Homeಮುಖಪುಟದೆಹಲಿಯಾಚೆಯೇ ಟ್ಯ್ರಾಕ್ಟರ್ ರ‍್ಯಾಲಿ ನಡೆಸಿಯೆಂದ ಪೊಲೀಸರು: ದೆಹಲಿ ಒಳಗೇ ಶಾಂತಿಯುತ ರ‍್ಯಾಲಿಯೆಂದ ರೈತರು

ದೆಹಲಿಯಾಚೆಯೇ ಟ್ಯ್ರಾಕ್ಟರ್ ರ‍್ಯಾಲಿ ನಡೆಸಿಯೆಂದ ಪೊಲೀಸರು: ದೆಹಲಿ ಒಳಗೇ ಶಾಂತಿಯುತ ರ‍್ಯಾಲಿಯೆಂದ ರೈತರು

ರಾಜಧಾನಿಯ ಹೊರಭಾಗಕ್ಕೆ ಮಾತ್ರ ರ‍್ಯಾಲಿ ಸಿಮೀತವಾಗಿರಲಿ ಎಂದು ದೆಹಲಿ ಪೊಲೀಸರು ಬಯಸುತ್ತಿದ್ದಾರೆ. ಆದರೆ ಇದಕ್ಕೆ ರೈತರು ಒಪ್ಪಿಲ್ಲ ಎಂದು ಯೋಗೇಂದ್ರ ಯಾದವ್ ತಿಳಿಸಿದ್ದಾರೆ.

- Advertisement -
- Advertisement -

ಗಣರಾಜ್ಯೋತ್ಸವ ದಿನದಂದು ಪ್ರತಿಭಟನಾನಿರತ ರೈತರು ನಡೆಸಲು ಉದ್ದೇಶಿಸಿರುವ ಟ್ಯ್ರಾಕ್ಟರ್ ರ‍್ಯಾಲಿಯನ್ನು ದೆಹಲಿ ಒಳಕ್ಕೆ ಬರುವ ರಿಂಗ್ ರೋಡ್ ಬದಲು ಹೊರವಲಯದಲ್ಲೇ ನಡೆಸಲು ದೆಹಲಿ ಪೊಲೀಸ್ ಉನ್ನತಾಧಿಕಾರಿಗಳು ರೈತರನ್ನು ಮನವೊಲಿಸಲು ಗುರುವಾರವೂ ಯತ್ನಿಸಿದರು. ಆದರೆ ಇದಕ್ಕೆ ರೈತರು ಒಪ್ಪದೆ ದೆಹಲಿ ಒಳಗೆ ಶಾಂತಿಯುತವಾಗಿ ಟ್ಯ್ರಾಕ್ಟರ್ ರ‍್ಯಾಲಿ ನಡೆಸಲು ನಿರ್ಧರಿಸಿದ್ದಾರೆ.

