Homeಕರ್ನಾಟಕಕಾರ್ಮಿಕರಿಗೆ ಸರ್ಕಾರಿ ಆಸ್ಪತ್ರೆಗಳಲ್ಲೇ ಲಸಿಕೆ ನೀಡಲು ಒತ್ತಾಯಿಸಿ ರಾಜ್ಯವ್ಯಾಪಿ ಪ್ರತಿಭಟನೆ

ಕಾರ್ಮಿಕರಿಗೆ ಸರ್ಕಾರಿ ಆಸ್ಪತ್ರೆಗಳಲ್ಲೇ ಲಸಿಕೆ ನೀಡಲು ಒತ್ತಾಯಿಸಿ ರಾಜ್ಯವ್ಯಾಪಿ ಪ್ರತಿಭಟನೆ

- Advertisement -
ಬೆಂಗಳೂರು: ಕಾರ್ಮಿಕರಿಗೆ ಸರ್ಕಾರಿ ಆಸ್ಪತ್ರೆಗಳ ಮೂಲಕವೇ ಲಸಿಕೆ ನೀಡಬೇಕು ಎಂದು ಆಗ್ರಹಿಸಿ ಸಿಐಟಿಯು ನೇತೃತ್ವದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ಸಂಘಟನೆಯ ಸದಸ್ಯರು ರಾಜ್ಯವ್ಯಾಪಿ ಪ್ರತಿಭಟನೆ ನಡೆಸಿದ್ದಾರೆ.
ರಾಜ್ಯದಲ್ಲಿನ 40 ಲಕ್ಷ ಕಟ್ಟಡ ಮತ್ತು ವಲಸೆ ಕಾರ್ಮಿಕರಿಗೆ ಕೋವಿಡ್ ಲಸಿಕೆಗಳನ್ನು ನೀಡಲು ಸರ್ಕಾರ ನಿರ್ಧರಿಸಿರುವುದು ಸ್ವಾಗತಾರ್ಹ. ಉಚಿತವಾಗಿ ಕೋವಿಡ್ ಲಸಿಕೆಯನ್ನು ಕಾರ್ಮಿಕರು ಮತ್ತು ಅವರ ಕುಟುಂಬದ ಸದಸ್ಯರಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೇ ನೀಡಬೇಕು. ಯಾವುದೇ ಕಾರಣಕ್ಕೂ ಖಾಸಗಿ ಆಸ್ಪತ್ರೆಗಳ ಮೂಲಕ ನೀಡಬಾರದು ಎಂದು ಒತ್ತಾಯಿಸಿದರು.
ಕಾರ್ಮಿಕ ಆಯುಕ್ತರು ಖಾಸಗಿ ಆಸ್ಪತ್ರೆಗಳ ಮಾಲೀಕರೊಂದಿಗೆ ಸಭೆ ನಡೆಸಿ ಪ್ರತಿ ಲಸಿಕೆಗೆ 780 ರೂಪಾಯಿ ದರದಲ್ಲಿ ರಾಜ್ಯದ 30 ಲಕ್ಷ ನೋಂದಾಯಿತ ಕಾರ್ಮಿಕರಿಗೆ ಹಾಗೂ 10 ಲಕ್ಷ ವಲಸೆ ಕಾರ್ಮಿಕರಿಗೆ ಲಸಿಕೆ ನೀಡುವ ತೀರ್ಮಾನ ಕೈಗೊಂಡಿರುವುದಾಗಿ ತಿಳಿದು ಬಂದಿದೆ. ಇದರಿಂದ ಕಲ್ಯಾಣ ಮಂಡಳಿಯ ಸುಮಾರು 624 ಕೋಟಿ ಹಣವು ನಿರಾಯಸವಾಗಿ 400 ಖಾಸಗಿ ಆಸ್ಪತ್ರೆಗಳ ಪಾಲಾಗಲಿದೆ. ಮಂಡಳಿಯ ನಿಧಿಯನ್ನು ಖಾಲಿ ಮಾಡುವ ಹುನ್ನಾರವಾಗಿದೆ. ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಾಗಿರುವ ನಿಧಿಯನ್ನು ಈ ರೀತಿ ದುರ್ಬಳಕೆ ಮಾಡುವ ಪ್ರಯತ್ನವು ಸರ್ವೋಚ್ಚ ನ್ಯಾಯಾಲಯದ ಆದೇಶ ಮತ್ತು 2020 ಮಾರ್ಚಿನ ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ನಿರ್ದೇಶನದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ತಿಳಿಸಿದರು.
