Homeನಿಜವೋ ಸುಳ್ಳೋ‘ರಿಪಬ್ಲಿಕ್’ ಆಫ್ ಮೋದಿ, ಮೀಡಿಯಾ ಆ್ಯಂಡ್ ಪಿಆರ್‍ಒಸ್:  ಓಟು, ಟಿಆರ್‍ಪಿಗಾಗಿ ಯಾವ ಮಟ್ಟಕ್ಕೂ.....

‘ರಿಪಬ್ಲಿಕ್’ ಆಫ್ ಮೋದಿ, ಮೀಡಿಯಾ ಆ್ಯಂಡ್ ಪಿಆರ್‍ಒಸ್:  ಓಟು, ಟಿಆರ್‍ಪಿಗಾಗಿ ಯಾವ ಮಟ್ಟಕ್ಕೂ…..

ನ್ಯೂಸ್ 18 ಕನ್ನಡ ಹಿನ್ನೆಲೆಯಲ್ಲಿ ಒಂದು ಭಕ್ತಿಯ ಹಾಡಿನ ಸಂಗೀತ ತೇಲಿಬಿಟ್ಟು ಪಾವನವಾಯಿತು. ಸಕಲ ಸೌಲಭ್ಯಗಳ ಆ ಕೃತಕ ಗುಹೆಯಲ್ಲಿ ಮೋದಿಯ ಕೃತಕ ಧ್ಯಾನದ ಬಗ್ಗೆ ಇವರಾರೂ ಚಕಾರ ಎತ್ತಲಿಲ್ಲ.

- Advertisement -
- Advertisement -

ಚುನಾವಣಾ ಪ್ರಚಾರ ಅಂತ್ಯವಾದ ನಂತರವೂ, ಮತದಾರರ ಮೇಲೆ ಪ್ರಭಾವ ಬೀರಲು ‘ಭಕ್ತಿ’ಯನ್ನೂ ಒಂದು ಸರಕಾಗಿಸಿದ ಮೋದಿ, ಮೀಡಿಯಾ ಮತ್ತು ಪಿಆರ್‍ಒಗಳ ರಿಪಬ್ಲಿಕ್ ಕಳೆದ ಐದು ವರ್ಷ ಇಂತಹ ಜನದ್ರೋಹ ಕೆಲಸದಲ್ಲೇ ನಿರತವಾಗಿತ್ತಲ್ಲವೇ?

ಆಯ್ತು, ಪ್ರಧಾನಿ ನರೇಂದ್ರ ಮೋದಿಯವರಿಗೆ ಭಕ್ತಿ ಉಕ್ಕಿ ಬಂದಿತ್ತು, ಅವರು ಕೇದಾರನಾಥಕ್ಕೆ ಹೋದರು. ಆದರೆ ಇದಿಷ್ಟನ್ನು ಜನರಿಗೆ ತಿಳಿಸಿಬಿಟ್ಟಿದ್ದರೆ ಮೀಡಿಯಾ ಕೆಲಸ ಮುಗಿದಿರೋದು. ಆದರೆ, ಬಹುಪಾಲು ದೃಶ್ಯ ಮಾಧ್ಯಮಗಳು ಇದನ್ನೊಂದು ತಪ್ಪಸ್ಸಿನಂತೆ ಬಿಂಬಿಸಿ, ಜನರನ್ನು ದಾರಿ ತಪ್ಪಿಸಲು ಯತ್ನಿಸಿದ್ದು ಅಸಹ್ಯವಾಗಿತ್ತು. ಪ್ರಧಾನಿ ಸಾಹೇಬರ ಪಿಆರ್‍ಒ ಟೀಮ್ ಅಂತೂ ಪ್ರಧಾನಿಯನ್ನು ಫ್ಯಾನ್ಸಿ ಡ್ರೆಸ್ ಮಾಡೆಲ್ ಮಟ್ಟಕ್ಕೆ ಇಳಿಸಿದೆ. ಮೋದಿ-ಮೀಡಿಯಾ-ಪಿಆರ್‍ಒ ‘ರಿಪಬ್ಲಿಕ್’ ಓಟು ಮತ್ತು ಟಿಆರ್‍ಪಿಗಾಗಿ ಯಾವ ಮಟ್ಟಕ್ಕೂ ಇಳಿಯಬಲ್ಲದು. ಆದರೆ, ಪಾಪ, ಈ ಸಲ ಏರಿದ್ದಾರೆ, ಕೇದಾರ ಬೆಟ್ಟ ಏರಿದ್ದಾರೆ! ಸೋ, ಯಾವ ಮಟ್ಟಕ್ಕಾದರೂ ಏರಬಲ್ಲರು ಅಂತ ಬೇಕಾದರೆ ಓದಿಕೊಳ್ಳಿ!

