Homeನಿಜವೋ ಸುಳ್ಳೋ‘ರಿಪಬ್ಲಿಕ್’ ಆಫ್ ಮೋದಿ, ಮೀಡಿಯಾ ಆ್ಯಂಡ್ ಪಿಆರ್‍ಒಸ್:  ಓಟು, ಟಿಆರ್‍ಪಿಗಾಗಿ ಯಾವ ಮಟ್ಟಕ್ಕೂ.....

‘ರಿಪಬ್ಲಿಕ್’ ಆಫ್ ಮೋದಿ, ಮೀಡಿಯಾ ಆ್ಯಂಡ್ ಪಿಆರ್‍ಒಸ್:  ಓಟು, ಟಿಆರ್‍ಪಿಗಾಗಿ ಯಾವ ಮಟ್ಟಕ್ಕೂ…..

ನ್ಯೂಸ್ 18 ಕನ್ನಡ ಹಿನ್ನೆಲೆಯಲ್ಲಿ ಒಂದು ಭಕ್ತಿಯ ಹಾಡಿನ ಸಂಗೀತ ತೇಲಿಬಿಟ್ಟು ಪಾವನವಾಯಿತು. ಸಕಲ ಸೌಲಭ್ಯಗಳ ಆ ಕೃತಕ ಗುಹೆಯಲ್ಲಿ ಮೋದಿಯ ಕೃತಕ ಧ್ಯಾನದ ಬಗ್ಗೆ ಇವರಾರೂ ಚಕಾರ ಎತ್ತಲಿಲ್ಲ.

- Advertisement -
- Advertisement -

ಚುನಾವಣಾ ಪ್ರಚಾರ ಅಂತ್ಯವಾದ ನಂತರವೂ, ಮತದಾರರ ಮೇಲೆ ಪ್ರಭಾವ ಬೀರಲು ‘ಭಕ್ತಿ’ಯನ್ನೂ ಒಂದು ಸರಕಾಗಿಸಿದ ಮೋದಿ, ಮೀಡಿಯಾ ಮತ್ತು ಪಿಆರ್‍ಒಗಳ ರಿಪಬ್ಲಿಕ್ ಕಳೆದ ಐದು ವರ್ಷ ಇಂತಹ ಜನದ್ರೋಹ ಕೆಲಸದಲ್ಲೇ ನಿರತವಾಗಿತ್ತಲ್ಲವೇ?

ಆಯ್ತು, ಪ್ರಧಾನಿ ನರೇಂದ್ರ ಮೋದಿಯವರಿಗೆ ಭಕ್ತಿ ಉಕ್ಕಿ ಬಂದಿತ್ತು, ಅವರು ಕೇದಾರನಾಥಕ್ಕೆ ಹೋದರು. ಆದರೆ ಇದಿಷ್ಟನ್ನು ಜನರಿಗೆ ತಿಳಿಸಿಬಿಟ್ಟಿದ್ದರೆ ಮೀಡಿಯಾ ಕೆಲಸ ಮುಗಿದಿರೋದು. ಆದರೆ, ಬಹುಪಾಲು ದೃಶ್ಯ ಮಾಧ್ಯಮಗಳು ಇದನ್ನೊಂದು ತಪ್ಪಸ್ಸಿನಂತೆ ಬಿಂಬಿಸಿ, ಜನರನ್ನು ದಾರಿ ತಪ್ಪಿಸಲು ಯತ್ನಿಸಿದ್ದು ಅಸಹ್ಯವಾಗಿತ್ತು. ಪ್ರಧಾನಿ ಸಾಹೇಬರ ಪಿಆರ್‍ಒ ಟೀಮ್ ಅಂತೂ ಪ್ರಧಾನಿಯನ್ನು ಫ್ಯಾನ್ಸಿ ಡ್ರೆಸ್ ಮಾಡೆಲ್ ಮಟ್ಟಕ್ಕೆ ಇಳಿಸಿದೆ. ಮೋದಿ-ಮೀಡಿಯಾ-ಪಿಆರ್‍ಒ ‘ರಿಪಬ್ಲಿಕ್’ ಓಟು ಮತ್ತು ಟಿಆರ್‍ಪಿಗಾಗಿ ಯಾವ ಮಟ್ಟಕ್ಕೂ ಇಳಿಯಬಲ್ಲದು. ಆದರೆ, ಪಾಪ, ಈ ಸಲ ಏರಿದ್ದಾರೆ, ಕೇದಾರ ಬೆಟ್ಟ ಏರಿದ್ದಾರೆ! ಸೋ, ಯಾವ ಮಟ್ಟಕ್ಕಾದರೂ ಏರಬಲ್ಲರು ಅಂತ ಬೇಕಾದರೆ ಓದಿಕೊಳ್ಳಿ!

