Homeಮುಖಪುಟಗಣರಾಜ್ಯೋತ್ಸವ ಟ್ಯಾಬ್ಲೊ: ತಮಿಳುನಾಡಿಗೂ ನಿರಾಕರಣೆ; ಸ್ವಾತಂತ್ಯ್ರ ಹೋರಾಟಗಾರನನ್ನು ‘ವ್ಯಾಪಾರಿ’ ಎಂದು ಕರೆದ ಒಕ್ಕೂಟ ಸರ್ಕಾರ

ಗಣರಾಜ್ಯೋತ್ಸವ ಟ್ಯಾಬ್ಲೊ: ತಮಿಳುನಾಡಿಗೂ ನಿರಾಕರಣೆ; ಸ್ವಾತಂತ್ಯ್ರ ಹೋರಾಟಗಾರನನ್ನು ‘ವ್ಯಾಪಾರಿ’ ಎಂದು ಕರೆದ ಒಕ್ಕೂಟ ಸರ್ಕಾರ

ಟ್ಯಾಬ್ಲೊಗೆ ತಮಿಳುನಾಡು ಪ್ರಸ್ತಾಪಿಸಿದ ವ್ಯಕ್ತಿಗಳು ಪ್ರಸಿದ್ಧ ಸ್ವಾತಂತ್ಯ್ರ ಹೋರಾಟಗಾರರಲ್ಲ ಎಂದು ತಜ್ಞರ ಸಮಿತಿ ಹೇಳಿದೆ

- Advertisement -
- Advertisement -

ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ಗಾಗಿ ತಮಿಳುನಾಡಿನ ಟ್ಯಾಬ್ಲೊ ಪ್ರಸ್ತಾವನೆಯನ್ನು ಒಕ್ಕೂಟ ಸರ್ಕಾರವು ಸೋಮವಾರ ತಿರಸ್ಕರಿಸಿದೆ. ಇದು ರಾಜ್ಯದಲ್ಲಿ ವ್ಯಾಪಕ ಆಕ್ರೋಶವನ್ನು ಉಂಟು ಮಾಡಿದೆ. ಟ್ಯಾಬ್ಲೊದಲ್ಲಿ ‘ರಾಷ್ಟ್ರೀಯ ಖ್ಯಾತಿಯ ಕೆಲವು ಸ್ವಾತಂತ್ರ್ಯ ಹೋರಾಟಗಾರರ’ ಚಿತ್ರಣ ನೀಡುವಂತೆ ತಜ್ಞರ ಸಮಿತಿಯು ತಮಿಳುನಾಡು ಅಧಿಕಾರಿಗಳಿಗೆ ಸೂಚಿಸಿತ್ತು.

ತಮಿಳುನಾಡು ಪ್ರಸ್ತಾಪಿಸಿದ ಟ್ಯಾಬ್ಲೋದಲ್ಲಿ ಸುಬ್ರಹ್ಮಣ್ಯ ಭಾರತಿ, ವಿ.ಒ. ಚಿದಂಬರನಾರ್‌‌, ರಾಣಿ ವೇಲು ನಾಚಿಯಾರ್, ಮರುತು ಪಾಂಡಿಯರ್‌ ಸೇರಿದಂತೆ ಹಲವು ಪ್ರಸಿದ್ದ ಸ್ವಾತಂತ್ಯ್ರ ಹೋರಾಟಗಾರ ಚಿತ್ರಣವಿತ್ತು. ಒಕ್ಕೂಟ ಸರ್ಕಾರವು ಇತ್ತೀಚೆಗೆ ಕೇರಳ ಮತ್ತು ಪಶ್ಚಿಮ ಬಂಗಾಳದ ಟ್ಯಾಬ್ಲೊಗಳನ್ನೂ ಪರೇಡ್‌ನಲ್ಲಿ ಭಾಗವಹಿಸುವುದನ್ನು ನಿರಾಕರಿಸಿತ್ತು.

ಇದನ್ನೂ ಓದಿ:ನಾರಾಯಣ ಗುರು ಸ್ತಬ್ಧಚಿತ್ರ ಪ್ರದರ್ಶನಕ್ಕೆ ನಿರಾಕರಣೆ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಒಕ್ಕೂಟ ಸರ್ಕಾರವು ಟ್ಯಾಬ್ಲೊ ಪ್ರಸ್ತಾವನೆಯನ್ನು ನಿರಾಕರಿಸಿರುವುದಕ್ಕಾಗಿ ತಮ್ಮ ತೀವ್ರ ನಿರಾಶೆಯನ್ನು ವ್ಯಕ್ತಪಡಿಸಿದ್ದಾರೆ. ಪರೇಡ್‌ನಲ್ಲಿ ರಾಜ್ಯದ ಸ್ವಾತಂತ್ರ್ಯ ಹೋರಾಟಗಾರರನ್ನು ಪ್ರದರ್ಶಿಸುವ ತಮಿಳುನಾಡಿನ ಟ್ಯಾಬ್ಲೊವನ್ನು ಸೇರಿಸಲು ಪ್ರಧಾನಿ ನರೇಂದ್ರ ಮೋದಿ ತಕ್ಷಣವೇ ಮಧ್ಯಸ್ಥಿಕೆ ವಹಿಸಬೇಕು ಎಂದು ಅವರು ಕೋರಿದ್ದಾರೆ.

