Homeಮುಖಪುಟಗಣರಾಜ್ಯೋತ್ಸವ ಟ್ಯಾಬ್ಲೊ: ತಮಿಳುನಾಡಿಗೂ ನಿರಾಕರಣೆ; ಸ್ವಾತಂತ್ಯ್ರ ಹೋರಾಟಗಾರನನ್ನು ‘ವ್ಯಾಪಾರಿ’ ಎಂದು ಕರೆದ ಒಕ್ಕೂಟ ಸರ್ಕಾರ

ಗಣರಾಜ್ಯೋತ್ಸವ ಟ್ಯಾಬ್ಲೊ: ತಮಿಳುನಾಡಿಗೂ ನಿರಾಕರಣೆ; ಸ್ವಾತಂತ್ಯ್ರ ಹೋರಾಟಗಾರನನ್ನು ‘ವ್ಯಾಪಾರಿ’ ಎಂದು ಕರೆದ ಒಕ್ಕೂಟ ಸರ್ಕಾರ

ಟ್ಯಾಬ್ಲೊಗೆ ತಮಿಳುನಾಡು ಪ್ರಸ್ತಾಪಿಸಿದ ವ್ಯಕ್ತಿಗಳು ಪ್ರಸಿದ್ಧ ಸ್ವಾತಂತ್ಯ್ರ ಹೋರಾಟಗಾರರಲ್ಲ ಎಂದು ತಜ್ಞರ ಸಮಿತಿ ಹೇಳಿದೆ

- Advertisement -
- Advertisement -

ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ಗಾಗಿ ತಮಿಳುನಾಡಿನ ಟ್ಯಾಬ್ಲೊ ಪ್ರಸ್ತಾವನೆಯನ್ನು ಒಕ್ಕೂಟ ಸರ್ಕಾರವು ಸೋಮವಾರ ತಿರಸ್ಕರಿಸಿದೆ. ಇದು ರಾಜ್ಯದಲ್ಲಿ ವ್ಯಾಪಕ ಆಕ್ರೋಶವನ್ನು ಉಂಟು ಮಾಡಿದೆ. ಟ್ಯಾಬ್ಲೊದಲ್ಲಿ ‘ರಾಷ್ಟ್ರೀಯ ಖ್ಯಾತಿಯ ಕೆಲವು ಸ್ವಾತಂತ್ರ್ಯ ಹೋರಾಟಗಾರರ’ ಚಿತ್ರಣ ನೀಡುವಂತೆ ತಜ್ಞರ ಸಮಿತಿಯು ತಮಿಳುನಾಡು ಅಧಿಕಾರಿಗಳಿಗೆ ಸೂಚಿಸಿತ್ತು.

ತಮಿಳುನಾಡು ಪ್ರಸ್ತಾಪಿಸಿದ ಟ್ಯಾಬ್ಲೋದಲ್ಲಿ ಸುಬ್ರಹ್ಮಣ್ಯ ಭಾರತಿ, ವಿ.ಒ. ಚಿದಂಬರನಾರ್‌‌, ರಾಣಿ ವೇಲು ನಾಚಿಯಾರ್, ಮರುತು ಪಾಂಡಿಯರ್‌ ಸೇರಿದಂತೆ ಹಲವು ಪ್ರಸಿದ್ದ ಸ್ವಾತಂತ್ಯ್ರ ಹೋರಾಟಗಾರ ಚಿತ್ರಣವಿತ್ತು. ಒಕ್ಕೂಟ ಸರ್ಕಾರವು ಇತ್ತೀಚೆಗೆ ಕೇರಳ ಮತ್ತು ಪಶ್ಚಿಮ ಬಂಗಾಳದ ಟ್ಯಾಬ್ಲೊಗಳನ್ನೂ ಪರೇಡ್‌ನಲ್ಲಿ ಭಾಗವಹಿಸುವುದನ್ನು ನಿರಾಕರಿಸಿತ್ತು.

ಇದನ್ನೂ ಓದಿ:ನಾರಾಯಣ ಗುರು ಸ್ತಬ್ಧಚಿತ್ರ ಪ್ರದರ್ಶನಕ್ಕೆ ನಿರಾಕರಣೆ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಒಕ್ಕೂಟ ಸರ್ಕಾರವು ಟ್ಯಾಬ್ಲೊ ಪ್ರಸ್ತಾವನೆಯನ್ನು ನಿರಾಕರಿಸಿರುವುದಕ್ಕಾಗಿ ತಮ್ಮ ತೀವ್ರ ನಿರಾಶೆಯನ್ನು ವ್ಯಕ್ತಪಡಿಸಿದ್ದಾರೆ. ಪರೇಡ್‌ನಲ್ಲಿ ರಾಜ್ಯದ ಸ್ವಾತಂತ್ರ್ಯ ಹೋರಾಟಗಾರರನ್ನು ಪ್ರದರ್ಶಿಸುವ ತಮಿಳುನಾಡಿನ ಟ್ಯಾಬ್ಲೊವನ್ನು ಸೇರಿಸಲು ಪ್ರಧಾನಿ ನರೇಂದ್ರ ಮೋದಿ ತಕ್ಷಣವೇ ಮಧ್ಯಸ್ಥಿಕೆ ವಹಿಸಬೇಕು ಎಂದು ಅವರು ಕೋರಿದ್ದಾರೆ.

