Homeಮುಖಪುಟಬಹುಜನ ಚಳವಳಿಯ ಚಿಂತಕಿ, ಸಮಾಜಶಾಸ್ತ್ರಜ್ಞೆ ಗೇಲ್ ಆಂವೆಡ್ತ್ (81) ನಿಧನ

ಬಹುಜನ ಚಳವಳಿಯ ಚಿಂತಕಿ, ಸಮಾಜಶಾಸ್ತ್ರಜ್ಞೆ ಗೇಲ್ ಆಂವೆಡ್ತ್ (81) ನಿಧನ

- Advertisement -
- Advertisement -

ಸಮಾಜಶಾಸ್ತ್ರಜ್ಞೆ, ಸ್ತ್ರೀವಾದಿ ಚಿಂತಕಿ, ಮಾನವ ಹಕ್ಕುಗಳ ಹೋರಾಟಗಾರ್ತಿ, ಜಾತಿ ವಿನಾಶ ಚಳುವಳಿಯ ಬಹು ಮುಖ್ಯ ಧ್ವನಿ, ಬಹುಜನ ಚಳವಳಿಯ ಮೇರು ಚಿಂತಕರಲ್ಲಿ ಒಬ್ಬರಾಗಿದ್ದ 81 ವರ್ಷದ ಗೇಲ್ ಆಂವೆಡ್ತ್ ಇಂದು (ಆಗಸ್ಟ್ 25) ನಿಧನರಾಗಿದ್ದಾರೆ.

ಗೇಲ್ ಆಂವೆಡ್ತ್ ಅಮೆರಿಕ ಮೂಲದ ಭಾರತೀಯ ವಿದ್ವಾಂಸರಾಗಿದ್ದು, ದಲಿತ ರಾಜಕೀಯ, ಮಹಿಳಾ ಹೋರಾಟ ಮತ್ತು ಜಾತಿ ವಿರೋಧಿ ಚಳವಳಿಯ ಕುರಿತು ಹಲವು ಪುಸ್ತಕಗಳನ್ನು ಬರೆದಿದ್ದಾರೆ. ಕೊಯ್ನಾ ಅಣೆಕಟ್ಟಿನಿಂದ ಸ್ಥಳಾಂತರಗೊಂಡ ಜನರ ಹಕ್ಕುಗಳನ್ನು ಉಳಿಸುವ ಹೋರಾಟ ಸೇರಿದಂತೆ ದೇಶದ ವಿವಿಧ ಚಳುವಳಿಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಅಮೆರಿಕಾದಲ್ಲಿ ಜನಿಸಿದ ಗೇಲ್ ತಮ್ಮ ಪಿಎಚ್‌ಡಿ ಅಧ್ಯಯನಕ್ಕೆಂದು ಭಾರತಕ್ಕೆ ಬಂದವರು. ‘ಅಂಬೇಡ್ಕರ್ ಚಿಂತನೆ ಮತ್ತು ಹೋರಾಟ’ದ ಬಗ್ಗೆ ಅಧ್ಯಯನ ಮಾಡಿ ಡಾಕ್ಟರೇಟ್ ಪಡೆದು ಭಾರತದಲ್ಲಿಯೇ ನೆಲೆಸಿದರು. ತಮ್ಮ ಸಂಗಾತಿ, ಹೋರಾಟಗಾರ ಭರತ್ ಪಟ್ನಾಕರ್ ಜೊತೆಗೂಡಿ ತಮ್ಮ ಇಡೀ ಬದುಕನ್ನು ದಮನಿತ ಸಮುದಾಯಗಳ ಪರ ಹೋರಾಟಗಳಿಗೆ, ದಮನಿತ ಸಮುದಾಯಗಳ ಅಧ್ಯಯನಕ್ಕೆ ಮುಡುಪಾಗಿಟ್ಟವರು.

ಇದನ್ನೂ ಓದಿ: ಹೋರಾಟಗಾರ, ಬಂಡಾಯ ಲೇಖಕ ಡಾ.ಎಂ.ಚಿತ್ರಲಿಂಗಸ್ವಾಮಿ(54) ನಿಧನ

ಸಂಶೋಧಕಿ, ಲೇಖಕಿ ಮತ್ತು ಬಹುಜನ ಚಳುವಳಿಯ ಬೌದ್ಧಿಕ ಧ್ವನಿಗಳಲ್ಲಿ ಒಂದಾದ ಗೇಲ್ ಆಂವೆಡ್ತ್, ತಮ್ಮ ಪ್ರಖರ ಬೌದ್ಧಿಕತೆಯ ಮೂಲಕ ಅಂಬೇಡ್ಕರ್ ಚಿಂತನೆ ಮತ್ತು ದಲಿತ ಅಧ್ಯಯನವನ್ನು ವಿಶ್ವಮಟ್ಟಕ್ಕೆ ಬೆಳೆಸಿದವರು.