“ಟ್ಯಾಬ್ಲೊವನ್ನು ಹೊರಗಿಡುವುದರಿಂದ ತಮಿಳುನಾಡಿನ ಜನರ ಭಾವನೆಗಳು ಮತ್ತು ದೇಶಭಕ್ತಿಯ ಭಾವನೆಗಳನ್ನು ಆಳವಾಗಿ ಘಾಸಿಗೊಳಿಸುತ್ತದೆ. ಇದು ತಮಿಳುನಾಡು ರಾಜ್ಯ ಮತ್ತು ಅಲ್ಲಿನ ಜನತೆಗೆ ತೀವ್ರ ಕಳವಳಕಾರಿ ವಿಷಯವಾಗಿದೆ” ಎಂದು ಮುಖ್ಯಮಂತ್ರಿಗಳು ಪ್ರಧಾನಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ನಾಲ್ಕನೇ ಸುತ್ತಿನ ಸಭೆಗೆ ತಮಿಳುನಾಡಿಗೆ ಕರೆ ನೀಡಲಾಗಿಲ್ಲ ಮತ್ತು ಶಾರ್ಟ್‌ಲಿಸ್ಟ್ ಮಾಡುವಾಗ ರಾಜ್ಯವನ್ನು ಹೊರಗಿಡಲಾಗಿದೆ ಎಂದು ತಿಳಿಸಲಾಗಿದೆ ಎಂದು ಸ್ಟಾಲಿನ್ ಹೇಳಿದ್ದಾರೆ. ಈ ಹಿಂದಿನ ಡಿಎಂಕೆ ಆಡಳಿತದಲ್ಲಿಯೂ ಸಹ ತಮಿಳುನಾಡಿಗೆ ಅವಕಾಶ ನಿರಾಕರಿಸಲಾಗಿತ್ತು, ಆದರೆ ನಂತರ ಮಾಹಿತಿ ಸಚಿವ ಪರಿತಿ ಇಳಮವಝುತಿ ಒಕ್ಕೂಟ ಸರ್ಕಾರದಕ್ಕೆ ಪತ್ರ ಬರೆದ ನಂತರ ರಾಜ್ಯವನ್ನು ಸೇರಿಸಲಾಗಿತ್ತು.

ಇದನ್ನೂ ಓದಿ:ಸತತ 3 ನೇ ಬಾರಿ ಗಣರಾಜ್ಯೋತ್ಸವ ಪರೇಡ್‌ನಿಂದ ಕೇರಳ ಹೊರಕ್ಕೆ: ನಾರಾಯಣ ಗುರು ಸ್ತಬ್ಧಚಿತ್ರ ಪ್ರದರ್ಶನಕ್ಕೆ ಕೇಂದ್ರದ ನಿರಾಕರಣೆ

ವಿ.ಒ. ಚಿದಂಬರನಾರ್‌‌ ಅವರನ್ನು ಉದ್ಯಮಿ ಎಂದು ಸಮಿತಿ ಸದಸ್ಯರು

“ರಕ್ಷಣಾ ಸಚಿವಾಲಯವು ‘ಭಾರತ@75 – ಸ್ವಾತಂತ್ರ್ಯ ಹೋರಾಟ’, ‘ಚಿಂತನೆಗಳು @ 75’, ‘ಸಾಧನೆಗಳು @ 75’, ‘ಕ್ರಮಗಳು @ 75’, ಮತ್ತು ‘ಪರಿಹಾರಗಳು @ 75’ ಎಂಬ ಥೀಮ್‌‌ನ ಚಿತ್ರಣಗಳನ್ನು ಪರೇಡ್‌ಗಾಗಿ ಪ್ರಸ್ತಾಪಿಸಿದೆ. ತಮಿಳುನಾಡಿನ ಹೆಸರಾಂತ ಸ್ವಾತಂತ್ರ್ಯ ಹೋರಾಟಗಾರರನ್ನು ಚಿತ್ರಿಸುವ ‘ಸ್ವಾತಂತ್ರ್ಯ ಸಂಗ್ರಾಮದಲ್ಲಿ ತಮಿಳುನಾಡು’ ಎಂಬ ಥೀಮ್ ಅಲ್ಲಿ ತಮಿಳುನಾಡು ಟ್ಯಾಬ್ಲೊ ಪ್ರಸ್ತಾವನೆ ಸಲ್ಲಿಸಿತ್ತು” ಎಂದು ಸ್ಟಾಲಿನ್ ಹೇಳಿದ್ದಾರೆ.

