Homeಚಳವಳಿಸಂಯುಕ್ತ ಕಿಸಾನ್ ಮೋರ್ಚಾದ ರಾಷ್ಟ್ರೀಯ ಸಭೆಯಲ್ಲಿ ಕರ್ನಾಟಕದ ಪ್ರತಿನಿಧಿಗಳು

ಸಂಯುಕ್ತ ಕಿಸಾನ್ ಮೋರ್ಚಾದ ರಾಷ್ಟ್ರೀಯ ಸಭೆಯಲ್ಲಿ ಕರ್ನಾಟಕದ ಪ್ರತಿನಿಧಿಗಳು

ದಕ್ಷಿಣದಲ್ಲಿ ರೈತ ಹೋರಾಟ ನಡೆಯುತ್ತಿಲ್ಲ ಎಂಬ ಸುಳ್ಳು ಪ್ರಚಾರ ನಿಲ್ಲಿಸಿ, ಕಾಯ್ದೆಗಳನ್ನು ಹಿಂತೆಗೆದುಕೊಳ್ಳದಿದ್ದರೆ ದಕ್ಷಿಣದ ಎಲ್ಲಾ ರಾಜ್ಯಗಳಿಂದ ನೂರಾರು ಸಂಖ್ಯೆಗಳಲ್ಲಿ ದೆಹಲಿಗೆ ಟ್ರಾಕ್ಟರ್ ಜಾಥ ಪ್ರಾರಂಭಿಸಲಾಗುವುದು- ಚಾಮರಸ ಮಾಲಿ ಪಾಟೀಲ

- Advertisement -
- Advertisement -

ದೆಹಲಿಯ ರೈತ ಹೋರಾಟದ ಕೇಂದ್ರವಾದ ಶಿಂಘು ಬಾರ್ಡರಿನಲ್ಲಿ ಇಡೀ ಆಂದೋಲನಕ್ಕೆ ಮುಂದಾಳತ್ವ ನೀಡುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾದ ರಾಷ್ಟ್ರೀಯ ಸಮಿತಿಯ ಸಭೆ ನಡೆದಿದ್ದು, ಇದರಲ್ಲಿ ವಿವಿಧ ರಾಜ್ಯಗಳ ಮುಖಂಡರು ಇದರಲ್ಲಿ ಭಾಗವಹಿಸಿದ್ದರು. ಕರ್ನಾಟಕವನ್ನು ಪ್ರತಿನಿಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ, ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ್ ಮತ್ತು ಕರ್ನಾಟಕ ಜನಶಕ್ತಿಯ ರಾಜ್ಯಾಧ್ಯಕ್ಷರಾದ ನೂರ್ ಶ್ರೀಧರ್ ಪಾಲ್ಗೊಂಡಿದ್ದರು.

ಈ ಸಭೆಯಲ್ಲಿ, ಕರ್ನಾಟಕದಲ್ಲಿ ನಡೆಯುತ್ತಿರುವ ಹೋರಾಟವನ್ನು ಗಮನಕ್ಕೆ ತರಲಾಯಿತು ಮತ್ತು ಉತ್ತರ ಭಾರತ ಮತ್ತು ದಕ್ಷಿಣ ಭಾರತದ ಹೋರಾಟವನ್ನು ಬೆಸೆದು ಬಿರುಸುಗೊಳಿಸಲು ಕೆಲವು ಪ್ರಸ್ತಾಪಗಳನ್ನು ಮುಂದಿಡಲಾಯಿತು.

