ಬೆಂಗಳೂರು: ಕಾರ್ಮಿಕರಿಗೆ ಸರ್ಕಾರಿ ಆಸ್ಪತ್ರೆಗಳ ಮೂಲಕವೇ ಲಸಿಕೆ ನೀಡಬೇಕು ಎಂದು ಆಗ್ರಹಿಸಿ ಸಿಐಟಿಯು ನೇತೃತ್ವದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ಸಂಘಟನೆಯ ಸದಸ್ಯರು ರಾಜ್ಯವ್ಯಾಪಿ ಪ್ರತಿಭಟನೆ ನಡೆಸಿದ್ದಾರೆ.
ರಾಜ್ಯದಲ್ಲಿನ 40 ಲಕ್ಷ ಕಟ್ಟಡ ಮತ್ತು ವಲಸೆ ಕಾರ್ಮಿಕರಿಗೆ ಕೋವಿಡ್ ಲಸಿಕೆಗಳನ್ನು ನೀಡಲು ಸರ್ಕಾರ ನಿರ್ಧರಿಸಿರುವುದು ಸ್ವಾಗತಾರ್ಹ. ಉಚಿತವಾಗಿ ಕೋವಿಡ್ ಲಸಿಕೆಯನ್ನು ಕಾರ್ಮಿಕರು ಮತ್ತು ಅವರ ಕುಟುಂಬದ ಸದಸ್ಯರಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೇ ನೀಡಬೇಕು. ಯಾವುದೇ ಕಾರಣಕ್ಕೂ ಖಾಸಗಿ ಆಸ್ಪತ್ರೆಗಳ ಮೂಲಕ ನೀಡಬಾರದು ಎಂದು ಒತ್ತಾಯಿಸಿದರು.
ಕಾರ್ಮಿಕ ಆಯುಕ್ತರು ಖಾಸಗಿ ಆಸ್ಪತ್ರೆಗಳ ಮಾಲೀಕರೊಂದಿಗೆ ಸಭೆ ನಡೆಸಿ ಪ್ರತಿ ಲಸಿಕೆಗೆ 780 ರೂಪಾಯಿ ದರದಲ್ಲಿ ರಾಜ್ಯದ 30 ಲಕ್ಷ ನೋಂದಾಯಿತ ಕಾರ್ಮಿಕರಿಗೆ ಹಾಗೂ 10 ಲಕ್ಷ ವಲಸೆ ಕಾರ್ಮಿಕರಿಗೆ ಲಸಿಕೆ ನೀಡುವ ತೀರ್ಮಾನ ಕೈಗೊಂಡಿರುವುದಾಗಿ ತಿಳಿದು ಬಂದಿದೆ. ಇದರಿಂದ ಕಲ್ಯಾಣ ಮಂಡಳಿಯ ಸುಮಾರು 624 ಕೋಟಿ ಹಣವು ನಿರಾಯಸವಾಗಿ 400 ಖಾಸಗಿ ಆಸ್ಪತ್ರೆಗಳ ಪಾಲಾಗಲಿದೆ. ಮಂಡಳಿಯ ನಿಧಿಯನ್ನು ಖಾಲಿ ಮಾಡುವ ಹುನ್ನಾರವಾಗಿದೆ. ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಾಗಿರುವ ನಿಧಿಯನ್ನು ಈ ರೀತಿ ದುರ್ಬಳಕೆ ಮಾಡುವ ಪ್ರಯತ್ನವು ಸರ್ವೋಚ್ಚ ನ್ಯಾಯಾಲಯದ ಆದೇಶ ಮತ್ತು 2020 ಮಾರ್ಚಿನ ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ನಿರ್ದೇಶನದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ತಿಳಿಸಿದರು.
ಕೋವಿಡ್ ಹೆಸರಲ್ಲಿ ಸುಲಿಗೆ ಮಾಡುವವರಿಗೆ ಬಡವರ ಕಲ್ಯಾಣಕ್ಕಾಗಿ ಸಂಗ್ರಹಹಿಸಲಾದ ಕಾರ್ಮಿಕ ಮಂಡಳಿಯಲ್ಲಿ ಇರುವ ಸೆಸ್ ಹಣವನ್ನು ಸರ್ಕಾರ ಧಾರೆ ಎರೆಯಲು ಹೊರಟಿದೆ. ಈಗಾಗಲೇ ರೇಷನ್ ಕಿಟ್, ಟೂಲ್ ಕಿಟ್, ಸುರಕ್ಷಾ ಕಿಟ್ ಹಾಗೂ ಆರೋಗ್ಯ ಸುರಕ್ಷಾ ಕಿಟ್, ಸಾಪ್ಟವೇರ್ ಅಳವಡಿಕೆ ಹಾಗೂ ಕಂಪ್ಯೂಟರ್ ಮತ್ತು ಟಿವಿಗಳ ಖರೀದಿಗಳಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆಸಲಾಗಿದೆ ಎಂದು ಆರೋಪಿಸಿದರು.
