Homeಮುಖಪುಟಪಂಜಾಬ್ ಸರ್ಕಾರ, ಕೇಂದ್ರದ ನಡುವೆ ಗಣರಾಜ್ಯೋತ್ಸವ ಸ್ತಬ್ಧಚಿತ್ರ ಕಿತ್ತಾಟ

ಪಂಜಾಬ್ ಸರ್ಕಾರ, ಕೇಂದ್ರದ ನಡುವೆ ಗಣರಾಜ್ಯೋತ್ಸವ ಸ್ತಬ್ಧಚಿತ್ರ ಕಿತ್ತಾಟ

- Advertisement -
- Advertisement -

ಗಣರಾಜ್ಯೋತ್ಸವದ ಸ್ತಬ್ಧಚಿತ್ರ ಪ್ರದರ್ಶನದ ವಿಚಾರವಾಗಿ ಕೇಂದ್ರ ಸರ್ಕಾರ ಮತ್ತು ಪಂಜಾಬ್‌ನ ಆಮ್ ಆದ್ಮಿ ಸರ್ಕಾರದ ನಡುವೆ ಕಿತ್ತಾಟ ಶುರುವಾಗಿದೆ.

ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ನಮ್ಮ ರಾಜ್ಯದ ಸ್ತಬ್ಧಚಿತ್ರವನ್ನು ಗಣರಾಜ್ಯೋತ್ಸವ ಮೆರವಣಿಗೆಯಿಂದ ಹೊರಗಿಟ್ಟಿದೆ ಎಂದು ಪಂಜಾಬ್‌ ಮುಖ್ಯಮಂತ್ರಿ ಭಗವಂತ್ ಮಾನ್ ಬುಧವಾರ ಆರೋಪಿಸಿದ್ದಾರೆ.

“ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ಪಂಜಾಬ್‌ನ ಸ್ತಬ್ಧಚಿತ್ರವನ್ನು ಸಾಂಸ್ಕೃತಿಕ ಮೆರವಣಿಗೆಯಿಂದ ಹೊರಗಿಟ್ಟಿದೆ. ಎರಡನೇ ಬಾರಿ ಈ ರೀತಿ ಆಗ್ತಿದೆ. ಸ್ತಬ್ಧಚಿತ್ರ ಆಯ್ಕೆಗೆ ಬೇಕಾದ ಎಲ್ಲಾ ಮಾನದಂಡಗಳನ್ನು ಮುಂಚಿತವಾಗಿಯೇ ನಾವು ಪೂರೈಸಿದ್ದೇವೆ. ಆದರೂ, ನಮ್ಮ ಸ್ತಬ್ಧಚಿತ್ರ ಆಯ್ಕೆಯಾಗಿಲ್ಲ ಎಂಬ ಪತ್ರವನ್ನು ನಾವು ಸ್ವೀಕರಿಸಿದ್ದೇವೆ” ಎಂದು ಸಿಎಂ ಭಗವಂತ್ ಮಾನ್ ಚಂಡೀಗಢದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ತಬ್ಧಚಿತ್ರ ಆಯ್ಕೆ ವೇಳೆ ಬಿಜೆಪಿ ಆಡಳಿತದ ರಾಜ್ಯಗಳಿಗೆ ಕೇಂದ್ರ ಸರ್ಕಾರ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿದೆ. ಒಟ್ಟು 20 ರಾಜ್ಯಗಳ ಸ್ತಬ್ಧಚಿತ್ರಗಳು ಈ ವರ್ಷದ ಮೆರವಣಿಗೆಗೆ ಆಯ್ಕೆಯಾಗಿವೆ. ಈ ಪೈಕಿ ಹೆಚ್ಚಿನವು ಬಿಜೆಪಿ ಆಡಳಿತದ ರಾಜ್ಯಗಳದ್ದು. ಆಮ್‌ ಆದ್ಮಿ ಆಡಳಿತವಿರುವ ದೆಹಲಿಯ ಸ್ತಬ್ಧಚಿತ್ರವನ್ನು ಕೂಡ ಆಯ್ಕೆ ಮಾಡಿಲ್ಲ ಎಂದು ಭಗವಂತ್ ಮಾನ್ ಆರೋಪಿಸಿದ್ದಾರೆ.