‘ಮುಂಜಾನೆಯೇ ಮೋದಿ ‘ಪರಿಕ್ರಮ’ ಮುಗಿಸಿ, 16 ಪೂಜಾವಿಧಾನಗಳನ್ನೂ ಮುಗಿಸಿ 2 ಕಿ.ಮೀ ಟ್ರೆಕ್ಕಿಂಗ್ ಮಾಡಿ ಗುಹೆ ತಲುಪಿ ಧ್ಯಾನಾಸಕ್ತರಾದರು. ಈ ವಯಸ್ಸಲ್ಲಿ ಇದೆಂತಹ ಶೃದ್ಧೆ, ಭಕ್ತಿ …ಅವರ ದೇಹಕ್ಕೆ ಸುಸ್ತೇ ಇಲ್ಲವೇನೋ?’ –ರಿಪಬ್ಲಿಕ್ ಟಿವಿಯ ನ್ಯೂಸ್ ಎಡಿಟರ್ ವಿವೇಕ್ ಶಾಂಡಿಲ್ಯನ ಸ್ಪಾಟ್ ವರದಿಯಿದು. ಪ್ರೈಮ್ ನ್ಯೂಸ್ ವರದಿ. ರಾತ್ರಿನೂ ಇತ್ತು. ಅದು ಅಲ್ಲದೇ ಇವತ್ತು ಸ್ಪೇಷಲ್ ಸ್ಟೋರಿ ಬೇರೆ ಐತಂತೆ!

‘ಮೋದಿ ಅಧಿಕಾರಿಗಳೊಂದಿಗೆ ಕೇದಾರನಾಥ ಪುನರ್‍ನಿರ್ಮಾಣದ ಕಾಮಗಾರಿ ಕುರಿತು ಚರ್ಚಿಸಿದರು.. ದುರ್ಗಮ ಹಾದಿಯಲ್ಲಿ ಕೋಲು ಹಿಡಿದು ಬೆಟ್ಟ ಏರಿದರು. ಆಗ ಅವರ ಮುಖದಲ್ಲಿ ಬೆವರಿತ್ತು’…-ಸೂಪರ್ ಇದಪ್ಪ ರಿಪೋರ್ಟಿಂಗ್ ಅಂದ್ರೆ!

ನ್ಯೂಸ್ 18 ಕನ್ನಡ ಹಿನ್ನೆಲೆಯಲ್ಲಿ ಒಂದು ಭಕ್ತಿಯ ಹಾಡಿನ ಸಂಗೀತ ತೇಲಿಬಿಟ್ಟು ಪಾವನವಾಯಿತು. ಸಕಲ ಸೌಲಭ್ಯಗಳ ಆ ಕೃತಕ ಗುಹೆಯಲ್ಲಿ ಮೋದಿಯ ಕೃತಕ ಧ್ಯಾನದ ಬಗ್ಗೆ ಇವರಾರೂ ಚಕಾರ ಎತ್ತಲಿಲ್ಲ. ಇದನ್ನು ಗೋದಿ ಮೀಡಿಯಾ ಎನ್ನದೆ ಬೇರೆ ಎನನ್ನಬೇಕು.

ಇದಕ್ಕೆ ವ್ಯತಿರಿಕ್ತವಾಗಿ ನೀವು ಸೋಷಿಯಲ್ ಮೀಡಿಯಾದಲ್ಲಿ ಕಣ್ಣಾಯಿಸಿದರೆ ಬರೀ ಮೋದಿ ಮೇಲಿನ ಟ್ರೋಲ್ ಗಳೇ ಕಾಣುತ್ತಿವೆ. ಕಳೆದೊಂದು ವಾರದಿಂದ ರಾಡಾರ್ ಮೋಡ, ಕವನ, ಸ್ಕ್ರಿಪ್ಟೆಡ್ ಸಂದರ್ಶನ, ಪ್ರಶ್ನೆಗಳಿಲ್ಲದ ಪತ್ರಿಕಾಗೋಷ್ಟಿ, ಈಗ ಐಟೆಕ್ ಧ್ಯಾನ ಸೇರಿದಂತೆ ಎಲ್ಲವೂ ವ್ಯಾಪಕ ಟೀಕೆಗೆ ಟ್ರೋಲ್ ಗೆ ಒಳಗಾಗಿವೆ. ಕಾರ್ಟೂನ್‍ಗಳಂತೂ ಒಂದನ್ನೊಂದು ಮೀರಿಸುವಷ್ಟು ಸೃಜನಶೀಲತೆಯಿಂದ ಕೂಡಿವೆ. ಆಡಳಿತ ಪಕ್ಷದ ನೀತಿಗಳು ಕುರಿತು ಹೀಗೆ ನಡೆದುಕೊಳ್ಳುವುದೇ ಪ್ರಜಾತಂತ್ರ. ಇದರಲ್ಲಿ ಮಾಧ್ಯಮಗಳು ನಡೆ ಪ್ರಜಾತಂತ್ರ ವಿರೋಧಿಯಾಗಿದೆ. ಆದರೆ ನೆಟ್ಟಿಗರು ಮಾತ್ರ ಟ್ರೋಲ್ ಮಾಡುವುದನ್ನು ಬಿಟ್ಟಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...