Homeಮುಖಪುಟಬಹುಜನ ಚಳವಳಿಯ ಚಿಂತಕಿ, ಸಮಾಜಶಾಸ್ತ್ರಜ್ಞೆ ಗೇಲ್ ಆಂವೆಡ್ತ್ (81) ನಿಧನ

ಬಹುಜನ ಚಳವಳಿಯ ಚಿಂತಕಿ, ಸಮಾಜಶಾಸ್ತ್ರಜ್ಞೆ ಗೇಲ್ ಆಂವೆಡ್ತ್ (81) ನಿಧನ

- Advertisement -
- Advertisement -

ಸಮಾಜಶಾಸ್ತ್ರಜ್ಞೆ, ಸ್ತ್ರೀವಾದಿ ಚಿಂತಕಿ, ಮಾನವ ಹಕ್ಕುಗಳ ಹೋರಾಟಗಾರ್ತಿ, ಜಾತಿ ವಿನಾಶ ಚಳುವಳಿಯ ಬಹು ಮುಖ್ಯ ಧ್ವನಿ, ಬಹುಜನ ಚಳವಳಿಯ ಮೇರು ಚಿಂತಕರಲ್ಲಿ ಒಬ್ಬರಾಗಿದ್ದ 81 ವರ್ಷದ ಗೇಲ್ ಆಂವೆಡ್ತ್ ಇಂದು (ಆಗಸ್ಟ್ 25) ನಿಧನರಾಗಿದ್ದಾರೆ.

ಗೇಲ್ ಆಂವೆಡ್ತ್ ಅಮೆರಿಕ ಮೂಲದ ಭಾರತೀಯ ವಿದ್ವಾಂಸರಾಗಿದ್ದು, ದಲಿತ ರಾಜಕೀಯ, ಮಹಿಳಾ ಹೋರಾಟ ಮತ್ತು ಜಾತಿ ವಿರೋಧಿ ಚಳವಳಿಯ ಕುರಿತು ಹಲವು ಪುಸ್ತಕಗಳನ್ನು ಬರೆದಿದ್ದಾರೆ. ಕೊಯ್ನಾ ಅಣೆಕಟ್ಟಿನಿಂದ ಸ್ಥಳಾಂತರಗೊಂಡ ಜನರ ಹಕ್ಕುಗಳನ್ನು ಉಳಿಸುವ ಹೋರಾಟ ಸೇರಿದಂತೆ ದೇಶದ ವಿವಿಧ ಚಳುವಳಿಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಅಮೆರಿಕಾದಲ್ಲಿ ಜನಿಸಿದ ಗೇಲ್ ತಮ್ಮ ಪಿಎಚ್‌ಡಿ ಅಧ್ಯಯನಕ್ಕೆಂದು ಭಾರತಕ್ಕೆ ಬಂದವರು. ‘ಅಂಬೇಡ್ಕರ್ ಚಿಂತನೆ ಮತ್ತು ಹೋರಾಟ’ದ ಬಗ್ಗೆ ಅಧ್ಯಯನ ಮಾಡಿ ಡಾಕ್ಟರೇಟ್ ಪಡೆದು ಭಾರತದಲ್ಲಿಯೇ ನೆಲೆಸಿದರು. ತಮ್ಮ ಸಂಗಾತಿ, ಹೋರಾಟಗಾರ ಭರತ್ ಪಟ್ನಾಕರ್ ಜೊತೆಗೂಡಿ ತಮ್ಮ ಇಡೀ ಬದುಕನ್ನು ದಮನಿತ ಸಮುದಾಯಗಳ ಪರ ಹೋರಾಟಗಳಿಗೆ, ದಮನಿತ ಸಮುದಾಯಗಳ ಅಧ್ಯಯನಕ್ಕೆ ಮುಡುಪಾಗಿಟ್ಟವರು.

ಇದನ್ನೂ ಓದಿ: ಹೋರಾಟಗಾರ, ಬಂಡಾಯ ಲೇಖಕ ಡಾ.ಎಂ.ಚಿತ್ರಲಿಂಗಸ್ವಾಮಿ(54) ನಿಧನ

ಸಂಶೋಧಕಿ, ಲೇಖಕಿ ಮತ್ತು ಬಹುಜನ ಚಳುವಳಿಯ ಬೌದ್ಧಿಕ ಧ್ವನಿಗಳಲ್ಲಿ ಒಂದಾದ ಗೇಲ್ ಆಂವೆಡ್ತ್, ತಮ್ಮ ಪ್ರಖರ ಬೌದ್ಧಿಕತೆಯ ಮೂಲಕ ಅಂಬೇಡ್ಕರ್ ಚಿಂತನೆ ಮತ್ತು ದಲಿತ ಅಧ್ಯಯನವನ್ನು ವಿಶ್ವಮಟ್ಟಕ್ಕೆ ಬೆಳೆಸಿದವರು.