ಕೇಂದ್ರದ ಕೋರಿಕೆಯಂತೆ ಪಂಜಾಬ್ ಸಾರ್ವಜನಿಕ ಸಂಪರ್ಕ ಇಲಾಖೆಯು ಸಿದ್ಧಪಡಿಸಿದ ಮೂರು ಸ್ತಬ್ಧಚಿತ್ರಗಳ ಮಾದರಿ ತೋರಿಸಿದ ಭಗವಂತ್ ಮಾನ್, “ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಪಂಜಾಬ್‌ನ್ನು ಸಾಂಸ್ಕೃತಿಕವಾಗಿ ಹೇಗೆ ಮುಗಿಸಲು ಹೊರಟಿದೆ ನೋಡಿ” ಎಂದಿದ್ದಾರೆ.

ಭಗವಂತ್ ಮಾನ್ ರಾಜಕೀಯ ಮಾಡ್ತಿದ್ದಾರೆ: ಬಿಜೆಪಿ

ಸಿಎಂ ಭಗವಂತ್ ಮಾನ್ ಕೇಂದ್ರ ಸರ್ಕಾರದ ವಿರುದ್ಧ ಮಾಡಿರುವ ಆರೋಪಗಳಿಗೆ ಪಂಜಾಬ್ ಬಿಜೆಪಿ ಪ್ರತಿಕ್ರಿಯೆ ನೀಡಿದೆ. ಸಿಎಂ ಸ್ತಬ್ಧಚಿತ್ರ ವಿಚಾರದಲ್ಲಿ ರಾಜಕೀಯ ಮಾಡ್ತಿದ್ದಾರೆ ಎಂದು ಹೇಳಿದೆ.

ಪಂಜಾಬ್ ಸರ್ಕಾರ ಭಗವಂತ್ ಮಾನ್ ಮತ್ತು ಅರವಿಂದ್ ಕೇಜ್ರಿವಾಲ್ ಅವರ ಫೋಟೋಗಳನ್ನು  ಸ್ತಬ್ಧಚಿತ್ರಗಳಲ್ಲಿ ಹಾಕಲು ಒತ್ತಾಯಿಸಿತ್ತು. ಅದಕ್ಕೆ ಕೇಂದ್ರ ಸರ್ಕಾರ ಒಪ್ಪಿಲ್ಲ. ಈ ಕಾರಣಕ್ಕೆ ಪಂಜಾಬ್‌ನ ಸ್ತಬ್ಧ ಚಿತ್ರ ತಿರಸ್ಕೃತಗೊಂಡಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಸುನೀಲ್ ಜಾಖರ್ ಹೇಳಿದ್ದಾರೆ.

ಕಳೆದ 17 ವರ್ಷಗಳಲ್ಲಿ, 2013, 2014, 2015, ಮತ್ತು 2016 ಸೇರಿದಂತೆ ಒಂಬತ್ತು ಬಾರಿ ಪಂಜಾಬ್‌ನ ಸ್ತಬ್ದಚಿತ್ರಗಳು ತಿರಸ್ಕೃತಗೊಂಡಿದೆ. ಆಗೆಲ್ಲ ಕೇಳಿ ಬರದ ಆರೋಪ ಈಗ ಮಾಡಲಾಗ್ತಿದೆ. ಸಿಎಂ ಭಗವಂತ್ ಮಾನ್ ಈ ವಿಚಾರದಲ್ಲಿ ರಾಜಕೀಯ ಮಾಡ್ತಿದ್ದಾರೆ. ಭಗವಂತ್ ಮಾನ್ ಮತ್ತು ಅರವಿಂದ್ ಕೇಜ್ರಿವಾಲ್ ಫೋಟೋಗಳು ಸ್ತಬ್ಧಚಿತ್ರಗಳಲ್ಲಿ ಹಾಕಲು ಅವಕಾಶ ನೀಡುವಂತೆ ಒತ್ತಾಯಿಸಿರುವುದೇ ಅದು ತಿರಸ್ಕೃತಗೊಳ್ಳಲು ಕಾರಣ. ಗಣರಾಜ್ಯೋತ್ಸವ ಮೆರವಣಿಗೆ ಯಾರದ್ದೋ ಜಾಹಿರಾತಿಗಾಗಿ ಮಾಡುತ್ತಿಲ್ಲ ಎಂದು ಸುನೀಲ್ ಜಾಖರ್ ಕಿಡಿಕಾರಿದ್ದಾರೆ.

ಇದನ್ನೂ ಓದಿ : ರಾಮಮಂದಿರ ಉದ್ಘಾಟನೆಗೆ ಆಹ್ವಾನ: ‘ಕೈ’ ನಾಯಕರ ಭಿನ್ನ ಹೇಳಿಕೆ, ಕೇರಳ ಕಾಂಗ್ರೆಸ್‌ನಲ್ಲಿ ಗೊಂದಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...