Homeನಿಜವೋ ಸುಳ್ಳೋ‘ರಿಪಬ್ಲಿಕ್’ ಆಫ್ ಮೋದಿ, ಮೀಡಿಯಾ ಆ್ಯಂಡ್ ಪಿಆರ್‍ಒಸ್:  ಓಟು, ಟಿಆರ್‍ಪಿಗಾಗಿ ಯಾವ ಮಟ್ಟಕ್ಕೂ.....

‘ರಿಪಬ್ಲಿಕ್’ ಆಫ್ ಮೋದಿ, ಮೀಡಿಯಾ ಆ್ಯಂಡ್ ಪಿಆರ್‍ಒಸ್:  ಓಟು, ಟಿಆರ್‍ಪಿಗಾಗಿ ಯಾವ ಮಟ್ಟಕ್ಕೂ…..

ನ್ಯೂಸ್ 18 ಕನ್ನಡ ಹಿನ್ನೆಲೆಯಲ್ಲಿ ಒಂದು ಭಕ್ತಿಯ ಹಾಡಿನ ಸಂಗೀತ ತೇಲಿಬಿಟ್ಟು ಪಾವನವಾಯಿತು. ಸಕಲ ಸೌಲಭ್ಯಗಳ ಆ ಕೃತಕ ಗುಹೆಯಲ್ಲಿ ಮೋದಿಯ ಕೃತಕ ಧ್ಯಾನದ ಬಗ್ಗೆ ಇವರಾರೂ ಚಕಾರ ಎತ್ತಲಿಲ್ಲ.

- Advertisement -
- Advertisement -

ಚುನಾವಣಾ ಪ್ರಚಾರ ಅಂತ್ಯವಾದ ನಂತರವೂ, ಮತದಾರರ ಮೇಲೆ ಪ್ರಭಾವ ಬೀರಲು ‘ಭಕ್ತಿ’ಯನ್ನೂ ಒಂದು ಸರಕಾಗಿಸಿದ ಮೋದಿ, ಮೀಡಿಯಾ ಮತ್ತು ಪಿಆರ್‍ಒಗಳ ರಿಪಬ್ಲಿಕ್ ಕಳೆದ ಐದು ವರ್ಷ ಇಂತಹ ಜನದ್ರೋಹ ಕೆಲಸದಲ್ಲೇ ನಿರತವಾಗಿತ್ತಲ್ಲವೇ?

ಆಯ್ತು, ಪ್ರಧಾನಿ ನರೇಂದ್ರ ಮೋದಿಯವರಿಗೆ ಭಕ್ತಿ ಉಕ್ಕಿ ಬಂದಿತ್ತು, ಅವರು ಕೇದಾರನಾಥಕ್ಕೆ ಹೋದರು. ಆದರೆ ಇದಿಷ್ಟನ್ನು ಜನರಿಗೆ ತಿಳಿಸಿಬಿಟ್ಟಿದ್ದರೆ ಮೀಡಿಯಾ ಕೆಲಸ ಮುಗಿದಿರೋದು. ಆದರೆ, ಬಹುಪಾಲು ದೃಶ್ಯ ಮಾಧ್ಯಮಗಳು ಇದನ್ನೊಂದು ತಪ್ಪಸ್ಸಿನಂತೆ ಬಿಂಬಿಸಿ, ಜನರನ್ನು ದಾರಿ ತಪ್ಪಿಸಲು ಯತ್ನಿಸಿದ್ದು ಅಸಹ್ಯವಾಗಿತ್ತು. ಪ್ರಧಾನಿ ಸಾಹೇಬರ ಪಿಆರ್‍ಒ ಟೀಮ್ ಅಂತೂ ಪ್ರಧಾನಿಯನ್ನು ಫ್ಯಾನ್ಸಿ ಡ್ರೆಸ್ ಮಾಡೆಲ್ ಮಟ್ಟಕ್ಕೆ ಇಳಿಸಿದೆ. ಮೋದಿ-ಮೀಡಿಯಾ-ಪಿಆರ್‍ಒ ‘ರಿಪಬ್ಲಿಕ್’ ಓಟು ಮತ್ತು ಟಿಆರ್‍ಪಿಗಾಗಿ ಯಾವ ಮಟ್ಟಕ್ಕೂ ಇಳಿಯಬಲ್ಲದು. ಆದರೆ, ಪಾಪ, ಈ ಸಲ ಏರಿದ್ದಾರೆ, ಕೇದಾರ ಬೆಟ್ಟ ಏರಿದ್ದಾರೆ! ಸೋ, ಯಾವ ಮಟ್ಟಕ್ಕಾದರೂ ಏರಬಲ್ಲರು ಅಂತ ಬೇಕಾದರೆ ಓದಿಕೊಳ್ಳಿ!

