Homeಕರ್ನಾಟಕಗಣರಾಜ್ಯೋತ್ಸವ-2022: ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ನಿಭಾಯಿಸಬೇಕು - ಬಸವರಾಜ ಬೊಮ್ಮಾಯಿ

ಗಣರಾಜ್ಯೋತ್ಸವ-2022: ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ನಿಭಾಯಿಸಬೇಕು – ಬಸವರಾಜ ಬೊಮ್ಮಾಯಿ

- Advertisement -
- Advertisement -

ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಇಂದು 73ನೇ ಗಣರಾಜ್ಯೋತ್ಸವ ದಿನಾಚರಣೆ ಆಚರಿಸಲಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗೌರವ ವಂದನೆ ಸ್ವೀಕರಿಸಿ, ಧ್ವಜಾರೋಹಣ ನೆರವೇರಿಸಿದ್ದಾರೆ.

ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ’ಸರ್ಕಾರವು ಕೋವಿಡ್ ಸೋಂಕನ್ನು ಸಮರ್ಥವಾಗಿ ಎದುರಿಸಿದೆ. ಸರ್ಕಾರ ಜನತೆಯ ಸಹಾಯದಿಂದ ಮಾಡಿದ ಕಾರ್ಯ ಪ್ರಶಂಸನೀಯವಾಗಿದೆ. ಉತ್ತರ ಕರ್ನಾಟಕದಲ್ಲಿ ಸಂಭವಿಸಿದ ಅತಿವೃಷ್ಟಿ, ಪ್ರವಾಹದ ಸಂದರ್ಭದಲ್ಲಿ ಸರ್ಕಾರ ಸಂತ್ರಸ್ತರ ನೆರವಿಗೆ ಧಾವಿಸಿದೆ. 2021-22ನೇ ಸಾಲಿನಲ್ಲಿ 1,472 ಕೋಟಿ ರೂ. ಮೊತ್ತದ ಜಲಾನಯನ ಅಭಿವೃದ್ದಿ ಕಾಮಗಾರಿಗಳಿಗೆ ಅನುಮೋದನೆ ನೀಡಿ, ಕೃಷಿಗೆ ಒತ್ತು ನೀಡಿದೆ. ರೈತರ ಮಕ್ಕಳ ಶಿಕ್ಷಣ ಪ್ರೋತ್ಸಾಹ ಯೋಜನೆಯಡಿ 4.41 ಕೋಟಿ ರೂ. ಮೊತ್ತವನ್ನು 16 ಸಾವಿರ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸಲಾಗಿದೆ’ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ’ಸಂವಿಧಾನದತ್ತವಾಗಿ ಲಭ್ಯವಾಗಿರುವ ಹಕ್ಕುಗಳೊಂದಿಗೆ ಕರ್ತವ್ಯಗಳೂ ಇವೆ. ಹಕ್ಕು ಮತ್ತು ಕರ್ತವ್ಯಗಳು ಜೊತೆ ಜೊತೆಯಾಗಿ ಹೋಗಬೇಕು ಎನ್ನುವುದನ್ನು ಇಂದಿನ ಯುವಪೀಳಿಗೆಗೆ ನೆನಪು ಮಾಡಿಕೊಡುವ ದಿನವಿದು. ನಮಗೆ ಬಹಳಷ್ಟು ಹಕ್ಕುಗಳನ್ನು ಸಂವಿಧಾನ ನೀಡಿದೆ. ಆ ಹಕ್ಕುಗಳನ್ನು ಪಡೆಯುವ ಅರ್ಹತೆಯನ್ನು ಸಂಪಾದಿಸುವ ರೀತಿಯಲ್ಲಿ ನಮ್ಮ ಕರ್ತವ್ಯಗಳನ್ನು  ನಿಭಾಯಿಸಬೇಕು’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ವ್ಯಕ್ತಿ ಘನತೆ ಎತ್ತಿ ಹಿಡಿಯುತ್ತೇವೆ’: ತುಮಕೂರು ಮಹೀಂದ್ರಾ ಶೋರೂಂ ಘಟನೆ ಬಗ್ಗೆ ಆನಂದ್‌ ಮಹೀಂದ್ರ

