Homeಕರೋನಾ ತಲ್ಲಣಪಡಿತರ ವಿತರಕರನ್ನೂ ’ಕೊರೊನಾ ವಾರಿಯರ್’ ಪಟ್ಟಿಗೆ ಸೇರಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ

ಪಡಿತರ ವಿತರಕರನ್ನೂ ’ಕೊರೊನಾ ವಾರಿಯರ್’ ಪಟ್ಟಿಗೆ ಸೇರಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ

ನಮಗೂ ಕುಟುಂಬವಿದೆ , ಕೊರೊನಾ ಬಿಕ್ಕಟ್ಟಿನಲ್ಲೂ ಸರ್ಕಾರಕ್ಕೆ ಸೇವೆ ಸಲ್ಲಿಸುತ್ತಿದ್ದೇವೆ ಇದನ್ನು ಸರ್ಕಾರ ಪರಿಗಣಿಸಬೇಕು ಎಂದು ಪಡಿತರ ವಿತರಕರು ಹೇಳಿದ್ದಾರೆ.

- Advertisement -
- Advertisement -

ರಾಜ್ಯದಲ್ಲಿ ನ್ಯಾಯಬೆಲೆ ಅಂಗಡಿ ವಿತರಕರಿಗೆ ಭದ್ರತೆಯನ್ನು ಒದಗಿಸಿ ಸೂಕ್ತ ಮಾರ್ಗಸೂಚಿಯನ್ನು ಹೊರಡಿಸುವ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿಯನ್ನು ಸಲ್ಲಿಸಿದೆ.

ಕೊರೊನಾ ಲಾಕ್‌ಡೌನ್‌ ಪ್ರಾರಂಭವಾಗಿದಂದಿನಿಂದ ಈವರೆಗೂ ಪಡಿತರ ಅಂಗಡಿಯವರು ತಮ್ಮ ಸೇವೆಯನ್ನು ಮಾಡುತ್ತಿದ್ದು, ಇದರಿಂದಾಗಿ ಬೆಂಗಳೂರು ಹಾಗೂ ಹುಬ್ಬಳ್ಳಿಯಲ್ಲಿ ಪಡಿತರ ಅಂಗಡಿಯ ಮಾಲಕರು ಕೊರೊನಾ ಪಾಸಿಟಿವ್ ಪರೀಕ್ಷೆ ನಡೆಸಿದ್ದಾರೆ.

ಸಂಘವೂ ಮನವಿಯಲ್ಲಿ, “ಲಾಕ್‌ಡೌನ್ ಘೋಷಣೆಯಾದ ದಿನದಿಂದ ಇದುವರೆಗೂ ಸರ್ಕಾರದ ಆದೇಶದಂತೆ ಪ್ರಾಣವನ್ನು ಪಣಕ್ಕಿಟ್ಟು ಸಮರ್ಪಕವಾಗಿ ಪಡಿತರ ವಿತರಣೆ ಮಾಡಿರುತ್ತೇವೆ. ಕೊಲೋನಾ ವಾರಿಯರ್‌ನ ಒಂದು ಭಾಗವಾಗಿ ಸರ್ಕಾರಕ್ಕೆ ಸೇವೆಯನ್ನು ಮಾಡಿದ್ದೇವೆ. ಪಡಿತರ ವಿತರಣೆಯ ಸಂದರ್ಭದಲ್ಲಿ ಸೋಂಕಿತರು ಸಹ ಬಂದು ಪಡಿತರವನ್ನು ಪಡೆದಿರುತ್ತಾರೆ. ಇದರಿಂದ ಸೋಂಕು ಪಡಿತರರ ವಿತರಕರಿಗೆ ಹರಡುವ ಸಾಧ್ಯತೆಗಳಿವೆ” ಎಂದು ಹೇಳಲಾಗಿದೆವಿತರಕರ ಸಂಘದ ಮನವಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ. ಗೋಪಾಲಯ್ಯ ಅವರು ಸ್ಪಂದಿಸಿ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಪಡಿತರ ಅಂಗಡಿಯವರನ್ನೂ ಕೊರೊನಾ ಕೊರೊನಾ ವಾರಿಯರ್‌ ಪಟ್ಟಿಗೆ ಸೇರಿಸಿ ಅವರಿಗೂ ವಿಮೆಯನ್ನು ಒದಗಿಸಿ ಭದ್ರತೆ ವ್ಯವಸ್ಥೆ ನೀಡುವಂತೆ ವಿನಂತಿಸಿದ್ದಾರೆ.