“ಟ್ಯಾಬ್ಲೊವನ್ನು ಹೊರಗಿಡುವುದರಿಂದ ತಮಿಳುನಾಡಿನ ಜನರ ಭಾವನೆಗಳು ಮತ್ತು ದೇಶಭಕ್ತಿಯ ಭಾವನೆಗಳನ್ನು ಆಳವಾಗಿ ಘಾಸಿಗೊಳಿಸುತ್ತದೆ. ಇದು ತಮಿಳುನಾಡು ರಾಜ್ಯ ಮತ್ತು ಅಲ್ಲಿನ ಜನತೆಗೆ ತೀವ್ರ ಕಳವಳಕಾರಿ ವಿಷಯವಾಗಿದೆ” ಎಂದು ಮುಖ್ಯಮಂತ್ರಿಗಳು ಪ್ರಧಾನಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ನಾಲ್ಕನೇ ಸುತ್ತಿನ ಸಭೆಗೆ ತಮಿಳುನಾಡಿಗೆ ಕರೆ ನೀಡಲಾಗಿಲ್ಲ ಮತ್ತು ಶಾರ್ಟ್‌ಲಿಸ್ಟ್ ಮಾಡುವಾಗ ರಾಜ್ಯವನ್ನು ಹೊರಗಿಡಲಾಗಿದೆ ಎಂದು ತಿಳಿಸಲಾಗಿದೆ ಎಂದು ಸ್ಟಾಲಿನ್ ಹೇಳಿದ್ದಾರೆ. ಈ ಹಿಂದಿನ ಡಿಎಂಕೆ ಆಡಳಿತದಲ್ಲಿಯೂ ಸಹ ತಮಿಳುನಾಡಿಗೆ ಅವಕಾಶ ನಿರಾಕರಿಸಲಾಗಿತ್ತು, ಆದರೆ ನಂತರ ಮಾಹಿತಿ ಸಚಿವ ಪರಿತಿ ಇಳಮವಝುತಿ ಒಕ್ಕೂಟ ಸರ್ಕಾರದಕ್ಕೆ ಪತ್ರ ಬರೆದ ನಂತರ ರಾಜ್ಯವನ್ನು ಸೇರಿಸಲಾಗಿತ್ತು.

ಇದನ್ನೂ ಓದಿ:ಸತತ 3 ನೇ ಬಾರಿ ಗಣರಾಜ್ಯೋತ್ಸವ ಪರೇಡ್‌ನಿಂದ ಕೇರಳ ಹೊರಕ್ಕೆ: ನಾರಾಯಣ ಗುರು ಸ್ತಬ್ಧಚಿತ್ರ ಪ್ರದರ್ಶನಕ್ಕೆ ಕೇಂದ್ರದ ನಿರಾಕರಣೆ

ವಿ.ಒ. ಚಿದಂಬರನಾರ್‌‌ ಅವರನ್ನು ಉದ್ಯಮಿ ಎಂದು ಸಮಿತಿ ಸದಸ್ಯರು

“ರಕ್ಷಣಾ ಸಚಿವಾಲಯವು ‘ಭಾರತ@75 – ಸ್ವಾತಂತ್ರ್ಯ ಹೋರಾಟ’, ‘ಚಿಂತನೆಗಳು @ 75’, ‘ಸಾಧನೆಗಳು @ 75’, ‘ಕ್ರಮಗಳು @ 75’, ಮತ್ತು ‘ಪರಿಹಾರಗಳು @ 75’ ಎಂಬ ಥೀಮ್‌‌ನ ಚಿತ್ರಣಗಳನ್ನು ಪರೇಡ್‌ಗಾಗಿ ಪ್ರಸ್ತಾಪಿಸಿದೆ. ತಮಿಳುನಾಡಿನ ಹೆಸರಾಂತ ಸ್ವಾತಂತ್ರ್ಯ ಹೋರಾಟಗಾರರನ್ನು ಚಿತ್ರಿಸುವ ‘ಸ್ವಾತಂತ್ರ್ಯ ಸಂಗ್ರಾಮದಲ್ಲಿ ತಮಿಳುನಾಡು’ ಎಂಬ ಥೀಮ್ ಅಲ್ಲಿ ತಮಿಳುನಾಡು ಟ್ಯಾಬ್ಲೊ ಪ್ರಸ್ತಾವನೆ ಸಲ್ಲಿಸಿತ್ತು” ಎಂದು ಸ್ಟಾಲಿನ್ ಹೇಳಿದ್ದಾರೆ.

