Homeಮುಖಪುಟಗಣರಾಜ್ಯೋತ್ಸವ ಪರೇಡ್‌‌ ಟ್ಯಾಬ್ಲೊ ವಿವಾದ: ಒಕ್ಕೂಟ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌

ಗಣರಾಜ್ಯೋತ್ಸವ ಪರೇಡ್‌‌ ಟ್ಯಾಬ್ಲೊ ವಿವಾದ: ಒಕ್ಕೂಟ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌

- Advertisement -
- Advertisement -

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ಮಂಗಳವಾರ ಪತ್ರ ಬರೆದಿದ್ದು, ಅದರಲ್ಲಿ ಎರಡೂ ರಾಜ್ಯಗಳ ಟ್ಯಾಬ್ಲೋಗಳನ್ನು ನಿರಾಕರಿಸಿರುವ ತಮ್ಮ ಸರ್ಕಾರದ ನಿರ್ಧಾರಗಳನ್ನು ಸಮರ್ಥಿಸಿಕೊಂಡಿದ್ದಾರೆ. ಪತ್ರದಲ್ಲಿ ಅವರು, ಗಣರಾಜ್ಯೋತ್ಸವದ ಪರೇಡ್‌ಗೆ ಟ್ಯಾಬ್ಲೊಗಳನ್ನು ಆಯ್ಕೆ ಮಾಡುವ ನಿರ್ಧಾರಗಳನ್ನು ವಿವರವಾದ ಮಾರ್ಗಸೂಚಿಗಳ ಪ್ರಕಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಎರಡೂ ರಾಜ್ಯಗಳಿಂದ ಟ್ಯಾಬ್ಲೋ ಪ್ರಸ್ತಾಪಗಳನ್ನು ತಿರಸ್ಕರಿಸಿರುವುದರಿಂದ ಇದು ವಿವಾದವಾಗಿದ್ದು, ತೀವ್ರ ವಿವಾದಕ್ಕೆ ಗುರಿಯಾಗಿದೆ. ಈ ನಡುವೆ ರಕ್ಷಣಾ ಸಚಿವರು ಮುಖ್ಯಮಂತ್ರಿಗಳಿಬ್ಬರಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ:ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ ವಿವಾದ: ಸುಳ್ಳು ಹೇಳಿದ ಸಚಿವ ಸುನಿಲ್ ಕುಮಾರ್‌?

ಪಶ್ಚಿಮ ಬಂಗಾಳವು ನೇತಾಜಿ ಸುಭಾಸ್ ಚಂದ್ರ ಬೋಸ್ ಮತ್ತು ಸ್ವಾತಂತ್ರ್ಯ ಚಳುವಳಿಗೆ ಭಾರತೀಯ ರಾಷ್ಟ್ರೀಯ ಸೇನೆಯ ಕೊಡುಗೆಯ ಬಗ್ಗೆಗಿನ ಟ್ಯಾಬ್ಲೋಗಳನ್ನು ಪ್ರದರ್ಶಿಸಿದರೆ, ತಮಿಳುನಾಡು ಸಲ್ಲಿಸಿದ ವಿನ್ಯಾಸದಲ್ಲಿ ಸ್ವಾತಂತ್ಯ್ರ ಹೋರಾಟಗಾರ ಸುಬ್ರಮಣ್ಯ ಭಾರತಿ, ವಿ.ಒ. ಚಿದಂಬರನಾರ್ ಮತ್ತು ವೇಲು ನಾಚಿಯಾರ್‌ ಅವರಂತಹ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರ ಚಿತ್ರಣ ಒಳಗೊಂಡಿತ್ತು.

ರಕ್ಷಣಾ ಸಚಿವರು ಮಮತಾ ಬ್ಯಾನರ್ಜಿ ಅವರಿಗೆ ಬರೆದ ಪತ್ರದಲ್ಲಿ, “ನರೇಂದ್ರ ಮೋದಿ ಸರ್ಕಾರವು ನೇತಾಜಿಯನ್ನು ಹೆಚ್ಚು ಗೌರವಿಸುತ್ತದೆ. ಅವರ ಜನ್ಮದಿನವಾದ ಜನವರಿ 23 ಅನ್ನು ‘ಪರಾಕ್ರಮ್ ದಿವಸ್’ ಎಂದು ಆಚರಿಸುತ್ತದೆ. ಇನ್ನು ಮುಂದೆ ಅವರ ಜನ್ಮ ದಿನಾಚರಣೆಯೊಂದಿಗೆ ಗಣರಾಜ್ಯೋತ್ಸವ ಆಚರಣೆಗಳು ಆರಂಭಗೊಂಡು ಜನವರಿ 30 ರಂದು ಮುಕ್ತಾಯಗೊಳ್ಳಲಿದೆ” ಎಂದು ಹೇಳಿದ್ದಾರೆ.

