Homeಮುಖಪುಟದೆಹಲಿಯಾಚೆಯೇ ಟ್ಯ್ರಾಕ್ಟರ್ ರ‍್ಯಾಲಿ ನಡೆಸಿಯೆಂದ ಪೊಲೀಸರು: ದೆಹಲಿ ಒಳಗೇ ಶಾಂತಿಯುತ ರ‍್ಯಾಲಿಯೆಂದ ರೈತರು

ದೆಹಲಿಯಾಚೆಯೇ ಟ್ಯ್ರಾಕ್ಟರ್ ರ‍್ಯಾಲಿ ನಡೆಸಿಯೆಂದ ಪೊಲೀಸರು: ದೆಹಲಿ ಒಳಗೇ ಶಾಂತಿಯುತ ರ‍್ಯಾಲಿಯೆಂದ ರೈತರು

ರಾಜಧಾನಿಯ ಹೊರಭಾಗಕ್ಕೆ ಮಾತ್ರ ರ‍್ಯಾಲಿ ಸಿಮೀತವಾಗಿರಲಿ ಎಂದು ದೆಹಲಿ ಪೊಲೀಸರು ಬಯಸುತ್ತಿದ್ದಾರೆ. ಆದರೆ ಇದಕ್ಕೆ ರೈತರು ಒಪ್ಪಿಲ್ಲ ಎಂದು ಯೋಗೇಂದ್ರ ಯಾದವ್ ತಿಳಿಸಿದ್ದಾರೆ.

- Advertisement -
- Advertisement -

ಗಣರಾಜ್ಯೋತ್ಸವ ದಿನದಂದು ಪ್ರತಿಭಟನಾನಿರತ ರೈತರು ನಡೆಸಲು ಉದ್ದೇಶಿಸಿರುವ ಟ್ಯ್ರಾಕ್ಟರ್ ರ‍್ಯಾಲಿಯನ್ನು ದೆಹಲಿ ಒಳಕ್ಕೆ ಬರುವ ರಿಂಗ್ ರೋಡ್ ಬದಲು ಹೊರವಲಯದಲ್ಲೇ ನಡೆಸಲು ದೆಹಲಿ ಪೊಲೀಸ್ ಉನ್ನತಾಧಿಕಾರಿಗಳು ರೈತರನ್ನು ಮನವೊಲಿಸಲು ಗುರುವಾರವೂ ಯತ್ನಿಸಿದರು. ಆದರೆ ಇದಕ್ಕೆ ರೈತರು ಒಪ್ಪದೆ ದೆಹಲಿ ಒಳಗೆ ಶಾಂತಿಯುತವಾಗಿ ಟ್ಯ್ರಾಕ್ಟರ್ ರ‍್ಯಾಲಿ ನಡೆಸಲು ನಿರ್ಧರಿಸಿದ್ದಾರೆ.

