ಬೆಂಗಳೂರು: ಕಾರ್ಮಿಕರಿಗೆ ಸರ್ಕಾರಿ ಆಸ್ಪತ್ರೆಗಳ ಮೂಲಕವೇ ಲಸಿಕೆ ನೀಡಬೇಕು ಎಂದು ಆಗ್ರಹಿಸಿ ಸಿಐಟಿಯು ನೇತೃತ್ವದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ಸಂಘಟನೆಯ ಸದಸ್ಯರು ರಾಜ್ಯವ್ಯಾಪಿ ಪ್ರತಿಭಟನೆ ನಡೆಸಿದ್ದಾರೆ.
ರಾಜ್ಯದಲ್ಲಿನ 40 ಲಕ್ಷ ಕಟ್ಟಡ ಮತ್ತು ವಲಸೆ ಕಾರ್ಮಿಕರಿಗೆ ಕೋವಿಡ್ ಲಸಿಕೆಗಳನ್ನು ನೀಡಲು ಸರ್ಕಾರ ನಿರ್ಧರಿಸಿರುವುದು ಸ್ವಾಗತಾರ್ಹ. ಉಚಿತವಾಗಿ ಕೋವಿಡ್ ಲಸಿಕೆಯನ್ನು ಕಾರ್ಮಿಕರು ಮತ್ತು ಅವರ ಕುಟುಂಬದ ಸದಸ್ಯರಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೇ ನೀಡಬೇಕು. ಯಾವುದೇ ಕಾರಣಕ್ಕೂ ಖಾಸಗಿ ಆಸ್ಪತ್ರೆಗಳ ಮೂಲಕ ನೀಡಬಾರದು ಎಂದು ಒತ್ತಾಯಿಸಿದರು.
ಕಾರ್ಮಿಕ ಆಯುಕ್ತರು ಖಾಸಗಿ ಆಸ್ಪತ್ರೆಗಳ ಮಾಲೀಕರೊಂದಿಗೆ ಸಭೆ ನಡೆಸಿ ಪ್ರತಿ ಲಸಿಕೆಗೆ 780 ರೂಪಾಯಿ ದರದಲ್ಲಿ ರಾಜ್ಯದ 30 ಲಕ್ಷ ನೋಂದಾಯಿತ ಕಾರ್ಮಿಕರಿಗೆ ಹಾಗೂ 10 ಲಕ್ಷ ವಲಸೆ ಕಾರ್ಮಿಕರಿಗೆ ಲಸಿಕೆ ನೀಡುವ ತೀರ್ಮಾನ ಕೈಗೊಂಡಿರುವುದಾಗಿ ತಿಳಿದು ಬಂದಿದೆ. ಇದರಿಂದ ಕಲ್ಯಾಣ ಮಂಡಳಿಯ ಸುಮಾರು 624 ಕೋಟಿ ಹಣವು ನಿರಾಯಸವಾಗಿ 400 ಖಾಸಗಿ ಆಸ್ಪತ್ರೆಗಳ ಪಾಲಾಗಲಿದೆ. ಮಂಡಳಿಯ ನಿಧಿಯನ್ನು ಖಾಲಿ ಮಾಡುವ ಹುನ್ನಾರವಾಗಿದೆ. ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಾಗಿರುವ ನಿಧಿಯನ್ನು ಈ ರೀತಿ ದುರ್ಬಳಕೆ ಮಾಡುವ ಪ್ರಯತ್ನವು ಸರ್ವೋಚ್ಚ ನ್ಯಾಯಾಲಯದ ಆದೇಶ ಮತ್ತು 2020 ಮಾರ್ಚಿನ ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ನಿರ್ದೇಶನದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ತಿಳಿಸಿದರು.
ಕೋವಿಡ್ ಹೆಸರಲ್ಲಿ ಸುಲಿಗೆ ಮಾಡುವವರಿಗೆ ಬಡವರ ಕಲ್ಯಾಣಕ್ಕಾಗಿ ಸಂಗ್ರಹಹಿಸಲಾದ ಕಾರ್ಮಿಕ ಮಂಡಳಿಯಲ್ಲಿ ಇರುವ ಸೆಸ್ ಹಣವನ್ನು ಸರ್ಕಾರ ಧಾರೆ ಎರೆಯಲು ಹೊರಟಿದೆ. ಈಗಾಗಲೇ ರೇಷನ್ ಕಿಟ್, ಟೂಲ್ ಕಿಟ್, ಸುರಕ್ಷಾ ಕಿಟ್ ಹಾಗೂ ಆರೋಗ್ಯ ಸುರಕ್ಷಾ ಕಿಟ್, ಸಾಪ್ಟವೇರ್ ಅಳವಡಿಕೆ ಹಾಗೂ ಕಂಪ್ಯೂಟರ್ ಮತ್ತು ಟಿವಿಗಳ ಖರೀದಿಗಳಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆಸಲಾಗಿದೆ ಎಂದು ಆರೋಪಿಸಿದರು.
