Homeಮುಖಪುಟಗಣರಾಜ್ಯೋತ್ಸವ ಟ್ಯಾಬ್ಲೊ: ತಮಿಳುನಾಡಿಗೂ ನಿರಾಕರಣೆ; ಸ್ವಾತಂತ್ಯ್ರ ಹೋರಾಟಗಾರನನ್ನು ‘ವ್ಯಾಪಾರಿ’ ಎಂದು ಕರೆದ ಒಕ್ಕೂಟ ಸರ್ಕಾರ

ಗಣರಾಜ್ಯೋತ್ಸವ ಟ್ಯಾಬ್ಲೊ: ತಮಿಳುನಾಡಿಗೂ ನಿರಾಕರಣೆ; ಸ್ವಾತಂತ್ಯ್ರ ಹೋರಾಟಗಾರನನ್ನು ‘ವ್ಯಾಪಾರಿ’ ಎಂದು ಕರೆದ ಒಕ್ಕೂಟ ಸರ್ಕಾರ

ಟ್ಯಾಬ್ಲೊಗೆ ತಮಿಳುನಾಡು ಪ್ರಸ್ತಾಪಿಸಿದ ವ್ಯಕ್ತಿಗಳು ಪ್ರಸಿದ್ಧ ಸ್ವಾತಂತ್ಯ್ರ ಹೋರಾಟಗಾರರಲ್ಲ ಎಂದು ತಜ್ಞರ ಸಮಿತಿ ಹೇಳಿದೆ

- Advertisement -
- Advertisement -

ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ಗಾಗಿ ತಮಿಳುನಾಡಿನ ಟ್ಯಾಬ್ಲೊ ಪ್ರಸ್ತಾವನೆಯನ್ನು ಒಕ್ಕೂಟ ಸರ್ಕಾರವು ಸೋಮವಾರ ತಿರಸ್ಕರಿಸಿದೆ. ಇದು ರಾಜ್ಯದಲ್ಲಿ ವ್ಯಾಪಕ ಆಕ್ರೋಶವನ್ನು ಉಂಟು ಮಾಡಿದೆ. ಟ್ಯಾಬ್ಲೊದಲ್ಲಿ ‘ರಾಷ್ಟ್ರೀಯ ಖ್ಯಾತಿಯ ಕೆಲವು ಸ್ವಾತಂತ್ರ್ಯ ಹೋರಾಟಗಾರರ’ ಚಿತ್ರಣ ನೀಡುವಂತೆ ತಜ್ಞರ ಸಮಿತಿಯು ತಮಿಳುನಾಡು ಅಧಿಕಾರಿಗಳಿಗೆ ಸೂಚಿಸಿತ್ತು.

ತಮಿಳುನಾಡು ಪ್ರಸ್ತಾಪಿಸಿದ ಟ್ಯಾಬ್ಲೋದಲ್ಲಿ ಸುಬ್ರಹ್ಮಣ್ಯ ಭಾರತಿ, ವಿ.ಒ. ಚಿದಂಬರನಾರ್‌‌, ರಾಣಿ ವೇಲು ನಾಚಿಯಾರ್, ಮರುತು ಪಾಂಡಿಯರ್‌ ಸೇರಿದಂತೆ ಹಲವು ಪ್ರಸಿದ್ದ ಸ್ವಾತಂತ್ಯ್ರ ಹೋರಾಟಗಾರ ಚಿತ್ರಣವಿತ್ತು. ಒಕ್ಕೂಟ ಸರ್ಕಾರವು ಇತ್ತೀಚೆಗೆ ಕೇರಳ ಮತ್ತು ಪಶ್ಚಿಮ ಬಂಗಾಳದ ಟ್ಯಾಬ್ಲೊಗಳನ್ನೂ ಪರೇಡ್‌ನಲ್ಲಿ ಭಾಗವಹಿಸುವುದನ್ನು ನಿರಾಕರಿಸಿತ್ತು.

ಇದನ್ನೂ ಓದಿ:ನಾರಾಯಣ ಗುರು ಸ್ತಬ್ಧಚಿತ್ರ ಪ್ರದರ್ಶನಕ್ಕೆ ನಿರಾಕರಣೆ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಒಕ್ಕೂಟ ಸರ್ಕಾರವು ಟ್ಯಾಬ್ಲೊ ಪ್ರಸ್ತಾವನೆಯನ್ನು ನಿರಾಕರಿಸಿರುವುದಕ್ಕಾಗಿ ತಮ್ಮ ತೀವ್ರ ನಿರಾಶೆಯನ್ನು ವ್ಯಕ್ತಪಡಿಸಿದ್ದಾರೆ. ಪರೇಡ್‌ನಲ್ಲಿ ರಾಜ್ಯದ ಸ್ವಾತಂತ್ರ್ಯ ಹೋರಾಟಗಾರರನ್ನು ಪ್ರದರ್ಶಿಸುವ ತಮಿಳುನಾಡಿನ ಟ್ಯಾಬ್ಲೊವನ್ನು ಸೇರಿಸಲು ಪ್ರಧಾನಿ ನರೇಂದ್ರ ಮೋದಿ ತಕ್ಷಣವೇ ಮಧ್ಯಸ್ಥಿಕೆ ವಹಿಸಬೇಕು ಎಂದು ಅವರು ಕೋರಿದ್ದಾರೆ.