‘ಮುಂಜಾನೆಯೇ ಮೋದಿ ‘ಪರಿಕ್ರಮ’ ಮುಗಿಸಿ, 16 ಪೂಜಾವಿಧಾನಗಳನ್ನೂ ಮುಗಿಸಿ 2 ಕಿ.ಮೀ ಟ್ರೆಕ್ಕಿಂಗ್ ಮಾಡಿ ಗುಹೆ ತಲುಪಿ ಧ್ಯಾನಾಸಕ್ತರಾದರು. ಈ ವಯಸ್ಸಲ್ಲಿ ಇದೆಂತಹ ಶೃದ್ಧೆ, ಭಕ್ತಿ …ಅವರ ದೇಹಕ್ಕೆ ಸುಸ್ತೇ ಇಲ್ಲವೇನೋ?’ –ರಿಪಬ್ಲಿಕ್ ಟಿವಿಯ ನ್ಯೂಸ್ ಎಡಿಟರ್ ವಿವೇಕ್ ಶಾಂಡಿಲ್ಯನ ಸ್ಪಾಟ್ ವರದಿಯಿದು. ಪ್ರೈಮ್ ನ್ಯೂಸ್ ವರದಿ. ರಾತ್ರಿನೂ ಇತ್ತು. ಅದು ಅಲ್ಲದೇ ಇವತ್ತು ಸ್ಪೇಷಲ್ ಸ್ಟೋರಿ ಬೇರೆ ಐತಂತೆ!

‘ಮೋದಿ ಅಧಿಕಾರಿಗಳೊಂದಿಗೆ ಕೇದಾರನಾಥ ಪುನರ್‍ನಿರ್ಮಾಣದ ಕಾಮಗಾರಿ ಕುರಿತು ಚರ್ಚಿಸಿದರು.. ದುರ್ಗಮ ಹಾದಿಯಲ್ಲಿ ಕೋಲು ಹಿಡಿದು ಬೆಟ್ಟ ಏರಿದರು. ಆಗ ಅವರ ಮುಖದಲ್ಲಿ ಬೆವರಿತ್ತು’…-ಸೂಪರ್ ಇದಪ್ಪ ರಿಪೋರ್ಟಿಂಗ್ ಅಂದ್ರೆ!

ನ್ಯೂಸ್ 18 ಕನ್ನಡ ಹಿನ್ನೆಲೆಯಲ್ಲಿ ಒಂದು ಭಕ್ತಿಯ ಹಾಡಿನ ಸಂಗೀತ ತೇಲಿಬಿಟ್ಟು ಪಾವನವಾಯಿತು. ಸಕಲ ಸೌಲಭ್ಯಗಳ ಆ ಕೃತಕ ಗುಹೆಯಲ್ಲಿ ಮೋದಿಯ ಕೃತಕ ಧ್ಯಾನದ ಬಗ್ಗೆ ಇವರಾರೂ ಚಕಾರ ಎತ್ತಲಿಲ್ಲ. ಇದನ್ನು ಗೋದಿ ಮೀಡಿಯಾ ಎನ್ನದೆ ಬೇರೆ ಎನನ್ನಬೇಕು.

ಇದಕ್ಕೆ ವ್ಯತಿರಿಕ್ತವಾಗಿ ನೀವು ಸೋಷಿಯಲ್ ಮೀಡಿಯಾದಲ್ಲಿ ಕಣ್ಣಾಯಿಸಿದರೆ ಬರೀ ಮೋದಿ ಮೇಲಿನ ಟ್ರೋಲ್ ಗಳೇ ಕಾಣುತ್ತಿವೆ. ಕಳೆದೊಂದು ವಾರದಿಂದ ರಾಡಾರ್ ಮೋಡ, ಕವನ, ಸ್ಕ್ರಿಪ್ಟೆಡ್ ಸಂದರ್ಶನ, ಪ್ರಶ್ನೆಗಳಿಲ್ಲದ ಪತ್ರಿಕಾಗೋಷ್ಟಿ, ಈಗ ಐಟೆಕ್ ಧ್ಯಾನ ಸೇರಿದಂತೆ ಎಲ್ಲವೂ ವ್ಯಾಪಕ ಟೀಕೆಗೆ ಟ್ರೋಲ್ ಗೆ ಒಳಗಾಗಿವೆ. ಕಾರ್ಟೂನ್‍ಗಳಂತೂ ಒಂದನ್ನೊಂದು ಮೀರಿಸುವಷ್ಟು ಸೃಜನಶೀಲತೆಯಿಂದ ಕೂಡಿವೆ. ಆಡಳಿತ ಪಕ್ಷದ ನೀತಿಗಳು ಕುರಿತು ಹೀಗೆ ನಡೆದುಕೊಳ್ಳುವುದೇ ಪ್ರಜಾತಂತ್ರ. ಇದರಲ್ಲಿ ಮಾಧ್ಯಮಗಳು ನಡೆ ಪ್ರಜಾತಂತ್ರ ವಿರೋಧಿಯಾಗಿದೆ. ಆದರೆ ನೆಟ್ಟಿಗರು ಮಾತ್ರ ಟ್ರೋಲ್ ಮಾಡುವುದನ್ನು ಬಿಟ್ಟಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...