Homeಮುಖಪುಟಸತತ 3 ನೇ ಬಾರಿ ಗಣರಾಜ್ಯೋತ್ಸವ ಪರೇಡ್‌ನಿಂದ ಕೇರಳ ಹೊರಕ್ಕೆ: ನಾರಾಯಣ ಗುರು ಸ್ತಬ್ಧಚಿತ್ರ ಪ್ರದರ್ಶನಕ್ಕೆ...

ಸತತ 3 ನೇ ಬಾರಿ ಗಣರಾಜ್ಯೋತ್ಸವ ಪರೇಡ್‌ನಿಂದ ಕೇರಳ ಹೊರಕ್ಕೆ: ನಾರಾಯಣ ಗುರು ಸ್ತಬ್ಧಚಿತ್ರ ಪ್ರದರ್ಶನಕ್ಕೆ ಕೇಂದ್ರದ ನಿರಾಕರಣೆ

- Advertisement -
- Advertisement -

ಈ ಬಾರಿಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಪ್ರಸ್ತುತಪಡಿಸಲು ಕೇರಳ ಸರ್ಕಾರ ಕಳುಹಿಸಿದ್ದ ಪ್ರಸ್ತಾಪವನ್ನು ಒಕ್ಕೂಟ ಸರ್ಕಾರ ನಿರಾಕರಿಸಿದೆ. ಸತತ ಮೂವರನೇ ಬಾರಿಗೆ ಕೇರಳ ಗಣರಾಜ್ಯೋತ್ಸವ ಪರೇಡ್‌ನಿಂದ ಹೊರಗುಳಿಯಲಿದೆ.

ಕೇಂದ್ರ ಸರ್ಕಾರದ ಈ ಕ್ರಮಕ್ಕೆ ರಾಜಕಾರಣಿಗಳು ಸೇರಿದಂತೆ ಶ್ರೀ ನಾರಾಯಣ ಧರ್ಮ ಸಂಘಮ್ ಟ್ರಸ್ಟ್ ಖಂಡಿಸಿದೆ.

ಕೇರಳವು ಗಣರಾಜ್ಯೋತ್ಸವದ ಸ್ತಬ್ಧಚಿತ್ರದಲ್ಲಿ ಮಹಿಳೆಯರ ಸುರಕ್ಷತೆಯ ವಿಷಯದೊಂದಿಗೆ ಜಟಾಯು ಪಕ್ಷಿ ಪ್ರತಿಮೆ ಮತ್ತು ನಾರಾಯಣ ಗುರು ಪ್ರತಿಮೆಯನ್ನು ಕೇರಳ ಸಿದ್ಧಪಡಿಸಿತ್ತು. ಆದರೆ, ಕೇಂದ್ರ ಸರ್ಕಾರವು ಶಂಕರಾಚಾರ್ಯರ ಮೂರ್ತಿಯನ್ನು ಬಳಸಲು ಸೂಚಿಸಿತ್ತು.

ಕೇರಳ ಶಿಕ್ಷಣ ಸಚಿವ ವಿ ಶಿವನ್‌ಕುಟ್ಟಿ, ಒಕ್ಕೂಟ ಸರ್ಕಾರದ ನಿಯಮವನ್ನು ಟೀಕಿಸಿದ್ದು, ’ಕೇಂದ್ರ ಸರ್ಕಾರದಂತೆ ರಾಜ್ಯ ಬಿಜೆಪಿ ಕೂಡ ಶ್ರೀನಾರಾಯಣ ಗುರುವನ್ನು ತಿರಸ್ಕರಿಸುತ್ತದೆಯೇ’ ಎಂದು ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

“ನಾರಾಯಣ ಗುರುವಿನಂತಹ ಸುಧಾರಕನಿಗೆ ಕೇಂದ್ರ ಸರ್ಕಾರ ಅವಮಾನ ಮಾಡುತ್ತಿದೆ. ಗುರುಗಳು ಜಾತಿ ವ್ಯವಸ್ಥೆ ಮತ್ತು ಅಸ್ಪೃಶ್ಯತೆ ವಿರುದ್ಧ ಕೆಲಸ ಮಾಡಿದ್ದಾರೆ. ಅದಕ್ಕಾಗಿಯೇ ಅವರನ್ನು ಸ್ತಬ್ಧಚಿತ್ರಕ್ಕೆ ಸೇರಿಸಿದ್ದೇವೆ. ತೀರ್ಪುಗಾರರ ಉತ್ತಮ ಅಭಿಪ್ರಾಯದ ಹೊರತಾಗಿಯೂ ಕೇರಳವನ್ನು ಕೊನೆಯ ಕ್ಷಣದಲ್ಲಿ ತೆಗೆದುಹಾಕಲಾಗಿದೆ. ಏಕೆ ನಮ್ಮ ಸ್ತಬ್ಧಚಿತ್ರವನ್ನು ತಿರಸ್ಕರಿಸಲಾಗಿದೆ ಎಂದು ಕೇಂದ್ರ ಸರ್ಕಾರ ಕನಿಷ್ಠ ಸ್ಪಷ್ಟಪಡಿಸಬೇಕು” ಸಚಿವರು ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ದ್ವೇಷ ಭಾಷಣ ಕೇಸ್: ’ನೀವೆಲ್ಲರೂ ಸಾಯುತ್ತೀರಿ’ ಎಂದು ಪೊಲೀಸರಿಗೆ ಯತಿ ನರಸಿಂಗಾನಂದ ಬೆದರಿಕೆ