“ಟ್ಯಾಬ್ಲೊವನ್ನು ಹೊರಗಿಡುವುದರಿಂದ ತಮಿಳುನಾಡಿನ ಜನರ ಭಾವನೆಗಳು ಮತ್ತು ದೇಶಭಕ್ತಿಯ ಭಾವನೆಗಳನ್ನು ಆಳವಾಗಿ ಘಾಸಿಗೊಳಿಸುತ್ತದೆ. ಇದು ತಮಿಳುನಾಡು ರಾಜ್ಯ ಮತ್ತು ಅಲ್ಲಿನ ಜನತೆಗೆ ತೀವ್ರ ಕಳವಳಕಾರಿ ವಿಷಯವಾಗಿದೆ” ಎಂದು ಮುಖ್ಯಮಂತ್ರಿಗಳು ಪ್ರಧಾನಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ನಾಲ್ಕನೇ ಸುತ್ತಿನ ಸಭೆಗೆ ತಮಿಳುನಾಡಿಗೆ ಕರೆ ನೀಡಲಾಗಿಲ್ಲ ಮತ್ತು ಶಾರ್ಟ್‌ಲಿಸ್ಟ್ ಮಾಡುವಾಗ ರಾಜ್ಯವನ್ನು ಹೊರಗಿಡಲಾಗಿದೆ ಎಂದು ತಿಳಿಸಲಾಗಿದೆ ಎಂದು ಸ್ಟಾಲಿನ್ ಹೇಳಿದ್ದಾರೆ. ಈ ಹಿಂದಿನ ಡಿಎಂಕೆ ಆಡಳಿತದಲ್ಲಿಯೂ ಸಹ ತಮಿಳುನಾಡಿಗೆ ಅವಕಾಶ ನಿರಾಕರಿಸಲಾಗಿತ್ತು, ಆದರೆ ನಂತರ ಮಾಹಿತಿ ಸಚಿವ ಪರಿತಿ ಇಳಮವಝುತಿ ಒಕ್ಕೂಟ ಸರ್ಕಾರದಕ್ಕೆ ಪತ್ರ ಬರೆದ ನಂತರ ರಾಜ್ಯವನ್ನು ಸೇರಿಸಲಾಗಿತ್ತು.

ಇದನ್ನೂ ಓದಿ:ಸತತ 3 ನೇ ಬಾರಿ ಗಣರಾಜ್ಯೋತ್ಸವ ಪರೇಡ್‌ನಿಂದ ಕೇರಳ ಹೊರಕ್ಕೆ: ನಾರಾಯಣ ಗುರು ಸ್ತಬ್ಧಚಿತ್ರ ಪ್ರದರ್ಶನಕ್ಕೆ ಕೇಂದ್ರದ ನಿರಾಕರಣೆ

ವಿ.ಒ. ಚಿದಂಬರನಾರ್‌‌ ಅವರನ್ನು ಉದ್ಯಮಿ ಎಂದು ಸಮಿತಿ ಸದಸ್ಯರು

“ರಕ್ಷಣಾ ಸಚಿವಾಲಯವು ‘ಭಾರತ@75 – ಸ್ವಾತಂತ್ರ್ಯ ಹೋರಾಟ’, ‘ಚಿಂತನೆಗಳು @ 75’, ‘ಸಾಧನೆಗಳು @ 75’, ‘ಕ್ರಮಗಳು @ 75’, ಮತ್ತು ‘ಪರಿಹಾರಗಳು @ 75’ ಎಂಬ ಥೀಮ್‌‌ನ ಚಿತ್ರಣಗಳನ್ನು ಪರೇಡ್‌ಗಾಗಿ ಪ್ರಸ್ತಾಪಿಸಿದೆ. ತಮಿಳುನಾಡಿನ ಹೆಸರಾಂತ ಸ್ವಾತಂತ್ರ್ಯ ಹೋರಾಟಗಾರರನ್ನು ಚಿತ್ರಿಸುವ ‘ಸ್ವಾತಂತ್ರ್ಯ ಸಂಗ್ರಾಮದಲ್ಲಿ ತಮಿಳುನಾಡು’ ಎಂಬ ಥೀಮ್ ಅಲ್ಲಿ ತಮಿಳುನಾಡು ಟ್ಯಾಬ್ಲೊ ಪ್ರಸ್ತಾವನೆ ಸಲ್ಲಿಸಿತ್ತು” ಎಂದು ಸ್ಟಾಲಿನ್ ಹೇಳಿದ್ದಾರೆ.

