ್ಗೊಂಡಿದ್ದರು.

ಈ ಸಭೆಯಲ್ಲಿ, ಕರ್ನಾಟಕದಲ್ಲಿ ನಡೆಯುತ್ತಿರುವ ಹೋರಾಟವನ್ನು ಗಮನಕ್ಕೆ ತರಲಾಯಿತು ಮತ್ತು ಉತ್ತರ ಭಾರತ ಮತ್ತು ದಕ್ಷಿಣ ಭಾರತದ ಹೋರಾಟವನ್ನು ಬೆಸೆದು ಬಿರುಸುಗೊಳಿಸಲು ಕೆಲವು ಪ್ರಸ್ತಾಪಗಳನ್ನು ಮುಂದಿಡಲಾಯಿತು.

ಸಭೆಯಲ್ಲಿ ಬಂದ ಎಲ್ಲಾ ಅಭಿಪ್ರಾಯಗಳನ್ನು ಕ್ರೂಢೀಕರಿಸಿ ಸಭೆಯು ಒಕ್ಕೊರಲ ಬಹುಮುಖ್ಯ ತೀರ್ಮಾನಗಳಿಗೆ ತಲುಪಿತು. ರೈತರು ಹೇಳುವ ಅಜೆಂಡಾ ಮತ್ತು ಅನುಕ್ರಮದಂತೆ ಡಿಸೆಂಬರ್ 29ರಂದು ಮುಂದಿನ ಮಾತುಕತೆಯನ್ನು ನಿಗದಿ ಮಾಡುವಂತೆ ಸರ್ಕಾರಕ್ಕೆ ಪತ್ರ ಕಳುಹಿಸಲಾಯಿತು. ಅದರಲ್ಲಿ ಮೂರು ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳಲು ಅಳವಡಿಸಬೇಕಾದ ಪ್ರಕ್ರಿಯೆ ಕಡ್ಡಾಯವಾಗಿ ಮೊದಲ ಅಜೆಂಡವಾಗಿರಬೇಕು ಎಂದು ಆಗ್ರಹಿಸಲಾಗಿದೆ.

ಇದನ್ನೂ ಓದಿ: ಮಾಸ್ಕ್ ಹಾಕಿದ್ದರೂ ದಂಡ ವಸೂಲಿ ಆರೋಪ: ದೂರು ನೀಡಿದ ಬಿಜೆಪಿ ಶಾಸಕ

ಸರ್ಕಾರ ಒಂದು ವೇಳೆ ಡಿಸೆಂಬರ್ 29ಕ್ಕೂ ಬರಿಗೈ ಪ್ರತಿಕ್ರಿಯೆ ನೀಡಿದರೆ ಅಥವ ದೇಶವನ್ನು ವಂಚಿಸುವ ಕೆಲಸ ಮಾಡಿದರೆ, ಹೊಸ ವರ್ಷದ ಜನವರಿ ಒಂದರೊಂದು ಮುಂದಿನ ಹೋರಾಟದ ಕುರಿತ ಬಹುದೊಡ್ಡ ಘೋಷಣೆ ಮಾಡಲಾಗುವುದು ಎಂದು ಎಚ್ಚರಿಸಲಾಯಿತು.

ಸಭೆಯ ನಂತರ ನಡೆದ ಪತ್ರಿಕಾ ಗೋಷ್ಟಿಯನ್ನುದ್ದೇಶಿಸಿ ಕರ್ನಾಟಕದ ಪ್ರತಿನಿಧಿಯಾದ ಚಾಮರಸ ಮಾಲಿ ಪಾಟೀಲರು ಮಾತನಾಡಿದರು.

“ದಕ್ಷಿಣದಲ್ಲಿ ರೈತ ಹೋರಾಟ ನಡೆಯುತ್ತಿಲ್ಲ ಎಂಬ ಸುಳ್ಳು ಪ್ರಚಾರ ಮಾಡಲಾಗುತ್ತಿದೆ. ವಾಸ್ತವದಲ್ಲಿ ಕರ್ನಾಟಕದಲ್ಲಿ ಸೆಪ್ಟೆಂಬರ್ ತಿಂಗಳಿನಿಂದ ನಿರಂತರ ಹೋರಾಟ ನಡೆದಿದೆ. ಈ ಸುಳ್ಳು ಪ್ರಚಾರ ನಿಲ್ಲಿಸದಿದ್ದರೆ ಮತ್ತು ಕಾಯ್ದೆಗಳನ್ನು ಹಿಂತೆಗೆದುಕೊಳ್ಳದಿದ್ದರೆ ಕರ್ನಾಟಕವನ್ನೂ ಒಳಗೊಂಡಂತೆ ದಕ್ಷಿಣದ ಎಲ್ಲಾ ರಾಜ್ಯಗಳಿಂದ ನೂರಾರು ಸಂಖ್ಯೆಗಳಲ್ಲಿ ದೆಹಲಿಗೆ ಟ್ರಾಕ್ಟರ್ ಜಾಥ ಪ್ರಾರಂಭಿಸಲಾಗುವುದು” ಎಂದು ಎಚ್ಚರಿಸಿದರು.


ಇದನ್ನೂ ಓದಿ: ಬಿಜೆಪಿಯೇತರ ಪಕ್ಷಗಳು UPA ಅಡಿಯಲ್ಲಿ ಒಂದಾಗಬೇಕು – ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....