Homeಮುಖಪುಟಬಹುಜನ ಚಳವಳಿಯ ಚಿಂತಕಿ, ಸಮಾಜಶಾಸ್ತ್ರಜ್ಞೆ ಗೇಲ್ ಆಂವೆಡ್ತ್ (81) ನಿಧನ

ಬಹುಜನ ಚಳವಳಿಯ ಚಿಂತಕಿ, ಸಮಾಜಶಾಸ್ತ್ರಜ್ಞೆ ಗೇಲ್ ಆಂವೆಡ್ತ್ (81) ನಿಧನ

- Advertisement -
- Advertisement -

ಸಮಾಜಶಾಸ್ತ್ರಜ್ಞೆ, ಸ್ತ್ರೀವಾದಿ ಚಿಂತಕಿ, ಮಾನವ ಹಕ್ಕುಗಳ ಹೋರಾಟಗಾರ್ತಿ, ಜಾತಿ ವಿನಾಶ ಚಳುವಳಿಯ ಬಹು ಮುಖ್ಯ ಧ್ವನಿ, ಬಹುಜನ ಚಳವಳಿಯ ಮೇರು ಚಿಂತಕರಲ್ಲಿ ಒಬ್ಬರಾಗಿದ್ದ 81 ವರ್ಷದ ಗೇಲ್ ಆಂವೆಡ್ತ್ ಇಂದು (ಆಗಸ್ಟ್ 25) ನಿಧನರಾಗಿದ್ದಾರೆ.

ಗೇಲ್ ಆಂವೆಡ್ತ್ ಅಮೆರಿಕ ಮೂಲದ ಭಾರತೀಯ ವಿದ್ವಾಂಸರಾಗಿದ್ದು, ದಲಿತ ರಾಜಕೀಯ, ಮಹಿಳಾ ಹೋರಾಟ ಮತ್ತು ಜಾತಿ ವಿರೋಧಿ ಚಳವಳಿಯ ಕುರಿತು ಹಲವು ಪುಸ್ತಕಗಳನ್ನು ಬರೆದಿದ್ದಾರೆ. ಕೊಯ್ನಾ ಅಣೆಕಟ್ಟಿನಿಂದ ಸ್ಥಳಾಂತರಗೊಂಡ ಜನರ ಹಕ್ಕುಗಳನ್ನು ಉಳಿಸುವ ಹೋರಾಟ ಸೇರಿದಂತೆ ದೇಶದ ವಿವಿಧ ಚಳುವಳಿಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಅಮೆರಿಕಾದಲ್ಲಿ ಜನಿಸಿದ ಗೇಲ್ ತಮ್ಮ ಪಿಎಚ್‌ಡಿ ಅಧ್ಯಯನಕ್ಕೆಂದು ಭಾರತಕ್ಕೆ ಬಂದವರು. ‘ಅಂಬೇಡ್ಕರ್ ಚಿಂತನೆ ಮತ್ತು ಹೋರಾಟ’ದ ಬಗ್ಗೆ ಅಧ್ಯಯನ ಮಾಡಿ ಡಾಕ್ಟರೇಟ್ ಪಡೆದು ಭಾರತದಲ್ಲಿಯೇ ನೆಲೆಸಿದರು. ತಮ್ಮ ಸಂಗಾತಿ, ಹೋರಾಟಗಾರ ಭರತ್ ಪಟ್ನಾಕರ್ ಜೊತೆಗೂಡಿ ತಮ್ಮ ಇಡೀ ಬದುಕನ್ನು ದಮನಿತ ಸಮುದಾಯಗಳ ಪರ ಹೋರಾಟಗಳಿಗೆ, ದಮನಿತ ಸಮುದಾಯಗಳ ಅಧ್ಯಯನಕ್ಕೆ ಮುಡುಪಾಗಿಟ್ಟವರು.

ಇದನ್ನೂ ಓದಿ: ಹೋರಾಟಗಾರ, ಬಂಡಾಯ ಲೇಖಕ ಡಾ.ಎಂ.ಚಿತ್ರಲಿಂಗಸ್ವಾಮಿ(54) ನಿಧನ

ಸಂಶೋಧಕಿ, ಲೇಖಕಿ ಮತ್ತು ಬಹುಜನ ಚಳುವಳಿಯ ಬೌದ್ಧಿಕ ಧ್ವನಿಗಳಲ್ಲಿ ಒಂದಾದ ಗೇಲ್ ಆಂವೆಡ್ತ್, ತಮ್ಮ ಪ್ರಖರ ಬೌದ್ಧಿಕತೆಯ ಮೂಲಕ ಅಂಬೇಡ್ಕರ್ ಚಿಂತನೆ ಮತ್ತು ದಲಿತ ಅಧ್ಯಯನವನ್ನು ವಿಶ್ವಮಟ್ಟಕ್ಕೆ ಬೆಳೆಸಿದವರು.

ಭಾರತದಲ್ಲಿ ವಾಸಿಸಲು ನಿರ್ಧರಿಸಿದ ನಂತರ, ಹಿರಿಯ ಸಾಮಾಜಿಕ ಹೋರಾಟಗಾರ್ತಿ ಇಂದುತಾಯಿ ಪಟ್ನಾಕರ್ (Indumati Babuji Patankar) ಅವರೊಂದಿಗಿನ ಒಡನಾಟವು ದೇಶದಲ್ಲಿ ಮಹಿಳಾ ಹೋರಾಟಗಳ ಕುರಿತು ಅಧ್ಯಯನ ಮಾಡಲು ಮತ್ತು ಹೋರಾಟಗಳಲ್ಲಿ ಭಾಗವಹಿಸಲು ಪ್ರೇರೆಪಣೆ ನೀಡಿತು.