‘ಮುಂಜಾನೆಯೇ ಮೋದಿ ‘ಪರಿಕ್ರಮ’ ಮುಗಿಸಿ, 16 ಪೂಜಾವಿಧಾನಗಳನ್ನೂ ಮುಗಿಸಿ 2 ಕಿ.ಮೀ ಟ್ರೆಕ್ಕಿಂಗ್ ಮಾಡಿ ಗುಹೆ ತಲುಪಿ ಧ್ಯಾನಾಸಕ್ತರಾದರು. ಈ ವಯಸ್ಸಲ್ಲಿ ಇದೆಂತಹ ಶೃದ್ಧೆ, ಭಕ್ತಿ …ಅವರ ದೇಹಕ್ಕೆ ಸುಸ್ತೇ ಇಲ್ಲವೇನೋ?’ –ರಿಪಬ್ಲಿಕ್ ಟಿವಿಯ ನ್ಯೂಸ್ ಎಡಿಟರ್ ವಿವೇಕ್ ಶಾಂಡಿಲ್ಯನ ಸ್ಪಾಟ್ ವರದಿಯಿದು. ಪ್ರೈಮ್ ನ್ಯೂಸ್ ವರದಿ. ರಾತ್ರಿನೂ ಇತ್ತು. ಅದು ಅಲ್ಲದೇ ಇವತ್ತು ಸ್ಪೇಷಲ್ ಸ್ಟೋರಿ ಬೇರೆ ಐತಂತೆ!

‘ಮೋದಿ ಅಧಿಕಾರಿಗಳೊಂದಿಗೆ ಕೇದಾರನಾಥ ಪುನರ್‍ನಿರ್ಮಾಣದ ಕಾಮಗಾರಿ ಕುರಿತು ಚರ್ಚಿಸಿದರು.. ದುರ್ಗಮ ಹಾದಿಯಲ್ಲಿ ಕೋಲು ಹಿಡಿದು ಬೆಟ್ಟ ಏರಿದರು. ಆಗ ಅವರ ಮುಖದಲ್ಲಿ ಬೆವರಿತ್ತು’…-ಸೂಪರ್ ಇದಪ್ಪ ರಿಪೋರ್ಟಿಂಗ್ ಅಂದ್ರೆ!

ನ್ಯೂಸ್ 18 ಕನ್ನಡ ಹಿನ್ನೆಲೆಯಲ್ಲಿ ಒಂದು ಭಕ್ತಿಯ ಹಾಡಿನ ಸಂಗೀತ ತೇಲಿಬಿಟ್ಟು ಪಾವನವಾಯಿತು. ಸಕಲ ಸೌಲಭ್ಯಗಳ ಆ ಕೃತಕ ಗುಹೆಯಲ್ಲಿ ಮೋದಿಯ ಕೃತಕ ಧ್ಯಾನದ ಬಗ್ಗೆ ಇವರಾರೂ ಚಕಾರ ಎತ್ತಲಿಲ್ಲ. ಇದನ್ನು ಗೋದಿ ಮೀಡಿಯಾ ಎನ್ನದೆ ಬೇರೆ ಎನನ್ನಬೇಕು.

ಇದಕ್ಕೆ ವ್ಯತಿರಿಕ್ತವಾಗಿ ನೀವು ಸೋಷಿಯಲ್ ಮೀಡಿಯಾದಲ್ಲಿ ಕಣ್ಣಾಯಿಸಿದರೆ ಬರೀ ಮೋದಿ ಮೇಲಿನ ಟ್ರೋಲ್ ಗಳೇ ಕಾಣುತ್ತಿವೆ. ಕಳೆದೊಂದು ವಾರದಿಂದ ರಾಡಾರ್ ಮೋಡ, ಕವನ, ಸ್ಕ್ರಿಪ್ಟೆಡ್ ಸಂದರ್ಶನ, ಪ್ರಶ್ನೆಗಳಿಲ್ಲದ ಪತ್ರಿಕಾಗೋಷ್ಟಿ, ಈಗ ಐಟೆಕ್ ಧ್ಯಾನ ಸೇರಿದಂತೆ ಎಲ್ಲವೂ ವ್ಯಾಪಕ ಟೀಕೆಗೆ ಟ್ರೋಲ್ ಗೆ ಒಳಗಾಗಿವೆ. ಕಾರ್ಟೂನ್‍ಗಳಂತೂ ಒಂದನ್ನೊಂದು ಮೀರಿಸುವಷ್ಟು ಸೃಜನಶೀಲತೆಯಿಂದ ಕೂಡಿವೆ. ಆಡಳಿತ ಪಕ್ಷದ ನೀತಿಗಳು ಕುರಿತು ಹೀಗೆ ನಡೆದುಕೊಳ್ಳುವುದೇ ಪ್ರಜಾತಂತ್ರ. ಇದರಲ್ಲಿ ಮಾಧ್ಯಮಗಳು ನಡೆ ಪ್ರಜಾತಂತ್ರ ವಿರೋಧಿಯಾಗಿದೆ. ಆದರೆ ನೆಟ್ಟಿಗರು ಮಾತ್ರ ಟ್ರೋಲ್ ಮಾಡುವುದನ್ನು ಬಿಟ್ಟಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...