Homeನಿಜವೋ ಸುಳ್ಳೋ‘ರಿಪಬ್ಲಿಕ್’ ಆಫ್ ಮೋದಿ, ಮೀಡಿಯಾ ಆ್ಯಂಡ್ ಪಿಆರ್‍ಒಸ್:  ಓಟು, ಟಿಆರ್‍ಪಿಗಾಗಿ ಯಾವ ಮಟ್ಟಕ್ಕೂ.....

‘ರಿಪಬ್ಲಿಕ್’ ಆಫ್ ಮೋದಿ, ಮೀಡಿಯಾ ಆ್ಯಂಡ್ ಪಿಆರ್‍ಒಸ್:  ಓಟು, ಟಿಆರ್‍ಪಿಗಾಗಿ ಯಾವ ಮಟ್ಟಕ್ಕೂ…..

ನ್ಯೂಸ್ 18 ಕನ್ನಡ ಹಿನ್ನೆಲೆಯಲ್ಲಿ ಒಂದು ಭಕ್ತಿಯ ಹಾಡಿನ ಸಂಗೀತ ತೇಲಿಬಿಟ್ಟು ಪಾವನವಾಯಿತು. ಸಕಲ ಸೌಲಭ್ಯಗಳ ಆ ಕೃತಕ ಗುಹೆಯಲ್ಲಿ ಮೋದಿಯ ಕೃತಕ ಧ್ಯಾನದ ಬಗ್ಗೆ ಇವರಾರೂ ಚಕಾರ ಎತ್ತಲಿಲ್ಲ.

- Advertisement -
- Advertisement -

ಚುನಾವಣಾ ಪ್ರಚಾರ ಅಂತ್ಯವಾದ ನಂತರವೂ, ಮತದಾರರ ಮೇಲೆ ಪ್ರಭಾವ ಬೀರಲು ‘ಭಕ್ತಿ’ಯನ್ನೂ ಒಂದು ಸರಕಾಗಿಸಿದ ಮೋದಿ, ಮೀಡಿಯಾ ಮತ್ತು ಪಿಆರ್‍ಒಗಳ ರಿಪಬ್ಲಿಕ್ ಕಳೆದ ಐದು ವರ್ಷ ಇಂತಹ ಜನದ್ರೋಹ ಕೆಲಸದಲ್ಲೇ ನಿರತವಾಗಿತ್ತಲ್ಲವೇ?

ಆಯ್ತು, ಪ್ರಧಾನಿ ನರೇಂದ್ರ ಮೋದಿಯವರಿಗೆ ಭಕ್ತಿ ಉಕ್ಕಿ ಬಂದಿತ್ತು, ಅವರು ಕೇದಾರನಾಥಕ್ಕೆ ಹೋದರು. ಆದರೆ ಇದಿಷ್ಟನ್ನು ಜನರಿಗೆ ತಿಳಿಸಿಬಿಟ್ಟಿದ್ದರೆ ಮೀಡಿಯಾ ಕೆಲಸ ಮುಗಿದಿರೋದು. ಆದರೆ, ಬಹುಪಾಲು ದೃಶ್ಯ ಮಾಧ್ಯಮಗಳು ಇದನ್ನೊಂದು ತಪ್ಪಸ್ಸಿನಂತೆ ಬಿಂಬಿಸಿ, ಜನರನ್ನು ದಾರಿ ತಪ್ಪಿಸಲು ಯತ್ನಿಸಿದ್ದು ಅಸಹ್ಯವಾಗಿತ್ತು. ಪ್ರಧಾನಿ ಸಾಹೇಬರ ಪಿಆರ್‍ಒ ಟೀಮ್ ಅಂತೂ ಪ್ರಧಾನಿಯನ್ನು ಫ್ಯಾನ್ಸಿ ಡ್ರೆಸ್ ಮಾಡೆಲ್ ಮಟ್ಟಕ್ಕೆ ಇಳಿಸಿದೆ. ಮೋದಿ-ಮೀಡಿಯಾ-ಪಿಆರ್‍ಒ ‘ರಿಪಬ್ಲಿಕ್’ ಓಟು ಮತ್ತು ಟಿಆರ್‍ಪಿಗಾಗಿ ಯಾವ ಮಟ್ಟಕ್ಕೂ ಇಳಿಯಬಲ್ಲದು. ಆದರೆ, ಪಾಪ, ಈ ಸಲ ಏರಿದ್ದಾರೆ, ಕೇದಾರ ಬೆಟ್ಟ ಏರಿದ್ದಾರೆ! ಸೋ, ಯಾವ ಮಟ್ಟಕ್ಕಾದರೂ ಏರಬಲ್ಲರು ಅಂತ ಬೇಕಾದರೆ ಓದಿಕೊಳ್ಳಿ!

