Homeಕರ್ನಾಟಕಗಣರಾಜ್ಯೋತ್ಸವ-2022: ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ನಿಭಾಯಿಸಬೇಕು - ಬಸವರಾಜ ಬೊಮ್ಮಾಯಿ

ಗಣರಾಜ್ಯೋತ್ಸವ-2022: ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ನಿಭಾಯಿಸಬೇಕು – ಬಸವರಾಜ ಬೊಮ್ಮಾಯಿ

- Advertisement -
- Advertisement -

ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಇಂದು 73ನೇ ಗಣರಾಜ್ಯೋತ್ಸವ ದಿನಾಚರಣೆ ಆಚರಿಸಲಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗೌರವ ವಂದನೆ ಸ್ವೀಕರಿಸಿ, ಧ್ವಜಾರೋಹಣ ನೆರವೇರಿಸಿದ್ದಾರೆ.

ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ’ಸರ್ಕಾರವು ಕೋವಿಡ್ ಸೋಂಕನ್ನು ಸಮರ್ಥವಾಗಿ ಎದುರಿಸಿದೆ. ಸರ್ಕಾರ ಜನತೆಯ ಸಹಾಯದಿಂದ ಮಾಡಿದ ಕಾರ್ಯ ಪ್ರಶಂಸನೀಯವಾಗಿದೆ. ಉತ್ತರ ಕರ್ನಾಟಕದಲ್ಲಿ ಸಂಭವಿಸಿದ ಅತಿವೃಷ್ಟಿ, ಪ್ರವಾಹದ ಸಂದರ್ಭದಲ್ಲಿ ಸರ್ಕಾರ ಸಂತ್ರಸ್ತರ ನೆರವಿಗೆ ಧಾವಿಸಿದೆ. 2021-22ನೇ ಸಾಲಿನಲ್ಲಿ 1,472 ಕೋಟಿ ರೂ. ಮೊತ್ತದ ಜಲಾನಯನ ಅಭಿವೃದ್ದಿ ಕಾಮಗಾರಿಗಳಿಗೆ ಅನುಮೋದನೆ ನೀಡಿ, ಕೃಷಿಗೆ ಒತ್ತು ನೀಡಿದೆ. ರೈತರ ಮಕ್ಕಳ ಶಿಕ್ಷಣ ಪ್ರೋತ್ಸಾಹ ಯೋಜನೆಯಡಿ 4.41 ಕೋಟಿ ರೂ. ಮೊತ್ತವನ್ನು 16 ಸಾವಿರ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸಲಾಗಿದೆ’ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ’ಸಂವಿಧಾನದತ್ತವಾಗಿ ಲಭ್ಯವಾಗಿರುವ ಹಕ್ಕುಗಳೊಂದಿಗೆ ಕರ್ತವ್ಯಗಳೂ ಇವೆ. ಹಕ್ಕು ಮತ್ತು ಕರ್ತವ್ಯಗಳು ಜೊತೆ ಜೊತೆಯಾಗಿ ಹೋಗಬೇಕು ಎನ್ನುವುದನ್ನು ಇಂದಿನ ಯುವಪೀಳಿಗೆಗೆ ನೆನಪು ಮಾಡಿಕೊಡುವ ದಿನವಿದು. ನಮಗೆ ಬಹಳಷ್ಟು ಹಕ್ಕುಗಳನ್ನು ಸಂವಿಧಾನ ನೀಡಿದೆ. ಆ ಹಕ್ಕುಗಳನ್ನು ಪಡೆಯುವ ಅರ್ಹತೆಯನ್ನು ಸಂಪಾದಿಸುವ ರೀತಿಯಲ್ಲಿ ನಮ್ಮ ಕರ್ತವ್ಯಗಳನ್ನು  ನಿಭಾಯಿಸಬೇಕು’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ವ್ಯಕ್ತಿ ಘನತೆ ಎತ್ತಿ ಹಿಡಿಯುತ್ತೇವೆ’: ತುಮಕೂರು ಮಹೀಂದ್ರಾ ಶೋರೂಂ ಘಟನೆ ಬಗ್ಗೆ ಆನಂದ್‌ ಮಹೀಂದ್ರ

