Homeಕರೋನಾ ತಲ್ಲಣಪಡಿತರ ವಿತರಕರನ್ನೂ ’ಕೊರೊನಾ ವಾರಿಯರ್’ ಪಟ್ಟಿಗೆ ಸೇರಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ

ಪಡಿತರ ವಿತರಕರನ್ನೂ ’ಕೊರೊನಾ ವಾರಿಯರ್’ ಪಟ್ಟಿಗೆ ಸೇರಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ

ನಮಗೂ ಕುಟುಂಬವಿದೆ , ಕೊರೊನಾ ಬಿಕ್ಕಟ್ಟಿನಲ್ಲೂ ಸರ್ಕಾರಕ್ಕೆ ಸೇವೆ ಸಲ್ಲಿಸುತ್ತಿದ್ದೇವೆ ಇದನ್ನು ಸರ್ಕಾರ ಪರಿಗಣಿಸಬೇಕು ಎಂದು ಪಡಿತರ ವಿತರಕರು ಹೇಳಿದ್ದಾರೆ.

- Advertisement -
- Advertisement -

ರಾಜ್ಯದಲ್ಲಿ ನ್ಯಾಯಬೆಲೆ ಅಂಗಡಿ ವಿತರಕರಿಗೆ ಭದ್ರತೆಯನ್ನು ಒದಗಿಸಿ ಸೂಕ್ತ ಮಾರ್ಗಸೂಚಿಯನ್ನು ಹೊರಡಿಸುವ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿಯನ್ನು ಸಲ್ಲಿಸಿದೆ.

ಕೊರೊನಾ ಲಾಕ್‌ಡೌನ್‌ ಪ್ರಾರಂಭವಾಗಿದಂದಿನಿಂದ ಈವರೆಗೂ ಪಡಿತರ ಅಂಗಡಿಯವರು ತಮ್ಮ ಸೇವೆಯನ್ನು ಮಾಡುತ್ತಿದ್ದು, ಇದರಿಂದಾಗಿ ಬೆಂಗಳೂರು ಹಾಗೂ ಹುಬ್ಬಳ್ಳಿಯಲ್ಲಿ ಪಡಿತರ ಅಂಗಡಿಯ ಮಾಲಕರು ಕೊರೊನಾ ಪಾಸಿಟಿವ್ ಪರೀಕ್ಷೆ ನಡೆಸಿದ್ದಾರೆ.

ಸಂಘವೂ ಮನವಿಯಲ್ಲಿ, “ಲಾಕ್‌ಡೌನ್ ಘೋಷಣೆಯಾದ ದಿನದಿಂದ ಇದುವರೆಗೂ ಸರ್ಕಾರದ ಆದೇಶದಂತೆ ಪ್ರಾಣವನ್ನು ಪಣಕ್ಕಿಟ್ಟು ಸಮರ್ಪಕವಾಗಿ ಪಡಿತರ ವಿತರಣೆ ಮಾಡಿರುತ್ತೇವೆ. ಕೊಲೋನಾ ವಾರಿಯರ್‌ನ ಒಂದು ಭಾಗವಾಗಿ ಸರ್ಕಾರಕ್ಕೆ ಸೇವೆಯನ್ನು ಮಾಡಿದ್ದೇವೆ. ಪಡಿತರ ವಿತರಣೆಯ ಸಂದರ್ಭದಲ್ಲಿ ಸೋಂಕಿತರು ಸಹ ಬಂದು ಪಡಿತರವನ್ನು ಪಡೆದಿರುತ್ತಾರೆ. ಇದರಿಂದ ಸೋಂಕು ಪಡಿತರರ ವಿತರಕರಿಗೆ ಹರಡುವ ಸಾಧ್ಯತೆಗಳಿವೆ” ಎಂದು ಹೇಳಲಾಗಿದೆವಿತರಕರ ಸಂಘದ ಮನವಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ. ಗೋಪಾಲಯ್ಯ ಅವರು ಸ್ಪಂದಿಸಿ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಪಡಿತರ ಅಂಗಡಿಯವರನ್ನೂ ಕೊರೊನಾ ಕೊರೊನಾ ವಾರಿಯರ್‌ ಪಟ್ಟಿಗೆ ಸೇರಿಸಿ ಅವರಿಗೂ ವಿಮೆಯನ್ನು ಒದಗಿಸಿ ಭದ್ರತೆ ವ್ಯವಸ್ಥೆ ನೀಡುವಂತೆ ವಿನಂತಿಸಿದ್ದಾರೆ.