‘ಮುಂಜಾನೆಯೇ ಮೋದಿ ‘ಪರಿಕ್ರಮ’ ಮುಗಿಸಿ, 16 ಪೂಜಾವಿಧಾನಗಳನ್ನೂ ಮುಗಿಸಿ 2 ಕಿ.ಮೀ ಟ್ರೆಕ್ಕಿಂಗ್ ಮಾಡಿ ಗುಹೆ ತಲುಪಿ ಧ್ಯಾನಾಸಕ್ತರಾದರು. ಈ ವಯಸ್ಸಲ್ಲಿ ಇದೆಂತಹ ಶೃದ್ಧೆ, ಭಕ್ತಿ …ಅವರ ದೇಹಕ್ಕೆ ಸುಸ್ತೇ ಇಲ್ಲವೇನೋ?’ –ರಿಪಬ್ಲಿಕ್ ಟಿವಿಯ ನ್ಯೂಸ್ ಎಡಿಟರ್ ವಿವೇಕ್ ಶಾಂಡಿಲ್ಯನ ಸ್ಪಾಟ್ ವರದಿಯಿದು. ಪ್ರೈಮ್ ನ್ಯೂಸ್ ವರದಿ. ರಾತ್ರಿನೂ ಇತ್ತು. ಅದು ಅಲ್ಲದೇ ಇವತ್ತು ಸ್ಪೇಷಲ್ ಸ್ಟೋರಿ ಬೇರೆ ಐತಂತೆ!

‘ಮೋದಿ ಅಧಿಕಾರಿಗಳೊಂದಿಗೆ ಕೇದಾರನಾಥ ಪುನರ್‍ನಿರ್ಮಾಣದ ಕಾಮಗಾರಿ ಕುರಿತು ಚರ್ಚಿಸಿದರು.. ದುರ್ಗಮ ಹಾದಿಯಲ್ಲಿ ಕೋಲು ಹಿಡಿದು ಬೆಟ್ಟ ಏರಿದರು. ಆಗ ಅವರ ಮುಖದಲ್ಲಿ ಬೆವರಿತ್ತು’…-ಸೂಪರ್ ಇದಪ್ಪ ರಿಪೋರ್ಟಿಂಗ್ ಅಂದ್ರೆ!

ನ್ಯೂಸ್ 18 ಕನ್ನಡ ಹಿನ್ನೆಲೆಯಲ್ಲಿ ಒಂದು ಭಕ್ತಿಯ ಹಾಡಿನ ಸಂಗೀತ ತೇಲಿಬಿಟ್ಟು ಪಾವನವಾಯಿತು. ಸಕಲ ಸೌಲಭ್ಯಗಳ ಆ ಕೃತಕ ಗುಹೆಯಲ್ಲಿ ಮೋದಿಯ ಕೃತಕ ಧ್ಯಾನದ ಬಗ್ಗೆ ಇವರಾರೂ ಚಕಾರ ಎತ್ತಲಿಲ್ಲ. ಇದನ್ನು ಗೋದಿ ಮೀಡಿಯಾ ಎನ್ನದೆ ಬೇರೆ ಎನನ್ನಬೇಕು.

ಇದಕ್ಕೆ ವ್ಯತಿರಿಕ್ತವಾಗಿ ನೀವು ಸೋಷಿಯಲ್ ಮೀಡಿಯಾದಲ್ಲಿ ಕಣ್ಣಾಯಿಸಿದರೆ ಬರೀ ಮೋದಿ ಮೇಲಿನ ಟ್ರೋಲ್ ಗಳೇ ಕಾಣುತ್ತಿವೆ. ಕಳೆದೊಂದು ವಾರದಿಂದ ರಾಡಾರ್ ಮೋಡ, ಕವನ, ಸ್ಕ್ರಿಪ್ಟೆಡ್ ಸಂದರ್ಶನ, ಪ್ರಶ್ನೆಗಳಿಲ್ಲದ ಪತ್ರಿಕಾಗೋಷ್ಟಿ, ಈಗ ಐಟೆಕ್ ಧ್ಯಾನ ಸೇರಿದಂತೆ ಎಲ್ಲವೂ ವ್ಯಾಪಕ ಟೀಕೆಗೆ ಟ್ರೋಲ್ ಗೆ ಒಳಗಾಗಿವೆ. ಕಾರ್ಟೂನ್‍ಗಳಂತೂ ಒಂದನ್ನೊಂದು ಮೀರಿಸುವಷ್ಟು ಸೃಜನಶೀಲತೆಯಿಂದ ಕೂಡಿವೆ. ಆಡಳಿತ ಪಕ್ಷದ ನೀತಿಗಳು ಕುರಿತು ಹೀಗೆ ನಡೆದುಕೊಳ್ಳುವುದೇ ಪ್ರಜಾತಂತ್ರ. ಇದರಲ್ಲಿ ಮಾಧ್ಯಮಗಳು ನಡೆ ಪ್ರಜಾತಂತ್ರ ವಿರೋಧಿಯಾಗಿದೆ. ಆದರೆ ನೆಟ್ಟಿಗರು ಮಾತ್ರ ಟ್ರೋಲ್ ಮಾಡುವುದನ್ನು ಬಿಟ್ಟಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...