Homeಮುಖಪುಟಗಣರಾಜ್ಯೋತ್ಸವ ಪರೇಡ್‌‌ ಟ್ಯಾಬ್ಲೊ ವಿವಾದ: ಒಕ್ಕೂಟ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌

ಗಣರಾಜ್ಯೋತ್ಸವ ಪರೇಡ್‌‌ ಟ್ಯಾಬ್ಲೊ ವಿವಾದ: ಒಕ್ಕೂಟ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌

- Advertisement -
- Advertisement -

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ಮಂಗಳವಾರ ಪತ್ರ ಬರೆದಿದ್ದು, ಅದರಲ್ಲಿ ಎರಡೂ ರಾಜ್ಯಗಳ ಟ್ಯಾಬ್ಲೋಗಳನ್ನು ನಿರಾಕರಿಸಿರುವ ತಮ್ಮ ಸರ್ಕಾರದ ನಿರ್ಧಾರಗಳನ್ನು ಸಮರ್ಥಿಸಿಕೊಂಡಿದ್ದಾರೆ. ಪತ್ರದಲ್ಲಿ ಅವರು, ಗಣರಾಜ್ಯೋತ್ಸವದ ಪರೇಡ್‌ಗೆ ಟ್ಯಾಬ್ಲೊಗಳನ್ನು ಆಯ್ಕೆ ಮಾಡುವ ನಿರ್ಧಾರಗಳನ್ನು ವಿವರವಾದ ಮಾರ್ಗಸೂಚಿಗಳ ಪ್ರಕಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಎರಡೂ ರಾಜ್ಯಗಳಿಂದ ಟ್ಯಾಬ್ಲೋ ಪ್ರಸ್ತಾಪಗಳನ್ನು ತಿರಸ್ಕರಿಸಿರುವುದರಿಂದ ಇದು ವಿವಾದವಾಗಿದ್ದು, ತೀವ್ರ ವಿವಾದಕ್ಕೆ ಗುರಿಯಾಗಿದೆ. ಈ ನಡುವೆ ರಕ್ಷಣಾ ಸಚಿವರು ಮುಖ್ಯಮಂತ್ರಿಗಳಿಬ್ಬರಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ:ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ ವಿವಾದ: ಸುಳ್ಳು ಹೇಳಿದ ಸಚಿವ ಸುನಿಲ್ ಕುಮಾರ್‌?

ಪಶ್ಚಿಮ ಬಂಗಾಳವು ನೇತಾಜಿ ಸುಭಾಸ್ ಚಂದ್ರ ಬೋಸ್ ಮತ್ತು ಸ್ವಾತಂತ್ರ್ಯ ಚಳುವಳಿಗೆ ಭಾರತೀಯ ರಾಷ್ಟ್ರೀಯ ಸೇನೆಯ ಕೊಡುಗೆಯ ಬಗ್ಗೆಗಿನ ಟ್ಯಾಬ್ಲೋಗಳನ್ನು ಪ್ರದರ್ಶಿಸಿದರೆ, ತಮಿಳುನಾಡು ಸಲ್ಲಿಸಿದ ವಿನ್ಯಾಸದಲ್ಲಿ ಸ್ವಾತಂತ್ಯ್ರ ಹೋರಾಟಗಾರ ಸುಬ್ರಮಣ್ಯ ಭಾರತಿ, ವಿ.ಒ. ಚಿದಂಬರನಾರ್ ಮತ್ತು ವೇಲು ನಾಚಿಯಾರ್‌ ಅವರಂತಹ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರ ಚಿತ್ರಣ ಒಳಗೊಂಡಿತ್ತು.

ರಕ್ಷಣಾ ಸಚಿವರು ಮಮತಾ ಬ್ಯಾನರ್ಜಿ ಅವರಿಗೆ ಬರೆದ ಪತ್ರದಲ್ಲಿ, “ನರೇಂದ್ರ ಮೋದಿ ಸರ್ಕಾರವು ನೇತಾಜಿಯನ್ನು ಹೆಚ್ಚು ಗೌರವಿಸುತ್ತದೆ. ಅವರ ಜನ್ಮದಿನವಾದ ಜನವರಿ 23 ಅನ್ನು ‘ಪರಾಕ್ರಮ್ ದಿವಸ್’ ಎಂದು ಆಚರಿಸುತ್ತದೆ. ಇನ್ನು ಮುಂದೆ ಅವರ ಜನ್ಮ ದಿನಾಚರಣೆಯೊಂದಿಗೆ ಗಣರಾಜ್ಯೋತ್ಸವ ಆಚರಣೆಗಳು ಆರಂಭಗೊಂಡು ಜನವರಿ 30 ರಂದು ಮುಕ್ತಾಯಗೊಳ್ಳಲಿದೆ” ಎಂದು ಹೇಳಿದ್ದಾರೆ.

