ಬೆಂಗಳೂರು: ಕಾರ್ಮಿಕರಿಗೆ ಸರ್ಕಾರಿ ಆಸ್ಪತ್ರೆಗಳ ಮೂಲಕವೇ ಲಸಿಕೆ ನೀಡಬೇಕು ಎಂದು ಆಗ್ರಹಿಸಿ ಸಿಐಟಿಯು ನೇತೃತ್ವದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ಸಂಘಟನೆಯ ಸದಸ್ಯರು ರಾಜ್ಯವ್ಯಾಪಿ ಪ್ರತಿಭಟನೆ ನಡೆಸಿದ್ದಾರೆ.
ರಾಜ್ಯದಲ್ಲಿನ 40 ಲಕ್ಷ ಕಟ್ಟಡ ಮತ್ತು ವಲಸೆ ಕಾರ್ಮಿಕರಿಗೆ ಕೋವಿಡ್ ಲಸಿಕೆಗಳನ್ನು ನೀಡಲು ಸರ್ಕಾರ ನಿರ್ಧರಿಸಿರುವುದು ಸ್ವಾಗತಾರ್ಹ. ಉಚಿತವಾಗಿ ಕೋವಿಡ್ ಲಸಿಕೆಯನ್ನು ಕಾರ್ಮಿಕರು ಮತ್ತು ಅವರ ಕುಟುಂಬದ ಸದಸ್ಯರಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೇ ನೀಡಬೇಕು. ಯಾವುದೇ ಕಾರಣಕ್ಕೂ ಖಾಸಗಿ ಆಸ್ಪತ್ರೆಗಳ ಮೂಲಕ ನೀಡಬಾರದು ಎಂದು ಒತ್ತಾಯಿಸಿದರು.
ಕಾರ್ಮಿಕ ಆಯುಕ್ತರು ಖಾಸಗಿ ಆಸ್ಪತ್ರೆಗಳ ಮಾಲೀಕರೊಂದಿಗೆ ಸಭೆ ನಡೆಸಿ ಪ್ರತಿ ಲಸಿಕೆಗೆ 780 ರೂಪಾಯಿ ದರದಲ್ಲಿ ರಾಜ್ಯದ 30 ಲಕ್ಷ ನೋಂದಾಯಿತ ಕಾರ್ಮಿಕರಿಗೆ ಹಾಗೂ 10 ಲಕ್ಷ ವಲಸೆ ಕಾರ್ಮಿಕರಿಗೆ ಲಸಿಕೆ ನೀಡುವ ತೀರ್ಮಾನ ಕೈಗೊಂಡಿರುವುದಾಗಿ ತಿಳಿದು ಬಂದಿದೆ. ಇದರಿಂದ ಕಲ್ಯಾಣ ಮಂಡಳಿಯ ಸುಮಾರು 624 ಕೋಟಿ ಹಣವು ನಿರಾಯಸವಾಗಿ 400 ಖಾಸಗಿ ಆಸ್ಪತ್ರೆಗಳ ಪಾಲಾಗಲಿದೆ. ಮಂಡಳಿಯ ನಿಧಿಯನ್ನು ಖಾಲಿ ಮಾಡುವ ಹುನ್ನಾರವಾಗಿದೆ. ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಾಗಿರುವ ನಿಧಿಯನ್ನು ಈ ರೀತಿ ದುರ್ಬಳಕೆ ಮಾಡುವ ಪ್ರಯತ್ನವು ಸರ್ವೋಚ್ಚ ನ್ಯಾಯಾಲಯದ ಆದೇಶ ಮತ್ತು 2020 ಮಾರ್ಚಿನ ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ನಿರ್ದೇಶನದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ತಿಳಿಸಿದರು.
ಕೋವಿಡ್ ಹೆಸರಲ್ಲಿ ಸುಲಿಗೆ ಮಾಡುವವರಿಗೆ ಬಡವರ ಕಲ್ಯಾಣಕ್ಕಾಗಿ ಸಂಗ್ರಹಹಿಸಲಾದ ಕಾರ್ಮಿಕ ಮಂಡಳಿಯಲ್ಲಿ ಇರುವ ಸೆಸ್ ಹಣವನ್ನು ಸರ್ಕಾರ ಧಾರೆ ಎರೆಯಲು ಹೊರಟಿದೆ. ಈಗಾಗಲೇ ರೇಷನ್ ಕಿಟ್, ಟೂಲ್ ಕಿಟ್, ಸುರಕ್ಷಾ ಕಿಟ್ ಹಾಗೂ ಆರೋಗ್ಯ ಸುರಕ್ಷಾ ಕಿಟ್, ಸಾಪ್ಟವೇರ್ ಅಳವಡಿಕೆ ಹಾಗೂ ಕಂಪ್ಯೂಟರ್ ಮತ್ತು ಟಿವಿಗಳ ಖರೀದಿಗಳಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆಸಲಾಗಿದೆ ಎಂದು ಆರೋಪಿಸಿದರು.