ತಜ್ಞರ ಸಮಿತಿಯ ಮುಂದೆ ರಾಜ್ಯದ ಪ್ರತಿನಿಧಿಗಳು ಮೂರು ಬಾರಿ ಹಾಜರಾಗಿದ್ದರು. ಮೊದಲ ಸಭೆಯಲ್ಲಿ, ತಜ್ಞರ ಸಮಿತಿಯು ತಮಿಳುನಾಡಿನ ಥೀಮ್‌‌ ಬಗ್ಗೆ ತೃಪ್ತಿ ವ್ಯಕ್ತಪಡಿಸಿತ್ತು. ಟ್ಯಾಬ್ಲೊ ವಿನ್ಯಾಸದ ಮುಂಭಾಗದಲ್ಲಿ ಬ್ರಿಟೀಷ್ ಆಡಳಿತದ ಸಮಯದಲ್ಲಿ ತಮಿಳುನಾಡಿನ ಸ್ವಾತಂತ್ರ್ಯ ಹೋರಾಟಗಾರರನ್ನು ಚಿತ್ರಿಸಲಾಗಿತ್ತು ಮತ್ತು ಈಸ್ಟ್ ಇಂಡಿಯಾ ಕಂಪನಿಯ ಅವಧಿಯಲ್ಲಿನ ಹೋರಾಟಗಾರರನ್ನು ಟ್ಯಾಬ್ಲೋದ ಹಿಂಭಾಗದಲ್ಲಿ ಚಿತ್ರಿಸಲಾಗಿತ್ತು.

ಟ್ಯಾಬ್ಲೊ ಆಯ್ಕೆಯ ಚರ್ಚೆಯ ಸಂದರ್ಭದಲ್ಲಿ, ಕೇಂದ್ರ ಸಮಿತಿಯ ಸದಸ್ಯರು ವಿ.ಒ. ಚಿದಂಬರನಾರ್ ಅವರನ್ನು ‘ಉದ್ಯಮಿ’ ಎಂದು ಬಣ್ಣಿಸಿದ್ದಾರೆ ಮತ್ತು ಅವರಿಗೆ ಯಾಕೆ ಪ್ರಾಮುಖ್ಯತೆ ನೀಡಬೇಕು ಎಂದು ಕೇಳಿದ್ದಾರೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ TNIE ವರದಿ ಮಾಡಿದೆ.

ಇದನ್ನೂ ಓದಿ:ಸ್ವಾಮಿ ನಾರಾಯಣ ಗುರುಗಳು ಮತ್ತು ಮುಸ್ಲಿಮರು.. – ಇಸ್ಮತ್ ಪಜೀರ್

ವೇಲು ನಾಚಿಯಾರ್ ಅವರು ಝಾನ್ಸಿ ರಾಣಿಯಂತೆ ಯಾಕೆ ಕಾಣುತ್ತಾರೆ ಎಂದು ಸಮಿತಿ ಸದಸ್ಯರು ಕೇಳಿದ್ದು, ಅವರ ಭಾವಚಿತ್ರಕ್ಕೆ ತಮಿಳು ಉಡುಗೆಯನ್ನು ತೊಡಿಸಬೇಕು ಎಂದು ಹೇಳಿದ್ದಾಗಿ ವರದಿಯಾಗಿದೆ.

ಸುಬ್ರಹ್ಮಣ್ಯ ಭಾರತಿ, ವಿ.ಒ. ಚಿದಂಬರನಾರ್‌‌ ಮತ್ತು ರಾಣಿ ವೇಲು ನಾಚಿಯಾರ್ ಪ್ರಸಿದ್ಧ ಸ್ವಾತಂತ್ಯ್ರ ಹೋರಾಟಗಾರರಲ್ಲ ಎಂದು ತಜ್ಞರ ಸಮಿತಿ ಹೇಳಿದೆ ಎಂದು TNIE ವರದಿ ಮಾಡಿದೆ. ಈ ಟ್ಯಾಬ್ಲೋದಲ್ಲಿ ‘ರಾಷ್ಟ್ರೀಯ ಖ್ಯಾತಿಯ ಸ್ವಾತಂತ್ರ್ಯ ಹೋರಾಟಗಾರನ್ನು ಚಿತ್ರಿಸಲು ತಜ್ಞರ ಸಮಿತಿಯು ತಮಿಳುನಾಡಿಗೆ ಕೇಳಿದೆ.