ಸಿಂಘು ಗಡಿ ಬಳಿಯ ರೆಸಾರ್ಟ್ ಒಂದರಲ್ಲಿ ನಿನ್ನೆ ದೆಹಲಿ ಉತ್ತರ ಭಾಗದ ಜಂಟಿ ಪೊಲೀಸ್ ಆಯುಕ್ತ ಎಸ್‌ಎಸ್ ಯಾದವ್ ಮತ್ತು ಪಶ್ಚಿಮ ವಲಯದ ವಿಶೇಷ ಪೊಲೀಸ್ ಆಯುಕ್ತ (ಶಾಂತಿ ಮತ್ತು ಸುವ್ಯವಸ್ಥೆ) ಸಂಜಯ್ ಸಿಂಗ್, ಗುಪ್ತಚಾರ ವಿಭಾಗದ ದೀಪೇಂದ್ರ ಪಟ್ನಾಯಕ್ ಮುಂತಾದ ಹಿರಿಯ ಪೊಲೀಸ್ ಅಧಿಕಾರಿಗಳು ರೈತ ಸಂಘಟನೆಗಳ ನಾಯಕರ ಮನವೊಲಿಕೆಗೆ ಯತ್ನಿಸಿದರು. ಯೋಗೇಂದ್ರ ಯಾದವ್ ಸೇರಿದಂತೆ ಹಲವು ರೈತ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಸಭೆ ಬಳಿಕ ಮಾತನಾಡಿದ ಯೋಗೇಂದ್ರ ಯಾದವ್, ಪೊಲೀಸರ ಸಲಹೆ ಒಪ್ಪದ ರೈತರು ದೆಹಲಿಯ ಭಾಗವಾಗಿರುವ ರಿಂಗ್ ರೋಡಿನಲ್ಲೇ ಶಾಂತಿಯುತ ರ‍್ಯಾಲಿ ನಡೆಸುವುದಾಗಿ ಸ್ಪಷ್ಟಪಡಿಸಿದ್ದಾರೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ದೆಹಲಿ ಪೊಲೀಸರು ಸೋಮವಾರದಿಂದಲೂ ರೈತ ಸಂಘಟನೆಗಳ ಮನವೊಲಿಕೆಗೆ ಯತ್ನಿಸುತ್ತಲೇ ಬಂದಿದ್ದಾರೆ. ರ‍್ಯಾಲಿ ರದ್ದಿಗೆ ಆಗ್ರಹಿಸಿದ ಪೊಲೀಸರ ಅರ್ಜಿಗೆ ಮಾನ್ಯತೆ ನೀಡದ ಸುಪ್ರೀಂಕೋರ್ಟ್, ಅದನ್ನು ನೀವೇ ನಿರ್ಧರಿಸಿ ಎಂದು ಬುಧವಾರ ಪೊಲೀಸರಿಗೆ ತಿಳಿಸಿತ್ತು. ಈ ಕಾರಣಕ್ಕೆ ಇಂದು ಗುರುವಾರ ಉನ್ನತ ಪೊಲೀಸ್ ಅಧಿಕಾರಿಗಳು ಮತ್ತೊಮ್ಮೆ ರ‍್ಯಾಲಿ ರೂಟ್ ಬದಲಿಸುವಮತೆ ರೈತ ನಾಯಕರ ಮನವೊಲಿಕೆಗೆ ಯತ್ನಿಸಿದರು.

ಜ. 26 ಕ್ಕೆ ಟ್ರ್ಯಾಕ್ಟರ್ ರ್ಯಾಲಿ: ಬೆದರಿ ಸುಪ್ರೀಂ ಕೋರ್ಟ್‌ ಮೊರೆ ಹೋದ ಕೇಂದ್ರ ಸರ್ಕಾರ!

ರಿಂಗ್ ರೋಡ್‌ನಲ್ಲಿ ರ‍್ಯಾಲಿ ಬೇಡ ಮತ್ತು ಕಿಸಾನ್ ಘಾಟ್‌ನತ್ತ ರ‍್ಯಾಲಿ ಮುಂದುವರೆಯುವುದು ಬೇಡ ಎಂದಿರುವ ಪೊಲೀಸರ ಸಲಹೆಯನ್ನು ರೈತ ಸಂಘಟನೆಗಳ ನಾಯಕರು ಒಪ್ಪಿಕೊಂಡಿಲ್ಲ. ಆದರೆ ಪೊಲೀಸರ ಷರತ್ತಿಗೆ ಒಪ್ಪದ ರೈತ ಸಂಘಟನೆಗಳು ಹೊರ ರಿಂಗ್ ರೋಡಿನಲ್ಲೇ ರ‍್ಯಾಲಿ ನಡೆಯಲಿದೆ ಮತ್ತು ಅದು ಕಿಸಾನ್ ಘಾಟ್‌ವರೆಗೂ ನಡೆಯಲಿದೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ರಿಂಗ್‌ರಸ್ತೆಯ ಬದಲು ಕೆಎಂಪಿ ಎಕ್ಸ್‌ಪ್ರೆಸ್‌ ವೇನಲ್ಲಿ ರ‍್ಯಾಲಿ ನಡೆಸಿ ಮತ್ತು ಬೇರೆ ರೂಟ್‌ನತ್ತ ರ‍್ಯಾಲಿ ಬರುವುದು ಬೇಡ, ಕಿಸಾನ್‌ಘಾಟ್‌ನತ್ತಲೂ ಬೇಡ ಎಂದು ರೈತ ನಾಯಕರಿಗೆ ಮನವರಿಕೆ ಮಾಡಿಕೊಡಲು ದೆಹಲಿ ಪೊಲೀಸ್ ಅಧಿಕಾರಿಗಳು ಯತ್ನಿಸಿದ್ದು, ಅದನ್ನು ರೈತ ಸಂಘಟನೆಗಳು ಒಪ್ಪಿಲ್ಲ.