ಭಾರತದಲ್ಲಿ ವಾಸಿಸಲು ನಿರ್ಧರಿಸಿದ ನಂತರ, ಹಿರಿಯ ಸಾಮಾಜಿಕ ಹೋರಾಟಗಾರ್ತಿ ಇಂದುತಾಯಿ ಪಟ್ನಾಕರ್ (Indumati Babuji Patankar) ಅವರೊಂದಿಗಿನ ಒಡನಾಟವು ದೇಶದಲ್ಲಿ ಮಹಿಳಾ ಹೋರಾಟಗಳ ಕುರಿತು ಅಧ್ಯಯನ ಮಾಡಲು ಮತ್ತು ಹೋರಾಟಗಳಲ್ಲಿ ಭಾಗವಹಿಸಲು ಪ್ರೇರೆಪಣೆ ನೀಡಿತು.

ತಮ್ಮ ಪತಿ, ಹೋರಾಟಗಾರ ಭರತ್ ಪಟ್ನಾಕರ್ ಜೊತೆಗೂಡಿ ಶ್ರಮಿಕ್ ಮುಕ್ತಿ ದಳವನ್ನು ಸ್ಥಾಪಿಸಿದವರು. ಪುಣೆ ವಿಶ್ವವಿದ್ಯಾಲಯದಲ್ಲಿ ಸಮಾಜಶಾಸ್ತ್ರ ವಿಭಾಗದ ಫುಲೆ-ಅಂಬೇಡ್ಕರ್ ಪೀಠದ ಮುಖ್ಯಸ್ಥರಾಗಿದ್ದರು. ಕೋಪನ್‌ಹೆಗನ್‌ನ Institute of Asian studies ನಲ್ಲಿ ಪ್ರಾಧ್ಯಾಪರಾಗಿದ್ದರು. ನೆಹರೂ ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಹೊಸದಿಲ್ಲಿಯ ಗ್ರಂಥಾಲಯಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ.

ಇವರು 25 ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಅದರಲ್ಲಿ ಇನ್ ಕಲೋನಿಯಲ್ ಸೊಸೈಟಿ-ನಾನ್ ಬ್ರಾಹ್ಮಿಣ್ ಮೂಮೆಂಟ್ ಇನ್ ವೆಸ್ಟ್ರನ್ ಇಂಡಿಯಾ, ಸೀಕಿಂಗ್ ಆಪ್ ಬೇಗಂಪುರ, ಬುದ್ದಿಸಮ್ ಇನ್ ಇಂಡಿಯಾ, ಡಾ ಬಾಬಾಸಾಹೇಬ್ ಅಂಬೇಡ್ಕರ್, ಮಹಾತ್ಮ ಫುಲೆ, ದಲಿತ್ ಅಂಡ್‌ ಡೆಮಾಕ್ರಿಟಿಕ್ ರೆವಲ್ಯೂಷನ್, ಅಂಡರ್‌ಸ್ಟಾಂಡಿಂಗ್ ಕ್ಯಾಸ್ಟ್ ಮತ್ತು ನ್ಯೂ ಸೋಷಿಯಲ್ ಮೂಮೆಂಟ್ ಇನ್ ಇಂಡಿಯಾ ಪ್ರಮುಖವಾದವುಗಳು.

ಆಗಸ್ಟ್ 26 ರಂದು ಸಾಂಗ್ಲಿ ಜಿಲ್ಲೆಯ ಕಾಸೆಗಾಂವ್‌ನಲ್ಲಿ ಗೇಲ್ ಆಂವೆಡ್ತ್ ಅವರ ಅಂತಿಮ ಸಂಸ್ಕಾರ ನಡೆಯಲಿದೆ.


ಇದನ್ನೂ ಓದಿ: ಮಹಾ ಸಿಎಂಗೆ ಕಪಾಳಮೋಕ್ಷ ಹೇಳಿಕೆ: ಒಕ್ಕೂಟ ಸರ್ಕಾರದ ಸಚಿವ ಅರೆಸ್ಟ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...