Homeಮುಖಪುಟಗಣರಾಜ್ಯೋತ್ಸವ ಟ್ಯಾಬ್ಲೊ: ತಮಿಳುನಾಡಿಗೂ ನಿರಾಕರಣೆ; ಸ್ವಾತಂತ್ಯ್ರ ಹೋರಾಟಗಾರನನ್ನು ‘ವ್ಯಾಪಾರಿ’ ಎಂದು ಕರೆದ ಒಕ್ಕೂಟ ಸರ್ಕಾರ

ಗಣರಾಜ್ಯೋತ್ಸವ ಟ್ಯಾಬ್ಲೊ: ತಮಿಳುನಾಡಿಗೂ ನಿರಾಕರಣೆ; ಸ್ವಾತಂತ್ಯ್ರ ಹೋರಾಟಗಾರನನ್ನು ‘ವ್ಯಾಪಾರಿ’ ಎಂದು ಕರೆದ ಒಕ್ಕೂಟ ಸರ್ಕಾರ

ಟ್ಯಾಬ್ಲೊಗೆ ತಮಿಳುನಾಡು ಪ್ರಸ್ತಾಪಿಸಿದ ವ್ಯಕ್ತಿಗಳು ಪ್ರಸಿದ್ಧ ಸ್ವಾತಂತ್ಯ್ರ ಹೋರಾಟಗಾರರಲ್ಲ ಎಂದು ತಜ್ಞರ ಸಮಿತಿ ಹೇಳಿದೆ

- Advertisement -
- Advertisement -

ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ಗಾಗಿ ತಮಿಳುನಾಡಿನ ಟ್ಯಾಬ್ಲೊ ಪ್ರಸ್ತಾವನೆಯನ್ನು ಒಕ್ಕೂಟ ಸರ್ಕಾರವು ಸೋಮವಾರ ತಿರಸ್ಕರಿಸಿದೆ. ಇದು ರಾಜ್ಯದಲ್ಲಿ ವ್ಯಾಪಕ ಆಕ್ರೋಶವನ್ನು ಉಂಟು ಮಾಡಿದೆ. ಟ್ಯಾಬ್ಲೊದಲ್ಲಿ ‘ರಾಷ್ಟ್ರೀಯ ಖ್ಯಾತಿಯ ಕೆಲವು ಸ್ವಾತಂತ್ರ್ಯ ಹೋರಾಟಗಾರರ’ ಚಿತ್ರಣ ನೀಡುವಂತೆ ತಜ್ಞರ ಸಮಿತಿಯು ತಮಿಳುನಾಡು ಅಧಿಕಾರಿಗಳಿಗೆ ಸೂಚಿಸಿತ್ತು.

ತಮಿಳುನಾಡು ಪ್ರಸ್ತಾಪಿಸಿದ ಟ್ಯಾಬ್ಲೋದಲ್ಲಿ ಸುಬ್ರಹ್ಮಣ್ಯ ಭಾರತಿ, ವಿ.ಒ. ಚಿದಂಬರನಾರ್‌‌, ರಾಣಿ ವೇಲು ನಾಚಿಯಾರ್, ಮರುತು ಪಾಂಡಿಯರ್‌ ಸೇರಿದಂತೆ ಹಲವು ಪ್ರಸಿದ್ದ ಸ್ವಾತಂತ್ಯ್ರ ಹೋರಾಟಗಾರ ಚಿತ್ರಣವಿತ್ತು. ಒಕ್ಕೂಟ ಸರ್ಕಾರವು ಇತ್ತೀಚೆಗೆ ಕೇರಳ ಮತ್ತು ಪಶ್ಚಿಮ ಬಂಗಾಳದ ಟ್ಯಾಬ್ಲೊಗಳನ್ನೂ ಪರೇಡ್‌ನಲ್ಲಿ ಭಾಗವಹಿಸುವುದನ್ನು ನಿರಾಕರಿಸಿತ್ತು.

ಇದನ್ನೂ ಓದಿ:ನಾರಾಯಣ ಗುರು ಸ್ತಬ್ಧಚಿತ್ರ ಪ್ರದರ್ಶನಕ್ಕೆ ನಿರಾಕರಣೆ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಒಕ್ಕೂಟ ಸರ್ಕಾರವು ಟ್ಯಾಬ್ಲೊ ಪ್ರಸ್ತಾವನೆಯನ್ನು ನಿರಾಕರಿಸಿರುವುದಕ್ಕಾಗಿ ತಮ್ಮ ತೀವ್ರ ನಿರಾಶೆಯನ್ನು ವ್ಯಕ್ತಪಡಿಸಿದ್ದಾರೆ. ಪರೇಡ್‌ನಲ್ಲಿ ರಾಜ್ಯದ ಸ್ವಾತಂತ್ರ್ಯ ಹೋರಾಟಗಾರರನ್ನು ಪ್ರದರ್ಶಿಸುವ ತಮಿಳುನಾಡಿನ ಟ್ಯಾಬ್ಲೊವನ್ನು ಸೇರಿಸಲು ಪ್ರಧಾನಿ ನರೇಂದ್ರ ಮೋದಿ ತಕ್ಷಣವೇ ಮಧ್ಯಸ್ಥಿಕೆ ವಹಿಸಬೇಕು ಎಂದು ಅವರು ಕೋರಿದ್ದಾರೆ.