ತಜ್ಞರ ಸಮಿತಿಯ ಮುಂದೆ ರಾಜ್ಯದ ಪ್ರತಿನಿಧಿಗಳು ಮೂರು ಬಾರಿ ಹಾಜರಾಗಿದ್ದರು. ಮೊದಲ ಸಭೆಯಲ್ಲಿ, ತಜ್ಞರ ಸಮಿತಿಯು ತಮಿಳುನಾಡಿನ ಥೀಮ್‌‌ ಬಗ್ಗೆ ತೃಪ್ತಿ ವ್ಯಕ್ತಪಡಿಸಿತ್ತು. ಟ್ಯಾಬ್ಲೊ ವಿನ್ಯಾಸದ ಮುಂಭಾಗದಲ್ಲಿ ಬ್ರಿಟೀಷ್ ಆಡಳಿತದ ಸಮಯದಲ್ಲಿ ತಮಿಳುನಾಡಿನ ಸ್ವಾತಂತ್ರ್ಯ ಹೋರಾಟಗಾರರನ್ನು ಚಿತ್ರಿಸಲಾಗಿತ್ತು ಮತ್ತು ಈಸ್ಟ್ ಇಂಡಿಯಾ ಕಂಪನಿಯ ಅವಧಿಯಲ್ಲಿನ ಹೋರಾಟಗಾರರನ್ನು ಟ್ಯಾಬ್ಲೋದ ಹಿಂಭಾಗದಲ್ಲಿ ಚಿತ್ರಿಸಲಾಗಿತ್ತು.

ಟ್ಯಾಬ್ಲೊ ಆಯ್ಕೆಯ ಚರ್ಚೆಯ ಸಂದರ್ಭದಲ್ಲಿ, ಕೇಂದ್ರ ಸಮಿತಿಯ ಸದಸ್ಯರು ವಿ.ಒ. ಚಿದಂಬರನಾರ್ ಅವರನ್ನು ‘ಉದ್ಯಮಿ’ ಎಂದು ಬಣ್ಣಿಸಿದ್ದಾರೆ ಮತ್ತು ಅವರಿಗೆ ಯಾಕೆ ಪ್ರಾಮುಖ್ಯತೆ ನೀಡಬೇಕು ಎಂದು ಕೇಳಿದ್ದಾರೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ TNIE ವರದಿ ಮಾಡಿದೆ.

ಇದನ್ನೂ ಓದಿ:ಸ್ವಾಮಿ ನಾರಾಯಣ ಗುರುಗಳು ಮತ್ತು ಮುಸ್ಲಿಮರು.. – ಇಸ್ಮತ್ ಪಜೀರ್

ವೇಲು ನಾಚಿಯಾರ್ ಅವರು ಝಾನ್ಸಿ ರಾಣಿಯಂತೆ ಯಾಕೆ ಕಾಣುತ್ತಾರೆ ಎಂದು ಸಮಿತಿ ಸದಸ್ಯರು ಕೇಳಿದ್ದು, ಅವರ ಭಾವಚಿತ್ರಕ್ಕೆ ತಮಿಳು ಉಡುಗೆಯನ್ನು ತೊಡಿಸಬೇಕು ಎಂದು ಹೇಳಿದ್ದಾಗಿ ವರದಿಯಾಗಿದೆ.

ಸುಬ್ರಹ್ಮಣ್ಯ ಭಾರತಿ, ವಿ.ಒ. ಚಿದಂಬರನಾರ್‌‌ ಮತ್ತು ರಾಣಿ ವೇಲು ನಾಚಿಯಾರ್ ಪ್ರಸಿದ್ಧ ಸ್ವಾತಂತ್ಯ್ರ ಹೋರಾಟಗಾರರಲ್ಲ ಎಂದು ತಜ್ಞರ ಸಮಿತಿ ಹೇಳಿದೆ ಎಂದು TNIE ವರದಿ ಮಾಡಿದೆ. ಈ ಟ್ಯಾಬ್ಲೋದಲ್ಲಿ ‘ರಾಷ್ಟ್ರೀಯ ಖ್ಯಾತಿಯ ಸ್ವಾತಂತ್ರ್ಯ ಹೋರಾಟಗಾರನ್ನು ಚಿತ್ರಿಸಲು ತಜ್ಞರ ಸಮಿತಿಯು ತಮಿಳುನಾಡಿಗೆ ಕೇಳಿದೆ.