 

ಈ ಬಗ್ಗೆ ನಾನುಗೌರಿ.ಕಾಮ್‌ಗೆ ಪ್ರತಿಕ್ರಿಯೆ ನೀಡಿದ ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ ಬೆಂಗಳೂರು ಇದರ ಅಧ್ಯಕ್ಷರಾದ ಕೆ. ಕೆ. ಕೃಷ್ಣಪ್ಪ “ರಾಜ್ಯ ಸರ್ಕಾರಕ್ಕೆ ಮನವಿ ನೀಡಿದ್ದೇವೆ, ಸರ್ಕಾರ ನಮ್ಮ ಮನವಿಯನ್ನು ಮನ್ನಿಸುತ್ತದೆ ಎಂದು ಭಾವಿಸುತ್ತೇವೆ. ಅವರ ತೀರ್ಮಾನ ನಂತರ ನಮ್ಮ ಮುಂದಿನ ನಡೆ ಇರುತ್ತದೆ.” ಎಂದು ಹೇಳಿದ್ದಾರೆ.

ಈ ಹಿಂದೆ ಪಡಿತರ ಚೀಟಿ ಇಟ್ಟುಕೊಂಡು ಪಡಿತರ ಕೊಡುತ್ತಿದ್ದರಾದರೂ ಈಗ ಯಾವುದೇ ಗುರುತಿನ ಚೀಟಿ ಇಲ್ಲದೆ ಪಡಿತರ ಕೊಡಬೇಕಾಗುತ್ತದೆ. ಈ ಸಮಯದಲ್ಲಿ ಗ್ರಾಹಕರು ಕೆಲವೊಮ್ಮೆ ಕಂಟೈನ್‌ಮೆಂಟ್ ಪ್ರದೇಶದಿಂದ ಕೂಡಾ ಬಂದಿರುತ್ತಾರೆ. ಇದು ಪಡಿತರ ಅಂಗಡಿಯವರಿಗೆ ಸಮಸ್ಯೆ ತಂದೊಡ್ಡುತ್ತದೆ ಎಂದು ಪಡಿತರ ಅಂಗಡಿ ಮಾಲಿಕರು ಅಲವತ್ತುಕೊಂಡಿದ್ದಾರೆ.

ಪಡಿತರ ಅಂಗಡಿಯ ಮಾಲಕರಾದ ಹೇಮಂತ್ ಕುಮಾರ್‌ “ನಮಗೂ ಕುಟುಂಬಗಳಿವೆ, ಈ ಸಂದಿಗ್ಧ ಸಮಯದಲ್ಲಿ ಕೂಡಾ ನಾವು ನಮ್ಮ ಜೀವವನ್ನು ಪಣಕ್ಕಿಟ್ಟು ಕರ್ತವ್ಯ ಮಾಡುತ್ತಿದ್ದೇವೆ. ಈ ಸಮಯದಲ್ಲಿ ಸರ್ಕಾರ ನಮ್ಮ ಸೇವೆಯನ್ನೂ ಪರಿಗಣಿಸಿ, ನಮಗೂ ಕೊರೊನಾ ವಾರಿಯರ್ಸ್ ವಿಮೆ ಹಾಗೂ ಭದ್ರತೆಯನ್ನ ನೀಡಬೇಕು” ಎಂದು ನಾನುಗೌರಿ.ಕಾಮ್‌ಗೆ ಪ್ರತಿಕ್ರಿಯಿಸಿದ್ದಾರೆ.


ಓದಿ: ಕೊರೊನಾ ಓಡಿಸಲು ಜಾಗಟೆ ಬಾರಿಸಿದ ಅಯೋಗ್ಯ ಸರ್ಕಾರಕ್ಕೆ ಸೋಂಕು ಪರೀಕ್ಷೆ ನಡೆಸಲು ಗೊತ್ತಿಲ್ಲ: ಸಿದ್ದರಾಮಯ್ಯ ಕಿಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...