Homeಮುಖಪುಟಪಂಜಾಬ್ ಸರ್ಕಾರ, ಕೇಂದ್ರದ ನಡುವೆ ಗಣರಾಜ್ಯೋತ್ಸವ ಸ್ತಬ್ಧಚಿತ್ರ ಕಿತ್ತಾಟ

ಪಂಜಾಬ್ ಸರ್ಕಾರ, ಕೇಂದ್ರದ ನಡುವೆ ಗಣರಾಜ್ಯೋತ್ಸವ ಸ್ತಬ್ಧಚಿತ್ರ ಕಿತ್ತಾಟ

- Advertisement -
- Advertisement -

ಗಣರಾಜ್ಯೋತ್ಸವದ ಸ್ತಬ್ಧಚಿತ್ರ ಪ್ರದರ್ಶನದ ವಿಚಾರವಾಗಿ ಕೇಂದ್ರ ಸರ್ಕಾರ ಮತ್ತು ಪಂಜಾಬ್‌ನ ಆಮ್ ಆದ್ಮಿ ಸರ್ಕಾರದ ನಡುವೆ ಕಿತ್ತಾಟ ಶುರುವಾಗಿದೆ.

ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ನಮ್ಮ ರಾಜ್ಯದ ಸ್ತಬ್ಧಚಿತ್ರವನ್ನು ಗಣರಾಜ್ಯೋತ್ಸವ ಮೆರವಣಿಗೆಯಿಂದ ಹೊರಗಿಟ್ಟಿದೆ ಎಂದು ಪಂಜಾಬ್‌ ಮುಖ್ಯಮಂತ್ರಿ ಭಗವಂತ್ ಮಾನ್ ಬುಧವಾರ ಆರೋಪಿಸಿದ್ದಾರೆ.

“ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ಪಂಜಾಬ್‌ನ ಸ್ತಬ್ಧಚಿತ್ರವನ್ನು ಸಾಂಸ್ಕೃತಿಕ ಮೆರವಣಿಗೆಯಿಂದ ಹೊರಗಿಟ್ಟಿದೆ. ಎರಡನೇ ಬಾರಿ ಈ ರೀತಿ ಆಗ್ತಿದೆ. ಸ್ತಬ್ಧಚಿತ್ರ ಆಯ್ಕೆಗೆ ಬೇಕಾದ ಎಲ್ಲಾ ಮಾನದಂಡಗಳನ್ನು ಮುಂಚಿತವಾಗಿಯೇ ನಾವು ಪೂರೈಸಿದ್ದೇವೆ. ಆದರೂ, ನಮ್ಮ ಸ್ತಬ್ಧಚಿತ್ರ ಆಯ್ಕೆಯಾಗಿಲ್ಲ ಎಂಬ ಪತ್ರವನ್ನು ನಾವು ಸ್ವೀಕರಿಸಿದ್ದೇವೆ” ಎಂದು ಸಿಎಂ ಭಗವಂತ್ ಮಾನ್ ಚಂಡೀಗಢದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ತಬ್ಧಚಿತ್ರ ಆಯ್ಕೆ ವೇಳೆ ಬಿಜೆಪಿ ಆಡಳಿತದ ರಾಜ್ಯಗಳಿಗೆ ಕೇಂದ್ರ ಸರ್ಕಾರ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿದೆ. ಒಟ್ಟು 20 ರಾಜ್ಯಗಳ ಸ್ತಬ್ಧಚಿತ್ರಗಳು ಈ ವರ್ಷದ ಮೆರವಣಿಗೆಗೆ ಆಯ್ಕೆಯಾಗಿವೆ. ಈ ಪೈಕಿ ಹೆಚ್ಚಿನವು ಬಿಜೆಪಿ ಆಡಳಿತದ ರಾಜ್ಯಗಳದ್ದು. ಆಮ್‌ ಆದ್ಮಿ ಆಡಳಿತವಿರುವ ದೆಹಲಿಯ ಸ್ತಬ್ಧಚಿತ್ರವನ್ನು ಕೂಡ ಆಯ್ಕೆ ಮಾಡಿಲ್ಲ ಎಂದು ಭಗವಂತ್ ಮಾನ್ ಆರೋಪಿಸಿದ್ದಾರೆ.

