Homeಮುಖಪುಟಗಣರಾಜ್ಯೋತ್ಸವ-2022: ದೆಹಲಿಯಲ್ಲಿ ಶಂಕಿತ ಭಯೋತ್ಪಾದಕರ ಚಿತ್ರಗಳನ್ನು ಅಂಟಿಸಿದ ಪೊಲೀಸರು

ಗಣರಾಜ್ಯೋತ್ಸವ-2022: ದೆಹಲಿಯಲ್ಲಿ ಶಂಕಿತ ಭಯೋತ್ಪಾದಕರ ಚಿತ್ರಗಳನ್ನು ಅಂಟಿಸಿದ ಪೊಲೀಸರು

- Advertisement -
- Advertisement -

ಜನವರಿ 26 ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ದೆಹಲಿ ಪೊಲೀಸರು ಮಂಗಳವಾರ ರಾಷ್ಟ್ರ ರಾಜಧಾನಿಯ ಹೃದಯಭಾಗದಲ್ಲಿರುವ ಕನ್ನಾಟ್ ಪ್ಲೇಸ್‌ನಲ್ಲಿರುವ ಹನುಮಾನ್ ಮಂದಿರದ ಸುತ್ತ ಮುತ್ತ ಶಂಕಿತ ಭಯೋತ್ಪಾದಕರ ಪೋಸ್ಟರ್‌ಗಳನ್ನು ಅಂಟಿಸಿದ್ದಾರೆ.

ಸುನ್ನಿ ಇಸ್ಲಾಮಿಸ್ಟ್ ಭಯೋತ್ಪಾದಕ ಗುಂಪು ಅಲ್-ಖೈದಾದೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿಗಳನ್ನು ಉಲ್ಲೇಖಿಸಿರುವ ನಾಲ್ಕೈದು ಪೋಸ್ಟರ್‌ಗಳು ಈ ಪ್ರದೇಶದಲ್ಲಿ ಕಂಡುಬಂದಿವೆ.

ಪೋಸ್ಟರ್‌ನಲ್ಲಿರುವವರ ಬಗ್ಗೆ ಯಾವುದೇ ಮಾಹಿತಿಯನ್ನು ತಿಳಿಸುವವರಿಗೆ ಸೂಕ್ತ ಬಹುಮಾನ ನೀಡಲಾಗುವುದು. ಮಾಹಿತಿದಾರರ ಹೆಸರನ್ನು ಮರೆಮಾಡಲಾಗುವುದು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಗಾಂಧೀಜಿ ನೆಚ್ಚಿನ ‘ಅಬೈಡ್‌‌ ವಿತ್‌ ಮೀ’ ಗೀತೆ ಗಣರಾಜ್ಯೋತ್ಸವದ ಬೀಟಿಂಗ್ ರಿಟ್ರೀಟ್‌ನಿಂದ ಹೊರಕ್ಕೆ!

ದೆಹಲಿ ಪೊಲೀಸರು ಈ ವರ್ಷದ ಗಣರಾಜ್ಯೋತ್ಸವದ ಭದ್ರತೆಯನ್ನು ಹೆಚ್ಚಿಸಲು ದೆಹಲಿಯಾದ್ಯಂತ 30 ಸ್ಥಳಗಳಲ್ಲಿ ಎಫ್‌ಆರ್‌ಎಸ್ (facial recognition systems) ಮತ್ತು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಎಫ್‌ಆರ್‌ಎಸ್‌ನಲ್ಲಿ ಒಟ್ಟು 50,000 ಶಂಕಿತ ಅಪರಾಧಿಗಳ ಡೇಟಾಬೇಸ್ ಇದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಭಾಗವಹಿಸುವ ವ್ಯಕ್ತಿಗಳಿಗೆ ದೆಹಲಿ ಪೊಲೀಸರು ಮಾರ್ಗಸೂಚಿಗಳನ್ನು ಸಹ ಬಿಡುಗಡೆ ಮಾಡಿದ್ದಾರೆ. ಪರೇಡ್‌ನಲ್ಲಿ ಬಾಗವಹಿಸುವವರುರು ಕೋವಿಡ್ ಲಸಿಕೆಯನ್ನು ಪಡೆದಿರುವುದು ಕಡ್ಡಾಯವಾಗಿದೆ. ವ್ಯಾಕ್ಸಿನೇಷನ್ ಪ್ರಮಾಣಪತ್ರಗಳನ್ನು ಹೊಂದಿರಬೇಕು ಕಡ್ಡಾಯವಾಗಿದೆ. 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭದ್ರತಾ ಅಧಿಕಾರಿಗಳಿಗೆ ಸಹಕರಿಸಲು, ಪ್ರವೇಶ ಪಾಸ್‌ಗಳ ಜೊತೆಗೆ ಆಧಾರ್ ಕಾರ್ಡ್‌ಗಳು, ಮತದಾರರ ಗುರುತಿನ ಚೀಟಿಗಳು, ಡ್ರೈವಿಂಗ್ ಲೈಸೆನ್ಸ್‌ನಂತಹ ವೈಯಕ್ತಿಕ ಗುರುತಿನ ಪುರಾವೆಗಳನ್ನು ತೋರಿಸುವಂತೆ ಜನರಿಗೆ ವಿನಂತಿ ಮಾಡಲಾಗಿದೆ.

ಗಣರಾಜ್ಯೋತ್ಸವದ ಪರೇಡ್ ಜನವರಿ 26 ರಂದು ಬೆಳಿಗ್ಗೆ 10.20 ಕ್ಕೆ ಪ್ರಾರಂಭವಾಗಲಿದ್ದು, ವಿಜಯ್ ಚೌಕ್‌ನಿಂದ ಕೆಂಪು ಕೋಟೆ ಮೈದಾನಕ್ಕೆ ತೆರಳಲಿದೆ.


ಇದನ್ನೂ ಓದಿ: ಮೋದಿ ಸರ್ಕಾರದಿಂದ ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ: ಗಣರಾಜ್ಯೋತ್ಸವದಂದು ಕರಾವಳಿಯ ಪ್ರತಿ ತಾಲೂಕಿನಲ್ಲಿ ಟ್ಯಾಬ್ಲೊ ಮೆರವಣಿಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...