ಕೋವಿಡ್‌ ಹೆಸರಲ್ಲಿ ಸುಲಿಗೆ ಮಾಡುವವರಿಗೆ ಬಡವರ ಕಲ್ಯಾಣಕ್ಕಾಗಿ ಸಂಗ್ರಹಹಿಸಲಾದ ಕಾರ್ಮಿಕ ಮಂಡಳಿಯಲ್ಲಿ ಇರುವ ಸೆಸ್ ಹಣವನ್ನು ಸರ್ಕಾರ ಧಾರೆ ಎರೆಯಲು ಹೊರಟಿದೆ. ಈಗಾಗಲೇ ರೇಷನ್ ಕಿಟ್, ಟೂಲ್ ಕಿಟ್, ಸುರಕ್ಷಾ ಕಿಟ್ ಹಾಗೂ ಆರೋಗ್ಯ ಸುರಕ್ಷಾ ಕಿಟ್, ಸಾಪ್ಟವೇರ್ ಅಳವಡಿಕೆ  ಹಾಗೂ ಕಂಪ್ಯೂಟರ್ ಮತ್ತು ಟಿವಿಗಳ ಖರೀದಿಗಳಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆಸಲಾಗಿದೆ ಎಂದು ಆರೋಪಿಸಿದರು.
ಕೊರೊನಾ ಕಾಲದಲ್ಲಿ ಸಂಕಷ್ಟದಲ್ಲಿರುವ ಜನರಿಗೆ ಅನ್ನ, ಆಹಾರ, ಆರೋಗ್ಯ, ಶಿಕ್ಷಣ ಮತ್ತು ಬದುಕಿನ ಭದ್ರತೆ ಒದಗಿಸುವುದು ಕೇಂದ್ರ ಮತ್ತು ರಾಜ್ಯಗಳ ಕೆಲಸವೆಂದು ಸುಪ್ರೀಂ ಕೋರ್ಟ್ ಹೇಳಿದೆ. ಅದಕ್ಕಾಗಿ ಕೆಲವು ರಾಜ್ಯ ಸರ್ಕಾರಗಳು ಸಾವಿರಾರು ಕೋಟಿ ರೂ.ಗಳ ಬಜೆಟ್ ಅನುದಾನವನ್ನು ಖರ್ಚು ಮಾಡುತ್ತಿವೆ. ಆದರೆ ನಮ್ಮ ರಾಜ್ಯ ಸರ್ಕಾರ ಮಾತ್ರ ಈ ಎಲ್ಲ ಕೆಲಸಗಳಿಗೆ ತನ್ನ ಹಣವನ್ನು ಖರ್ಚು ಮಾಡುವ ಬದಲು ಸರ್ವೋಚ್ಚ  ನ್ಯಾಯಾಲಯದ ಆದೇಶವನ್ನು ಗಾಳಿಗೆ ತೂರಿ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ಮೂಲಕ ಜಾರಿ ಮಾಡಿಸುತ್ತಾ ಸಾವಿರಾರು ಕೋಟಿ ಹಣವನ್ನು ಖರ್ಚು ಮಾಡಿಸುತ್ತಿದೆ. ಇಂತಹ ಕಾರ್ಮಿಕ ವಿರೋಧಿ ಕ್ರಮವನ್ನು ಕೂಡಲೇ ನಿಲ್ಲಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್‌(ಸಿಐಟಿಯು) ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಮಹಾಂತೇಶ, ಸಂಘಟನೆಯ ಪರವಾಗಿ ಲಿಂಗರಾಜು, ಕೆ.ಎಸ್.ಲಕ್ಷ್ಮಿ, ಐಎನ್‌ಟಿಯುಸಿ ಪರವಾಗಿ ಶಾಮಣ್ಣರೆಡ್ಡಿ, ಎನ್‌ಸಿಎಲ್‌ ಪರವಾಗಿ ಧನಶೇಖರ್, ಎಐಟಿಯುಸಿ ಪರವಾಗಿ ಗುರುವಯ್ಯ, ಎಐಸಿಸಿಟಿಯು ಪರವಾಗಿ ಅಪ್ಪಣ್ಣ, ಎಐಯುಟಿಯುಸಿ ಪರವಾಗಿ ಷಣ್ಮುಗಂ ಹಾಗೂ ಕಾರ್ಮಿಕರು ಭಾಗವಹಿಸಿದ್ದರು.ಕೋಲಾರದಲ್ಲಿ ನಡೆದ ಪ್ರತಿಭಟನೆಯ ಭಾಗವಾಗಿ ಅಂಚೆ ಕಚೇರಿಯಿಂದ ಮುಖ್ಯಮಂತ್ರಿಗೆ ಪತ್ರ ಚಳುವಳಿ ಮೂಲಕ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಫೆಡರೇಶನ್ ನ ಮುಖಂಡರಾದ ಎಂ.ಭೀಮರಾಜ್, ವಿಜಯಕೃಷ್ಣ, ಆರೋಗ್ಯನಾಥನ್,  ಹೊನ್ನೇನಹಳ್ಳಿ ಅಂಬರೀಶ್, ರಾಮಚಂದ್ರಪ್ಪ, ಗೋಪಾಲಪ್ಪ ವೆಂಕಟೇಶ್, ಆನಂದ್ ಹಾಜರಿದ್ದರು.
ಇದನ್ನೂ ಓದಿ: ಎಲ್‌ಪಿಜಿ, ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ – ಯುವ ಕಾಂಗ್ರೆಸ್ ಪ್ರತಿಭಟನೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...