Homeಮುಖಪುಟಬಹುಜನ ಚಳವಳಿಯ ಚಿಂತಕಿ, ಸಮಾಜಶಾಸ್ತ್ರಜ್ಞೆ ಗೇಲ್ ಆಂವೆಡ್ತ್ (81) ನಿಧನ

ಬಹುಜನ ಚಳವಳಿಯ ಚಿಂತಕಿ, ಸಮಾಜಶಾಸ್ತ್ರಜ್ಞೆ ಗೇಲ್ ಆಂವೆಡ್ತ್ (81) ನಿಧನ

- Advertisement -
- Advertisement -

ಸಮಾಜಶಾಸ್ತ್ರಜ್ಞೆ, ಸ್ತ್ರೀವಾದಿ ಚಿಂತಕಿ, ಮಾನವ ಹಕ್ಕುಗಳ ಹೋರಾಟಗಾರ್ತಿ, ಜಾತಿ ವಿನಾಶ ಚಳುವಳಿಯ ಬಹು ಮುಖ್ಯ ಧ್ವನಿ, ಬಹುಜನ ಚಳವಳಿಯ ಮೇರು ಚಿಂತಕರಲ್ಲಿ ಒಬ್ಬರಾಗಿದ್ದ 81 ವರ್ಷದ ಗೇಲ್ ಆಂವೆಡ್ತ್ ಇಂದು (ಆಗಸ್ಟ್ 25) ನಿಧನರಾಗಿದ್ದಾರೆ.

ಗೇಲ್ ಆಂವೆಡ್ತ್ ಅಮೆರಿಕ ಮೂಲದ ಭಾರತೀಯ ವಿದ್ವಾಂಸರಾಗಿದ್ದು, ದಲಿತ ರಾಜಕೀಯ, ಮಹಿಳಾ ಹೋರಾಟ ಮತ್ತು ಜಾತಿ ವಿರೋಧಿ ಚಳವಳಿಯ ಕುರಿತು ಹಲವು ಪುಸ್ತಕಗಳನ್ನು ಬರೆದಿದ್ದಾರೆ. ಕೊಯ್ನಾ ಅಣೆಕಟ್ಟಿನಿಂದ ಸ್ಥಳಾಂತರಗೊಂಡ ಜನರ ಹಕ್ಕುಗಳನ್ನು ಉಳಿಸುವ ಹೋರಾಟ ಸೇರಿದಂತೆ ದೇಶದ ವಿವಿಧ ಚಳುವಳಿಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಅಮೆರಿಕಾದಲ್ಲಿ ಜನಿಸಿದ ಗೇಲ್ ತಮ್ಮ ಪಿಎಚ್‌ಡಿ ಅಧ್ಯಯನಕ್ಕೆಂದು ಭಾರತಕ್ಕೆ ಬಂದವರು. ‘ಅಂಬೇಡ್ಕರ್ ಚಿಂತನೆ ಮತ್ತು ಹೋರಾಟ’ದ ಬಗ್ಗೆ ಅಧ್ಯಯನ ಮಾಡಿ ಡಾಕ್ಟರೇಟ್ ಪಡೆದು ಭಾರತದಲ್ಲಿಯೇ ನೆಲೆಸಿದರು. ತಮ್ಮ ಸಂಗಾತಿ, ಹೋರಾಟಗಾರ ಭರತ್ ಪಟ್ನಾಕರ್ ಜೊತೆಗೂಡಿ ತಮ್ಮ ಇಡೀ ಬದುಕನ್ನು ದಮನಿತ ಸಮುದಾಯಗಳ ಪರ ಹೋರಾಟಗಳಿಗೆ, ದಮನಿತ ಸಮುದಾಯಗಳ ಅಧ್ಯಯನಕ್ಕೆ ಮುಡುಪಾಗಿಟ್ಟವರು.

ಇದನ್ನೂ ಓದಿ: ಹೋರಾಟಗಾರ, ಬಂಡಾಯ ಲೇಖಕ ಡಾ.ಎಂ.ಚಿತ್ರಲಿಂಗಸ್ವಾಮಿ(54) ನಿಧನ

ಸಂಶೋಧಕಿ, ಲೇಖಕಿ ಮತ್ತು ಬಹುಜನ ಚಳುವಳಿಯ ಬೌದ್ಧಿಕ ಧ್ವನಿಗಳಲ್ಲಿ ಒಂದಾದ ಗೇಲ್ ಆಂವೆಡ್ತ್, ತಮ್ಮ ಪ್ರಖರ ಬೌದ್ಧಿಕತೆಯ ಮೂಲಕ ಅಂಬೇಡ್ಕರ್ ಚಿಂತನೆ ಮತ್ತು ದಲಿತ ಅಧ್ಯಯನವನ್ನು ವಿಶ್ವಮಟ್ಟಕ್ಕೆ ಬೆಳೆಸಿದವರು.