ತಮ್ಮ ಪತಿ, ಹೋರಾಟಗಾರ ಭರತ್ ಪಟ್ನಾಕರ್ ಜೊತೆಗೂಡಿ ಶ್ರಮಿಕ್ ಮುಕ್ತಿ ದಳವನ್ನು ಸ್ಥಾಪಿಸಿದವರು. ಪುಣೆ ವಿಶ್ವವಿದ್ಯಾಲಯದಲ್ಲಿ ಸಮಾಜಶಾಸ್ತ್ರ ವಿಭಾಗದ ಫುಲೆ-ಅಂಬೇಡ್ಕರ್ ಪೀಠದ ಮುಖ್ಯಸ್ಥರಾಗಿದ್ದರು. ಕೋಪನ್‌ಹೆಗನ್‌ನ Institute of Asian studies ನಲ್ಲಿ ಪ್ರಾಧ್ಯಾಪರಾಗಿದ್ದರು. ನೆಹರೂ ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಹೊಸದಿಲ್ಲಿಯ ಗ್ರಂಥಾಲಯಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ.

ಇವರು 25 ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಅದರಲ್ಲಿ ಇನ್ ಕಲೋನಿಯಲ್ ಸೊಸೈಟಿ-ನಾನ್ ಬ್ರಾಹ್ಮಿಣ್ ಮೂಮೆಂಟ್ ಇನ್ ವೆಸ್ಟ್ರನ್ ಇಂಡಿಯಾ, ಸೀಕಿಂಗ್ ಆಪ್ ಬೇಗಂಪುರ, ಬುದ್ದಿಸಮ್ ಇನ್ ಇಂಡಿಯಾ, ಡಾ ಬಾಬಾಸಾಹೇಬ್ ಅಂಬೇಡ್ಕರ್, ಮಹಾತ್ಮ ಫುಲೆ, ದಲಿತ್ ಅಂಡ್‌ ಡೆಮಾಕ್ರಿಟಿಕ್ ರೆವಲ್ಯೂಷನ್, ಅಂಡರ್‌ಸ್ಟಾಂಡಿಂಗ್ ಕ್ಯಾಸ್ಟ್ ಮತ್ತು ನ್ಯೂ ಸೋಷಿಯಲ್ ಮೂಮೆಂಟ್ ಇನ್ ಇಂಡಿಯಾ ಪ್ರಮುಖವಾದವುಗಳು.

ಆಗಸ್ಟ್ 26 ರಂದು ಸಾಂಗ್ಲಿ ಜಿಲ್ಲೆಯ ಕಾಸೆಗಾಂವ್‌ನಲ್ಲಿ ಗೇಲ್ ಆಂವೆಡ್ತ್ ಅವರ ಅಂತಿಮ ಸಂಸ್ಕಾರ ನಡೆಯಲಿದೆ.


ಇದನ್ನೂ ಓದಿ: ಮಹಾ ಸಿಎಂಗೆ ಕಪಾಳಮೋಕ್ಷ ಹೇಳಿಕೆ: ಒಕ್ಕೂಟ ಸರ್ಕಾರದ ಸಚಿವ ಅರೆಸ್ಟ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೈಲ ಆಮದು ವಿಚಾರದಲ್ಲಿ ಅಮೆರಿಕದ ಒಪ್ಪಿಗೆ ಪಡೆಯುವುದು ‘ಅತಿರೇಕದ’ ಸಂಗತಿ: ಪಿಣರಾಯಿ ವಿಜಯನ್

ತೈಲ ಆಮದುಗಳಂತಹ ನಿರ್ಧಾರಗಳಿಗೆ ಭಾರತವು ಅಮೆರಿಕದ ಅನುಮೋದನೆಯನ್ನು ಪಡೆಯುವಂತೆ ಬಿಂಬಿತವಾಗುತ್ತಿರುವುದು 'ಅತಿರೇಕದ' ಸಂಗತಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಭಾರತದ ಸಾರ್ವಭೌಮತ್ವವು ವಿದೇಶಿ ಅನುಮತಿಗೆ ಒಳಪಡುವುದಿಲ್ಲ ಎಂದು ವಿಜಯನ್ ಸಾಮಾಜಿಕ...

ಪತ್ರಕರ್ತನ ಹತ್ಯೆ ಪ್ರಕರಣ : ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾರ (ಮಾ.7) ಖುಲಾಸೆಗೊಳಿಸಿರುವುದಾಗಿ livelaw.in ಎಂದು ವರದಿ...

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...

ಟಿವಿ ನ್ಯೂಸ್ ಚಾನೆಲ್‌ಗಳಲ್ಲಿ ಅನಗತ್ಯ ಯುದ್ಧೋನ್ಮಾದ, ಸುಳ್ಳು ವರದಿ : ನಾಲ್ಕು ವಾರ TRP ಸ್ಥಗಿತಕ್ಕೆ ಕೇಂದ್ರ ಆದೇಶ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದ ಕುರಿತು ಟಿವಿ ನ್ಯೂಸ್‌ ಚಾನೆಲ್‌ಗಳು ಅನಗತ್ಯ ಯುದ್ಧೋನ್ಮಾದ ಸೃಷ್ಟಿಸುತ್ತಿರುವ ಹಾಗೂ ಸುಳ್ಳು ವರದಿಗಳನ್ನು ಪ್ರಸಾರ ಮಾಡುತ್ತಿರುವ ಹಿನ್ನೆಲೆ, ಮುಂದಿನ ನಾಲ್ಕು ವಾರಗಳ ಕಾಲ...

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...