‘ಪ್ರಜಾಪ್ರಭುತ್ವದ ತಳಹದಿಯ ಮೇಲೆ ದೇಶ ಗಣರಾಜ್ಯವಾಗಿದ್ದು, ರಾಜ್ಯಗಳ ಒಕ್ಕೂಟವೂ ಆಗಿದೆ. ಪ್ರತಿಯೊಂದು ರಾಜ್ಯವೂ ರಾಷ್ಟ್ರ ನಿರ್ಮಾಣದಲ್ಲಿ ಮುಂದಿರಬೇಕು. ಜನತೆಯೂ ರಾಷ್ಟ್ರ ನಿರ್ಮಾಣದತ್ತ ಗಮನ ಹರಿಸಬೇಕು. ದೇಶ ಮೊದಲು ಎನ್ನುವ ಭಾವನೆ ಇರಬೇಕು. ಕರ್ನಾಟಕ ಭಾರತ ಒಕ್ಕೂಟದಲ್ಲಿ ಪ್ರಬಲವಾದ ರಾಜ್ಯ. ಇದು ಆರ್ಥಿಕವಾಗಿ, ಸಾಮಾಜಿಕವಾಗಿ, ಕೌಶಲ್ಯಯುತವಾಗಿ, ಸಾಂಸ್ಕೃತಿಕವಾಗಿ ಕೊಡುಗೆ ನೀಡುವ ರಾಜ್ಯ. ಈ ಪರಂಪರೆಯನ್ನು ನಾವು ಉಳಿಸಿ ಬೆಳಸಬೇಕಿದೆ. ಈ ನಿಟ್ಟಿನಲ್ಲಿ ನಮ್ಮೆಲ್ಲರ ಚಿಂತನೆ ಹಾಗೂ ಕರ್ತವ್ಯವಿರಬೇಕು ಎಂದು ಜಾಗೃತಿ ಮೂಡಿಸುವ ದಿನ ಇದು’ ಎಂದಿದ್ದಾರೆ.

ಗ್ರಾಮ ಒನ್ ಯೋಜನೆ

ಗ್ರಾಮ ಒನ್ ಯೋಜನೆ ಗ್ರಾಮ ಪಂಚಾಯಿತಿಯಲ್ಲಿ ಜಾತಿ, ಆದಾಯ ಪ್ರಮಾಣ ಪತ್ರಗಳು ಹಾಗೂ ಬ್ಯಾಂಕಿಂಗ್ ಸೇವೆಗಳು  ಸೇರಿದಂತೆ ಹಲವಾರು ಸೇವೆಗಳನ್ನು ಒದಗಿಸುವ ವಿಶಿಷ್ಟ ಯೋಜನೆ. ಇದಕ್ಕಾಗಿ ಗ್ರಾಮಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ಇಂದು 12 ಜಿಲ್ಲೆಗಳಲ್ಲಿ ಯೋಜನೆ ಜಾರಿಯಾಗಲಿದೆ. ಸುಮಾರು 3000 ಗ್ರಾಮ ಪಂಚಾಯಿತಿಗಳಲ್ಲಿ  ಪ್ರಾರಂಭವಾಗಲಿದೆ. ಮುಂದಿನ ಕೆಲವೇ  ದಿನಗಳಲ್ಲಿ  ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಯೋಜನೆಯನ್ನು ವಿಸ್ತರಿಸಲಾಗುವುದು. ಜನರ ಬಳಿಗೆ ಸರ್ಕಾರ ಮತ್ತು ಸೇವೆಗಳು ತಲುಪಬೇಕು ಎಂಬ ನೀತಿಯ ಆಧಾರದ ಮೇಲೆ ಯೋಜನೆಯನ್ನು ರೂಪಿಸಲಾಗಿದೆ. ಇದೊಂದು ಕ್ರಾಂತಿಕಾರಿ ಯೋಜನೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಸಂಕುಚಿತ ಕೋಮು ಹಿತಾಸಕ್ತಿಯ ಅಜೆಂಡಾ ಕೈಬಿಡಿ: ಕರ್ನಾಟಕದ ಮುಖ್ಯಮಂತ್ರಿ ಮತ್ತು ಶಾಸಕರಿಗೆ ಬಹಿರಂಗ ಪತ್ರ  

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...