ಗಣರಾಜ್ಯೋತ್ಸವ ಪರೇಡ್‌ಗಾಗಿ ಟ್ಯಾಬ್ಲೊಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯು ಪಾರದರ್ಶಕವಾಗಿದೆ ಮತ್ತು ಸೂಕ್ತ ಮಾರ್ಗಸೂಚಿಗಳನ್ನು ಅನುಸರಿಸುತ್ತದೆ ಎಂದು ರಾಜನಾಥ್‌ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ:ಗಣರಾಜ್ಯೋತ್ಸವ ಟ್ಯಾಬ್ಲೊ: ತಮಿಳುನಾಡಿಗೂ ನಿರಾಕರಣೆ; ಸ್ವಾತಂತ್ಯ್ರ ಹೋರಾಟಗಾರನನ್ನು ‘ವ್ಯಾಪಾರಿ’ ಎಂದು ಕರೆದ ಒಕ್ಕೂಟ ಸರ್ಕಾರ

ಕಲೆ, ಸಂಸ್ಕೃತಿ, ಸಂಗೀತ ಮತ್ತು ನೃತ್ಯ ಕ್ಷೇತ್ರಗಳ ವ್ಯಕ್ತಿಗಳನ್ನು ಒಳಗೊಂಡ ಸಮಿತಿಯು ರಾಜ್ಯಗಳು ಕಳುಹಿಸಿರುವ ವಿನ್ಯಾಸ ಪ್ರಸ್ತಾವನೆಗಳನ್ನು ಪರಿಶೀಲಿಸುತ್ತದೆ ಮತ್ತು ಯಾವುದನ್ನು ಆಯ್ಕೆ ಮಾಡಬೇಕೆಂದು ನಿರ್ಧರಿಸುತ್ತದೆ ಎಂದು ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಈ ವರ್ಷ 29 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಕಳುಹಿಸಿದ ವಿನ್ಯಾಸಗಳಲ್ಲಿ 12 ವಿನ್ಯಾಸ ಪ್ರಸ್ತಾವನೆಗಳನ್ನು ಆಯ್ಕೆ ಮಾಡಲಾಗಿದೆ ಎಂದು ರಾಜನಾಥ್‌ ಸಿಂಗ್ ಹೇಳಿದ್ದಾರೆ.

ನೇತಾಜಿಯವರ 125ನೇ ಜನ್ಮದಿನಾಚರಣೆಯಂದು ಒಕ್ಕೂಟ ಸರ್ಕಾರದ ಲೋಕೋಪಯೋಗಿ ಇಲಾಖೆಯ ಟ್ಯಾಬ್ಲೋ ಕೂಡ ನೇತಾಜಿ ಅವರಿಗೆ ಗೌರವ ಸಲ್ಲಿಸುತ್ತದೆ ಎಂದು ಅವರು ಹೇಳಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ, “ಟ್ಯಾಬ್ಲೊ ಆಯ್ಕೆಯನ್ನು ನಿಗದಿಪಡಿಸಿದ ಮಾರ್ಗಸೂಚಿಗಳ ಪ್ರಕಾರ ಮಾಡಲಾಗುತ್ತದೆ. ತಮಿಳುನಾಡಿನ ವಿನ್ಯಾಸವು ಮೊದಲ ಮೂರು ಸುತ್ತಿನ ಸಭೆಗಳಲ್ಲಿ ಆಯ್ಕೆಯಾಗಿದ್ದರೂ, ಅದನ್ನು ಅಂತಿಮವಾಗಿ ಆಯ್ಕೆ ಮಾಡಿದ 12 ಟ್ಯಾಬ್ಲೊಗಳಲ್ಲಿ ಅದನ್ನು ಆಯ್ಕೆ ಮಾಡಲು ಸಾಧ್ಯವಾಗಲಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಸತತ 3 ನೇ ಬಾರಿ ಗಣರಾಜ್ಯೋತ್ಸವ ಪರೇಡ್‌ನಿಂದ ಕೇರಳ ಹೊರಕ್ಕೆ: ನಾರಾಯಣ ಗುರು ಸ್ತಬ್ಧಚಿತ್ರ ಪ್ರದರ್ಶನಕ್ಕೆ ಕೇಂದ್ರದ ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....