ತಜ್ಞರ ಸಮಿತಿಯ ಮುಂದೆ ರಾಜ್ಯದ ಪ್ರತಿನಿಧಿಗಳು ಮೂರು ಬಾರಿ ಹಾಜರಾಗಿದ್ದರು. ಮೊದಲ ಸಭೆಯಲ್ಲಿ, ತಜ್ಞರ ಸಮಿತಿಯು ತಮಿಳುನಾಡಿನ ಥೀಮ್‌‌ ಬಗ್ಗೆ ತೃಪ್ತಿ ವ್ಯಕ್ತಪಡಿಸಿತ್ತು. ಟ್ಯಾಬ್ಲೊ ವಿನ್ಯಾಸದ ಮುಂಭಾಗದಲ್ಲಿ ಬ್ರಿಟೀಷ್ ಆಡಳಿತದ ಸಮಯದಲ್ಲಿ ತಮಿಳುನಾಡಿನ ಸ್ವಾತಂತ್ರ್ಯ ಹೋರಾಟಗಾರರನ್ನು ಚಿತ್ರಿಸಲಾಗಿತ್ತು ಮತ್ತು ಈಸ್ಟ್ ಇಂಡಿಯಾ ಕಂಪನಿಯ ಅವಧಿಯಲ್ಲಿನ ಹೋರಾಟಗಾರರನ್ನು ಟ್ಯಾಬ್ಲೋದ ಹಿಂಭಾಗದಲ್ಲಿ ಚಿತ್ರಿಸಲಾಗಿತ್ತು.

ಟ್ಯಾಬ್ಲೊ ಆಯ್ಕೆಯ ಚರ್ಚೆಯ ಸಂದರ್ಭದಲ್ಲಿ, ಕೇಂದ್ರ ಸಮಿತಿಯ ಸದಸ್ಯರು ವಿ.ಒ. ಚಿದಂಬರನಾರ್ ಅವರನ್ನು ‘ಉದ್ಯಮಿ’ ಎಂದು ಬಣ್ಣಿಸಿದ್ದಾರೆ ಮತ್ತು ಅವರಿಗೆ ಯಾಕೆ ಪ್ರಾಮುಖ್ಯತೆ ನೀಡಬೇಕು ಎಂದು ಕೇಳಿದ್ದಾರೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ TNIE ವರದಿ ಮಾಡಿದೆ.

ಇದನ್ನೂ ಓದಿ:ಸ್ವಾಮಿ ನಾರಾಯಣ ಗುರುಗಳು ಮತ್ತು ಮುಸ್ಲಿಮರು.. – ಇಸ್ಮತ್ ಪಜೀರ್

ವೇಲು ನಾಚಿಯಾರ್ ಅವರು ಝಾನ್ಸಿ ರಾಣಿಯಂತೆ ಯಾಕೆ ಕಾಣುತ್ತಾರೆ ಎಂದು ಸಮಿತಿ ಸದಸ್ಯರು ಕೇಳಿದ್ದು, ಅವರ ಭಾವಚಿತ್ರಕ್ಕೆ ತಮಿಳು ಉಡುಗೆಯನ್ನು ತೊಡಿಸಬೇಕು ಎಂದು ಹೇಳಿದ್ದಾಗಿ ವರದಿಯಾಗಿದೆ.

ಸುಬ್ರಹ್ಮಣ್ಯ ಭಾರತಿ, ವಿ.ಒ. ಚಿದಂಬರನಾರ್‌‌ ಮತ್ತು ರಾಣಿ ವೇಲು ನಾಚಿಯಾರ್ ಪ್ರಸಿದ್ಧ ಸ್ವಾತಂತ್ಯ್ರ ಹೋರಾಟಗಾರರಲ್ಲ ಎಂದು ತಜ್ಞರ ಸಮಿತಿ ಹೇಳಿದೆ ಎಂದು TNIE ವರದಿ ಮಾಡಿದೆ. ಈ ಟ್ಯಾಬ್ಲೋದಲ್ಲಿ ‘ರಾಷ್ಟ್ರೀಯ ಖ್ಯಾತಿಯ ಸ್ವಾತಂತ್ರ್ಯ ಹೋರಾಟಗಾರನ್ನು ಚಿತ್ರಿಸಲು ತಜ್ಞರ ಸಮಿತಿಯು ತಮಿಳುನಾಡಿಗೆ ಕೇಳಿದೆ.