ಭಾರತದಲ್ಲಿ ವಾಸಿಸಲು ನಿರ್ಧರಿಸಿದ ನಂತರ, ಹಿರಿಯ ಸಾಮಾಜಿಕ ಹೋರಾಟಗಾರ್ತಿ ಇಂದುತಾಯಿ ಪಟ್ನಾಕರ್ (Indumati Babuji Patankar) ಅವರೊಂದಿಗಿನ ಒಡನಾಟವು ದೇಶದಲ್ಲಿ ಮಹಿಳಾ ಹೋರಾಟಗಳ ಕುರಿತು ಅಧ್ಯಯನ ಮಾಡಲು ಮತ್ತು ಹೋರಾಟಗಳಲ್ಲಿ ಭಾಗವಹಿಸಲು ಪ್ರೇರೆಪಣೆ ನೀಡಿತು.

ತಮ್ಮ ಪತಿ, ಹೋರಾಟಗಾರ ಭರತ್ ಪಟ್ನಾಕರ್ ಜೊತೆಗೂಡಿ ಶ್ರಮಿಕ್ ಮುಕ್ತಿ ದಳವನ್ನು ಸ್ಥಾಪಿಸಿದವರು. ಪುಣೆ ವಿಶ್ವವಿದ್ಯಾಲಯದಲ್ಲಿ ಸಮಾಜಶಾಸ್ತ್ರ ವಿಭಾಗದ ಫುಲೆ-ಅಂಬೇಡ್ಕರ್ ಪೀಠದ ಮುಖ್ಯಸ್ಥರಾಗಿದ್ದರು. ಕೋಪನ್‌ಹೆಗನ್‌ನ Institute of Asian studies ನಲ್ಲಿ ಪ್ರಾಧ್ಯಾಪರಾಗಿದ್ದರು. ನೆಹರೂ ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಹೊಸದಿಲ್ಲಿಯ ಗ್ರಂಥಾಲಯಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ.

ಇವರು 25 ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಅದರಲ್ಲಿ ಇನ್ ಕಲೋನಿಯಲ್ ಸೊಸೈಟಿ-ನಾನ್ ಬ್ರಾಹ್ಮಿಣ್ ಮೂಮೆಂಟ್ ಇನ್ ವೆಸ್ಟ್ರನ್ ಇಂಡಿಯಾ, ಸೀಕಿಂಗ್ ಆಪ್ ಬೇಗಂಪುರ, ಬುದ್ದಿಸಮ್ ಇನ್ ಇಂಡಿಯಾ, ಡಾ ಬಾಬಾಸಾಹೇಬ್ ಅಂಬೇಡ್ಕರ್, ಮಹಾತ್ಮ ಫುಲೆ, ದಲಿತ್ ಅಂಡ್‌ ಡೆಮಾಕ್ರಿಟಿಕ್ ರೆವಲ್ಯೂಷನ್, ಅಂಡರ್‌ಸ್ಟಾಂಡಿಂಗ್ ಕ್ಯಾಸ್ಟ್ ಮತ್ತು ನ್ಯೂ ಸೋಷಿಯಲ್ ಮೂಮೆಂಟ್ ಇನ್ ಇಂಡಿಯಾ ಪ್ರಮುಖವಾದವುಗಳು.

ಆಗಸ್ಟ್ 26 ರಂದು ಸಾಂಗ್ಲಿ ಜಿಲ್ಲೆಯ ಕಾಸೆಗಾಂವ್‌ನಲ್ಲಿ ಗೇಲ್ ಆಂವೆಡ್ತ್ ಅವರ ಅಂತಿಮ ಸಂಸ್ಕಾರ ನಡೆಯಲಿದೆ.


ಇದನ್ನೂ ಓದಿ: ಮಹಾ ಸಿಎಂಗೆ ಕಪಾಳಮೋಕ್ಷ ಹೇಳಿಕೆ: ಒಕ್ಕೂಟ ಸರ್ಕಾರದ ಸಚಿವ ಅರೆಸ್ಟ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...