ಸುಬ್ರಮಣ್ಯ ಭಾರತಿ

ಸುಬ್ರಮಣ್ಯ ಭಾರತಿ, ತಮಿಳು ಬರಹಗಾರ, ಕವಿ, ಪತ್ರಕರ್ತ, ಭಾರತೀಯ ಸ್ವಾತಂತ್ರ್ಯ ಹೋರಾಟಗಾರ, ಸಮಾಜ ಸುಧಾರಕರಗಿದ್ದಾರೆ. ಅವರು ‘ಮಹಾಕವಿ ಭಾರತಿ’ ಎಂದು ಜನಪ್ರಿಯವಾಗಿ ಕರೆಯಲ್ಪಡುತ್ತಾರೆ. ಆಧುನಿಕ ತಮಿಳು ಕಾವ್ಯದ ಪ್ರವರ್ತಕರಾಗಿದ್ದು, ಸಾರ್ವಕಾಲಿಕ ಶ್ರೇಷ್ಠ ತಮಿಳು ಸಾಹಿತ್ಯಿಕ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದಾರೆ.

ಸುಬ್ರಮಣ್ಯ ಭಾರತಿ

ಇದನ್ನೂ ಓದಿ:ಗಣರಾಜ್ಯೋತ್ಸವದ ಕರ್ನಾಟಕ ಟ್ಯಾಬ್ಲೊದಲ್ಲಿ ಕೇಸರಿ ಧ್ವಜ!: ಕನ್ನಡವಿಲ್ಲದ್ದಕ್ಕೆ ಕನ್ನಡಿಗರ ಕಿಡಿ

ವಿ.ಒ. ಚಿದಂಬರನಾರ್‌

ವಿ.ಒ. ಚಿದಂಬರನಾರ್‌ ಅವರನ್ನು ‘ತಮಿಳು ಹೆಲ್ಮ್ಸ್‌ಮನ್’ ಎಂದೂ ಕರೆಯುತ್ತಾರೆ. ಅವರು ಸ್ವಾತಂತ್ರ್ಯ ಹೋರಾಟಗಾರರಗಿದ್ದು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಮಾಜಿ ನಾಯಕರಾಗಿದ್ದಾರೆ.

V.O. Chidambaram Pillai-Tamil Helmsman – Press Information Bureau
ವಿ.ಒ. ಚಿದಂಬರನಾರ್‌

ರಾಣಿ ವೇಲು ನಾಚಿಯಾರ್

ರಾಣಿ ವೇಲು ನಾಚಿಯಾರ್ ಅವರು 1780–1790ರಲ್ಲಿ ಶಿವಗಂಗಾ ಎಸ್ಟೇಟ್‌ನ ರಾಣಿಯಾಗಿದ್ದರು. ಭಾರತದಲ್ಲಿ ಈಸ್ಟ್ ಇಂಡಿಯಾ ಕಂಪನಿಯೊಂದಿಗೆ ಯುದ್ಧ ಮಾಡಿದ ಮೊದಲ ಭಾರತೀಯ ರಾಣಿಯಾಗಿದ್ದಾರೆ. ಅವರನ್ನು ತಮಿಳರು ‘ವೀರಮಂಗೈ’ ಎಂದೂ ಕರೆಯುತ್ತಾರೆ.

Velu Nachiyar - Wikipedia
ರಾಣಿ ವೇಲು ನಾಚಿಯಾರ್

ಮರುದು ಪಾಂಡಿಯರ್‌

ಮರುದು ಪಾಂಡಿಯರ್‌ಗಳು 18 ನೇ ಶತಮಾನದ ಅಂತ್ಯದ ವೇಳೆಯ ತಮಿಳುನಾಡಿನ ಶಿವಗಂಗೈನ ಡೈಯಾರ್ಕಲ್ ರಾಜರಾಗಿದ್ದರು. ಅವರು ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಹೋರಾಡಿದ್ದರು. ಇವರನ್ನು ಈಸ್ಟ್‌ ಇಂಡಿಯಾ ಕಂಪೆನಿಯು ಗಲ್ಲಿಗೇರಿಸಿತ್ತು.

Indian Backdrop on Twitter: "The English colonel James Welsh said. "It was  chinna Maruthu who first taught me to throw the spear and hurl the collery  stick (valari), a weapon which is

ಇದನ್ನೂ ಓದಿ:ತಮಿಳುನಾಡು: 50 ಸಾವಿರ ಕೇಂದ್ರಗಳಲ್ಲಿ 18 ನೇ ಮೆಗಾ ಲಸಿಕಾ ಶಿಬಿರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...