ಭಾರತದಲ್ಲಿ ವಾಸಿಸಲು ನಿರ್ಧರಿಸಿದ ನಂತರ, ಹಿರಿಯ ಸಾಮಾಜಿಕ ಹೋರಾಟಗಾರ್ತಿ ಇಂದುತಾಯಿ ಪಟ್ನಾಕರ್ (Indumati Babuji Patankar) ಅವರೊಂದಿಗಿನ ಒಡನಾಟವು ದೇಶದಲ್ಲಿ ಮಹಿಳಾ ಹೋರಾಟಗಳ ಕುರಿತು ಅಧ್ಯಯನ ಮಾಡಲು ಮತ್ತು ಹೋರಾಟಗಳಲ್ಲಿ ಭಾಗವಹಿಸಲು ಪ್ರೇರೆಪಣೆ ನೀಡಿತು.

ತಮ್ಮ ಪತಿ, ಹೋರಾಟಗಾರ ಭರತ್ ಪಟ್ನಾಕರ್ ಜೊತೆಗೂಡಿ ಶ್ರಮಿಕ್ ಮುಕ್ತಿ ದಳವನ್ನು ಸ್ಥಾಪಿಸಿದವರು. ಪುಣೆ ವಿಶ್ವವಿದ್ಯಾಲಯದಲ್ಲಿ ಸಮಾಜಶಾಸ್ತ್ರ ವಿಭಾಗದ ಫುಲೆ-ಅಂಬೇಡ್ಕರ್ ಪೀಠದ ಮುಖ್ಯಸ್ಥರಾಗಿದ್ದರು. ಕೋಪನ್‌ಹೆಗನ್‌ನ Institute of Asian studies ನಲ್ಲಿ ಪ್ರಾಧ್ಯಾಪರಾಗಿದ್ದರು. ನೆಹರೂ ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಹೊಸದಿಲ್ಲಿಯ ಗ್ರಂಥಾಲಯಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ.

ಇವರು 25 ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಅದರಲ್ಲಿ ಇನ್ ಕಲೋನಿಯಲ್ ಸೊಸೈಟಿ-ನಾನ್ ಬ್ರಾಹ್ಮಿಣ್ ಮೂಮೆಂಟ್ ಇನ್ ವೆಸ್ಟ್ರನ್ ಇಂಡಿಯಾ, ಸೀಕಿಂಗ್ ಆಪ್ ಬೇಗಂಪುರ, ಬುದ್ದಿಸಮ್ ಇನ್ ಇಂಡಿಯಾ, ಡಾ ಬಾಬಾಸಾಹೇಬ್ ಅಂಬೇಡ್ಕರ್, ಮಹಾತ್ಮ ಫುಲೆ, ದಲಿತ್ ಅಂಡ್‌ ಡೆಮಾಕ್ರಿಟಿಕ್ ರೆವಲ್ಯೂಷನ್, ಅಂಡರ್‌ಸ್ಟಾಂಡಿಂಗ್ ಕ್ಯಾಸ್ಟ್ ಮತ್ತು ನ್ಯೂ ಸೋಷಿಯಲ್ ಮೂಮೆಂಟ್ ಇನ್ ಇಂಡಿಯಾ ಪ್ರಮುಖವಾದವುಗಳು.

ಆಗಸ್ಟ್ 26 ರಂದು ಸಾಂಗ್ಲಿ ಜಿಲ್ಲೆಯ ಕಾಸೆಗಾಂವ್‌ನಲ್ಲಿ ಗೇಲ್ ಆಂವೆಡ್ತ್ ಅವರ ಅಂತಿಮ ಸಂಸ್ಕಾರ ನಡೆಯಲಿದೆ.


ಇದನ್ನೂ ಓದಿ: ಮಹಾ ಸಿಎಂಗೆ ಕಪಾಳಮೋಕ್ಷ ಹೇಳಿಕೆ: ಒಕ್ಕೂಟ ಸರ್ಕಾರದ ಸಚಿವ ಅರೆಸ್ಟ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...