Homeನಿಜವೋ ಸುಳ್ಳೋ‘ರಿಪಬ್ಲಿಕ್’ ಆಫ್ ಮೋದಿ, ಮೀಡಿಯಾ ಆ್ಯಂಡ್ ಪಿಆರ್‍ಒಸ್:  ಓಟು, ಟಿಆರ್‍ಪಿಗಾಗಿ ಯಾವ ಮಟ್ಟಕ್ಕೂ.....

‘ರಿಪಬ್ಲಿಕ್’ ಆಫ್ ಮೋದಿ, ಮೀಡಿಯಾ ಆ್ಯಂಡ್ ಪಿಆರ್‍ಒಸ್:  ಓಟು, ಟಿಆರ್‍ಪಿಗಾಗಿ ಯಾವ ಮಟ್ಟಕ್ಕೂ…..

ನ್ಯೂಸ್ 18 ಕನ್ನಡ ಹಿನ್ನೆಲೆಯಲ್ಲಿ ಒಂದು ಭಕ್ತಿಯ ಹಾಡಿನ ಸಂಗೀತ ತೇಲಿಬಿಟ್ಟು ಪಾವನವಾಯಿತು. ಸಕಲ ಸೌಲಭ್ಯಗಳ ಆ ಕೃತಕ ಗುಹೆಯಲ್ಲಿ ಮೋದಿಯ ಕೃತಕ ಧ್ಯಾನದ ಬಗ್ಗೆ ಇವರಾರೂ ಚಕಾರ ಎತ್ತಲಿಲ್ಲ.

- Advertisement -
- Advertisement -

ಚುನಾವಣಾ ಪ್ರಚಾರ ಅಂತ್ಯವಾದ ನಂತರವೂ, ಮತದಾರರ ಮೇಲೆ ಪ್ರಭಾವ ಬೀರಲು ‘ಭಕ್ತಿ’ಯನ್ನೂ ಒಂದು ಸರಕಾಗಿಸಿದ ಮೋದಿ, ಮೀಡಿಯಾ ಮತ್ತು ಪಿಆರ್‍ಒಗಳ ರಿಪಬ್ಲಿಕ್ ಕಳೆದ ಐದು ವರ್ಷ ಇಂತಹ ಜನದ್ರೋಹ ಕೆಲಸದಲ್ಲೇ ನಿರತವಾಗಿತ್ತಲ್ಲವೇ?

ಆಯ್ತು, ಪ್ರಧಾನಿ ನರೇಂದ್ರ ಮೋದಿಯವರಿಗೆ ಭಕ್ತಿ ಉಕ್ಕಿ ಬಂದಿತ್ತು, ಅವರು ಕೇದಾರನಾಥಕ್ಕೆ ಹೋದರು. ಆದರೆ ಇದಿಷ್ಟನ್ನು ಜನರಿಗೆ ತಿಳಿಸಿಬಿಟ್ಟಿದ್ದರೆ ಮೀಡಿಯಾ ಕೆಲಸ ಮುಗಿದಿರೋದು. ಆದರೆ, ಬಹುಪಾಲು ದೃಶ್ಯ ಮಾಧ್ಯಮಗಳು ಇದನ್ನೊಂದು ತಪ್ಪಸ್ಸಿನಂತೆ ಬಿಂಬಿಸಿ, ಜನರನ್ನು ದಾರಿ ತಪ್ಪಿಸಲು ಯತ್ನಿಸಿದ್ದು ಅಸಹ್ಯವಾಗಿತ್ತು. ಪ್ರಧಾನಿ ಸಾಹೇಬರ ಪಿಆರ್‍ಒ ಟೀಮ್ ಅಂತೂ ಪ್ರಧಾನಿಯನ್ನು ಫ್ಯಾನ್ಸಿ ಡ್ರೆಸ್ ಮಾಡೆಲ್ ಮಟ್ಟಕ್ಕೆ ಇಳಿಸಿದೆ. ಮೋದಿ-ಮೀಡಿಯಾ-ಪಿಆರ್‍ಒ ‘ರಿಪಬ್ಲಿಕ್’ ಓಟು ಮತ್ತು ಟಿಆರ್‍ಪಿಗಾಗಿ ಯಾವ ಮಟ್ಟಕ್ಕೂ ಇಳಿಯಬಲ್ಲದು. ಆದರೆ, ಪಾಪ, ಈ ಸಲ ಏರಿದ್ದಾರೆ, ಕೇದಾರ ಬೆಟ್ಟ ಏರಿದ್ದಾರೆ! ಸೋ, ಯಾವ ಮಟ್ಟಕ್ಕಾದರೂ ಏರಬಲ್ಲರು ಅಂತ ಬೇಕಾದರೆ ಓದಿಕೊಳ್ಳಿ!