ಸಿಂಘು ಗಡಿ ಬಳಿಯ ರೆಸಾರ್ಟ್ ಒಂದರಲ್ಲಿ ನಿನ್ನೆ ದೆಹಲಿ ಉತ್ತರ ಭಾಗದ ಜಂಟಿ ಪೊಲೀಸ್ ಆಯುಕ್ತ ಎಸ್‌ಎಸ್ ಯಾದವ್ ಮತ್ತು ಪಶ್ಚಿಮ ವಲಯದ ವಿಶೇಷ ಪೊಲೀಸ್ ಆಯುಕ್ತ (ಶಾಂತಿ ಮತ್ತು ಸುವ್ಯವಸ್ಥೆ) ಸಂಜಯ್ ಸಿಂಗ್, ಗುಪ್ತಚಾರ ವಿಭಾಗದ ದೀಪೇಂದ್ರ ಪಟ್ನಾಯಕ್ ಮುಂತಾದ ಹಿರಿಯ ಪೊಲೀಸ್ ಅಧಿಕಾರಿಗಳು ರೈತ ಸಂಘಟನೆಗಳ ನಾಯಕರ ಮನವೊಲಿಕೆಗೆ ಯತ್ನಿಸಿದರು. ಯೋಗೇಂದ್ರ ಯಾದವ್ ಸೇರಿದಂತೆ ಹಲವು ರೈತ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಸಭೆ ಬಳಿಕ ಮಾತನಾಡಿದ ಯೋಗೇಂದ್ರ ಯಾದವ್, ಪೊಲೀಸರ ಸಲಹೆ ಒಪ್ಪದ ರೈತರು ದೆಹಲಿಯ ಭಾಗವಾಗಿರುವ ರಿಂಗ್ ರೋಡಿನಲ್ಲೇ ಶಾಂತಿಯುತ ರ‍್ಯಾಲಿ ನಡೆಸುವುದಾಗಿ ಸ್ಪಷ್ಟಪಡಿಸಿದ್ದಾರೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ದೆಹಲಿ ಪೊಲೀಸರು ಸೋಮವಾರದಿಂದಲೂ ರೈತ ಸಂಘಟನೆಗಳ ಮನವೊಲಿಕೆಗೆ ಯತ್ನಿಸುತ್ತಲೇ ಬಂದಿದ್ದಾರೆ. ರ‍್ಯಾಲಿ ರದ್ದಿಗೆ ಆಗ್ರಹಿಸಿದ ಪೊಲೀಸರ ಅರ್ಜಿಗೆ ಮಾನ್ಯತೆ ನೀಡದ ಸುಪ್ರೀಂಕೋರ್ಟ್, ಅದನ್ನು ನೀವೇ ನಿರ್ಧರಿಸಿ ಎಂದು ಬುಧವಾರ ಪೊಲೀಸರಿಗೆ ತಿಳಿಸಿತ್ತು. ಈ ಕಾರಣಕ್ಕೆ ಇಂದು ಗುರುವಾರ ಉನ್ನತ ಪೊಲೀಸ್ ಅಧಿಕಾರಿಗಳು ಮತ್ತೊಮ್ಮೆ ರ‍್ಯಾಲಿ ರೂಟ್ ಬದಲಿಸುವಮತೆ ರೈತ ನಾಯಕರ ಮನವೊಲಿಕೆಗೆ ಯತ್ನಿಸಿದರು.

ಜ. 26 ಕ್ಕೆ ಟ್ರ್ಯಾಕ್ಟರ್ ರ್ಯಾಲಿ: ಬೆದರಿ ಸುಪ್ರೀಂ ಕೋರ್ಟ್‌ ಮೊರೆ ಹೋದ ಕೇಂದ್ರ ಸರ್ಕಾರ!

ರಿಂಗ್ ರೋಡ್‌ನಲ್ಲಿ ರ‍್ಯಾಲಿ ಬೇಡ ಮತ್ತು ಕಿಸಾನ್ ಘಾಟ್‌ನತ್ತ ರ‍್ಯಾಲಿ ಮುಂದುವರೆಯುವುದು ಬೇಡ ಎಂದಿರುವ ಪೊಲೀಸರ ಸಲಹೆಯನ್ನು ರೈತ ಸಂಘಟನೆಗಳ ನಾಯಕರು ಒಪ್ಪಿಕೊಂಡಿಲ್ಲ. ಆದರೆ ಪೊಲೀಸರ ಷರತ್ತಿಗೆ ಒಪ್ಪದ ರೈತ ಸಂಘಟನೆಗಳು ಹೊರ ರಿಂಗ್ ರೋಡಿನಲ್ಲೇ ರ‍್ಯಾಲಿ ನಡೆಯಲಿದೆ ಮತ್ತು ಅದು ಕಿಸಾನ್ ಘಾಟ್‌ವರೆಗೂ ನಡೆಯಲಿದೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ರಿಂಗ್‌ರಸ್ತೆಯ ಬದಲು ಕೆಎಂಪಿ ಎಕ್ಸ್‌ಪ್ರೆಸ್‌ ವೇನಲ್ಲಿ ರ‍್ಯಾಲಿ ನಡೆಸಿ ಮತ್ತು ಬೇರೆ ರೂಟ್‌ನತ್ತ ರ‍್ಯಾಲಿ ಬರುವುದು ಬೇಡ, ಕಿಸಾನ್‌ಘಾಟ್‌ನತ್ತಲೂ ಬೇಡ ಎಂದು ರೈತ ನಾಯಕರಿಗೆ ಮನವರಿಕೆ ಮಾಡಿಕೊಡಲು ದೆಹಲಿ ಪೊಲೀಸ್ ಅಧಿಕಾರಿಗಳು ಯತ್ನಿಸಿದ್ದು, ಅದನ್ನು ರೈತ ಸಂಘಟನೆಗಳು ಒಪ್ಪಿಲ್ಲ.

