Homeಕರೋನಾ ತಲ್ಲಣಪಡಿತರ ವಿತರಕರನ್ನೂ ’ಕೊರೊನಾ ವಾರಿಯರ್’ ಪಟ್ಟಿಗೆ ಸೇರಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ

ಪಡಿತರ ವಿತರಕರನ್ನೂ ’ಕೊರೊನಾ ವಾರಿಯರ್’ ಪಟ್ಟಿಗೆ ಸೇರಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ

ನಮಗೂ ಕುಟುಂಬವಿದೆ , ಕೊರೊನಾ ಬಿಕ್ಕಟ್ಟಿನಲ್ಲೂ ಸರ್ಕಾರಕ್ಕೆ ಸೇವೆ ಸಲ್ಲಿಸುತ್ತಿದ್ದೇವೆ ಇದನ್ನು ಸರ್ಕಾರ ಪರಿಗಣಿಸಬೇಕು ಎಂದು ಪಡಿತರ ವಿತರಕರು ಹೇಳಿದ್ದಾರೆ.

- Advertisement -
- Advertisement -

ರಾಜ್ಯದಲ್ಲಿ ನ್ಯಾಯಬೆಲೆ ಅಂಗಡಿ ವಿತರಕರಿಗೆ ಭದ್ರತೆಯನ್ನು ಒದಗಿಸಿ ಸೂಕ್ತ ಮಾರ್ಗಸೂಚಿಯನ್ನು ಹೊರಡಿಸುವ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿಯನ್ನು ಸಲ್ಲಿಸಿದೆ.

ಕೊರೊನಾ ಲಾಕ್‌ಡೌನ್‌ ಪ್ರಾರಂಭವಾಗಿದಂದಿನಿಂದ ಈವರೆಗೂ ಪಡಿತರ ಅಂಗಡಿಯವರು ತಮ್ಮ ಸೇವೆಯನ್ನು ಮಾಡುತ್ತಿದ್ದು, ಇದರಿಂದಾಗಿ ಬೆಂಗಳೂರು ಹಾಗೂ ಹುಬ್ಬಳ್ಳಿಯಲ್ಲಿ ಪಡಿತರ ಅಂಗಡಿಯ ಮಾಲಕರು ಕೊರೊನಾ ಪಾಸಿಟಿವ್ ಪರೀಕ್ಷೆ ನಡೆಸಿದ್ದಾರೆ.

ಸಂಘವೂ ಮನವಿಯಲ್ಲಿ, “ಲಾಕ್‌ಡೌನ್ ಘೋಷಣೆಯಾದ ದಿನದಿಂದ ಇದುವರೆಗೂ ಸರ್ಕಾರದ ಆದೇಶದಂತೆ ಪ್ರಾಣವನ್ನು ಪಣಕ್ಕಿಟ್ಟು ಸಮರ್ಪಕವಾಗಿ ಪಡಿತರ ವಿತರಣೆ ಮಾಡಿರುತ್ತೇವೆ. ಕೊಲೋನಾ ವಾರಿಯರ್‌ನ ಒಂದು ಭಾಗವಾಗಿ ಸರ್ಕಾರಕ್ಕೆ ಸೇವೆಯನ್ನು ಮಾಡಿದ್ದೇವೆ. ಪಡಿತರ ವಿತರಣೆಯ ಸಂದರ್ಭದಲ್ಲಿ ಸೋಂಕಿತರು ಸಹ ಬಂದು ಪಡಿತರವನ್ನು ಪಡೆದಿರುತ್ತಾರೆ. ಇದರಿಂದ ಸೋಂಕು ಪಡಿತರರ ವಿತರಕರಿಗೆ ಹರಡುವ ಸಾಧ್ಯತೆಗಳಿವೆ” ಎಂದು ಹೇಳಲಾಗಿದೆವಿತರಕರ ಸಂಘದ ಮನವಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ. ಗೋಪಾಲಯ್ಯ ಅವರು ಸ್ಪಂದಿಸಿ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಪಡಿತರ ಅಂಗಡಿಯವರನ್ನೂ ಕೊರೊನಾ ಕೊರೊನಾ ವಾರಿಯರ್‌ ಪಟ್ಟಿಗೆ ಸೇರಿಸಿ ಅವರಿಗೂ ವಿಮೆಯನ್ನು ಒದಗಿಸಿ ಭದ್ರತೆ ವ್ಯವಸ್ಥೆ ನೀಡುವಂತೆ ವಿನಂತಿಸಿದ್ದಾರೆ.