ಸುಬ್ರಮಣ್ಯ ಭಾರತಿ

ಸುಬ್ರಮಣ್ಯ ಭಾರತಿ, ತಮಿಳು ಬರಹಗಾರ, ಕವಿ, ಪತ್ರಕರ್ತ, ಭಾರತೀಯ ಸ್ವಾತಂತ್ರ್ಯ ಹೋರಾಟಗಾರ, ಸಮಾಜ ಸುಧಾರಕರಗಿದ್ದಾರೆ. ಅವರು ‘ಮಹಾಕವಿ ಭಾರತಿ’ ಎಂದು ಜನಪ್ರಿಯವಾಗಿ ಕರೆಯಲ್ಪಡುತ್ತಾರೆ. ಆಧುನಿಕ ತಮಿಳು ಕಾವ್ಯದ ಪ್ರವರ್ತಕರಾಗಿದ್ದು, ಸಾರ್ವಕಾಲಿಕ ಶ್ರೇಷ್ಠ ತಮಿಳು ಸಾಹಿತ್ಯಿಕ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದಾರೆ.

ಸುಬ್ರಮಣ್ಯ ಭಾರತಿ

ಇದನ್ನೂ ಓದಿ:ಗಣರಾಜ್ಯೋತ್ಸವದ ಕರ್ನಾಟಕ ಟ್ಯಾಬ್ಲೊದಲ್ಲಿ ಕೇಸರಿ ಧ್ವಜ!: ಕನ್ನಡವಿಲ್ಲದ್ದಕ್ಕೆ ಕನ್ನಡಿಗರ ಕಿಡಿ

ವಿ.ಒ. ಚಿದಂಬರನಾರ್‌

ವಿ.ಒ. ಚಿದಂಬರನಾರ್‌ ಅವರನ್ನು ‘ತಮಿಳು ಹೆಲ್ಮ್ಸ್‌ಮನ್’ ಎಂದೂ ಕರೆಯುತ್ತಾರೆ. ಅವರು ಸ್ವಾತಂತ್ರ್ಯ ಹೋರಾಟಗಾರರಗಿದ್ದು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಮಾಜಿ ನಾಯಕರಾಗಿದ್ದಾರೆ.

V.O. Chidambaram Pillai-Tamil Helmsman – Press Information Bureau
ವಿ.ಒ. ಚಿದಂಬರನಾರ್‌

ರಾಣಿ ವೇಲು ನಾಚಿಯಾರ್

ರಾಣಿ ವೇಲು ನಾಚಿಯಾರ್ ಅವರು 1780–1790ರಲ್ಲಿ ಶಿವಗಂಗಾ ಎಸ್ಟೇಟ್‌ನ ರಾಣಿಯಾಗಿದ್ದರು. ಭಾರತದಲ್ಲಿ ಈಸ್ಟ್ ಇಂಡಿಯಾ ಕಂಪನಿಯೊಂದಿಗೆ ಯುದ್ಧ ಮಾಡಿದ ಮೊದಲ ಭಾರತೀಯ ರಾಣಿಯಾಗಿದ್ದಾರೆ. ಅವರನ್ನು ತಮಿಳರು ‘ವೀರಮಂಗೈ’ ಎಂದೂ ಕರೆಯುತ್ತಾರೆ.

Velu Nachiyar - Wikipedia
ರಾಣಿ ವೇಲು ನಾಚಿಯಾರ್

ಮರುದು ಪಾಂಡಿಯರ್‌

ಮರುದು ಪಾಂಡಿಯರ್‌ಗಳು 18 ನೇ ಶತಮಾನದ ಅಂತ್ಯದ ವೇಳೆಯ ತಮಿಳುನಾಡಿನ ಶಿವಗಂಗೈನ ಡೈಯಾರ್ಕಲ್ ರಾಜರಾಗಿದ್ದರು. ಅವರು ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಹೋರಾಡಿದ್ದರು. ಇವರನ್ನು ಈಸ್ಟ್‌ ಇಂಡಿಯಾ ಕಂಪೆನಿಯು ಗಲ್ಲಿಗೇರಿಸಿತ್ತು.

Indian Backdrop on Twitter: "The English colonel James Welsh said. "It was  chinna Maruthu who first taught me to throw the spear and hurl the collery  stick (valari), a weapon which is

ಇದನ್ನೂ ಓದಿ:ತಮಿಳುನಾಡು: 50 ಸಾವಿರ ಕೇಂದ್ರಗಳಲ್ಲಿ 18 ನೇ ಮೆಗಾ ಲಸಿಕಾ ಶಿಬಿರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...