Homeಕರೋನಾ ತಲ್ಲಣಪಡಿತರ ವಿತರಕರನ್ನೂ ’ಕೊರೊನಾ ವಾರಿಯರ್’ ಪಟ್ಟಿಗೆ ಸೇರಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ

ಪಡಿತರ ವಿತರಕರನ್ನೂ ’ಕೊರೊನಾ ವಾರಿಯರ್’ ಪಟ್ಟಿಗೆ ಸೇರಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ

ನಮಗೂ ಕುಟುಂಬವಿದೆ , ಕೊರೊನಾ ಬಿಕ್ಕಟ್ಟಿನಲ್ಲೂ ಸರ್ಕಾರಕ್ಕೆ ಸೇವೆ ಸಲ್ಲಿಸುತ್ತಿದ್ದೇವೆ ಇದನ್ನು ಸರ್ಕಾರ ಪರಿಗಣಿಸಬೇಕು ಎಂದು ಪಡಿತರ ವಿತರಕರು ಹೇಳಿದ್ದಾರೆ.

- Advertisement -
- Advertisement -

ರಾಜ್ಯದಲ್ಲಿ ನ್ಯಾಯಬೆಲೆ ಅಂಗಡಿ ವಿತರಕರಿಗೆ ಭದ್ರತೆಯನ್ನು ಒದಗಿಸಿ ಸೂಕ್ತ ಮಾರ್ಗಸೂಚಿಯನ್ನು ಹೊರಡಿಸುವ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿಯನ್ನು ಸಲ್ಲಿಸಿದೆ.

ಕೊರೊನಾ ಲಾಕ್‌ಡೌನ್‌ ಪ್ರಾರಂಭವಾಗಿದಂದಿನಿಂದ ಈವರೆಗೂ ಪಡಿತರ ಅಂಗಡಿಯವರು ತಮ್ಮ ಸೇವೆಯನ್ನು ಮಾಡುತ್ತಿದ್ದು, ಇದರಿಂದಾಗಿ ಬೆಂಗಳೂರು ಹಾಗೂ ಹುಬ್ಬಳ್ಳಿಯಲ್ಲಿ ಪಡಿತರ ಅಂಗಡಿಯ ಮಾಲಕರು ಕೊರೊನಾ ಪಾಸಿಟಿವ್ ಪರೀಕ್ಷೆ ನಡೆಸಿದ್ದಾರೆ.

ಸಂಘವೂ ಮನವಿಯಲ್ಲಿ, “ಲಾಕ್‌ಡೌನ್ ಘೋಷಣೆಯಾದ ದಿನದಿಂದ ಇದುವರೆಗೂ ಸರ್ಕಾರದ ಆದೇಶದಂತೆ ಪ್ರಾಣವನ್ನು ಪಣಕ್ಕಿಟ್ಟು ಸಮರ್ಪಕವಾಗಿ ಪಡಿತರ ವಿತರಣೆ ಮಾಡಿರುತ್ತೇವೆ. ಕೊಲೋನಾ ವಾರಿಯರ್‌ನ ಒಂದು ಭಾಗವಾಗಿ ಸರ್ಕಾರಕ್ಕೆ ಸೇವೆಯನ್ನು ಮಾಡಿದ್ದೇವೆ. ಪಡಿತರ ವಿತರಣೆಯ ಸಂದರ್ಭದಲ್ಲಿ ಸೋಂಕಿತರು ಸಹ ಬಂದು ಪಡಿತರವನ್ನು ಪಡೆದಿರುತ್ತಾರೆ. ಇದರಿಂದ ಸೋಂಕು ಪಡಿತರರ ವಿತರಕರಿಗೆ ಹರಡುವ ಸಾಧ್ಯತೆಗಳಿವೆ” ಎಂದು ಹೇಳಲಾಗಿದೆವಿತರಕರ ಸಂಘದ ಮನವಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ. ಗೋಪಾಲಯ್ಯ ಅವರು ಸ್ಪಂದಿಸಿ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಪಡಿತರ ಅಂಗಡಿಯವರನ್ನೂ ಕೊರೊನಾ ಕೊರೊನಾ ವಾರಿಯರ್‌ ಪಟ್ಟಿಗೆ ಸೇರಿಸಿ ಅವರಿಗೂ ವಿಮೆಯನ್ನು ಒದಗಿಸಿ ಭದ್ರತೆ ವ್ಯವಸ್ಥೆ ನೀಡುವಂತೆ ವಿನಂತಿಸಿದ್ದಾರೆ.

