Homeಕರ್ನಾಟಕಕಾರ್ಮಿಕರಿಗೆ ಸರ್ಕಾರಿ ಆಸ್ಪತ್ರೆಗಳಲ್ಲೇ ಲಸಿಕೆ ನೀಡಲು ಒತ್ತಾಯಿಸಿ ರಾಜ್ಯವ್ಯಾಪಿ ಪ್ರತಿಭಟನೆ

ಕಾರ್ಮಿಕರಿಗೆ ಸರ್ಕಾರಿ ಆಸ್ಪತ್ರೆಗಳಲ್ಲೇ ಲಸಿಕೆ ನೀಡಲು ಒತ್ತಾಯಿಸಿ ರಾಜ್ಯವ್ಯಾಪಿ ಪ್ರತಿಭಟನೆ

- Advertisement -
ಬೆಂಗಳೂರು: ಕಾರ್ಮಿಕರಿಗೆ ಸರ್ಕಾರಿ ಆಸ್ಪತ್ರೆಗಳ ಮೂಲಕವೇ ಲಸಿಕೆ ನೀಡಬೇಕು ಎಂದು ಆಗ್ರಹಿಸಿ ಸಿಐಟಿಯು ನೇತೃತ್ವದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ಸಂಘಟನೆಯ ಸದಸ್ಯರು ರಾಜ್ಯವ್ಯಾಪಿ ಪ್ರತಿಭಟನೆ ನಡೆಸಿದ್ದಾರೆ.
ರಾಜ್ಯದಲ್ಲಿನ 40 ಲಕ್ಷ ಕಟ್ಟಡ ಮತ್ತು ವಲಸೆ ಕಾರ್ಮಿಕರಿಗೆ ಕೋವಿಡ್ ಲಸಿಕೆಗಳನ್ನು ನೀಡಲು ಸರ್ಕಾರ ನಿರ್ಧರಿಸಿರುವುದು ಸ್ವಾಗತಾರ್ಹ. ಉಚಿತವಾಗಿ ಕೋವಿಡ್ ಲಸಿಕೆಯನ್ನು ಕಾರ್ಮಿಕರು ಮತ್ತು ಅವರ ಕುಟುಂಬದ ಸದಸ್ಯರಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೇ ನೀಡಬೇಕು. ಯಾವುದೇ ಕಾರಣಕ್ಕೂ ಖಾಸಗಿ ಆಸ್ಪತ್ರೆಗಳ ಮೂಲಕ ನೀಡಬಾರದು ಎಂದು ಒತ್ತಾಯಿಸಿದರು.
ಕಾರ್ಮಿಕ ಆಯುಕ್ತರು ಖಾಸಗಿ ಆಸ್ಪತ್ರೆಗಳ ಮಾಲೀಕರೊಂದಿಗೆ ಸಭೆ ನಡೆಸಿ ಪ್ರತಿ ಲಸಿಕೆಗೆ 780 ರೂಪಾಯಿ ದರದಲ್ಲಿ ರಾಜ್ಯದ 30 ಲಕ್ಷ ನೋಂದಾಯಿತ ಕಾರ್ಮಿಕರಿಗೆ ಹಾಗೂ 10 ಲಕ್ಷ ವಲಸೆ ಕಾರ್ಮಿಕರಿಗೆ ಲಸಿಕೆ ನೀಡುವ ತೀರ್ಮಾನ ಕೈಗೊಂಡಿರುವುದಾಗಿ ತಿಳಿದು ಬಂದಿದೆ. ಇದರಿಂದ ಕಲ್ಯಾಣ ಮಂಡಳಿಯ ಸುಮಾರು 624 ಕೋಟಿ ಹಣವು ನಿರಾಯಸವಾಗಿ 400 ಖಾಸಗಿ ಆಸ್ಪತ್ರೆಗಳ ಪಾಲಾಗಲಿದೆ. ಮಂಡಳಿಯ ನಿಧಿಯನ್ನು ಖಾಲಿ ಮಾಡುವ ಹುನ್ನಾರವಾಗಿದೆ. ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಾಗಿರುವ ನಿಧಿಯನ್ನು ಈ ರೀತಿ ದುರ್ಬಳಕೆ ಮಾಡುವ ಪ್ರಯತ್ನವು ಸರ್ವೋಚ್ಚ ನ್ಯಾಯಾಲಯದ ಆದೇಶ ಮತ್ತು 2020 ಮಾರ್ಚಿನ ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ನಿರ್ದೇಶನದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ತಿಳಿಸಿದರು.