 

ಈ ಬಗ್ಗೆ ನಾನುಗೌರಿ.ಕಾಮ್‌ಗೆ ಪ್ರತಿಕ್ರಿಯೆ ನೀಡಿದ ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ ಬೆಂಗಳೂರು ಇದರ ಅಧ್ಯಕ್ಷರಾದ ಕೆ. ಕೆ. ಕೃಷ್ಣಪ್ಪ “ರಾಜ್ಯ ಸರ್ಕಾರಕ್ಕೆ ಮನವಿ ನೀಡಿದ್ದೇವೆ, ಸರ್ಕಾರ ನಮ್ಮ ಮನವಿಯನ್ನು ಮನ್ನಿಸುತ್ತದೆ ಎಂದು ಭಾವಿಸುತ್ತೇವೆ. ಅವರ ತೀರ್ಮಾನ ನಂತರ ನಮ್ಮ ಮುಂದಿನ ನಡೆ ಇರುತ್ತದೆ.” ಎಂದು ಹೇಳಿದ್ದಾರೆ.

ಈ ಹಿಂದೆ ಪಡಿತರ ಚೀಟಿ ಇಟ್ಟುಕೊಂಡು ಪಡಿತರ ಕೊಡುತ್ತಿದ್ದರಾದರೂ ಈಗ ಯಾವುದೇ ಗುರುತಿನ ಚೀಟಿ ಇಲ್ಲದೆ ಪಡಿತರ ಕೊಡಬೇಕಾಗುತ್ತದೆ. ಈ ಸಮಯದಲ್ಲಿ ಗ್ರಾಹಕರು ಕೆಲವೊಮ್ಮೆ ಕಂಟೈನ್‌ಮೆಂಟ್ ಪ್ರದೇಶದಿಂದ ಕೂಡಾ ಬಂದಿರುತ್ತಾರೆ. ಇದು ಪಡಿತರ ಅಂಗಡಿಯವರಿಗೆ ಸಮಸ್ಯೆ ತಂದೊಡ್ಡುತ್ತದೆ ಎಂದು ಪಡಿತರ ಅಂಗಡಿ ಮಾಲಿಕರು ಅಲವತ್ತುಕೊಂಡಿದ್ದಾರೆ.

ಪಡಿತರ ಅಂಗಡಿಯ ಮಾಲಕರಾದ ಹೇಮಂತ್ ಕುಮಾರ್‌ “ನಮಗೂ ಕುಟುಂಬಗಳಿವೆ, ಈ ಸಂದಿಗ್ಧ ಸಮಯದಲ್ಲಿ ಕೂಡಾ ನಾವು ನಮ್ಮ ಜೀವವನ್ನು ಪಣಕ್ಕಿಟ್ಟು ಕರ್ತವ್ಯ ಮಾಡುತ್ತಿದ್ದೇವೆ. ಈ ಸಮಯದಲ್ಲಿ ಸರ್ಕಾರ ನಮ್ಮ ಸೇವೆಯನ್ನೂ ಪರಿಗಣಿಸಿ, ನಮಗೂ ಕೊರೊನಾ ವಾರಿಯರ್ಸ್ ವಿಮೆ ಹಾಗೂ ಭದ್ರತೆಯನ್ನ ನೀಡಬೇಕು” ಎಂದು ನಾನುಗೌರಿ.ಕಾಮ್‌ಗೆ ಪ್ರತಿಕ್ರಿಯಿಸಿದ್ದಾರೆ.


ಓದಿ: ಕೊರೊನಾ ಓಡಿಸಲು ಜಾಗಟೆ ಬಾರಿಸಿದ ಅಯೋಗ್ಯ ಸರ್ಕಾರಕ್ಕೆ ಸೋಂಕು ಪರೀಕ್ಷೆ ನಡೆಸಲು ಗೊತ್ತಿಲ್ಲ: ಸಿದ್ದರಾಮಯ್ಯ ಕಿಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...