Homeಮುಖಪುಟದೆಹಲಿಯಾಚೆಯೇ ಟ್ಯ್ರಾಕ್ಟರ್ ರ‍್ಯಾಲಿ ನಡೆಸಿಯೆಂದ ಪೊಲೀಸರು: ದೆಹಲಿ ಒಳಗೇ ಶಾಂತಿಯುತ ರ‍್ಯಾಲಿಯೆಂದ ರೈತರು

ದೆಹಲಿಯಾಚೆಯೇ ಟ್ಯ್ರಾಕ್ಟರ್ ರ‍್ಯಾಲಿ ನಡೆಸಿಯೆಂದ ಪೊಲೀಸರು: ದೆಹಲಿ ಒಳಗೇ ಶಾಂತಿಯುತ ರ‍್ಯಾಲಿಯೆಂದ ರೈತರು

ರಾಜಧಾನಿಯ ಹೊರಭಾಗಕ್ಕೆ ಮಾತ್ರ ರ‍್ಯಾಲಿ ಸಿಮೀತವಾಗಿರಲಿ ಎಂದು ದೆಹಲಿ ಪೊಲೀಸರು ಬಯಸುತ್ತಿದ್ದಾರೆ. ಆದರೆ ಇದಕ್ಕೆ ರೈತರು ಒಪ್ಪಿಲ್ಲ ಎಂದು ಯೋಗೇಂದ್ರ ಯಾದವ್ ತಿಳಿಸಿದ್ದಾರೆ.

- Advertisement -
- Advertisement -

ಗಣರಾಜ್ಯೋತ್ಸವ ದಿನದಂದು ಪ್ರತಿಭಟನಾನಿರತ ರೈತರು ನಡೆಸಲು ಉದ್ದೇಶಿಸಿರುವ ಟ್ಯ್ರಾಕ್ಟರ್ ರ‍್ಯಾಲಿಯನ್ನು ದೆಹಲಿ ಒಳಕ್ಕೆ ಬರುವ ರಿಂಗ್ ರೋಡ್ ಬದಲು ಹೊರವಲಯದಲ್ಲೇ ನಡೆಸಲು ದೆಹಲಿ ಪೊಲೀಸ್ ಉನ್ನತಾಧಿಕಾರಿಗಳು ರೈತರನ್ನು ಮನವೊಲಿಸಲು ಗುರುವಾರವೂ ಯತ್ನಿಸಿದರು. ಆದರೆ ಇದಕ್ಕೆ ರೈತರು ಒಪ್ಪದೆ ದೆಹಲಿ ಒಳಗೆ ಶಾಂತಿಯುತವಾಗಿ ಟ್ಯ್ರಾಕ್ಟರ್ ರ‍್ಯಾಲಿ ನಡೆಸಲು ನಿರ್ಧರಿಸಿದ್ದಾರೆ.