ಸುಬ್ರಮಣ್ಯ ಭಾರತಿ

ಸುಬ್ರಮಣ್ಯ ಭಾರತಿ, ತಮಿಳು ಬರಹಗಾರ, ಕವಿ, ಪತ್ರಕರ್ತ, ಭಾರತೀಯ ಸ್ವಾತಂತ್ರ್ಯ ಹೋರಾಟಗಾರ, ಸಮಾಜ ಸುಧಾರಕರಗಿದ್ದಾರೆ. ಅವರು ‘ಮಹಾಕವಿ ಭಾರತಿ’ ಎಂದು ಜನಪ್ರಿಯವಾಗಿ ಕರೆಯಲ್ಪಡುತ್ತಾರೆ. ಆಧುನಿಕ ತಮಿಳು ಕಾವ್ಯದ ಪ್ರವರ್ತಕರಾಗಿದ್ದು, ಸಾರ್ವಕಾಲಿಕ ಶ್ರೇಷ್ಠ ತಮಿಳು ಸಾಹಿತ್ಯಿಕ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದಾರೆ.

ಸುಬ್ರಮಣ್ಯ ಭಾರತಿ

ಇದನ್ನೂ ಓದಿ:ಗಣರಾಜ್ಯೋತ್ಸವದ ಕರ್ನಾಟಕ ಟ್ಯಾಬ್ಲೊದಲ್ಲಿ ಕೇಸರಿ ಧ್ವಜ!: ಕನ್ನಡವಿಲ್ಲದ್ದಕ್ಕೆ ಕನ್ನಡಿಗರ ಕಿಡಿ

ವಿ.ಒ. ಚಿದಂಬರನಾರ್‌

ವಿ.ಒ. ಚಿದಂಬರನಾರ್‌ ಅವರನ್ನು ‘ತಮಿಳು ಹೆಲ್ಮ್ಸ್‌ಮನ್’ ಎಂದೂ ಕರೆಯುತ್ತಾರೆ. ಅವರು ಸ್ವಾತಂತ್ರ್ಯ ಹೋರಾಟಗಾರರಗಿದ್ದು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಮಾಜಿ ನಾಯಕರಾಗಿದ್ದಾರೆ.

V.O. Chidambaram Pillai-Tamil Helmsman – Press Information Bureau
ವಿ.ಒ. ಚಿದಂಬರನಾರ್‌

ರಾಣಿ ವೇಲು ನಾಚಿಯಾರ್

ರಾಣಿ ವೇಲು ನಾಚಿಯಾರ್ ಅವರು 1780–1790ರಲ್ಲಿ ಶಿವಗಂಗಾ ಎಸ್ಟೇಟ್‌ನ ರಾಣಿಯಾಗಿದ್ದರು. ಭಾರತದಲ್ಲಿ ಈಸ್ಟ್ ಇಂಡಿಯಾ ಕಂಪನಿಯೊಂದಿಗೆ ಯುದ್ಧ ಮಾಡಿದ ಮೊದಲ ಭಾರತೀಯ ರಾಣಿಯಾಗಿದ್ದಾರೆ. ಅವರನ್ನು ತಮಿಳರು ‘ವೀರಮಂಗೈ’ ಎಂದೂ ಕರೆಯುತ್ತಾರೆ.

Velu Nachiyar - Wikipedia
ರಾಣಿ ವೇಲು ನಾಚಿಯಾರ್

ಮರುದು ಪಾಂಡಿಯರ್‌

ಮರುದು ಪಾಂಡಿಯರ್‌ಗಳು 18 ನೇ ಶತಮಾನದ ಅಂತ್ಯದ ವೇಳೆಯ ತಮಿಳುನಾಡಿನ ಶಿವಗಂಗೈನ ಡೈಯಾರ್ಕಲ್ ರಾಜರಾಗಿದ್ದರು. ಅವರು ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಹೋರಾಡಿದ್ದರು. ಇವರನ್ನು ಈಸ್ಟ್‌ ಇಂಡಿಯಾ ಕಂಪೆನಿಯು ಗಲ್ಲಿಗೇರಿಸಿತ್ತು.

Indian Backdrop on Twitter: "The English colonel James Welsh said. "It was  chinna Maruthu who first taught me to throw the spear and hurl the collery  stick (valari), a weapon which is

ಇದನ್ನೂ ಓದಿ:ತಮಿಳುನಾಡು: 50 ಸಾವಿರ ಕೇಂದ್ರಗಳಲ್ಲಿ 18 ನೇ ಮೆಗಾ ಲಸಿಕಾ ಶಿಬಿರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...