ಗಣರಾಜ್ಯೋತ್ಸವ ಪರೇಡ್‌ಗಾಗಿ ಟ್ಯಾಬ್ಲೊಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯು ಪಾರದರ್ಶಕವಾಗಿದೆ ಮತ್ತು ಸೂಕ್ತ ಮಾರ್ಗಸೂಚಿಗಳನ್ನು ಅನುಸರಿಸುತ್ತದೆ ಎಂದು ರಾಜನಾಥ್‌ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ:ಗಣರಾಜ್ಯೋತ್ಸವ ಟ್ಯಾಬ್ಲೊ: ತಮಿಳುನಾಡಿಗೂ ನಿರಾಕರಣೆ; ಸ್ವಾತಂತ್ಯ್ರ ಹೋರಾಟಗಾರನನ್ನು ‘ವ್ಯಾಪಾರಿ’ ಎಂದು ಕರೆದ ಒಕ್ಕೂಟ ಸರ್ಕಾರ

ಕಲೆ, ಸಂಸ್ಕೃತಿ, ಸಂಗೀತ ಮತ್ತು ನೃತ್ಯ ಕ್ಷೇತ್ರಗಳ ವ್ಯಕ್ತಿಗಳನ್ನು ಒಳಗೊಂಡ ಸಮಿತಿಯು ರಾಜ್ಯಗಳು ಕಳುಹಿಸಿರುವ ವಿನ್ಯಾಸ ಪ್ರಸ್ತಾವನೆಗಳನ್ನು ಪರಿಶೀಲಿಸುತ್ತದೆ ಮತ್ತು ಯಾವುದನ್ನು ಆಯ್ಕೆ ಮಾಡಬೇಕೆಂದು ನಿರ್ಧರಿಸುತ್ತದೆ ಎಂದು ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಈ ವರ್ಷ 29 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಕಳುಹಿಸಿದ ವಿನ್ಯಾಸಗಳಲ್ಲಿ 12 ವಿನ್ಯಾಸ ಪ್ರಸ್ತಾವನೆಗಳನ್ನು ಆಯ್ಕೆ ಮಾಡಲಾಗಿದೆ ಎಂದು ರಾಜನಾಥ್‌ ಸಿಂಗ್ ಹೇಳಿದ್ದಾರೆ.

ನೇತಾಜಿಯವರ 125ನೇ ಜನ್ಮದಿನಾಚರಣೆಯಂದು ಒಕ್ಕೂಟ ಸರ್ಕಾರದ ಲೋಕೋಪಯೋಗಿ ಇಲಾಖೆಯ ಟ್ಯಾಬ್ಲೋ ಕೂಡ ನೇತಾಜಿ ಅವರಿಗೆ ಗೌರವ ಸಲ್ಲಿಸುತ್ತದೆ ಎಂದು ಅವರು ಹೇಳಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ, “ಟ್ಯಾಬ್ಲೊ ಆಯ್ಕೆಯನ್ನು ನಿಗದಿಪಡಿಸಿದ ಮಾರ್ಗಸೂಚಿಗಳ ಪ್ರಕಾರ ಮಾಡಲಾಗುತ್ತದೆ. ತಮಿಳುನಾಡಿನ ವಿನ್ಯಾಸವು ಮೊದಲ ಮೂರು ಸುತ್ತಿನ ಸಭೆಗಳಲ್ಲಿ ಆಯ್ಕೆಯಾಗಿದ್ದರೂ, ಅದನ್ನು ಅಂತಿಮವಾಗಿ ಆಯ್ಕೆ ಮಾಡಿದ 12 ಟ್ಯಾಬ್ಲೊಗಳಲ್ಲಿ ಅದನ್ನು ಆಯ್ಕೆ ಮಾಡಲು ಸಾಧ್ಯವಾಗಲಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಸತತ 3 ನೇ ಬಾರಿ ಗಣರಾಜ್ಯೋತ್ಸವ ಪರೇಡ್‌ನಿಂದ ಕೇರಳ ಹೊರಕ್ಕೆ: ನಾರಾಯಣ ಗುರು ಸ್ತಬ್ಧಚಿತ್ರ ಪ್ರದರ್ಶನಕ್ಕೆ ಕೇಂದ್ರದ ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...