ಸಿಂಘು ಗಡಿ ಬಳಿಯ ರೆಸಾರ್ಟ್ ಒಂದರಲ್ಲಿ ನಿನ್ನೆ ದೆಹಲಿ ಉತ್ತರ ಭಾಗದ ಜಂಟಿ ಪೊಲೀಸ್ ಆಯುಕ್ತ ಎಸ್‌ಎಸ್ ಯಾದವ್ ಮತ್ತು ಪಶ್ಚಿಮ ವಲಯದ ವಿಶೇಷ ಪೊಲೀಸ್ ಆಯುಕ್ತ (ಶಾಂತಿ ಮತ್ತು ಸುವ್ಯವಸ್ಥೆ) ಸಂಜಯ್ ಸಿಂಗ್, ಗುಪ್ತಚಾರ ವಿಭಾಗದ ದೀಪೇಂದ್ರ ಪಟ್ನಾಯಕ್ ಮುಂತಾದ ಹಿರಿಯ ಪೊಲೀಸ್ ಅಧಿಕಾರಿಗಳು ರೈತ ಸಂಘಟನೆಗಳ ನಾಯಕರ ಮನವೊಲಿಕೆಗೆ ಯತ್ನಿಸಿದರು. ಯೋಗೇಂದ್ರ ಯಾದವ್ ಸೇರಿದಂತೆ ಹಲವು ರೈತ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಸಭೆ ಬಳಿಕ ಮಾತನಾಡಿದ ಯೋಗೇಂದ್ರ ಯಾದವ್, ಪೊಲೀಸರ ಸಲಹೆ ಒಪ್ಪದ ರೈತರು ದೆಹಲಿಯ ಭಾಗವಾಗಿರುವ ರಿಂಗ್ ರೋಡಿನಲ್ಲೇ ಶಾಂತಿಯುತ ರ‍್ಯಾಲಿ ನಡೆಸುವುದಾಗಿ ಸ್ಪಷ್ಟಪಡಿಸಿದ್ದಾರೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ದೆಹಲಿ ಪೊಲೀಸರು ಸೋಮವಾರದಿಂದಲೂ ರೈತ ಸಂಘಟನೆಗಳ ಮನವೊಲಿಕೆಗೆ ಯತ್ನಿಸುತ್ತಲೇ ಬಂದಿದ್ದಾರೆ. ರ‍್ಯಾಲಿ ರದ್ದಿಗೆ ಆಗ್ರಹಿಸಿದ ಪೊಲೀಸರ ಅರ್ಜಿಗೆ ಮಾನ್ಯತೆ ನೀಡದ ಸುಪ್ರೀಂಕೋರ್ಟ್, ಅದನ್ನು ನೀವೇ ನಿರ್ಧರಿಸಿ ಎಂದು ಬುಧವಾರ ಪೊಲೀಸರಿಗೆ ತಿಳಿಸಿತ್ತು. ಈ ಕಾರಣಕ್ಕೆ ಇಂದು ಗುರುವಾರ ಉನ್ನತ ಪೊಲೀಸ್ ಅಧಿಕಾರಿಗಳು ಮತ್ತೊಮ್ಮೆ ರ‍್ಯಾಲಿ ರೂಟ್ ಬದಲಿಸುವಮತೆ ರೈತ ನಾಯಕರ ಮನವೊಲಿಕೆಗೆ ಯತ್ನಿಸಿದರು.

ಜ. 26 ಕ್ಕೆ ಟ್ರ್ಯಾಕ್ಟರ್ ರ್ಯಾಲಿ: ಬೆದರಿ ಸುಪ್ರೀಂ ಕೋರ್ಟ್‌ ಮೊರೆ ಹೋದ ಕೇಂದ್ರ ಸರ್ಕಾರ!

ರಿಂಗ್ ರೋಡ್‌ನಲ್ಲಿ ರ‍್ಯಾಲಿ ಬೇಡ ಮತ್ತು ಕಿಸಾನ್ ಘಾಟ್‌ನತ್ತ ರ‍್ಯಾಲಿ ಮುಂದುವರೆಯುವುದು ಬೇಡ ಎಂದಿರುವ ಪೊಲೀಸರ ಸಲಹೆಯನ್ನು ರೈತ ಸಂಘಟನೆಗಳ ನಾಯಕರು ಒಪ್ಪಿಕೊಂಡಿಲ್ಲ. ಆದರೆ ಪೊಲೀಸರ ಷರತ್ತಿಗೆ ಒಪ್ಪದ ರೈತ ಸಂಘಟನೆಗಳು ಹೊರ ರಿಂಗ್ ರೋಡಿನಲ್ಲೇ ರ‍್ಯಾಲಿ ನಡೆಯಲಿದೆ ಮತ್ತು ಅದು ಕಿಸಾನ್ ಘಾಟ್‌ವರೆಗೂ ನಡೆಯಲಿದೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ರಿಂಗ್‌ರಸ್ತೆಯ ಬದಲು ಕೆಎಂಪಿ ಎಕ್ಸ್‌ಪ್ರೆಸ್‌ ವೇನಲ್ಲಿ ರ‍್ಯಾಲಿ ನಡೆಸಿ ಮತ್ತು ಬೇರೆ ರೂಟ್‌ನತ್ತ ರ‍್ಯಾಲಿ ಬರುವುದು ಬೇಡ, ಕಿಸಾನ್‌ಘಾಟ್‌ನತ್ತಲೂ ಬೇಡ ಎಂದು ರೈತ ನಾಯಕರಿಗೆ ಮನವರಿಕೆ ಮಾಡಿಕೊಡಲು ದೆಹಲಿ ಪೊಲೀಸ್ ಅಧಿಕಾರಿಗಳು ಯತ್ನಿಸಿದ್ದು, ಅದನ್ನು ರೈತ ಸಂಘಟನೆಗಳು ಒಪ್ಪಿಲ್ಲ.