ಸಭೆಯಲ್ಲಿ ಬಂದ ಎಲ್ಲಾ ಅಭಿಪ್ರಾಯಗಳನ್ನು ಕ್ರೂಢೀಕರಿಸಿ ಸಭೆಯು ಒಕ್ಕೊರಲ ಬಹುಮುಖ್ಯ ತೀರ್ಮಾನಗಳಿಗೆ ತಲುಪಿತು. ರೈತರು ಹೇಳುವ ಅಜೆಂಡಾ ಮತ್ತು ಅನುಕ್ರಮದಂತೆ ಡಿಸೆಂಬರ್ 29ರಂದು ಮುಂದಿನ ಮಾತುಕತೆಯನ್ನು ನಿಗದಿ ಮಾಡುವಂತೆ ಸರ್ಕಾರಕ್ಕೆ ಪತ್ರ ಕಳುಹಿಸಲಾಯಿತು. ಅದರಲ್ಲಿ ಮೂರು ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳಲು ಅಳವಡಿಸಬೇಕಾದ ಪ್ರಕ್ರಿಯೆ ಕಡ್ಡಾಯವಾಗಿ ಮೊದಲ ಅಜೆಂಡವಾಗಿರಬೇಕು ಎಂದು ಆಗ್ರಹಿಸಲಾಗಿದೆ.

ಇದನ್ನೂ ಓದಿ: ಮಾಸ್ಕ್ ಹಾಕಿದ್ದರೂ ದಂಡ ವಸೂಲಿ ಆರೋಪ: ದೂರು ನೀಡಿದ ಬಿಜೆಪಿ ಶಾಸಕ

ಸರ್ಕಾರ ಒಂದು ವೇಳೆ ಡಿಸೆಂಬರ್ 29ಕ್ಕೂ ಬರಿಗೈ ಪ್ರತಿಕ್ರಿಯೆ ನೀಡಿದರೆ ಅಥವ ದೇಶವನ್ನು ವಂಚಿಸುವ ಕೆಲಸ ಮಾಡಿದರೆ, ಹೊಸ ವರ್ಷದ ಜನವರಿ ಒಂದರೊಂದು ಮುಂದಿನ ಹೋರಾಟದ ಕುರಿತ ಬಹುದೊಡ್ಡ ಘೋಷಣೆ ಮಾಡಲಾಗುವುದು ಎಂದು ಎಚ್ಚರಿಸಲಾಯಿತು.

ಸಭೆಯ ನಂತರ ನಡೆದ ಪತ್ರಿಕಾ ಗೋಷ್ಟಿಯನ್ನುದ್ದೇಶಿಸಿ ಕರ್ನಾಟಕದ ಪ್ರತಿನಿಧಿಯಾದ ಚಾಮರಸ ಮಾಲಿ ಪಾಟೀಲರು ಮಾತನಾಡಿದರು.

“ದಕ್ಷಿಣದಲ್ಲಿ ರೈತ ಹೋರಾಟ ನಡೆಯುತ್ತಿಲ್ಲ ಎಂಬ ಸುಳ್ಳು ಪ್ರಚಾರ ಮಾಡಲಾಗುತ್ತಿದೆ. ವಾಸ್ತವದಲ್ಲಿ ಕರ್ನಾಟಕದಲ್ಲಿ ಸೆಪ್ಟೆಂಬರ್ ತಿಂಗಳಿನಿಂದ ನಿರಂತರ ಹೋರಾಟ ನಡೆದಿದೆ. ಈ ಸುಳ್ಳು ಪ್ರಚಾರ ನಿಲ್ಲಿಸದಿದ್ದರೆ ಮತ್ತು ಕಾಯ್ದೆಗಳನ್ನು ಹಿಂತೆಗೆದುಕೊಳ್ಳದಿದ್ದರೆ ಕರ್ನಾಟಕವನ್ನೂ ಒಳಗೊಂಡಂತೆ ದಕ್ಷಿಣದ ಎಲ್ಲಾ ರಾಜ್ಯಗಳಿಂದ ನೂರಾರು ಸಂಖ್ಯೆಗಳಲ್ಲಿ ದೆಹಲಿಗೆ ಟ್ರಾಕ್ಟರ್ ಜಾಥ ಪ್ರಾರಂಭಿಸಲಾಗುವುದು” ಎಂದು ಎಚ್ಚರಿಸಿದರು.


ಇದನ್ನೂ ಓದಿ: ಬಿಜೆಪಿಯೇತರ ಪಕ್ಷಗಳು UPA ಅಡಿಯಲ್ಲಿ ಒಂದಾಗಬೇಕು – ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...