ಕೊರೊನಾ ಕಾಲದಲ್ಲಿ ಸಂಕಷ್ಟದಲ್ಲಿರುವ ಜನರಿಗೆ ಅನ್ನ, ಆಹಾರ, ಆರೋಗ್ಯ, ಶಿಕ್ಷಣ ಮತ್ತು ಬದುಕಿನ ಭದ್ರತೆ ಒದಗಿಸುವುದು ಕೇಂದ್ರ ಮತ್ತು ರಾಜ್ಯಗಳ ಕೆಲಸವೆಂದು ಸುಪ್ರೀಂ ಕೋರ್ಟ್ ಹೇಳಿದೆ. ಅದಕ್ಕಾಗಿ ಕೆಲವು ರಾಜ್ಯ ಸರ್ಕಾರಗಳು ಸಾವಿರಾರು ಕೋಟಿ ರೂ.ಗಳ ಬಜೆಟ್ ಅನುದಾನವನ್ನು ಖರ್ಚು ಮಾಡುತ್ತಿವೆ. ಆದರೆ ನಮ್ಮ ರಾಜ್ಯ ಸರ್ಕಾರ ಮಾತ್ರ ಈ ಎಲ್ಲ ಕೆಲಸಗಳಿಗೆ ತನ್ನ ಹಣವನ್ನು ಖರ್ಚು ಮಾಡುವ ಬದಲು ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಗಾಳಿಗೆ ತೂರಿ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ಮೂಲಕ ಜಾರಿ ಮಾಡಿಸುತ್ತಾ ಸಾವಿರಾರು ಕೋಟಿ ಹಣವನ್ನು ಖರ್ಚು ಮಾಡಿಸುತ್ತಿದೆ. ಇಂತಹ ಕಾರ್ಮಿಕ ವಿರೋಧಿ ಕ್ರಮವನ್ನು ಕೂಡಲೇ ನಿಲ್ಲಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್(ಸಿಐಟಿಯು) ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಮಹಾಂತೇಶ, ಸಂಘಟನೆಯ ಪರವಾಗಿ ಲಿಂಗರಾಜು, ಕೆ.ಎಸ್.ಲಕ್ಷ್ಮಿ, ಐಎನ್ಟಿಯುಸಿ ಪರವಾಗಿ ಶಾಮಣ್ಣರೆಡ್ಡಿ, ಎನ್ಸಿಎಲ್ ಪರವಾಗಿ ಧನಶೇಖರ್, ಎಐಟಿಯುಸಿ ಪರವಾಗಿ ಗುರುವಯ್ಯ, ಎಐಸಿಸಿಟಿಯು ಪರವಾಗಿ ಅಪ್ಪಣ್ಣ, ಎಐಯುಟಿಯುಸಿ ಪರವಾಗಿ ಷಣ್ಮುಗಂ ಹಾಗೂ ಕಾರ್ಮಿಕರು ಭಾಗವಹಿಸಿದ್ದರು.ಕೋಲಾರದಲ್ಲಿ ನಡೆದ ಪ್ರತಿಭಟನೆಯ ಭಾಗವಾಗಿ ಅಂಚೆ ಕಚೇರಿಯಿಂದ ಮುಖ್ಯಮಂತ್ರಿಗೆ ಪತ್ರ ಚಳುವಳಿ ಮೂಲಕ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಫೆಡರೇಶನ್ ನ ಮುಖಂಡರಾದ ಎಂ.ಭೀಮರಾಜ್, ವಿಜಯಕೃಷ್ಣ, ಆರೋಗ್ಯನಾಥನ್, ಹೊನ್ನೇನಹಳ್ಳಿ ಅಂಬರೀಶ್, ರಾಮಚಂದ್ರಪ್ಪ, ಗೋಪಾಲಪ್ಪ ವೆಂಕಟೇಶ್, ಆನಂದ್ ಹಾಜರಿದ್ದರು.
ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್ಸಿಪಿ (NCP)...
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...
ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್ಐಆರ್ ದಾಖಲಿಸಿದೆ.
ಶಿವಸೇನೆ...
ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...
ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...
ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....
ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...
ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...
ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...
ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...