‘ಸಂಪೂರ್ಣ ಹೊರವಲಯಕ್ಕೆ ರ‍್ಯಾಲಿ ಸಿಮೀತಗೊಳಿಸಲು ಪೊಲೀಸರು ಸೂಚಿಸುತ್ತಿದ್ದಾರೆ. ಆದರೆ, ನಾವು ದೆಹಲಿಯ ಹೊರ ರಿಂಗ್‌ರೋಡಿನಲ್ಲೇ (ಇದು ದೆಹಲಿಯ ಭಾಗವೇ ಆಗಿದ್ದು, ಸಂಚಾರ ದಟ್ಟಣೆಯ ರಸ್ತೆಯಾಗಿದೆ) ರ‍್ಯಾಲಿ ಮಾಡಲಿದ್ದೇವೆ ಮತ್ತು ಗಣರಾಜ್ಯೋತ್ಸವ ಪರೇಡ್‌ಗೆ ಮತ್ತು ಸಾರ್ವಜನಿಕರಿಗೆ ತೊಂದರೆ ಅಗದಂತೆ ಶಾಂತಿಯು ರ‍್ಯಾಲಿ ಮಾಡುತ್ತೇವೆ’ ಎಂದು ರೈತ ನಾಯಕರು ತಿಳಿಸಿದ್ದಾರೆ.

‘ನಮ್ಮ ಪರೇಡ್ ಕೂಡ ಗಣರಾಜ್ಯೋತ್ಸವದ ಪರೇಡ್‌ನಂತೆ ಇರಲಿದೆ. ಹೊಸ ಕೃಷಿ ಕಾಯ್ದೆಗಳ ಅಪಾಯಗಳನ್ನು ಬಿಂಬಿಸುವ ಟ್ಯಾಬ್ಲೊಗಳು, ಭಿತ್ತಿಪತ್ರಗಳನ್ನು ಟ್ಯ್ರಾಕ್ಟರ್‌ಗಳ ಮೇಲೆ ಪ್ರದರ್ಶಿಸಲಾಗುವುದು. ವಿವಿಧ ರಾಜ್ಯಗಳ ರೈತ ಸಂಘಟನೆಗಳು ಅಲ್ಲಿನ ರೈತರ ಸಂಕಷ್ಟಗಳನ್ನು ಬಿಂಬಿಸುವ ಭಿತ್ತಿಪತ್ರಗಳನ್ನು ಪ್ರದರ್ಶಿಸಲಿವೆ’ ಎಂದು ರೈತ ಸಂಘಟನೆಗಳು ಈ ಮೊದಲೇ ತಿಳಿಸಿದ್ದವು.

ಸಿಂಘು, ಟಿಕ್ರಿ ಮತ್ತು ಘಾಜಿಯಾಪುರ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟದ ಸ್ಥಳಗಳಲ್ಲಿ ಹರಿಯಾಣ ಮತ್ತು ರಾಜಸ್ತಾನ್ ಪೊಲೀಸರು ಹೆಚ್ಚಿನ ಪೊಲೀಸರನ್ನು ಮತ್ತು ಆರ್‌ಎಎಫ್ ತುಕಡಿಗಳನ್ನು ನಿಯೋಜಿಸಿದ್ದಾರೆ. ಅಲ್ಲಲ್ಲಿ ತಾತ್ಕಾಲಿಕ ಬ್ಯಾರಿಕೇಡ್‌ಗಳನ್ನು ನಿರ್ಮಿಸಿದ್ದಾರೆ.


ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿಗೆ ಪೊಲೀಸರ ಕೆಲವು ಷರತ್ತುಗಳು: ಒಪ್ಪದ ರೈತ ಸಂಘಟನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...