ಕೇಂದ್ರದ ಕೋರಿಕೆಯಂತೆ ಪಂಜಾಬ್ ಸಾರ್ವಜನಿಕ ಸಂಪರ್ಕ ಇಲಾಖೆಯು ಸಿದ್ಧಪಡಿಸಿದ ಮೂರು ಸ್ತಬ್ಧಚಿತ್ರಗಳ ಮಾದರಿ ತೋರಿಸಿದ ಭಗವಂತ್ ಮಾನ್, “ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಪಂಜಾಬ್‌ನ್ನು ಸಾಂಸ್ಕೃತಿಕವಾಗಿ ಹೇಗೆ ಮುಗಿಸಲು ಹೊರಟಿದೆ ನೋಡಿ” ಎಂದಿದ್ದಾರೆ.

ಭಗವಂತ್ ಮಾನ್ ರಾಜಕೀಯ ಮಾಡ್ತಿದ್ದಾರೆ: ಬಿಜೆಪಿ

ಸಿಎಂ ಭಗವಂತ್ ಮಾನ್ ಕೇಂದ್ರ ಸರ್ಕಾರದ ವಿರುದ್ಧ ಮಾಡಿರುವ ಆರೋಪಗಳಿಗೆ ಪಂಜಾಬ್ ಬಿಜೆಪಿ ಪ್ರತಿಕ್ರಿಯೆ ನೀಡಿದೆ. ಸಿಎಂ ಸ್ತಬ್ಧಚಿತ್ರ ವಿಚಾರದಲ್ಲಿ ರಾಜಕೀಯ ಮಾಡ್ತಿದ್ದಾರೆ ಎಂದು ಹೇಳಿದೆ.

ಪಂಜಾಬ್ ಸರ್ಕಾರ ಭಗವಂತ್ ಮಾನ್ ಮತ್ತು ಅರವಿಂದ್ ಕೇಜ್ರಿವಾಲ್ ಅವರ ಫೋಟೋಗಳನ್ನು  ಸ್ತಬ್ಧಚಿತ್ರಗಳಲ್ಲಿ ಹಾಕಲು ಒತ್ತಾಯಿಸಿತ್ತು. ಅದಕ್ಕೆ ಕೇಂದ್ರ ಸರ್ಕಾರ ಒಪ್ಪಿಲ್ಲ. ಈ ಕಾರಣಕ್ಕೆ ಪಂಜಾಬ್‌ನ ಸ್ತಬ್ಧ ಚಿತ್ರ ತಿರಸ್ಕೃತಗೊಂಡಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಸುನೀಲ್ ಜಾಖರ್ ಹೇಳಿದ್ದಾರೆ.

ಕಳೆದ 17 ವರ್ಷಗಳಲ್ಲಿ, 2013, 2014, 2015, ಮತ್ತು 2016 ಸೇರಿದಂತೆ ಒಂಬತ್ತು ಬಾರಿ ಪಂಜಾಬ್‌ನ ಸ್ತಬ್ದಚಿತ್ರಗಳು ತಿರಸ್ಕೃತಗೊಂಡಿದೆ. ಆಗೆಲ್ಲ ಕೇಳಿ ಬರದ ಆರೋಪ ಈಗ ಮಾಡಲಾಗ್ತಿದೆ. ಸಿಎಂ ಭಗವಂತ್ ಮಾನ್ ಈ ವಿಚಾರದಲ್ಲಿ ರಾಜಕೀಯ ಮಾಡ್ತಿದ್ದಾರೆ. ಭಗವಂತ್ ಮಾನ್ ಮತ್ತು ಅರವಿಂದ್ ಕೇಜ್ರಿವಾಲ್ ಫೋಟೋಗಳು ಸ್ತಬ್ಧಚಿತ್ರಗಳಲ್ಲಿ ಹಾಕಲು ಅವಕಾಶ ನೀಡುವಂತೆ ಒತ್ತಾಯಿಸಿರುವುದೇ ಅದು ತಿರಸ್ಕೃತಗೊಳ್ಳಲು ಕಾರಣ. ಗಣರಾಜ್ಯೋತ್ಸವ ಮೆರವಣಿಗೆ ಯಾರದ್ದೋ ಜಾಹಿರಾತಿಗಾಗಿ ಮಾಡುತ್ತಿಲ್ಲ ಎಂದು ಸುನೀಲ್ ಜಾಖರ್ ಕಿಡಿಕಾರಿದ್ದಾರೆ.

ಇದನ್ನೂ ಓದಿ : ರಾಮಮಂದಿರ ಉದ್ಘಾಟನೆಗೆ ಆಹ್ವಾನ: ‘ಕೈ’ ನಾಯಕರ ಭಿನ್ನ ಹೇಳಿಕೆ, ಕೇರಳ ಕಾಂಗ್ರೆಸ್‌ನಲ್ಲಿ ಗೊಂದಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...