ಇನ್ನು ಗಣರಾಜ್ಯೋತ್ಸವದ ಸ್ತಬ್ಧಚಿತ್ರ ವಿವಾದವು ಶಿವಗಿರಿ ಮಠ ಮತ್ತು ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರದ ನಡುವಿನ ಸಂಬಂಧವನ್ನು ಮತ್ತಷ್ಟು ಹದಗೆಡಿಸಿದೆ. ಮಠವನ್ನು ನಿರ್ವಹಿಸುವ ಶ್ರೀ ನಾರಾಯಣ ಧರ್ಮ ಸಂಘಮ್ ಟ್ರಸ್ಟ್ ಕೇರಳದ ಸ್ತಬ್ಧಚಿತ್ರ ವಿನ್ಯಾಸವನ್ನು ತಿರಸ್ಕರಿಸಿದ ಕೇಂದ್ರ ಸರ್ಕಾರವನ್ನು ತೀವ್ರವಾಗಿ ಟೀಕಿಸಿದೆ.

“ಇದು ಮಲಯಾಳಿಯಲ್ಲದ ಅಧಿಕಾರಿಗಳು ಮಾಡಿದ ತಪ್ಪಾಗಿರಬಹುದು ಅಥವಾ ಮೇಲ್ಜಾತಿಯ ಪ್ರಾಬಲ್ಯದಿಂದಾದ ಉದ್ದೇಶಪೂರ್ವಕ ಕೃತ್ಯವಾಗಿರಬಹುದು. ಆದರೆ ತೀರ್ಪುಗಾರರ ಪಕ್ಷಪಾತ ಧೋರಣೆಯಿಂದ ಗುರು ಮತ್ತು ಮಠದ ಲಕ್ಷಾಂತರ ಅನುಯಾಯಿಗಳಿಗೆ ಅವಮಾನವಾಗಿದೆ. ಈ ತಪ್ಪನ್ನು ಸರಿಪಡಿಸಲು ಕೇಂದ್ರ ಸರ್ಕಾರಕ್ಕೆ ಇನ್ನು ಸಾಕಷ್ಟು ಸಮಯವಿದೆ” ಎಂದು ಶಿವಗಿರಿ ಮಠದ ಆಡಳಿತ ನಡೆಸುತ್ತಿರುವ ಶ್ರೀ ನಾರಾಯಣ ಧರ್ಮ ಸಂಘಮ್ ಟ್ರಸ್ಟ್‌ನ ಅಧ್ಯಕ್ಷ ಸ್ವಾಮಿ ಸಚ್ಚಿದಾನಂದ ಅವರನ್ನು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಸಿಪಿಎಂ ಪಕ್ಷದ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಕೂಡ ಈ ನಿರ್ಧಾರವನ್ನು ಟೀಕಿಸಿದ್ದಾರೆ. ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ತಿರಸ್ಕರಿಸಿರುವಲ್ಲಿ ರಾಜಕೀಯ ಕೈವಾಡವಿದೆ ಎಂಬ ಆರೋಪಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿಯೇ ಈ ಹೇಳಿಕೆಗಳು ಬರುತ್ತಿರುವುದು ಮತ್ತಷ್ಟು ವಿವಾದಕ್ಕೆ ಕಾರಣವಾಗಿದೆ.

2019 ಮತ್ತು 2020 ರಲ್ಲೂ ಕೇರಳವನ್ನು ಗಣರಾಜ್ಯೋತ್ಸವದ ಪರೇಡ್‌ನಿಂದ ಹೊರಹಾಕಲಾಗಿತ್ತು. ಈ ಬಾರಿಯೂ ಒಕ್ಕೂಟ ಸರ್ಕಾರ ಅವಕಾಶ ನೀಡಿಲ್ಲ.


ಇದನ್ನೂ ಓದಿ: ಟ್ರಾನ್ಸ್‌ಜೆಂಡರ್ ಸಮುದಾಯಕ್ಕೆ ಪ್ರತ್ಯೇಕ ಜೈಲು ಆವರಣ ನಿರ್ಮಿಸಿ: ರಾಜ್ಯಗಳಿಗೆ ಒಕ್ಕೂಟ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಒಕ್ಕೂಟ ಸರ್ಕಾರದ ಇಂತಹ ಕ್ರಮ, ನಮ್ಮ ಒಕ್ಕೂಟ ವ್ಯವಸ್ಥೆಗೆ ದಕ್ಕೆ ತರುತ್ತದೆ. ಇದು ಆಗಬಾರದು.

  2. ಒಕ್ಕೂಟ ಸರ್ಕಾರದಲ್ಲಿ ಇರೋರು ಜಾತಿ ವಾದಿಗಳು ಅದನ್ನು ನೆಡೆಸುತಿರೋರು ಜಾತಿವಾದಿಗಳು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...