Homeಮುಖಪುಟಗಣರಾಜ್ಯೋತ್ಸವ ಪರೇಡ್‌‌ ಟ್ಯಾಬ್ಲೊ ವಿವಾದ: ಒಕ್ಕೂಟ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌

ಗಣರಾಜ್ಯೋತ್ಸವ ಪರೇಡ್‌‌ ಟ್ಯಾಬ್ಲೊ ವಿವಾದ: ಒಕ್ಕೂಟ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌

- Advertisement -
- Advertisement -

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ಮಂಗಳವಾರ ಪತ್ರ ಬರೆದಿದ್ದು, ಅದರಲ್ಲಿ ಎರಡೂ ರಾಜ್ಯಗಳ ಟ್ಯಾಬ್ಲೋಗಳನ್ನು ನಿರಾಕರಿಸಿರುವ ತಮ್ಮ ಸರ್ಕಾರದ ನಿರ್ಧಾರಗಳನ್ನು ಸಮರ್ಥಿಸಿಕೊಂಡಿದ್ದಾರೆ. ಪತ್ರದಲ್ಲಿ ಅವರು, ಗಣರಾಜ್ಯೋತ್ಸವದ ಪರೇಡ್‌ಗೆ ಟ್ಯಾಬ್ಲೊಗಳನ್ನು ಆಯ್ಕೆ ಮಾಡುವ ನಿರ್ಧಾರಗಳನ್ನು ವಿವರವಾದ ಮಾರ್ಗಸೂಚಿಗಳ ಪ್ರಕಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಎರಡೂ ರಾಜ್ಯಗಳಿಂದ ಟ್ಯಾಬ್ಲೋ ಪ್ರಸ್ತಾಪಗಳನ್ನು ತಿರಸ್ಕರಿಸಿರುವುದರಿಂದ ಇದು ವಿವಾದವಾಗಿದ್ದು, ತೀವ್ರ ವಿವಾದಕ್ಕೆ ಗುರಿಯಾಗಿದೆ. ಈ ನಡುವೆ ರಕ್ಷಣಾ ಸಚಿವರು ಮುಖ್ಯಮಂತ್ರಿಗಳಿಬ್ಬರಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ:ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ ವಿವಾದ: ಸುಳ್ಳು ಹೇಳಿದ ಸಚಿವ ಸುನಿಲ್ ಕುಮಾರ್‌?

ಪಶ್ಚಿಮ ಬಂಗಾಳವು ನೇತಾಜಿ ಸುಭಾಸ್ ಚಂದ್ರ ಬೋಸ್ ಮತ್ತು ಸ್ವಾತಂತ್ರ್ಯ ಚಳುವಳಿಗೆ ಭಾರತೀಯ ರಾಷ್ಟ್ರೀಯ ಸೇನೆಯ ಕೊಡುಗೆಯ ಬಗ್ಗೆಗಿನ ಟ್ಯಾಬ್ಲೋಗಳನ್ನು ಪ್ರದರ್ಶಿಸಿದರೆ, ತಮಿಳುನಾಡು ಸಲ್ಲಿಸಿದ ವಿನ್ಯಾಸದಲ್ಲಿ ಸ್ವಾತಂತ್ಯ್ರ ಹೋರಾಟಗಾರ ಸುಬ್ರಮಣ್ಯ ಭಾರತಿ, ವಿ.ಒ. ಚಿದಂಬರನಾರ್ ಮತ್ತು ವೇಲು ನಾಚಿಯಾರ್‌ ಅವರಂತಹ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರ ಚಿತ್ರಣ ಒಳಗೊಂಡಿತ್ತು.

ರಕ್ಷಣಾ ಸಚಿವರು ಮಮತಾ ಬ್ಯಾನರ್ಜಿ ಅವರಿಗೆ ಬರೆದ ಪತ್ರದಲ್ಲಿ, “ನರೇಂದ್ರ ಮೋದಿ ಸರ್ಕಾರವು ನೇತಾಜಿಯನ್ನು ಹೆಚ್ಚು ಗೌರವಿಸುತ್ತದೆ. ಅವರ ಜನ್ಮದಿನವಾದ ಜನವರಿ 23 ಅನ್ನು ‘ಪರಾಕ್ರಮ್ ದಿವಸ್’ ಎಂದು ಆಚರಿಸುತ್ತದೆ. ಇನ್ನು ಮುಂದೆ ಅವರ ಜನ್ಮ ದಿನಾಚರಣೆಯೊಂದಿಗೆ ಗಣರಾಜ್ಯೋತ್ಸವ ಆಚರಣೆಗಳು ಆರಂಭಗೊಂಡು ಜನವರಿ 30 ರಂದು ಮುಕ್ತಾಯಗೊಳ್ಳಲಿದೆ” ಎಂದು ಹೇಳಿದ್ದಾರೆ.

