Homeಮುಖಪುಟಜಾತಿ, ಧರ್ಮದ ಕುರಿತ ಸಂಶೋಧನೆ ಸೂಕ್ಷ್ಮವಾದುದು: ಇಂಗ್ಲೆಂಡ್ ಮಾನವಶಾಸ್ತ್ರಜ್ಞರ ಗಡೀಪಾರು ಸಮರ್ಥಿಸಿಕೊಂಡ ಕೇಂದ್ರ

ಜಾತಿ, ಧರ್ಮದ ಕುರಿತ ಸಂಶೋಧನೆ ಸೂಕ್ಷ್ಮವಾದುದು: ಇಂಗ್ಲೆಂಡ್ ಮಾನವಶಾಸ್ತ್ರಜ್ಞರ ಗಡೀಪಾರು ಸಮರ್ಥಿಸಿಕೊಂಡ ಕೇಂದ್ರ

- Advertisement -
- Advertisement -

ಇಂಗ್ಲೆಂಡ್ ಮೂಲದ ಮಾನವಶಾಸ್ತ್ರಜ್ಞ ಫಿಲಿಪ್ಪೊ ಒಸೆಲ್ಲಾ ಅವರನ್ನು ಕಳೆದ ವರ್ಷ ಗಡೀಪಾರು ಮಾಡಿರುವುದನ್ನು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿದೆ. ‘ಜಾತಿ ಮತ್ತು ಧರ್ಮದಂತಹ ವಿಷಯಗಳ ಕುರಿತಾದ ಸಂಶೋಧನೆಯು ಸೂಕ್ಷ್ಮವಾದುದ್ದಾಗಿದ್ದು ಮತ್ತು ಅಂತಹ ಸಂಶೋಧನೆಗಳನ್ನು ನಡೆಸುವುದು ವೀಸಾ ನಿಯಮಗಳ ಉಲ್ಲಂಘನೆಯಾಗಿದೆ’ ಎಂದು ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ.

ಒಸೆಲ್ಲಾ ಇಂಗ್ಲೆಂಡ್‌ನ ಸಸೆಕ್ಸ್ ವಿಶ್ವವಿದ್ಯಾನಿಲಯದಲ್ಲಿ ಮಾನವಶಾಸ್ತ್ರ ಮತ್ತು ದಕ್ಷಿಣ ಏಷ್ಯಾದ ಅಧ್ಯಯನಗಳ ಪ್ರಾಧ್ಯಾಪಕರಾಗಿದ್ದಾರೆ. ಅವರು ಕಳೆದ 30 ವರ್ಷಗಳಿಂದ ಕೇರಳದ ಬಗ್ಗೆ ಸಾಕಷ್ಟು ಸಂಶೋಧನೆ ನಡೆಸಿ ಹಲವು ಪ್ರಬಂಧಗಳನ್ನು ಬರೆದಿದ್ದಾರೆ. ಕಳೆದ ವರ್ಷ ಮಾರ್ಚ್ 23ರಂದು ಅವರು ತಿರುವನಂತಪುರಂನಲ್ಲಿ ಸಮಾವೇಶವೊಂದರಲ್ಲಿ ಪಾಲ್ಗೊಳ್ಳಲು ವಿಮಾನ ನಿಲ್ದಾಣಕ್ಕೆ ಬಂದಾಗ ಯಾವುದೇ ಸ್ಪಷ್ಟ ಕಾರಣ ನೀಡದೆ ಅವರನ್ನು ವಾಪಸ್ ಕಳಿಸಲಾಗಿತ್ತು. ಈ ಕ್ರಮವನ್ನು ಅವರು ದೆಹಲಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಭಾರತದಲ್ಲಿ ಅಧಿಕಾರಿಗಳು ತನ್ನನ್ನು ಕಠಿಣ ಅಪರಾಧಿ ಎಂದು ಪರಿಗಣಿಸಿದ್ದಾರೆ ಮತ್ತು ಅವರ ಗಡೀಪಾರು ಅಸಂವಿಧಾನಿಕ ಮತ್ತು ಅನಿಯಂತ್ರಿತವಾಗಿದೆ. ನನ್ನ ಪರವಾಗಿ ವಿವರಿಸಲು ಯಾವುದೇ ಅವಕಾಶವನ್ನು ನೀಡಲಿಲ್ಲ ಮತ್ತು ನಾನು ಭಾರತಕ್ಕೆ ಹಿಂದೆ ಬಹಳಷ್ಟು ಸಲ ಭೇಟಿ ನೀಡಿದ್ದು ಯಾವುದೇ ಸಮಸ್ಯೆ ಎದುರಾಗಿರಲಿಲ್ಲ ಎಂದು ಅರ್ಜಿಯಲ್ಲಿ ದೂರಿದ್ದಾರೆ.

ಜಾತಿ, ಧರ್ಮ ಮತ್ತು ಆರ್ಥಿಕತೆಯಂತಹ ವಿಷಯಗಳು ಸೂಕ್ಷ್ಮವಾಗಿದ್ದು ಮತ್ತು ಅವುಗಳ ಮೇಲಿನ ಸಂಶೋಧನೆಯು ವೀಸಾ ನಿಯಮಗಳನ್ನು ಉಲ್ಲಂಘಿಸಿದೆ. ಅರ್ಜಿದಾರರು ಪ್ರವಾಸಿ ವೀಸಾದಲ್ಲಿ ಭೇಟಿ ನೀಡಿದಾಗ ಜಾತಿ, ಧರ್ಮ ಮತ್ತು ಆರ್ಥಿಕತೆಗೆ ಸಂಬಂಧಿಸಿದ ಸೂಕ್ಷ್ಮ ಸಂಶೋಧನಾ ಚಟುವಟಿಕೆಗಳಲ್ಲಿ ಹಾಗಾಗಿ ವೀಸಾ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಸರ್ಕಾರ ಹೈಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ.

“ಕೇರಳದಲ್ಲಿ ತನ್ನ ಸಂಶೋಧನಾ ಕಾರ್ಯವನ್ನು ಕೈಗೊಳ್ಳಲು ಅರ್ಜಿದಾರರಿಗೆ ವಿದೇಶಿ ಧನಸಹಾಯ ಹರಿದುಬರುವುದು ರಾಷ್ಟ್ರೀಯ ಭದ್ರತೆಯ ಕಾಳಜಿಯ ಕ್ಷೇತ್ರವಾಗಿದೆ. ಏಕೆಂದರೆ ಅರ್ಜಿದಾರರು ಭಾರತದಲ್ಲಿ ತಮ್ಮ ಸಂಶೋಧನಾ ಕಾರ್ಯ ಅಧ್ಯಯನಕ್ಕಾಗಿ ಸ್ವೀಕರಿಸಿದ ಈ ನಿಧಿಯ ಬಳಕೆಯು ಲೆಕ್ಕಕ್ಕೆ ಸಿಗುವುದಿಲ್ಲ ಎಂದು ಕೇಂದ್ರ ಸರ್ಕಾರ ವಾದಿಸಿದೆ.

ಅರ್ಜಿಯ ವಿಚಾರಣೆಯನ್ನು 2023ರ ಮೇ 14ಕ್ಕೆ ಮುಂದೂಡಿದೆ.

ಇದನ್ನೂ ಓದಿ: ಟಿಪ್ಪು v/s ಸಾವರ್ಕರ್‌ ಎಂಬುದಕ್ಕೆ ನನ್ನ ಒಪ್ಪಿಗೆ ಇಲ್ಲ: ಯಡಿಯೂರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...