Homeಚಳವಳಿರೈತ ವಿರೋಧಿ ಮಸೂದೆಗಳ ವಾಪಸಾತಿಗೆ ಆಗ್ರಹ: ಸೆ. 28 ರಂದು ’ಭಾರತ್ ಬಂದ್’

ರೈತ ವಿರೋಧಿ ಮಸೂದೆಗಳ ವಾಪಸಾತಿಗೆ ಆಗ್ರಹ: ಸೆ. 28 ರಂದು ’ಭಾರತ್ ಬಂದ್’

ರೈತರು ಮಾಲ್‌ಗಳೊಂದಿಗೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ. ಹೀಗಾಗಿ ನಷ್ಟಕ್ಕೆ ಗುರಿಯಾಗುತ್ತಾರೆ. ಆತ್ಮಹತ್ಯೆಗಳು ಮತ್ತಷ್ಟು ಹೆಚ್ಚಾಗಲಿವೆ ಎಂದು ಹೋರಾಟಗಾರರು ಆತಂಕ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ಕೇಂದ್ರ ಸರ್ಕಾರ ಅಂಗೀಕರಿಸಿರುವ ರೈತ ವಿರೋಧಿ ಮಸೂದೆಗಳನ್ನು ವಾಪಸ್ ಪಡೆಯಬೇಕು. ರಾಜ್ಯ ಸರ್ಕಾರ ಎಪಿಎಂಸಿ, ಭೂಸುಧಾರಣೆ ಮತ್ತು ವಿದ್ಯುತ್ ತಿದ್ದುಪಡಿ ಮಸೂದೆಗಳನ್ನು ಮಂಡಿಸಿ ಅಂಗೀಕರಿಸಬಾರದು ಎಂದು ಒತ್ತಾಯಿಸಿ ಸೆಪ್ಟೆಂಬರ್ 28 ರಂದು ’ಭಾರತ್ ಬಂದ್’ ಆಚರಿಸಲಾಗುವುದು ಎಂದು ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೈತ, ದಲಿತ, ಪ್ರಗತಿಪರ ಸಂಘಟನೆಗಳ ಮುಖಂಡರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ ವಿರೋಧಿ ಮತ್ತು ಜನವಿರೋಧಿ ಮಾರಕ ಕಾಯ್ದೆಗಳನ್ನು ಜಾರಿಗೊಳಿಸಲು ಹೊರಟಿರುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ಧೋರಣೆಯನ್ನು ಬದಲಿಸಿಕೊಳ್ಳಬೇಕು. ಮಸೂದೆಗಳನ್ನು ವಾಪಸ್ ಪಡೆಯಬೇಕು ಎಂದು ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ನೇತೃತ್ವದಲ್ಲಿ ಭಾರತ್ ಬಂದ್‌ ನಡೆಯಲಿದೆ ಎಂದರು.

ಇದನ್ನೂ ಓದಿ: ರೈತರು, ಕಾರ್ಮಿಕರು ಮತ್ತು ಪ್ರಜಾಪ್ರಭುತ್ವವನ್ನು ಉಳಿಸಿ: ವಿರೋಧ ಪಕ್ಷಗಳಿಂದ ಮೌನ ಪ್ರತಿಭಟನೆ

ಸಮನ್ವಯ ಸಮಿತಿ ಮುಖಂಡ ಎ.ಗೋವಿಂದರಾಜ್ ಮಾತನಾಡಿ, ರೈತರ ತೀವ್ರ ವಿರೋಧದ ನಡುವೆಯೂ ಮೂರು ಮಸೂದೆಗಳನ್ನು ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಮಂಡಿಸಿ ಅಂಗೀಕರಿಸಿದೆ. ಸರ್ಕಾರ ಸರ್ವಾಧಿಕಾರಿ ಧೋರಣೆಯ ಮೂಲಕ ರೈತರನ್ನು ಬಗ್ಗುಬಡಿಯಲು ಯತ್ನಿಸುತ್ತಿದೆ. ಇದಕ್ಕೆ ಸೊಪ್ಪು ಹಾಕುವುದಿಲ್ಲ ಎಂದು ಹೇಳಿದರು.

ರೈತ ಸಂಘ ಮತ್ತು ಹಸಿರು ಸೇನೆ ಮುಖಂಡ ಆನಂದ ಪಟೇಲ್ ಮಾತನಾಡಿ ಸರ್ಕಾರ ಭೂಸುಧಾರಣ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಸುಳ್ಳು ಹೇಳುತ್ತಿದೆ. ರೈತರು, ಜನಸಾಮಾನ್ಯರನ್ನು ದಿಕ್ಕುತಪ್ಪಿಸುತ್ತಿದೆ. ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ರಿಲಯನ್ಸ್, ಮೆಟ್ರೋ, ಮೋರ್‌ನಂತಹ ಕಂಪನಿಗಳಿಗೆ ಅನುಕೂಲವಾಗುತ್ತದೆ. ಈ ವಿಷಯವನ್ನು ಸರ್ಕಾರ ಮರೆಮಾಚುತ್ತಿದೆ ಎಂದು ಆರೋಪಿಸಿದರು.

ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಹಳ್ಳಗಳಲ್ಲಿ ಮಾಲ್‌ಗಳು ಆರಂಭವಾಗಲಿದೆ. ರೈತರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವುದಕ್ಕಿಂತ ಕಡಿಮೆ ಬೆಲೆಗೆ ಮಾಲ್‌ಗಳಲ್ಲಿ ದೊರೆಯಲಿವೆ. ಇದರಿಂದ ರೈತರು ಮಾಲ್‌ಗಳೊಂದಿಗೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ. ಹೀಗಾಗಿ ನಷ್ಟಕ್ಕೆ ಗುರಿಯಾಗುತ್ತಾರೆ. ಆತ್ಮಹತ್ಯೆಗಳು ಮತ್ತಷ್ಟು ಹೆಚ್ಚಾಗಲಿವೆ ಎಂದು ಆತಂಕ ವ್ಯಕ್ತಪಡಿಸಿದರು.

ಇದನ್ನೂ ಓದಿ: ಈ ಸುಗ್ರೀವಾಜ್ಞೆಗಳು ಅಸಾಂವಿಧಾನಿಕವಾಗಿದ್ದು, ರೈತರ ಗುರುತನ್ನೇ ಅಳಿಸಿಹಾಕಲಿವೆ: ಜಸ್ಟೀಸ್ ನಾಗಮೋಹನ್ ದಾಸ್

ಸರ್ಕಾರದ ತೀರ್ಮಾನದಿಂದ ದಳ್ಳಾಳಿಗಳು ಮತ್ತು ಮಧ್ಯವರ್ತಿಗಳ ಹಾವಳಿ ತಪ್ಪಲಿದೆ. ರೈತರಿಗೆ ಲಾಭ ದೊರೆಯಲಿದೆ ಎಂದು ಸಚಿವರು ಸುಳ್ಳು ಹೇಳುತ್ತಾರೆ. ರೈತರು ತಮ್ಮ ಉತ್ಪನ್ನಗಳನ್ನು ಎಪಿಎಂಸಿ ಮಾರುಕಟ್ಟೆಗೆ ತಂದರೆ ಕನಿಷ್ಠ ಬೆಂಬಲ ಬೆಲೆ ಗೊತ್ತಾಗುತ್ತದೆ. ಹತ್ತು ಮಂದಿ ದಲ್ಲಾಳಿಗಳು ಸ್ಪರ್ಧೆಗೆ ಇಳಿದು ರೈತರ ಉತ್ಪನ್ನಗಳನ್ನು ಹೆಚ್ಚು ಬೆಲೆಗೆ ಕೊಳ್ಳುತ್ತಾರೆ. ಇದು ಸರ್ಕಾರಕ್ಕೆ ತಿಳಿಯಬೇಕಾಗಿದೆ ಎಂದರು.

ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ಸಾಕಷ್ಟು ತೊಂದರೆಯಾಗಲಿದೆ. ಸರ್ಕಾರಕ್ಕೆ ಬರಬೇಕಾದ ಕೋಟ್ಯಂತರ ರೂಪಾಯಿ ಸೆಸ್ ಇಲ್ಲವಾಗಲಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಅಪಾರ ನಷ್ಟ ಉಂಟಾಗಲಿದೆ. ಸರ್ಕಾರಗಳು ಎಲ್ಲವನ್ನೂ ಖಾಸಗೀಕರಣಗೊಳಿಸಿ ಕಾರ್ಪೋರೇಟರ್ ಸಂಸ್ಥೆಗಳ ನಿಯಂತ್ರಣಕ್ಕೆ ಕೊಟ್ಟು ರೈತರು, ಜನಸಾಮಾನ್ಯರು ನರಳುವಂತಹ ವ್ಯವಸ್ಥೆಯನ್ನು ಸೃಷ್ಟಿಸಲು ಹೊರಟಿವೆ ಎಂದು ವಾಗ್ದಾಳಿ ನಡೆಸಿದರು.

ಪತ್ರಿಕಾಗೋಷ್ಠಿಯಲ್ಲಿ ಜನಪರ ಚಿಂತಕ ಕೆ.ದೊರೈರಾಜ್, ಸಮನ್ವಯ ಸಮಿತಿಯ ಕಾರ್ಯದರ್ಶಿ ಬಿ.ಉಮೇಶ್, ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ, ಕರ್ನಾಟಕ ಪ್ರಾಂತ ರೈತ ಸಂಘದ ಸಂಚಾಲಕ ಸಿ.ಅಜ್ಜಪ್ಪ, ಸ್ಲಂ ಜನಾಂದೋಲನ ಸಂಚಾಲಕ ಎ.ನರಸಿಂಹಮೂರ್ತಿ, ಆರ್.ಕೆ.ಎಸ್ ಸಂಘಟನೆಯ ಎನ್.ಎಸ್. ಸ್ವಾಮಿ, ಎಐಕೆಎಸ್ ಶಶಿಕಾಂತ್ ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ: ರಸ್ತೆಯಲ್ಲಿ ಅರೆಬೆತ್ತಲೆ ಕುಳಿತ ರೈತರು; ಸರ್ಕಾರದ ವಿರುದ್ಧ ತೀವ್ರಗೊಂಡ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...