ಗಣರಾಜ್ಯೋತ್ಸವ ಪರೇಡ್‌ಗಾಗಿ ಟ್ಯಾಬ್ಲೊಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯು ಪಾರದರ್ಶಕವಾಗಿದೆ ಮತ್ತು ಸೂಕ್ತ ಮಾರ್ಗಸೂಚಿಗಳನ್ನು ಅನುಸರಿಸುತ್ತದೆ ಎಂದು ರಾಜನಾಥ್‌ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ:ಗಣರಾಜ್ಯೋತ್ಸವ ಟ್ಯಾಬ್ಲೊ: ತಮಿಳುನಾಡಿಗೂ ನಿರಾಕರಣೆ; ಸ್ವಾತಂತ್ಯ್ರ ಹೋರಾಟಗಾರನನ್ನು ‘ವ್ಯಾಪಾರಿ’ ಎಂದು ಕರೆದ ಒಕ್ಕೂಟ ಸರ್ಕಾರ

ಕಲೆ, ಸಂಸ್ಕೃತಿ, ಸಂಗೀತ ಮತ್ತು ನೃತ್ಯ ಕ್ಷೇತ್ರಗಳ ವ್ಯಕ್ತಿಗಳನ್ನು ಒಳಗೊಂಡ ಸಮಿತಿಯು ರಾಜ್ಯಗಳು ಕಳುಹಿಸಿರುವ ವಿನ್ಯಾಸ ಪ್ರಸ್ತಾವನೆಗಳನ್ನು ಪರಿಶೀಲಿಸುತ್ತದೆ ಮತ್ತು ಯಾವುದನ್ನು ಆಯ್ಕೆ ಮಾಡಬೇಕೆಂದು ನಿರ್ಧರಿಸುತ್ತದೆ ಎಂದು ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಈ ವರ್ಷ 29 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಕಳುಹಿಸಿದ ವಿನ್ಯಾಸಗಳಲ್ಲಿ 12 ವಿನ್ಯಾಸ ಪ್ರಸ್ತಾವನೆಗಳನ್ನು ಆಯ್ಕೆ ಮಾಡಲಾಗಿದೆ ಎಂದು ರಾಜನಾಥ್‌ ಸಿಂಗ್ ಹೇಳಿದ್ದಾರೆ.

ನೇತಾಜಿಯವರ 125ನೇ ಜನ್ಮದಿನಾಚರಣೆಯಂದು ಒಕ್ಕೂಟ ಸರ್ಕಾರದ ಲೋಕೋಪಯೋಗಿ ಇಲಾಖೆಯ ಟ್ಯಾಬ್ಲೋ ಕೂಡ ನೇತಾಜಿ ಅವರಿಗೆ ಗೌರವ ಸಲ್ಲಿಸುತ್ತದೆ ಎಂದು ಅವರು ಹೇಳಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ, “ಟ್ಯಾಬ್ಲೊ ಆಯ್ಕೆಯನ್ನು ನಿಗದಿಪಡಿಸಿದ ಮಾರ್ಗಸೂಚಿಗಳ ಪ್ರಕಾರ ಮಾಡಲಾಗುತ್ತದೆ. ತಮಿಳುನಾಡಿನ ವಿನ್ಯಾಸವು ಮೊದಲ ಮೂರು ಸುತ್ತಿನ ಸಭೆಗಳಲ್ಲಿ ಆಯ್ಕೆಯಾಗಿದ್ದರೂ, ಅದನ್ನು ಅಂತಿಮವಾಗಿ ಆಯ್ಕೆ ಮಾಡಿದ 12 ಟ್ಯಾಬ್ಲೊಗಳಲ್ಲಿ ಅದನ್ನು ಆಯ್ಕೆ ಮಾಡಲು ಸಾಧ್ಯವಾಗಲಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಸತತ 3 ನೇ ಬಾರಿ ಗಣರಾಜ್ಯೋತ್ಸವ ಪರೇಡ್‌ನಿಂದ ಕೇರಳ ಹೊರಕ್ಕೆ: ನಾರಾಯಣ ಗುರು ಸ್ತಬ್ಧಚಿತ್ರ ಪ್ರದರ್ಶನಕ್ಕೆ ಕೇಂದ್ರದ ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...