Homeಚಳವಳಿರೈತ ವಿರೋಧಿ ಮಸೂದೆಗಳ ವಾಪಸಾತಿಗೆ ಆಗ್ರಹ: ಸೆ. 28 ರಂದು ’ಭಾರತ್ ಬಂದ್’

ರೈತ ವಿರೋಧಿ ಮಸೂದೆಗಳ ವಾಪಸಾತಿಗೆ ಆಗ್ರಹ: ಸೆ. 28 ರಂದು ’ಭಾರತ್ ಬಂದ್’

ರೈತರು ಮಾಲ್‌ಗಳೊಂದಿಗೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ. ಹೀಗಾಗಿ ನಷ್ಟಕ್ಕೆ ಗುರಿಯಾಗುತ್ತಾರೆ. ಆತ್ಮಹತ್ಯೆಗಳು ಮತ್ತಷ್ಟು ಹೆಚ್ಚಾಗಲಿವೆ ಎಂದು ಹೋರಾಟಗಾರರು ಆತಂಕ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ಕೇಂದ್ರ ಸರ್ಕಾರ ಅಂಗೀಕರಿಸಿರುವ ರೈತ ವಿರೋಧಿ ಮಸೂದೆಗಳನ್ನು ವಾಪಸ್ ಪಡೆಯಬೇಕು. ರಾಜ್ಯ ಸರ್ಕಾರ ಎಪಿಎಂಸಿ, ಭೂಸುಧಾರಣೆ ಮತ್ತು ವಿದ್ಯುತ್ ತಿದ್ದುಪಡಿ ಮಸೂದೆಗಳನ್ನು ಮಂಡಿಸಿ ಅಂಗೀಕರಿಸಬಾರದು ಎಂದು ಒತ್ತಾಯಿಸಿ ಸೆಪ್ಟೆಂಬರ್ 28 ರಂದು ’ಭಾರತ್ ಬಂದ್’ ಆಚರಿಸಲಾಗುವುದು ಎಂದು ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೈತ, ದಲಿತ, ಪ್ರಗತಿಪರ ಸಂಘಟನೆಗಳ ಮುಖಂಡರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ ವಿರೋಧಿ ಮತ್ತು ಜನವಿರೋಧಿ ಮಾರಕ ಕಾಯ್ದೆಗಳನ್ನು ಜಾರಿಗೊಳಿಸಲು ಹೊರಟಿರುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ಧೋರಣೆಯನ್ನು ಬದಲಿಸಿಕೊಳ್ಳಬೇಕು. ಮಸೂದೆಗಳನ್ನು ವಾಪಸ್ ಪಡೆಯಬೇಕು ಎಂದು ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ನೇತೃತ್ವದಲ್ಲಿ ಭಾರತ್ ಬಂದ್‌ ನಡೆಯಲಿದೆ ಎಂದರು.

ಇದನ್ನೂ ಓದಿ: ರೈತರು, ಕಾರ್ಮಿಕರು ಮತ್ತು ಪ್ರಜಾಪ್ರಭುತ್ವವನ್ನು ಉಳಿಸಿ: ವಿರೋಧ ಪಕ್ಷಗಳಿಂದ ಮೌನ ಪ್ರತಿಭಟನೆ

ಸಮನ್ವಯ ಸಮಿತಿ ಮುಖಂಡ ಎ.ಗೋವಿಂದರಾಜ್ ಮಾತನಾಡಿ, ರೈತರ ತೀವ್ರ ವಿರೋಧದ ನಡುವೆಯೂ ಮೂರು ಮಸೂದೆಗಳನ್ನು ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಮಂಡಿಸಿ ಅಂಗೀಕರಿಸಿದೆ. ಸರ್ಕಾರ ಸರ್ವಾಧಿಕಾರಿ ಧೋರಣೆಯ ಮೂಲಕ ರೈತರನ್ನು ಬಗ್ಗುಬಡಿಯಲು ಯತ್ನಿಸುತ್ತಿದೆ. ಇದಕ್ಕೆ ಸೊಪ್ಪು ಹಾಕುವುದಿಲ್ಲ ಎಂದು ಹೇಳಿದರು.

ರೈತ ಸಂಘ ಮತ್ತು ಹಸಿರು ಸೇನೆ ಮುಖಂಡ ಆನಂದ ಪಟೇಲ್ ಮಾತನಾಡಿ ಸರ್ಕಾರ ಭೂಸುಧಾರಣ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಸುಳ್ಳು ಹೇಳುತ್ತಿದೆ. ರೈತರು, ಜನಸಾಮಾನ್ಯರನ್ನು ದಿಕ್ಕುತಪ್ಪಿಸುತ್ತಿದೆ. ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ರಿಲಯನ್ಸ್, ಮೆಟ್ರೋ, ಮೋರ್‌ನಂತಹ ಕಂಪನಿಗಳಿಗೆ ಅನುಕೂಲವಾಗುತ್ತದೆ. ಈ ವಿಷಯವನ್ನು ಸರ್ಕಾರ ಮರೆಮಾಚುತ್ತಿದೆ ಎಂದು ಆರೋಪಿಸಿದರು.

ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಹಳ್ಳಗಳಲ್ಲಿ ಮಾಲ್‌ಗಳು ಆರಂಭವಾಗಲಿದೆ. ರೈತರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವುದಕ್ಕಿಂತ ಕಡಿಮೆ ಬೆಲೆಗೆ ಮಾಲ್‌ಗಳಲ್ಲಿ ದೊರೆಯಲಿವೆ. ಇದರಿಂದ ರೈತರು ಮಾಲ್‌ಗಳೊಂದಿಗೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ. ಹೀಗಾಗಿ ನಷ್ಟಕ್ಕೆ ಗುರಿಯಾಗುತ್ತಾರೆ. ಆತ್ಮಹತ್ಯೆಗಳು ಮತ್ತಷ್ಟು ಹೆಚ್ಚಾಗಲಿವೆ ಎಂದು ಆತಂಕ ವ್ಯಕ್ತಪಡಿಸಿದರು.

ಇದನ್ನೂ ಓದಿ: ಈ ಸುಗ್ರೀವಾಜ್ಞೆಗಳು ಅಸಾಂವಿಧಾನಿಕವಾಗಿದ್ದು, ರೈತರ ಗುರುತನ್ನೇ ಅಳಿಸಿಹಾಕಲಿವೆ: ಜಸ್ಟೀಸ್ ನಾಗಮೋಹನ್ ದಾಸ್

ಸರ್ಕಾರದ ತೀರ್ಮಾನದಿಂದ ದಳ್ಳಾಳಿಗಳು ಮತ್ತು ಮಧ್ಯವರ್ತಿಗಳ ಹಾವಳಿ ತಪ್ಪಲಿದೆ. ರೈತರಿಗೆ ಲಾಭ ದೊರೆಯಲಿದೆ ಎಂದು ಸಚಿವರು ಸುಳ್ಳು ಹೇಳುತ್ತಾರೆ. ರೈತರು ತಮ್ಮ ಉತ್ಪನ್ನಗಳನ್ನು ಎಪಿಎಂಸಿ ಮಾರುಕಟ್ಟೆಗೆ ತಂದರೆ ಕನಿಷ್ಠ ಬೆಂಬಲ ಬೆಲೆ ಗೊತ್ತಾಗುತ್ತದೆ. ಹತ್ತು ಮಂದಿ ದಲ್ಲಾಳಿಗಳು ಸ್ಪರ್ಧೆಗೆ ಇಳಿದು ರೈತರ ಉತ್ಪನ್ನಗಳನ್ನು ಹೆಚ್ಚು ಬೆಲೆಗೆ ಕೊಳ್ಳುತ್ತಾರೆ. ಇದು ಸರ್ಕಾರಕ್ಕೆ ತಿಳಿಯಬೇಕಾಗಿದೆ ಎಂದರು.

ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ಸಾಕಷ್ಟು ತೊಂದರೆಯಾಗಲಿದೆ. ಸರ್ಕಾರಕ್ಕೆ ಬರಬೇಕಾದ ಕೋಟ್ಯಂತರ ರೂಪಾಯಿ ಸೆಸ್ ಇಲ್ಲವಾಗಲಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಅಪಾರ ನಷ್ಟ ಉಂಟಾಗಲಿದೆ. ಸರ್ಕಾರಗಳು ಎಲ್ಲವನ್ನೂ ಖಾಸಗೀಕರಣಗೊಳಿಸಿ ಕಾರ್ಪೋರೇಟರ್ ಸಂಸ್ಥೆಗಳ ನಿಯಂತ್ರಣಕ್ಕೆ ಕೊಟ್ಟು ರೈತರು, ಜನಸಾಮಾನ್ಯರು ನರಳುವಂತಹ ವ್ಯವಸ್ಥೆಯನ್ನು ಸೃಷ್ಟಿಸಲು ಹೊರಟಿವೆ ಎಂದು ವಾಗ್ದಾಳಿ ನಡೆಸಿದರು.

ಪತ್ರಿಕಾಗೋಷ್ಠಿಯಲ್ಲಿ ಜನಪರ ಚಿಂತಕ ಕೆ.ದೊರೈರಾಜ್, ಸಮನ್ವಯ ಸಮಿತಿಯ ಕಾರ್ಯದರ್ಶಿ ಬಿ.ಉಮೇಶ್, ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ, ಕರ್ನಾಟಕ ಪ್ರಾಂತ ರೈತ ಸಂಘದ ಸಂಚಾಲಕ ಸಿ.ಅಜ್ಜಪ್ಪ, ಸ್ಲಂ ಜನಾಂದೋಲನ ಸಂಚಾಲಕ ಎ.ನರಸಿಂಹಮೂರ್ತಿ, ಆರ್.ಕೆ.ಎಸ್ ಸಂಘಟನೆಯ ಎನ್.ಎಸ್. ಸ್ವಾಮಿ, ಎಐಕೆಎಸ್ ಶಶಿಕಾಂತ್ ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ: ರಸ್ತೆಯಲ್ಲಿ ಅರೆಬೆತ್ತಲೆ ಕುಳಿತ ರೈತರು; ಸರ್ಕಾರದ ವಿರುದ್ಧ ತೀವ್ರಗೊಂಡ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...