“ಟ್ಯಾಬ್ಲೊವನ್ನು ಹೊರಗಿಡುವುದರಿಂದ ತಮಿಳುನಾಡಿನ ಜನರ ಭಾವನೆಗಳು ಮತ್ತು ದೇಶಭಕ್ತಿಯ ಭಾವನೆಗಳನ್ನು ಆಳವಾಗಿ ಘಾಸಿಗೊಳಿಸುತ್ತದೆ. ಇದು ತಮಿಳುನಾಡು ರಾಜ್ಯ ಮತ್ತು ಅಲ್ಲಿನ ಜನತೆಗೆ ತೀವ್ರ ಕಳವಳಕಾರಿ ವಿಷಯವಾಗಿದೆ” ಎಂದು ಮುಖ್ಯಮಂತ್ರಿಗಳು ಪ್ರಧಾನಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ನಾಲ್ಕನೇ ಸುತ್ತಿನ ಸಭೆಗೆ ತಮಿಳುನಾಡಿಗೆ ಕರೆ ನೀಡಲಾಗಿಲ್ಲ ಮತ್ತು ಶಾರ್ಟ್‌ಲಿಸ್ಟ್ ಮಾಡುವಾಗ ರಾಜ್ಯವನ್ನು ಹೊರಗಿಡಲಾಗಿದೆ ಎಂದು ತಿಳಿಸಲಾಗಿದೆ ಎಂದು ಸ್ಟಾಲಿನ್ ಹೇಳಿದ್ದಾರೆ. ಈ ಹಿಂದಿನ ಡಿಎಂಕೆ ಆಡಳಿತದಲ್ಲಿಯೂ ಸಹ ತಮಿಳುನಾಡಿಗೆ ಅವಕಾಶ ನಿರಾಕರಿಸಲಾಗಿತ್ತು, ಆದರೆ ನಂತರ ಮಾಹಿತಿ ಸಚಿವ ಪರಿತಿ ಇಳಮವಝುತಿ ಒಕ್ಕೂಟ ಸರ್ಕಾರದಕ್ಕೆ ಪತ್ರ ಬರೆದ ನಂತರ ರಾಜ್ಯವನ್ನು ಸೇರಿಸಲಾಗಿತ್ತು.

ಇದನ್ನೂ ಓದಿ:ಸತತ 3 ನೇ ಬಾರಿ ಗಣರಾಜ್ಯೋತ್ಸವ ಪರೇಡ್‌ನಿಂದ ಕೇರಳ ಹೊರಕ್ಕೆ: ನಾರಾಯಣ ಗುರು ಸ್ತಬ್ಧಚಿತ್ರ ಪ್ರದರ್ಶನಕ್ಕೆ ಕೇಂದ್ರದ ನಿರಾಕರಣೆ

ವಿ.ಒ. ಚಿದಂಬರನಾರ್‌‌ ಅವರನ್ನು ಉದ್ಯಮಿ ಎಂದು ಸಮಿತಿ ಸದಸ್ಯರು

“ರಕ್ಷಣಾ ಸಚಿವಾಲಯವು ‘ಭಾರತ@75 – ಸ್ವಾತಂತ್ರ್ಯ ಹೋರಾಟ’, ‘ಚಿಂತನೆಗಳು @ 75’, ‘ಸಾಧನೆಗಳು @ 75’, ‘ಕ್ರಮಗಳು @ 75’, ಮತ್ತು ‘ಪರಿಹಾರಗಳು @ 75’ ಎಂಬ ಥೀಮ್‌‌ನ ಚಿತ್ರಣಗಳನ್ನು ಪರೇಡ್‌ಗಾಗಿ ಪ್ರಸ್ತಾಪಿಸಿದೆ. ತಮಿಳುನಾಡಿನ ಹೆಸರಾಂತ ಸ್ವಾತಂತ್ರ್ಯ ಹೋರಾಟಗಾರರನ್ನು ಚಿತ್ರಿಸುವ ‘ಸ್ವಾತಂತ್ರ್ಯ ಸಂಗ್ರಾಮದಲ್ಲಿ ತಮಿಳುನಾಡು’ ಎಂಬ ಥೀಮ್ ಅಲ್ಲಿ ತಮಿಳುನಾಡು ಟ್ಯಾಬ್ಲೊ ಪ್ರಸ್ತಾವನೆ ಸಲ್ಲಿಸಿತ್ತು” ಎಂದು ಸ್ಟಾಲಿನ್ ಹೇಳಿದ್ದಾರೆ.

