Homeಮುಖಪುಟನಾರಾಯಣ ಗುರು ಸ್ತಬ್ಧಚಿತ್ರ ಪ್ರದರ್ಶನಕ್ಕೆ ನಿರಾಕರಣೆ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ

ನಾರಾಯಣ ಗುರು ಸ್ತಬ್ಧಚಿತ್ರ ಪ್ರದರ್ಶನಕ್ಕೆ ನಿರಾಕರಣೆ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ

- Advertisement -
- Advertisement -

ಈ ಬಾರಿಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಪ್ರಸ್ತುತಪಡಿಸಲು ಕೇರಳ ಸರ್ಕಾರ ಕಳುಹಿಸಿದ್ದ ಪ್ರಸ್ತಾಪವನ್ನು ಒಕ್ಕೂಟ ಸರ್ಕಾರ ನಿರಾಕರಿಸಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. 

ಕೇರಳವು ಗಣರಾಜ್ಯೋತ್ಸವದ ಸ್ತಬ್ಧಚಿತ್ರದಲ್ಲಿ ಮಹಿಳೆಯರ ಸುರಕ್ಷತೆಯ ವಿಷಯದೊಂದಿಗೆ ಜಟಾಯು ಪಕ್ಷಿ ಪ್ರತಿಮೆ ಮತ್ತು ನಾರಾಯಣ ಗುರು ಪ್ರತಿಮೆಯನ್ನು ಕೇರಳ ಸಿದ್ಧಪಡಿಸಿತ್ತು. ಆದರೆ, ಕೇಂದ್ರ ಸರ್ಕಾರವು ಶಂಕರಾಚಾರ್ಯರ ಮೂರ್ತಿಯನ್ನು ಬಳಸಲು ಸೂಚಿಸಿತ್ತು. ಬಳಿಕ ಕೇರಳಕ್ಕೆ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿತ್ತು.

“ಗಣರಾಜ್ಯೋತ್ಸವ ಪರೇಡ್‌ನಲ್ಲಿ ಸಮಾಜ ಸುಧಾರಕ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವುದು ತಳಸಮುದಾಯದ ಮಹಾಪುರುಷರ ಬಗ್ಗೆ  ಬಿಜೆಪಿ ಪಕ್ಷ ಮತ್ತು ಕೇಂದ್ರ ಸರ್ಕಾರಕ್ಕೆ ಇರುವ ಪೂರ್ವಗ್ರಹ ಮತ್ತು ತಿರಸ್ಕಾರಕ್ಕೆ ಸಾಕ್ಷಿ. ನಾರಾಯಣ ಗುರುಗಳ ಸ್ತಬ್ದಚಿತ್ರಕ್ಕೆ ಯಾವ ಕಾರಣಕ್ಕಾಗಿ ಅವಕಾಶ ನಿರಾಕರಿಸಲಾಗಿದೆ? ನಾರಾಯಣ ಗುರುಗಳು ಹಿಂದೂ ಧರ್ಮಕ್ಕೆ ಸೇರಿದವರಲ್ಲವೇ? ಅಂತಹ ಅಭಿಪ್ರಾಯವನ್ನು ಬಿಜೆಪಿ ಪಕ್ಷ ಹೊಂದಿದ್ದರೆ ಹಾಗೆಂದು ಮುಕ್ತವಾಗಿ ಹೇಳುವ ಧೈರ್ಯ ತೋರಲಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಒಡಿಶಾ: ಜಿಂದಾಲ್ ಸ್ಟೀಲ್ ವರ್ಕ್ಸ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ- ಪೊಲೀಸರಿಂದ ಮಾರಣಾಂತಿಕ ಹಲ್ಲೆ