ಕೋವಿಡ್‌ ಹೆಸರಲ್ಲಿ ಸುಲಿಗೆ ಮಾಡುವವರಿಗೆ ಬಡವರ ಕಲ್ಯಾಣಕ್ಕಾಗಿ ಸಂಗ್ರಹಹಿಸಲಾದ ಕಾರ್ಮಿಕ ಮಂಡಳಿಯಲ್ಲಿ ಇರುವ ಸೆಸ್ ಹಣವನ್ನು ಸರ್ಕಾರ ಧಾರೆ ಎರೆಯಲು ಹೊರಟಿದೆ. ಈಗಾಗಲೇ ರೇಷನ್ ಕಿಟ್, ಟೂಲ್ ಕಿಟ್, ಸುರಕ್ಷಾ ಕಿಟ್ ಹಾಗೂ ಆರೋಗ್ಯ ಸುರಕ್ಷಾ ಕಿಟ್, ಸಾಪ್ಟವೇರ್ ಅಳವಡಿಕೆ  ಹಾಗೂ ಕಂಪ್ಯೂಟರ್ ಮತ್ತು ಟಿವಿಗಳ ಖರೀದಿಗಳಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆಸಲಾಗಿದೆ ಎಂದು ಆರೋಪಿಸಿದರು.
ಕೊರೊನಾ ಕಾಲದಲ್ಲಿ ಸಂಕಷ್ಟದಲ್ಲಿರುವ ಜನರಿಗೆ ಅನ್ನ, ಆಹಾರ, ಆರೋಗ್ಯ, ಶಿಕ್ಷಣ ಮತ್ತು ಬದುಕಿನ ಭದ್ರತೆ ಒದಗಿಸುವುದು ಕೇಂದ್ರ ಮತ್ತು ರಾಜ್ಯಗಳ ಕೆಲಸವೆಂದು ಸುಪ್ರೀಂ ಕೋರ್ಟ್ ಹೇಳಿದೆ. ಅದಕ್ಕಾಗಿ ಕೆಲವು ರಾಜ್ಯ ಸರ್ಕಾರಗಳು ಸಾವಿರಾರು ಕೋಟಿ ರೂ.ಗಳ ಬಜೆಟ್ ಅನುದಾನವನ್ನು ಖರ್ಚು ಮಾಡುತ್ತಿವೆ. ಆದರೆ ನಮ್ಮ ರಾಜ್ಯ ಸರ್ಕಾರ ಮಾತ್ರ ಈ ಎಲ್ಲ ಕೆಲಸಗಳಿಗೆ ತನ್ನ ಹಣವನ್ನು ಖರ್ಚು ಮಾಡುವ ಬದಲು ಸರ್ವೋಚ್ಚ  ನ್ಯಾಯಾಲಯದ ಆದೇಶವನ್ನು ಗಾಳಿಗೆ ತೂರಿ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ಮೂಲಕ ಜಾರಿ ಮಾಡಿಸುತ್ತಾ ಸಾವಿರಾರು ಕೋಟಿ ಹಣವನ್ನು ಖರ್ಚು ಮಾಡಿಸುತ್ತಿದೆ. ಇಂತಹ ಕಾರ್ಮಿಕ ವಿರೋಧಿ ಕ್ರಮವನ್ನು ಕೂಡಲೇ ನಿಲ್ಲಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್‌(ಸಿಐಟಿಯು) ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಮಹಾಂತೇಶ, ಸಂಘಟನೆಯ ಪರವಾಗಿ ಲಿಂಗರಾಜು, ಕೆ.ಎಸ್.ಲಕ್ಷ್ಮಿ, ಐಎನ್‌ಟಿಯುಸಿ ಪರವಾಗಿ ಶಾಮಣ್ಣರೆಡ್ಡಿ, ಎನ್‌ಸಿಎಲ್‌ ಪರವಾಗಿ ಧನಶೇಖರ್, ಎಐಟಿಯುಸಿ ಪರವಾಗಿ ಗುರುವಯ್ಯ, ಎಐಸಿಸಿಟಿಯು ಪರವಾಗಿ ಅಪ್ಪಣ್ಣ, ಎಐಯುಟಿಯುಸಿ ಪರವಾಗಿ ಷಣ್ಮುಗಂ ಹಾಗೂ ಕಾರ್ಮಿಕರು ಭಾಗವಹಿಸಿದ್ದರು.ಕೋಲಾರದಲ್ಲಿ ನಡೆದ ಪ್ರತಿಭಟನೆಯ ಭಾಗವಾಗಿ ಅಂಚೆ ಕಚೇರಿಯಿಂದ ಮುಖ್ಯಮಂತ್ರಿಗೆ ಪತ್ರ ಚಳುವಳಿ ಮೂಲಕ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಫೆಡರೇಶನ್ ನ ಮುಖಂಡರಾದ ಎಂ.ಭೀಮರಾಜ್, ವಿಜಯಕೃಷ್ಣ, ಆರೋಗ್ಯನಾಥನ್,  ಹೊನ್ನೇನಹಳ್ಳಿ ಅಂಬರೀಶ್, ರಾಮಚಂದ್ರಪ್ಪ, ಗೋಪಾಲಪ್ಪ ವೆಂಕಟೇಶ್, ಆನಂದ್ ಹಾಜರಿದ್ದರು.
ಇದನ್ನೂ ಓದಿ: ಎಲ್‌ಪಿಜಿ, ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ – ಯುವ ಕಾಂಗ್ರೆಸ್ ಪ್ರತಿಭಟನೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...