ತಜ್ಞರ ಸಮಿತಿಯ ಮುಂದೆ ರಾಜ್ಯದ ಪ್ರತಿನಿಧಿಗಳು ಮೂರು ಬಾರಿ ಹಾಜರಾಗಿದ್ದರು. ಮೊದಲ ಸಭೆಯಲ್ಲಿ, ತಜ್ಞರ ಸಮಿತಿಯು ತಮಿಳುನಾಡಿನ ಥೀಮ್‌‌ ಬಗ್ಗೆ ತೃಪ್ತಿ ವ್ಯಕ್ತಪಡಿಸಿತ್ತು. ಟ್ಯಾಬ್ಲೊ ವಿನ್ಯಾಸದ ಮುಂಭಾಗದಲ್ಲಿ ಬ್ರಿಟೀಷ್ ಆಡಳಿತದ ಸಮಯದಲ್ಲಿ ತಮಿಳುನಾಡಿನ ಸ್ವಾತಂತ್ರ್ಯ ಹೋರಾಟಗಾರರನ್ನು ಚಿತ್ರಿಸಲಾಗಿತ್ತು ಮತ್ತು ಈಸ್ಟ್ ಇಂಡಿಯಾ ಕಂಪನಿಯ ಅವಧಿಯಲ್ಲಿನ ಹೋರಾಟಗಾರರನ್ನು ಟ್ಯಾಬ್ಲೋದ ಹಿಂಭಾಗದಲ್ಲಿ ಚಿತ್ರಿಸಲಾಗಿತ್ತು.

ಟ್ಯಾಬ್ಲೊ ಆಯ್ಕೆಯ ಚರ್ಚೆಯ ಸಂದರ್ಭದಲ್ಲಿ, ಕೇಂದ್ರ ಸಮಿತಿಯ ಸದಸ್ಯರು ವಿ.ಒ. ಚಿದಂಬರನಾರ್ ಅವರನ್ನು ‘ಉದ್ಯಮಿ’ ಎಂದು ಬಣ್ಣಿಸಿದ್ದಾರೆ ಮತ್ತು ಅವರಿಗೆ ಯಾಕೆ ಪ್ರಾಮುಖ್ಯತೆ ನೀಡಬೇಕು ಎಂದು ಕೇಳಿದ್ದಾರೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ TNIE ವರದಿ ಮಾಡಿದೆ.

ಇದನ್ನೂ ಓದಿ:ಸ್ವಾಮಿ ನಾರಾಯಣ ಗುರುಗಳು ಮತ್ತು ಮುಸ್ಲಿಮರು.. – ಇಸ್ಮತ್ ಪಜೀರ್

ವೇಲು ನಾಚಿಯಾರ್ ಅವರು ಝಾನ್ಸಿ ರಾಣಿಯಂತೆ ಯಾಕೆ ಕಾಣುತ್ತಾರೆ ಎಂದು ಸಮಿತಿ ಸದಸ್ಯರು ಕೇಳಿದ್ದು, ಅವರ ಭಾವಚಿತ್ರಕ್ಕೆ ತಮಿಳು ಉಡುಗೆಯನ್ನು ತೊಡಿಸಬೇಕು ಎಂದು ಹೇಳಿದ್ದಾಗಿ ವರದಿಯಾಗಿದೆ.

ಸುಬ್ರಹ್ಮಣ್ಯ ಭಾರತಿ, ವಿ.ಒ. ಚಿದಂಬರನಾರ್‌‌ ಮತ್ತು ರಾಣಿ ವೇಲು ನಾಚಿಯಾರ್ ಪ್ರಸಿದ್ಧ ಸ್ವಾತಂತ್ಯ್ರ ಹೋರಾಟಗಾರರಲ್ಲ ಎಂದು ತಜ್ಞರ ಸಮಿತಿ ಹೇಳಿದೆ ಎಂದು TNIE ವರದಿ ಮಾಡಿದೆ. ಈ ಟ್ಯಾಬ್ಲೋದಲ್ಲಿ ‘ರಾಷ್ಟ್ರೀಯ ಖ್ಯಾತಿಯ ಸ್ವಾತಂತ್ರ್ಯ ಹೋರಾಟಗಾರನ್ನು ಚಿತ್ರಿಸಲು ತಜ್ಞರ ಸಮಿತಿಯು ತಮಿಳುನಾಡಿಗೆ ಕೇಳಿದೆ.