“ಹಿಂದೂ ಧರ್ಮದ ಸುಧಾರಕ ನಾರಾಯಣ ಗುರುಗಳ ಸ್ತಬ್ದಚಿತ್ರಕ್ಕೆ ಅವಕಾಶ ನಿರಾಕರಿಸಿ ಅವಮಾನಿಸಿರುವುದು ‘ಹಿಂದು ಹೃದಯ ಸಾಮ್ರಾಟ’ ಎಂದು ಕರೆಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ಇ‌ನ್ನೂ ಬಂದಿಲ್ಲವೇ..? ತಮ್ಮ ಮೂಗಿನಡಿಯಲ್ಲಿಯೇ ನಾರಾಯಣ ಗುರುಗಳಿಗೆ ಮಾಡಿರುವ ಅವಮಾನದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಇನ್ನೂ ಪ್ರತಿಕ್ರಿಯಿಸದೆ ಇರುವುದು ಆಶ್ಚರ್ಯಕರ. ಇದನ್ನು ಹೇಗೆ ಅರ್ಥೈಸಬೇಕು? ಈ ಅವಮಾನಕ್ಕೆ ಸಹಮತ ಇದೆಯೆಂದೇ..?” ಎಂದು ಪ್ರಧಾನಿ ಮೋದಿಯವರನ್ನು ಪ್ರಶ್ನಿಸಿದ್ದಾರೆ.

’ಶತಮಾನದ ಹಿಂದೆಯೇ ಅಸ್ಪೃಶ್ಯತೆ ಮತ್ತು ಪುರೋಹಿತಷಾಹಿ ವ್ಯವಸ್ಥೆ ವಿರುದ್ದ ಸಿಡಿದೆದ್ದು ಹಿಂದೂ ಧರ್ಮದ ಸುಧಾರಣೆಗೆ ತಮ್ಮನ್ನು ಅರ್ಪಿಸಿಕೊಂಡಿದ್ದ ನಾರಾಯಣ ಗುರುಗಳಿಗೆ ಅವಮಾನಿಸಿರುವ ಬಿಜೆಪಿ ಮತ್ತು ಕೇಂದ್ರ ಸರ್ಕಾರಕ್ಕೆ ಹಿಂದೂ ಧರ್ಮದ ಬಗ್ಗೆ ಮಾತನಾಡುವ ಯಾವ ನೈತಿಕತೆ ಇದೆ..?’ ಎಂದು ಕಿಡಿ ಕಾರಿದ್ದಾರೆ.

’ನಾರಾಯಣ ಗುರುಗಳಿಗೆ ಮಾಡಿರುವ ಅವಮಾನಕ್ಕಾಗಿ ಕೇಂದ್ರ ಸರ್ಕಾರ ದೇಶದ ಕ್ಷಮೆ ಕೇಳಬೇಕು. ಈ ಬಾರಿಯ ಗಣರಾಜ್ಯೋತ್ಸವದಲ್ಲಿ ನಾರಾಯಣ ಗುರುಗಳ ಸ್ತಬ್ಧ ಚಿತ್ರಕ್ಕೆ ಪ್ರಾಧಾನ್ಯ ಕೊಟ್ಟು ಅವಕಾಶ ನೀಡಬೇಕು’ ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಕಳೆದೆರಡು ಬಾರಿಯೂ ಕೇರಳಕ್ಕೆ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗವಹಿಸಲು ಅವಕಾಶ ನೀಡಿರಲಿಲ್ಲ. ಈ ಬಾರಿಯೂ ನೀಡದಿರುವುದು ರಾಜಕೀಯ ಕೈವಾಡವಿದೆ ಎಂಬ ಆರೋಪಕ್ಕೆ ಕಾರಣವಾಗಿದೆ.


ಇದನ್ನೂ ಓದಿ: ಸತತ 3 ನೇ ಬಾರಿ ಗಣರಾಜ್ಯೋತ್ಸವ ಪರೇಡ್‌ನಿಂದ ಕೇರಳ ಹೊರಕ್ಕೆ: ನಾರಾಯಣ ಗುರು ಸ್ತಬ್ಧಚಿತ್ರ ಪ್ರದರ್ಶನಕ್ಕೆ ಕೇಂದ್ರದ ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...