‘ಸಂಪೂರ್ಣ ಹೊರವಲಯಕ್ಕೆ ರ‍್ಯಾಲಿ ಸಿಮೀತಗೊಳಿಸಲು ಪೊಲೀಸರು ಸೂಚಿಸುತ್ತಿದ್ದಾರೆ. ಆದರೆ, ನಾವು ದೆಹಲಿಯ ಹೊರ ರಿಂಗ್‌ರೋಡಿನಲ್ಲೇ (ಇದು ದೆಹಲಿಯ ಭಾಗವೇ ಆಗಿದ್ದು, ಸಂಚಾರ ದಟ್ಟಣೆಯ ರಸ್ತೆಯಾಗಿದೆ) ರ‍್ಯಾಲಿ ಮಾಡಲಿದ್ದೇವೆ ಮತ್ತು ಗಣರಾಜ್ಯೋತ್ಸವ ಪರೇಡ್‌ಗೆ ಮತ್ತು ಸಾರ್ವಜನಿಕರಿಗೆ ತೊಂದರೆ ಅಗದಂತೆ ಶಾಂತಿಯು ರ‍್ಯಾಲಿ ಮಾಡುತ್ತೇವೆ’ ಎಂದು ರೈತ ನಾಯಕರು ತಿಳಿಸಿದ್ದಾರೆ.

‘ನಮ್ಮ ಪರೇಡ್ ಕೂಡ ಗಣರಾಜ್ಯೋತ್ಸವದ ಪರೇಡ್‌ನಂತೆ ಇರಲಿದೆ. ಹೊಸ ಕೃಷಿ ಕಾಯ್ದೆಗಳ ಅಪಾಯಗಳನ್ನು ಬಿಂಬಿಸುವ ಟ್ಯಾಬ್ಲೊಗಳು, ಭಿತ್ತಿಪತ್ರಗಳನ್ನು ಟ್ಯ್ರಾಕ್ಟರ್‌ಗಳ ಮೇಲೆ ಪ್ರದರ್ಶಿಸಲಾಗುವುದು. ವಿವಿಧ ರಾಜ್ಯಗಳ ರೈತ ಸಂಘಟನೆಗಳು ಅಲ್ಲಿನ ರೈತರ ಸಂಕಷ್ಟಗಳನ್ನು ಬಿಂಬಿಸುವ ಭಿತ್ತಿಪತ್ರಗಳನ್ನು ಪ್ರದರ್ಶಿಸಲಿವೆ’ ಎಂದು ರೈತ ಸಂಘಟನೆಗಳು ಈ ಮೊದಲೇ ತಿಳಿಸಿದ್ದವು.

ಸಿಂಘು, ಟಿಕ್ರಿ ಮತ್ತು ಘಾಜಿಯಾಪುರ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟದ ಸ್ಥಳಗಳಲ್ಲಿ ಹರಿಯಾಣ ಮತ್ತು ರಾಜಸ್ತಾನ್ ಪೊಲೀಸರು ಹೆಚ್ಚಿನ ಪೊಲೀಸರನ್ನು ಮತ್ತು ಆರ್‌ಎಎಫ್ ತುಕಡಿಗಳನ್ನು ನಿಯೋಜಿಸಿದ್ದಾರೆ. ಅಲ್ಲಲ್ಲಿ ತಾತ್ಕಾಲಿಕ ಬ್ಯಾರಿಕೇಡ್‌ಗಳನ್ನು ನಿರ್ಮಿಸಿದ್ದಾರೆ.


ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿಗೆ ಪೊಲೀಸರ ಕೆಲವು ಷರತ್ತುಗಳು: ಒಪ್ಪದ ರೈತ ಸಂಘಟನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...