ಸುಬ್ರಮಣ್ಯ ಭಾರತಿ

ಸುಬ್ರಮಣ್ಯ ಭಾರತಿ, ತಮಿಳು ಬರಹಗಾರ, ಕವಿ, ಪತ್ರಕರ್ತ, ಭಾರತೀಯ ಸ್ವಾತಂತ್ರ್ಯ ಹೋರಾಟಗಾರ, ಸಮಾಜ ಸುಧಾರಕರಗಿದ್ದಾರೆ. ಅವರು ‘ಮಹಾಕವಿ ಭಾರತಿ’ ಎಂದು ಜನಪ್ರಿಯವಾಗಿ ಕರೆಯಲ್ಪಡುತ್ತಾರೆ. ಆಧುನಿಕ ತಮಿಳು ಕಾವ್ಯದ ಪ್ರವರ್ತಕರಾಗಿದ್ದು, ಸಾರ್ವಕಾಲಿಕ ಶ್ರೇಷ್ಠ ತಮಿಳು ಸಾಹಿತ್ಯಿಕ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದಾರೆ.

ಸುಬ್ರಮಣ್ಯ ಭಾರತಿ

ಇದನ್ನೂ ಓದಿ:ಗಣರಾಜ್ಯೋತ್ಸವದ ಕರ್ನಾಟಕ ಟ್ಯಾಬ್ಲೊದಲ್ಲಿ ಕೇಸರಿ ಧ್ವಜ!: ಕನ್ನಡವಿಲ್ಲದ್ದಕ್ಕೆ ಕನ್ನಡಿಗರ ಕಿಡಿ

ವಿ.ಒ. ಚಿದಂಬರನಾರ್‌

ವಿ.ಒ. ಚಿದಂಬರನಾರ್‌ ಅವರನ್ನು ‘ತಮಿಳು ಹೆಲ್ಮ್ಸ್‌ಮನ್’ ಎಂದೂ ಕರೆಯುತ್ತಾರೆ. ಅವರು ಸ್ವಾತಂತ್ರ್ಯ ಹೋರಾಟಗಾರರಗಿದ್ದು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಮಾಜಿ ನಾಯಕರಾಗಿದ್ದಾರೆ.

V.O. Chidambaram Pillai-Tamil Helmsman – Press Information Bureau
ವಿ.ಒ. ಚಿದಂಬರನಾರ್‌

ರಾಣಿ ವೇಲು ನಾಚಿಯಾರ್

ರಾಣಿ ವೇಲು ನಾಚಿಯಾರ್ ಅವರು 1780–1790ರಲ್ಲಿ ಶಿವಗಂಗಾ ಎಸ್ಟೇಟ್‌ನ ರಾಣಿಯಾಗಿದ್ದರು. ಭಾರತದಲ್ಲಿ ಈಸ್ಟ್ ಇಂಡಿಯಾ ಕಂಪನಿಯೊಂದಿಗೆ ಯುದ್ಧ ಮಾಡಿದ ಮೊದಲ ಭಾರತೀಯ ರಾಣಿಯಾಗಿದ್ದಾರೆ. ಅವರನ್ನು ತಮಿಳರು ‘ವೀರಮಂಗೈ’ ಎಂದೂ ಕರೆಯುತ್ತಾರೆ.

Velu Nachiyar - Wikipedia
ರಾಣಿ ವೇಲು ನಾಚಿಯಾರ್

ಮರುದು ಪಾಂಡಿಯರ್‌

ಮರುದು ಪಾಂಡಿಯರ್‌ಗಳು 18 ನೇ ಶತಮಾನದ ಅಂತ್ಯದ ವೇಳೆಯ ತಮಿಳುನಾಡಿನ ಶಿವಗಂಗೈನ ಡೈಯಾರ್ಕಲ್ ರಾಜರಾಗಿದ್ದರು. ಅವರು ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಹೋರಾಡಿದ್ದರು. ಇವರನ್ನು ಈಸ್ಟ್‌ ಇಂಡಿಯಾ ಕಂಪೆನಿಯು ಗಲ್ಲಿಗೇರಿಸಿತ್ತು.

Indian Backdrop on Twitter: "The English colonel James Welsh said. "It was  chinna Maruthu who first taught me to throw the spear and hurl the collery  stick (valari), a weapon which is

ಇದನ್ನೂ ಓದಿ:ತಮಿಳುನಾಡು: 50 ಸಾವಿರ ಕೇಂದ್ರಗಳಲ್ಲಿ 18 ನೇ ಮೆಗಾ ಲಸಿಕಾ ಶಿಬಿರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...