‘ಮುಂಜಾನೆಯೇ ಮೋದಿ ‘ಪರಿಕ್ರಮ’ ಮುಗಿಸಿ, 16 ಪೂಜಾವಿಧಾನಗಳನ್ನೂ ಮುಗಿಸಿ 2 ಕಿ.ಮೀ ಟ್ರೆಕ್ಕಿಂಗ್ ಮಾಡಿ ಗುಹೆ ತಲುಪಿ ಧ್ಯಾನಾಸಕ್ತರಾದರು. ಈ ವಯಸ್ಸಲ್ಲಿ ಇದೆಂತಹ ಶೃದ್ಧೆ, ಭಕ್ತಿ …ಅವರ ದೇಹಕ್ಕೆ ಸುಸ್ತೇ ಇಲ್ಲವೇನೋ?’ –ರಿಪಬ್ಲಿಕ್ ಟಿವಿಯ ನ್ಯೂಸ್ ಎಡಿಟರ್ ವಿವೇಕ್ ಶಾಂಡಿಲ್ಯನ ಸ್ಪಾಟ್ ವರದಿಯಿದು. ಪ್ರೈಮ್ ನ್ಯೂಸ್ ವರದಿ. ರಾತ್ರಿನೂ ಇತ್ತು. ಅದು ಅಲ್ಲದೇ ಇವತ್ತು ಸ್ಪೇಷಲ್ ಸ್ಟೋರಿ ಬೇರೆ ಐತಂತೆ!

‘ಮೋದಿ ಅಧಿಕಾರಿಗಳೊಂದಿಗೆ ಕೇದಾರನಾಥ ಪುನರ್‍ನಿರ್ಮಾಣದ ಕಾಮಗಾರಿ ಕುರಿತು ಚರ್ಚಿಸಿದರು.. ದುರ್ಗಮ ಹಾದಿಯಲ್ಲಿ ಕೋಲು ಹಿಡಿದು ಬೆಟ್ಟ ಏರಿದರು. ಆಗ ಅವರ ಮುಖದಲ್ಲಿ ಬೆವರಿತ್ತು’…-ಸೂಪರ್ ಇದಪ್ಪ ರಿಪೋರ್ಟಿಂಗ್ ಅಂದ್ರೆ!

ನ್ಯೂಸ್ 18 ಕನ್ನಡ ಹಿನ್ನೆಲೆಯಲ್ಲಿ ಒಂದು ಭಕ್ತಿಯ ಹಾಡಿನ ಸಂಗೀತ ತೇಲಿಬಿಟ್ಟು ಪಾವನವಾಯಿತು. ಸಕಲ ಸೌಲಭ್ಯಗಳ ಆ ಕೃತಕ ಗುಹೆಯಲ್ಲಿ ಮೋದಿಯ ಕೃತಕ ಧ್ಯಾನದ ಬಗ್ಗೆ ಇವರಾರೂ ಚಕಾರ ಎತ್ತಲಿಲ್ಲ. ಇದನ್ನು ಗೋದಿ ಮೀಡಿಯಾ ಎನ್ನದೆ ಬೇರೆ ಎನನ್ನಬೇಕು.

ಇದಕ್ಕೆ ವ್ಯತಿರಿಕ್ತವಾಗಿ ನೀವು ಸೋಷಿಯಲ್ ಮೀಡಿಯಾದಲ್ಲಿ ಕಣ್ಣಾಯಿಸಿದರೆ ಬರೀ ಮೋದಿ ಮೇಲಿನ ಟ್ರೋಲ್ ಗಳೇ ಕಾಣುತ್ತಿವೆ. ಕಳೆದೊಂದು ವಾರದಿಂದ ರಾಡಾರ್ ಮೋಡ, ಕವನ, ಸ್ಕ್ರಿಪ್ಟೆಡ್ ಸಂದರ್ಶನ, ಪ್ರಶ್ನೆಗಳಿಲ್ಲದ ಪತ್ರಿಕಾಗೋಷ್ಟಿ, ಈಗ ಐಟೆಕ್ ಧ್ಯಾನ ಸೇರಿದಂತೆ ಎಲ್ಲವೂ ವ್ಯಾಪಕ ಟೀಕೆಗೆ ಟ್ರೋಲ್ ಗೆ ಒಳಗಾಗಿವೆ. ಕಾರ್ಟೂನ್‍ಗಳಂತೂ ಒಂದನ್ನೊಂದು ಮೀರಿಸುವಷ್ಟು ಸೃಜನಶೀಲತೆಯಿಂದ ಕೂಡಿವೆ. ಆಡಳಿತ ಪಕ್ಷದ ನೀತಿಗಳು ಕುರಿತು ಹೀಗೆ ನಡೆದುಕೊಳ್ಳುವುದೇ ಪ್ರಜಾತಂತ್ರ. ಇದರಲ್ಲಿ ಮಾಧ್ಯಮಗಳು ನಡೆ ಪ್ರಜಾತಂತ್ರ ವಿರೋಧಿಯಾಗಿದೆ. ಆದರೆ ನೆಟ್ಟಿಗರು ಮಾತ್ರ ಟ್ರೋಲ್ ಮಾಡುವುದನ್ನು ಬಿಟ್ಟಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...