 

ಈ ಬಗ್ಗೆ ನಾನುಗೌರಿ.ಕಾಮ್‌ಗೆ ಪ್ರತಿಕ್ರಿಯೆ ನೀಡಿದ ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ ಬೆಂಗಳೂರು ಇದರ ಅಧ್ಯಕ್ಷರಾದ ಕೆ. ಕೆ. ಕೃಷ್ಣಪ್ಪ “ರಾಜ್ಯ ಸರ್ಕಾರಕ್ಕೆ ಮನವಿ ನೀಡಿದ್ದೇವೆ, ಸರ್ಕಾರ ನಮ್ಮ ಮನವಿಯನ್ನು ಮನ್ನಿಸುತ್ತದೆ ಎಂದು ಭಾವಿಸುತ್ತೇವೆ. ಅವರ ತೀರ್ಮಾನ ನಂತರ ನಮ್ಮ ಮುಂದಿನ ನಡೆ ಇರುತ್ತದೆ.” ಎಂದು ಹೇಳಿದ್ದಾರೆ.

ಈ ಹಿಂದೆ ಪಡಿತರ ಚೀಟಿ ಇಟ್ಟುಕೊಂಡು ಪಡಿತರ ಕೊಡುತ್ತಿದ್ದರಾದರೂ ಈಗ ಯಾವುದೇ ಗುರುತಿನ ಚೀಟಿ ಇಲ್ಲದೆ ಪಡಿತರ ಕೊಡಬೇಕಾಗುತ್ತದೆ. ಈ ಸಮಯದಲ್ಲಿ ಗ್ರಾಹಕರು ಕೆಲವೊಮ್ಮೆ ಕಂಟೈನ್‌ಮೆಂಟ್ ಪ್ರದೇಶದಿಂದ ಕೂಡಾ ಬಂದಿರುತ್ತಾರೆ. ಇದು ಪಡಿತರ ಅಂಗಡಿಯವರಿಗೆ ಸಮಸ್ಯೆ ತಂದೊಡ್ಡುತ್ತದೆ ಎಂದು ಪಡಿತರ ಅಂಗಡಿ ಮಾಲಿಕರು ಅಲವತ್ತುಕೊಂಡಿದ್ದಾರೆ.

ಪಡಿತರ ಅಂಗಡಿಯ ಮಾಲಕರಾದ ಹೇಮಂತ್ ಕುಮಾರ್‌ “ನಮಗೂ ಕುಟುಂಬಗಳಿವೆ, ಈ ಸಂದಿಗ್ಧ ಸಮಯದಲ್ಲಿ ಕೂಡಾ ನಾವು ನಮ್ಮ ಜೀವವನ್ನು ಪಣಕ್ಕಿಟ್ಟು ಕರ್ತವ್ಯ ಮಾಡುತ್ತಿದ್ದೇವೆ. ಈ ಸಮಯದಲ್ಲಿ ಸರ್ಕಾರ ನಮ್ಮ ಸೇವೆಯನ್ನೂ ಪರಿಗಣಿಸಿ, ನಮಗೂ ಕೊರೊನಾ ವಾರಿಯರ್ಸ್ ವಿಮೆ ಹಾಗೂ ಭದ್ರತೆಯನ್ನ ನೀಡಬೇಕು” ಎಂದು ನಾನುಗೌರಿ.ಕಾಮ್‌ಗೆ ಪ್ರತಿಕ್ರಿಯಿಸಿದ್ದಾರೆ.


ಓದಿ: ಕೊರೊನಾ ಓಡಿಸಲು ಜಾಗಟೆ ಬಾರಿಸಿದ ಅಯೋಗ್ಯ ಸರ್ಕಾರಕ್ಕೆ ಸೋಂಕು ಪರೀಕ್ಷೆ ನಡೆಸಲು ಗೊತ್ತಿಲ್ಲ: ಸಿದ್ದರಾಮಯ್ಯ ಕಿಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...