 

ಈ ಬಗ್ಗೆ ನಾನುಗೌರಿ.ಕಾಮ್‌ಗೆ ಪ್ರತಿಕ್ರಿಯೆ ನೀಡಿದ ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ ಬೆಂಗಳೂರು ಇದರ ಅಧ್ಯಕ್ಷರಾದ ಕೆ. ಕೆ. ಕೃಷ್ಣಪ್ಪ “ರಾಜ್ಯ ಸರ್ಕಾರಕ್ಕೆ ಮನವಿ ನೀಡಿದ್ದೇವೆ, ಸರ್ಕಾರ ನಮ್ಮ ಮನವಿಯನ್ನು ಮನ್ನಿಸುತ್ತದೆ ಎಂದು ಭಾವಿಸುತ್ತೇವೆ. ಅವರ ತೀರ್ಮಾನ ನಂತರ ನಮ್ಮ ಮುಂದಿನ ನಡೆ ಇರುತ್ತದೆ.” ಎಂದು ಹೇಳಿದ್ದಾರೆ.

ಈ ಹಿಂದೆ ಪಡಿತರ ಚೀಟಿ ಇಟ್ಟುಕೊಂಡು ಪಡಿತರ ಕೊಡುತ್ತಿದ್ದರಾದರೂ ಈಗ ಯಾವುದೇ ಗುರುತಿನ ಚೀಟಿ ಇಲ್ಲದೆ ಪಡಿತರ ಕೊಡಬೇಕಾಗುತ್ತದೆ. ಈ ಸಮಯದಲ್ಲಿ ಗ್ರಾಹಕರು ಕೆಲವೊಮ್ಮೆ ಕಂಟೈನ್‌ಮೆಂಟ್ ಪ್ರದೇಶದಿಂದ ಕೂಡಾ ಬಂದಿರುತ್ತಾರೆ. ಇದು ಪಡಿತರ ಅಂಗಡಿಯವರಿಗೆ ಸಮಸ್ಯೆ ತಂದೊಡ್ಡುತ್ತದೆ ಎಂದು ಪಡಿತರ ಅಂಗಡಿ ಮಾಲಿಕರು ಅಲವತ್ತುಕೊಂಡಿದ್ದಾರೆ.

ಪಡಿತರ ಅಂಗಡಿಯ ಮಾಲಕರಾದ ಹೇಮಂತ್ ಕುಮಾರ್‌ “ನಮಗೂ ಕುಟುಂಬಗಳಿವೆ, ಈ ಸಂದಿಗ್ಧ ಸಮಯದಲ್ಲಿ ಕೂಡಾ ನಾವು ನಮ್ಮ ಜೀವವನ್ನು ಪಣಕ್ಕಿಟ್ಟು ಕರ್ತವ್ಯ ಮಾಡುತ್ತಿದ್ದೇವೆ. ಈ ಸಮಯದಲ್ಲಿ ಸರ್ಕಾರ ನಮ್ಮ ಸೇವೆಯನ್ನೂ ಪರಿಗಣಿಸಿ, ನಮಗೂ ಕೊರೊನಾ ವಾರಿಯರ್ಸ್ ವಿಮೆ ಹಾಗೂ ಭದ್ರತೆಯನ್ನ ನೀಡಬೇಕು” ಎಂದು ನಾನುಗೌರಿ.ಕಾಮ್‌ಗೆ ಪ್ರತಿಕ್ರಿಯಿಸಿದ್ದಾರೆ.


ಓದಿ: ಕೊರೊನಾ ಓಡಿಸಲು ಜಾಗಟೆ ಬಾರಿಸಿದ ಅಯೋಗ್ಯ ಸರ್ಕಾರಕ್ಕೆ ಸೋಂಕು ಪರೀಕ್ಷೆ ನಡೆಸಲು ಗೊತ್ತಿಲ್ಲ: ಸಿದ್ದರಾಮಯ್ಯ ಕಿಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...