‘ಪ್ರಜಾಪ್ರಭುತ್ವದ ತಳಹದಿಯ ಮೇಲೆ ದೇಶ ಗಣರಾಜ್ಯವಾಗಿದ್ದು, ರಾಜ್ಯಗಳ ಒಕ್ಕೂಟವೂ ಆಗಿದೆ. ಪ್ರತಿಯೊಂದು ರಾಜ್ಯವೂ ರಾಷ್ಟ್ರ ನಿರ್ಮಾಣದಲ್ಲಿ ಮುಂದಿರಬೇಕು. ಜನತೆಯೂ ರಾಷ್ಟ್ರ ನಿರ್ಮಾಣದತ್ತ ಗಮನ ಹರಿಸಬೇಕು. ದೇಶ ಮೊದಲು ಎನ್ನುವ ಭಾವನೆ ಇರಬೇಕು. ಕರ್ನಾಟಕ ಭಾರತ ಒಕ್ಕೂಟದಲ್ಲಿ ಪ್ರಬಲವಾದ ರಾಜ್ಯ. ಇದು ಆರ್ಥಿಕವಾಗಿ, ಸಾಮಾಜಿಕವಾಗಿ, ಕೌಶಲ್ಯಯುತವಾಗಿ, ಸಾಂಸ್ಕೃತಿಕವಾಗಿ ಕೊಡುಗೆ ನೀಡುವ ರಾಜ್ಯ. ಈ ಪರಂಪರೆಯನ್ನು ನಾವು ಉಳಿಸಿ ಬೆಳಸಬೇಕಿದೆ. ಈ ನಿಟ್ಟಿನಲ್ಲಿ ನಮ್ಮೆಲ್ಲರ ಚಿಂತನೆ ಹಾಗೂ ಕರ್ತವ್ಯವಿರಬೇಕು ಎಂದು ಜಾಗೃತಿ ಮೂಡಿಸುವ ದಿನ ಇದು’ ಎಂದಿದ್ದಾರೆ.

ಗ್ರಾಮ ಒನ್ ಯೋಜನೆ

ಗ್ರಾಮ ಒನ್ ಯೋಜನೆ ಗ್ರಾಮ ಪಂಚಾಯಿತಿಯಲ್ಲಿ ಜಾತಿ, ಆದಾಯ ಪ್ರಮಾಣ ಪತ್ರಗಳು ಹಾಗೂ ಬ್ಯಾಂಕಿಂಗ್ ಸೇವೆಗಳು  ಸೇರಿದಂತೆ ಹಲವಾರು ಸೇವೆಗಳನ್ನು ಒದಗಿಸುವ ವಿಶಿಷ್ಟ ಯೋಜನೆ. ಇದಕ್ಕಾಗಿ ಗ್ರಾಮಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ಇಂದು 12 ಜಿಲ್ಲೆಗಳಲ್ಲಿ ಯೋಜನೆ ಜಾರಿಯಾಗಲಿದೆ. ಸುಮಾರು 3000 ಗ್ರಾಮ ಪಂಚಾಯಿತಿಗಳಲ್ಲಿ  ಪ್ರಾರಂಭವಾಗಲಿದೆ. ಮುಂದಿನ ಕೆಲವೇ  ದಿನಗಳಲ್ಲಿ  ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಯೋಜನೆಯನ್ನು ವಿಸ್ತರಿಸಲಾಗುವುದು. ಜನರ ಬಳಿಗೆ ಸರ್ಕಾರ ಮತ್ತು ಸೇವೆಗಳು ತಲುಪಬೇಕು ಎಂಬ ನೀತಿಯ ಆಧಾರದ ಮೇಲೆ ಯೋಜನೆಯನ್ನು ರೂಪಿಸಲಾಗಿದೆ. ಇದೊಂದು ಕ್ರಾಂತಿಕಾರಿ ಯೋಜನೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಸಂಕುಚಿತ ಕೋಮು ಹಿತಾಸಕ್ತಿಯ ಅಜೆಂಡಾ ಕೈಬಿಡಿ: ಕರ್ನಾಟಕದ ಮುಖ್ಯಮಂತ್ರಿ ಮತ್ತು ಶಾಸಕರಿಗೆ ಬಹಿರಂಗ ಪತ್ರ  

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....