ಕೊರೊನಾ ಕಾಲದಲ್ಲಿ ಸಂಕಷ್ಟದಲ್ಲಿರುವ ಜನರಿಗೆ ಅನ್ನ, ಆಹಾರ, ಆರೋಗ್ಯ, ಶಿಕ್ಷಣ ಮತ್ತು ಬದುಕಿನ ಭದ್ರತೆ ಒದಗಿಸುವುದು ಕೇಂದ್ರ ಮತ್ತು ರಾಜ್ಯಗಳ ಕೆಲಸವೆಂದು ಸುಪ್ರೀಂ ಕೋರ್ಟ್ ಹೇಳಿದೆ. ಅದಕ್ಕಾಗಿ ಕೆಲವು ರಾಜ್ಯ ಸರ್ಕಾರಗಳು ಸಾವಿರಾರು ಕೋಟಿ ರೂ.ಗಳ ಬಜೆಟ್ ಅನುದಾನವನ್ನು ಖರ್ಚು ಮಾಡುತ್ತಿವೆ. ಆದರೆ ನಮ್ಮ ರಾಜ್ಯ ಸರ್ಕಾರ ಮಾತ್ರ ಈ ಎಲ್ಲ ಕೆಲಸಗಳಿಗೆ ತನ್ನ ಹಣವನ್ನು ಖರ್ಚು ಮಾಡುವ ಬದಲು ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಗಾಳಿಗೆ ತೂರಿ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ಮೂಲಕ ಜಾರಿ ಮಾಡಿಸುತ್ತಾ ಸಾವಿರಾರು ಕೋಟಿ ಹಣವನ್ನು ಖರ್ಚು ಮಾಡಿಸುತ್ತಿದೆ. ಇಂತಹ ಕಾರ್ಮಿಕ ವಿರೋಧಿ ಕ್ರಮವನ್ನು ಕೂಡಲೇ ನಿಲ್ಲಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್(ಸಿಐಟಿಯು) ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಮಹಾಂತೇಶ, ಸಂಘಟನೆಯ ಪರವಾಗಿ ಲಿಂಗರಾಜು, ಕೆ.ಎಸ್.ಲಕ್ಷ್ಮಿ, ಐಎನ್ಟಿಯುಸಿ ಪರವಾಗಿ ಶಾಮಣ್ಣರೆಡ್ಡಿ, ಎನ್ಸಿಎಲ್ ಪರವಾಗಿ ಧನಶೇಖರ್, ಎಐಟಿಯುಸಿ ಪರವಾಗಿ ಗುರುವಯ್ಯ, ಎಐಸಿಸಿಟಿಯು ಪರವಾಗಿ ಅಪ್ಪಣ್ಣ, ಎಐಯುಟಿಯುಸಿ ಪರವಾಗಿ ಷಣ್ಮುಗಂ ಹಾಗೂ ಕಾರ್ಮಿಕರು ಭಾಗವಹಿಸಿದ್ದರು.ಕೋಲಾರದಲ್ಲಿ ನಡೆದ ಪ್ರತಿಭಟನೆಯ ಭಾಗವಾಗಿ ಅಂಚೆ ಕಚೇರಿಯಿಂದ ಮುಖ್ಯಮಂತ್ರಿಗೆ ಪತ್ರ ಚಳುವಳಿ ಮೂಲಕ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಫೆಡರೇಶನ್ ನ ಮುಖಂಡರಾದ ಎಂ.ಭೀಮರಾಜ್, ವಿಜಯಕೃಷ್ಣ, ಆರೋಗ್ಯನಾಥನ್, ಹೊನ್ನೇನಹಳ್ಳಿ ಅಂಬರೀಶ್, ರಾಮಚಂದ್ರಪ್ಪ, ಗೋಪಾಲಪ್ಪ ವೆಂಕಟೇಶ್, ಆನಂದ್ ಹಾಜರಿದ್ದರು.
ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...
ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...
ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...
ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ.
ದೆಹಲಿ ಮೂಲದ ಹರೀಶ್...
ಮುಂಬೈನ ಪೊವೈ ಬೆಟ್ಟಗಳ ಪ್ರದೇಶದಲ್ಲಿ ಸಂಭವಿಸಿದ ಬೆಂಕಿ ಕಳೆದ ಎರಡು ದಿನಗಳಿಂದ ಉರಿಯುತ್ತಿದೆ ಎಂದು ವರದಿಯಾಗಿದೆ. ನಿವಾಸಿಗಳು ಬೆಂಕಿಯ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ನಾಗರಿಕ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆಯು ಸಿಕ್ಕಿಲ್ಲ...
"ದಲಿತ ಕ್ರೈಸ್ತರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು, ಇದರಿಂದಾಗಿ ಜಾತಿ ಹಿಂಸಾಚಾರದ ಬಲಿಪಶುಗಳು ಎಸ್ಸಿ/ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಪ್ರಕಾರ ಸರ್ಕಾರದಿಂದ ಪರಿಹಾರವನ್ನು ಪಡೆಯಬಹುದು" ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಹಾಗೂ...
ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರೊಂದಿಗೆ ಮಂಗಳವಾರ (ಮಾ.10) ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಈ ವೇಳೆ ಪಶ್ಚಿಮ ಏಷ್ಯಾದ ಬೆಳವಣಿಗೆಗಳು...
ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ 24 ವರ್ಷದ ಭಾರತೀಯ ನೌಕಾಪಡೆಯ ಲ್ಯಾನ್ಸ್ ನಾಯಕ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮಂಗಳವಾರ (ಮಾ.10)...
ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ನ ಹೂಡಿಕೆಯ ಸಹಾಯದಿಂದ 50 ವರ್ಷಗಳಲ್ಲಿ ಅಮೆರಿಕ ತನ್ನ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ಪಡೆಯಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
'ಅಮೆರಿಕ ಫಸ್ಟ್ ರಿಫೈನಿಂಗ್ ಸಂಸ್ಥೆ'ಯು ಟೆಕ್ಸಾಸ್ನ...
ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ,...