HomeUncategorizedರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖಂಚಂದಾನಿಗೆ 14 ದಿನಗಳ ನ್ಯಾಯಾಂಗ ಬಂಧನ

ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖಂಚಂದಾನಿಗೆ 14 ದಿನಗಳ ನ್ಯಾಯಾಂಗ ಬಂಧನ

ನಕಲಿ ಟಿಆರ್‌ಪಿ ರೇಟಿಂಗ್ ಪ್ರಕರಣದಲ್ಲಿ ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖಂಚಂದಾನಿಯ ಬಂಧನ 13ನೇಯದಾಗಿದೆ.

- Advertisement -
- Advertisement -

ನಕಲಿ ಟಿಆರ್‌ಪಿ ರೇಟಿಂಗ್ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖಂಚಂದಾನಿಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಖಂಚಂದಾನಿ ಅವರ ವಕೀಲ ನಿತೀನ್ ಪ್ರಧಾನ್ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದಾರೆ.

“ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿದೆ. ಅವರ ಬಂಧನವು ಸಂಪೂರ್ಣ ಅಧಿಕಾರದ ದುರುಪಯೋಗ ಮತ್ತು ಕಾನೂನಿನ ಪ್ರಕ್ರಿಯೆಯ ದುರುಪಯೋಗವಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದೇವೆ. ಏಕೆಂದರೆ, ಖಂಚಂದಾನಿ ಹೆಸರನ್ನು ಎಫ್‌ಐಆರ್ ಅಥವಾ ಚಾರ್ಜ್‌ಶೀಟ್‌ನಲ್ಲಿ ಹೆಸರಿಸಲಾಗಿಲ್ಲ” ಎಂದು ಪ್ರಧಾನ್ ಹೇಳಿದ್ದಾರೆ. ಜಾಮೀನು ಅರ್ಜಿಯನ್ನು ವಿಚಾರಣೆ ನಾಳೆ (ಬುಧವಾರ) ನಡೆಯಲಿದೆ.

ನಕಲಿ ಟಿಆರ್‌ಪಿ ರೇಟಿಂಗ್ ಹಗರಣದಲ್ಲಿ ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖಂಚಂದಾನಿಯನ್ನು ಮುಂಬೈ ಪೊಲೀಸರು ಭಾನುವಾರ (ಡಿ.13) ಬಂಧಿಸಿದ್ದರು. ಮಹಾರಾಷ್ಟ್ರದಲ್ಲಿ ರಿಪಬ್ಲಿಕ್ ಟಿವಿ‌ ಮತ್ತು ಅದರ ನೌಕರರ ವಿರುದ್ಧ ದಾಖಲಾಗಿರುವ ಪ್ರಕರಣಗಳಲ್ಲಿ ರಕ್ಷಣೆ ಕೋರಿ ರಿಪಬ್ಲಿಕ್ ಮೀಡಿಯಾ ನೆಟ್‌ವರ್ಕ್‌ನ ARG ಔಟ್‌ಲಿಯರ್ ಮೀಡಿಯಾ ಪ್ರೈವೇಟ್‌ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಇದನ್ನೂ ಓದಿ: ನಕಲಿ ಟಿಆರ್‌ಪಿ ರೇಟಿಂಗ್ ಹಗರಣ: ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖಂಚಂದಾನಿ ಬಂಧನ

ಹನ್ಸಾ ಸಂಶೋಧನೆಯ ಅಧಿಕಾರಿ ನಿತಿನ್ ಡಿಯೋಕರ್ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಟಿಆರ್‌ಪಿ ತಿರುಚಿದ ಪ್ರಕರಣದಲ್ಲಿ ಅಕ್ಟೋಬರ್ 6 ರಂದು ಮುಂಬೈ ಪೊಲೀಸರು ಎಫ್‌ಐಆರ್‌ ದಾಖಲಿಸಿ ತನಿಖೆ ಆರಂಭಿಸಿದ್ದರು. ಈ ಪ್ರಕರಣದಲ್ಲಿ ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖಂಚಂದಾನಿಯ ಬಂಧನ 13ನೇಯದಾಗಿದೆ.

ರಿಪಬ್ಲಿಕ್ ಟಿವಿಯ ವೀಕ್ಷಕರ ಸಂಖ್ಯೆ ಹೆಚ್ಚಿಸುವುದಕ್ಕಾಗಿ ಆಯ್ದ ಕುಟುಂಬಗಳಿಗೆ ಪ್ರತಿ ತಿಂಗಳು 15 ಲಕ್ಷ ರೂ. ಪಾವತಿಸಲಾಗುತ್ತಿತ್ತು ಎಂದು ಥಾಣೆ ಮೂಲದ ಕೇಬಲ್ ವಿತರಕ ಸಂಸ್ಥೆಯಾದ ಕ್ರಿಸ್ಟಲ್ ಬ್ರಾಡ್‌ಕಾಸ್ಟ್ ಮಾಲೀಕ ಆಶಿಶ್ ಚೌಧರಿ ಒಪ್ಪಿಕೊಂಡಿದ್ದಾಗಿ ಟಿಆರ್‌ಪಿ ಹಗರಣದ ಬಗ್ಗೆ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸ್ ಇಲಾಖೆಯ ಅಪರಾಧ ವಿಭಾಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ತಿಳಿಸಿದೆ.


ಇದನ್ನೂ ಓದಿ: ರಿಪಬ್ಲಿಕ್ ಟಿವಿ ವಿರುದ್ಧದ ಪ್ರಕರಣಗಳ ರದ್ದತಿ ಮನವಿ ತಿರಸ್ಕರಿಸಿದ ಸುಪ್ರೀಂ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರೋಹಿತ್‌ ವೇಮುಲಾ ಪ್ರಕರಣ ಮರುತನಿಖೆ ನಡೆಸುವಂತೆ ತೆಲಂಗಾಣ ಸಿಎಂಗೆ ಭೇಟಿ ಮಾಡಿದ ರಾಧಿಕಾ ವೇಮುಲಾ

0
ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾ ಸಾವಿನ ಪ್ರಕರಣದಲ್ಲಿ ತೆಲಂಗಾಣ ಪೊಲೀಸರು ಪ್ರಕರಣದ ಮುಕ್ತಾಯದ ವರದಿಯನ್ನು ಕೋರ್ಟ್‌ಗೆ ಸಲ್ಲಿಸಿದ್ದರು, ಇದೀಗ ಪ್ರಕರಣದ ಮರು ತನಿಖೆ ನಡೆಸುವಂತೆ ರೋಹಿತ್ ವೇಮುಲಾ ತಾಯಿ ರಾಧಿಕಾ...