‘ಸಂಪೂರ್ಣ ಹೊರವಲಯಕ್ಕೆ ರ‍್ಯಾಲಿ ಸಿಮೀತಗೊಳಿಸಲು ಪೊಲೀಸರು ಸೂಚಿಸುತ್ತಿದ್ದಾರೆ. ಆದರೆ, ನಾವು ದೆಹಲಿಯ ಹೊರ ರಿಂಗ್‌ರೋಡಿನಲ್ಲೇ (ಇದು ದೆಹಲಿಯ ಭಾಗವೇ ಆಗಿದ್ದು, ಸಂಚಾರ ದಟ್ಟಣೆಯ ರಸ್ತೆಯಾಗಿದೆ) ರ‍್ಯಾಲಿ ಮಾಡಲಿದ್ದೇವೆ ಮತ್ತು ಗಣರಾಜ್ಯೋತ್ಸವ ಪರೇಡ್‌ಗೆ ಮತ್ತು ಸಾರ್ವಜನಿಕರಿಗೆ ತೊಂದರೆ ಅಗದಂತೆ ಶಾಂತಿಯು ರ‍್ಯಾಲಿ ಮಾಡುತ್ತೇವೆ’ ಎಂದು ರೈತ ನಾಯಕರು ತಿಳಿಸಿದ್ದಾರೆ.

‘ನಮ್ಮ ಪರೇಡ್ ಕೂಡ ಗಣರಾಜ್ಯೋತ್ಸವದ ಪರೇಡ್‌ನಂತೆ ಇರಲಿದೆ. ಹೊಸ ಕೃಷಿ ಕಾಯ್ದೆಗಳ ಅಪಾಯಗಳನ್ನು ಬಿಂಬಿಸುವ ಟ್ಯಾಬ್ಲೊಗಳು, ಭಿತ್ತಿಪತ್ರಗಳನ್ನು ಟ್ಯ್ರಾಕ್ಟರ್‌ಗಳ ಮೇಲೆ ಪ್ರದರ್ಶಿಸಲಾಗುವುದು. ವಿವಿಧ ರಾಜ್ಯಗಳ ರೈತ ಸಂಘಟನೆಗಳು ಅಲ್ಲಿನ ರೈತರ ಸಂಕಷ್ಟಗಳನ್ನು ಬಿಂಬಿಸುವ ಭಿತ್ತಿಪತ್ರಗಳನ್ನು ಪ್ರದರ್ಶಿಸಲಿವೆ’ ಎಂದು ರೈತ ಸಂಘಟನೆಗಳು ಈ ಮೊದಲೇ ತಿಳಿಸಿದ್ದವು.

ಸಿಂಘು, ಟಿಕ್ರಿ ಮತ್ತು ಘಾಜಿಯಾಪುರ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟದ ಸ್ಥಳಗಳಲ್ಲಿ ಹರಿಯಾಣ ಮತ್ತು ರಾಜಸ್ತಾನ್ ಪೊಲೀಸರು ಹೆಚ್ಚಿನ ಪೊಲೀಸರನ್ನು ಮತ್ತು ಆರ್‌ಎಎಫ್ ತುಕಡಿಗಳನ್ನು ನಿಯೋಜಿಸಿದ್ದಾರೆ. ಅಲ್ಲಲ್ಲಿ ತಾತ್ಕಾಲಿಕ ಬ್ಯಾರಿಕೇಡ್‌ಗಳನ್ನು ನಿರ್ಮಿಸಿದ್ದಾರೆ.


ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿಗೆ ಪೊಲೀಸರ ಕೆಲವು ಷರತ್ತುಗಳು: ಒಪ್ಪದ ರೈತ ಸಂಘಟನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...