ಕೊರೊನಾ ಕಾಲದಲ್ಲಿ ಸಂಕಷ್ಟದಲ್ಲಿರುವ ಜನರಿಗೆ ಅನ್ನ, ಆಹಾರ, ಆರೋಗ್ಯ, ಶಿಕ್ಷಣ ಮತ್ತು ಬದುಕಿನ ಭದ್ರತೆ ಒದಗಿಸುವುದು ಕೇಂದ್ರ ಮತ್ತು ರಾಜ್ಯಗಳ ಕೆಲಸವೆಂದು ಸುಪ್ರೀಂ ಕೋರ್ಟ್ ಹೇಳಿದೆ. ಅದಕ್ಕಾಗಿ ಕೆಲವು ರಾಜ್ಯ ಸರ್ಕಾರಗಳು ಸಾವಿರಾರು ಕೋಟಿ ರೂ.ಗಳ ಬಜೆಟ್ ಅನುದಾನವನ್ನು ಖರ್ಚು ಮಾಡುತ್ತಿವೆ. ಆದರೆ ನಮ್ಮ ರಾಜ್ಯ ಸರ್ಕಾರ ಮಾತ್ರ ಈ ಎಲ್ಲ ಕೆಲಸಗಳಿಗೆ ತನ್ನ ಹಣವನ್ನು ಖರ್ಚು ಮಾಡುವ ಬದಲು ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಗಾಳಿಗೆ ತೂರಿ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ಮೂಲಕ ಜಾರಿ ಮಾಡಿಸುತ್ತಾ ಸಾವಿರಾರು ಕೋಟಿ ಹಣವನ್ನು ಖರ್ಚು ಮಾಡಿಸುತ್ತಿದೆ. ಇಂತಹ ಕಾರ್ಮಿಕ ವಿರೋಧಿ ಕ್ರಮವನ್ನು ಕೂಡಲೇ ನಿಲ್ಲಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್(ಸಿಐಟಿಯು) ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಮಹಾಂತೇಶ, ಸಂಘಟನೆಯ ಪರವಾಗಿ ಲಿಂಗರಾಜು, ಕೆ.ಎಸ್.ಲಕ್ಷ್ಮಿ, ಐಎನ್ಟಿಯುಸಿ ಪರವಾಗಿ ಶಾಮಣ್ಣರೆಡ್ಡಿ, ಎನ್ಸಿಎಲ್ ಪರವಾಗಿ ಧನಶೇಖರ್, ಎಐಟಿಯುಸಿ ಪರವಾಗಿ ಗುರುವಯ್ಯ, ಎಐಸಿಸಿಟಿಯು ಪರವಾಗಿ ಅಪ್ಪಣ್ಣ, ಎಐಯುಟಿಯುಸಿ ಪರವಾಗಿ ಷಣ್ಮುಗಂ ಹಾಗೂ ಕಾರ್ಮಿಕರು ಭಾಗವಹಿಸಿದ್ದರು.ಕೋಲಾರದಲ್ಲಿ ನಡೆದ ಪ್ರತಿಭಟನೆಯ ಭಾಗವಾಗಿ ಅಂಚೆ ಕಚೇರಿಯಿಂದ ಮುಖ್ಯಮಂತ್ರಿಗೆ ಪತ್ರ ಚಳುವಳಿ ಮೂಲಕ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಫೆಡರೇಶನ್ ನ ಮುಖಂಡರಾದ ಎಂ.ಭೀಮರಾಜ್, ವಿಜಯಕೃಷ್ಣ, ಆರೋಗ್ಯನಾಥನ್, ಹೊನ್ನೇನಹಳ್ಳಿ ಅಂಬರೀಶ್, ರಾಮಚಂದ್ರಪ್ಪ, ಗೋಪಾಲಪ್ಪ ವೆಂಕಟೇಶ್, ಆನಂದ್ ಹಾಜರಿದ್ದರು.
ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...
ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...
ವಿಬಿ ಜಿರಾಮ್ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...
ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...
ಏಪ್ರಿಲ್ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...
"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...
ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...
ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ.
ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...
'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...
ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....